AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2021: ಮೆಂಟರ್ ಧೋನಿ ಮಾಸ್ಟರ್​ ಪ್ಲ್ಯಾನ್: ಆರಂಭಿಕರಿಗೆ 3 ಟಾರ್ಗೆಟ್

ಭಾನುವಾರ ನಡೆಯಲಿರುವ ನ್ಯೂಜಿಲೆಂಡ್ ವಿರುದ್ದದ ಪಂದ್ಯದಲ್ಲಿ ಅಫ್ಘಾನಿಸ್ತಾನ್ ಗೆದ್ದರೆ, ಅಂತಿಮ ಪಂದ್ಯದಲ್ಲಿ ನಮೀಬಿಯಾವನ್ನು ಮಣಿಸಿ ಟೀಮ್ ಇಂಡಿಯಾ ಸೆಮಿಫೈನಲ್ ಪ್ರವೇಶಿಸಲಿದೆ.

T20 World Cup 2021: ಮೆಂಟರ್ ಧೋನಿ ಮಾಸ್ಟರ್​ ಪ್ಲ್ಯಾನ್: ಆರಂಭಿಕರಿಗೆ 3 ಟಾರ್ಗೆಟ್
team india
TV9 Web
| Edited By: |

Updated on: Nov 06, 2021 | 9:37 PM

Share

ಸ್ಕಾಟ್ಲೆಂಡ್​ ವಿರುದ್ದ ಭರ್ಜರಿ ಜಯ ಸಾಧಿಸಿ ಟೀಮ್ ಇಂಡಿಯಾ ಸೆಮಿಫೈನಲ್ ಆಸೆಯನ್ನು ಜೀವಂತವರಿಸಿಕೊಂಡಿದೆ. ಈ ಬಾರಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಸ್ಕಾಟ್ಲೆಂಡ್​ ಅನ್ನು ಕೇವಲ 85 ರನ್​ಗೆ ಆಲೌಟ್ ಮಾಡುವ ಮೂಲಕ ಟೀಮ್ ಇಂಡಿಯಾ ಭರ್ಜರಿ ಪ್ರದರ್ಶನ ನೀಡಿತು. ಆ ಬಳಿಕ ಟೀಮ್ ಇಂಡಿಯಾ ಟಾರ್ಗೆಟ್ ಮಾಡಿದ್ದು ನೆಟ್​ ರನ್​ ರೇಟ್​ ಅನ್ನು.

ಹೌದು, 86 ರನ್​ಗಳ ಗುರಿ ಪಡೆದ ಟೀಮ್ ಇಂಡಿಯಾ ಭರ್ಜರಿ ಪ್ಲ್ಯಾನ್ ರೂಪಿಸಿ ಕಣಕ್ಕಿಳಿದಿತ್ತು. ಅದರಂತೆ ಟೀಮ್ ಇಂಡಿಯಾ ಮೆಂಟರ್ ಧೋನಿ ಹಾಗೂ ಕೋಚಿಂಗ್ ಸಿಬ್ಬಂದಿ ಆರಂಭಿಕರಾದ ಕೆಎಲ್ ರಾಹುಲ್ ಹಾಗೂ ರೋಹಿತ್ ಶರ್ಮಾಗೆ 3 ಟಾರ್ಗೆಟ್​ ನೀಡಿತ್ತು. ಒಂದು ಅಫ್ಘಾನಿಸ್ತಾನ್ ನೆಟ್​ ರನ್​ ರೇಟ್ ಟಾರ್ಗೆಟ್​, ಎರಡನೇಯದು ನ್ಯೂಜಿಲೆಂಡ್ ನೆಟ್​ ರನ್​ ರೇಟ್ ಟಾರ್ಗೆಟ್. ಮೂರನೇಯದು +1 ನೆಟ್​ ರನ್​ ರೇಟ್​ ಟಾರ್ಗೆಟ್​.

ಇಲ್ಲಿ ಅಫ್ಘಾನಿಸ್ತಾನ್ ನೆಟ್​ ರನ್​ ರೇಟ್​ ಅನ್ನು ಹಿಂದಿಕ್ಕಲು ಟೀಮ್ ಇಂಡಿಯಾ 7.1 ಓವರ್​ನಲ್ಲಿ ಚೇಸ್ ಮಾಡಬೇಕಿತ್ತು. ಒಂದು ವೇಳೆ ಅದು ಸಾಧ್ಯವಾಗದಿದ್ದರೆ ನ್ಯೂಜಿಲೆಂಡ್ ರನ್​ ರೇಟ್​ ಟಾರ್ಗೆಟ್ ಮಾಡಲು ಸೂಚಿಸಲಾಗಿತ್ತು. ಅದರಂತೆ 8.5 ಓವರ್​ನಲ್ಲಿ ಚೇಸ್ ಮಾಡಲು ತಿಳಿಸಲಾಗಿತ್ತು. ಇದೂ ಸಾಧ್ಯವಾಗದಿದ್ದರೆ 11.2 ಓವರೊಳಗೆ ಚೇಸ್ ಮಾಡಿ +1 ರನ್​ ರೇಟ್​ ಪಡೆಯಲು ಸೂಚಿಸಲಾಗಿತ್ತು.

ಈ ಜವಾಬ್ದಾರಿಯನ್ನು ಕೆಎಲ್ ರಾಹುಲ್ ಹಾಗೂ ರೋಹಿತ್ ಶರ್ಮಾ ಅಚ್ಚುಕಟ್ಟಾಗಿ ನಿಭಾಯಿಸಿದ್ದರು. ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ ಈ ಜೋಡಿ 5 ಓವರ್​ನಲ್ಲಿ 70 ರನ್​ ಬಾರಿಸಿದ್ದರು. ಅಷ್ಟೇ 6.3 ಓವರ್​ನಲ್ಲಿ ಗುರಿ ಮುಟ್ಟುವ ಮೂಲಕ ಅಫ್ಘಾನಿಸ್ತಾನ್, ನ್ಯೂಜಿಲೆಂಡ್ ನೆಟ್ ರನ್​ ರೇಟ್​ ಅನ್ನು ಟೀಮ್ ಇಂಡಿಯಾ ಹಿಂದಿಕ್ಕಿದೆ. ಈ ಮೂಲಕ ಸೆಮಿಫೈನಲ್​ ಆಸೆಯನ್ನು ಜೀವಂತವಿರಿಸಿಕೊಂಡಿದೆ.

ಭಾನುವಾರ ನಡೆಯಲಿರುವ ನ್ಯೂಜಿಲೆಂಡ್ ವಿರುದ್ದದ ಪಂದ್ಯದಲ್ಲಿ ಅಫ್ಘಾನಿಸ್ತಾನ್ ಗೆದ್ದರೆ, ಅಂತಿಮ ಪಂದ್ಯದಲ್ಲಿ ನಮೀಬಿಯಾವನ್ನು ಮಣಿಸಿ ಟೀಮ್ ಇಂಡಿಯಾ ಸೆಮಿಫೈನಲ್ ಪ್ರವೇಶಿಸಲಿದೆ.

ಇದನ್ನೂ ಓದಿ: ICC T20 Rankings: ನೂತನ ಟಿ20 ರ‍್ಯಾಂಕಿಂಗ್ ಪ್ರಕಟ: ಎಲ್ಲರನ್ನು ಹಿಂದಿಕ್ಕಿದ ಬಾಬರ್

ಇದನ್ನೂ ಓದಿ: IPL 2022: RCB ಈ ನಾಲ್ವರು ಆಟಗಾರರನ್ನು ಉಳಿಸಿಕೊಳ್ಳಬಹುದು..!

ಇದನ್ನೂ ಓದಿ: T20 World Cup 2021: ಸೆಹ್ವಾಗ್-ಗಂಭೀರ್ ದಾಖಲೆ ಮುರಿದ ಕೆಎಲ್ ರಾಹುಲ್-ರೋಹಿತ್ ಶರ್ಮಾ

(T20 World Cup 2021: How India’s Net Run-Rate Improved After Chasing)

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ