AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2021: ಟೀಮ್ ಇಂಡಿಯಾ ಆರಂಭಿಕರು ಯಾರೆಂಬುದನ್ನು ಬಹಿರಂಗಪಡಿಸಿದ ಕೊಹ್ಲಿ

Team India: ಈ ಹಿಂದೆ ಇಂಗ್ಲೆಂಡ್​ ವಿರುದ್ದದ ಟಿ20 ಸರಣಿ ವೇಳೆ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಆರಂಭಿಕರಾಗಿ ಕಣಕ್ಕಿಳಿದಿದ್ದರು. ಇದೇ ವೇಳೆ ಟಿ20 ವಿಶ್ವಕಪ್​ನಲ್ಲೂ ನಾನು ಓಪನರ್​ ಆಗಿ ಆಡಲಿದ್ದೇನೆ ಎಂದಿದ್ದರು.

T20 World Cup 2021: ಟೀಮ್ ಇಂಡಿಯಾ ಆರಂಭಿಕರು ಯಾರೆಂಬುದನ್ನು ಬಹಿರಂಗಪಡಿಸಿದ ಕೊಹ್ಲಿ
Virat Kohli
TV9 Web
| Edited By: |

Updated on: Oct 18, 2021 | 8:19 PM

Share

ಟಿ20 ವಿಶ್ವಕಪ್​ (T20 World Cup 2021) ಶುರುವಾಗಿದೆ. ಅಕ್ಟೋಬರ್ 17 ರಿಂದ ಚಾಲನೆ ಸಿಕ್ಕಿರುವ ಚುಟುಕು ಕ್ರಿಕೆಟ್​ ಕದನದ ಅರ್ಹತಾ ಸುತ್ತಿನ ಪಂದ್ಯಗಳು ಓಮಾನ್​ನಲ್ಲಿ ನಡೆಯುತ್ತಿದ್ದರೆ, ಇತ್ತ ಯುಎಇನಲ್ಲಿ ಟೀಮ್ ಇಂಡಿಯಾ (Team India) ಸೇರಿದಂತೆ ಸೂಪರ್ 12 ಹಂತದಲ್ಲಿರುವ ತಂಡಗಳು ಅಭ್ಯಾಸ ಪಂದ್ಯಗಳಲ್ಲಿ ತೊಡಗಿಸಿಕೊಂಡಿದೆ. ಅದರಂತೆ ಭಾರತ ತಂಡವು ಮೊದಲ ಅಭ್ಯಾಸ ಪಂದ್ಯವನ್ನು ಇಂಗ್ಲೆಂಡ್ ವಿರುದ್ದ ಆಡಲಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಬೌಲಿಂಗ್ ಆಯ್ದುಕೊಂಡರು. ಇದೇ ವೇಳೆ ಟೀಮ್ ಕಾಂಬಿನೇಷನ್​ ಬಗ್ಗೆ ಮನಬಿಚ್ಚಿ ಮಾತನಾಡಿದರು. ಅದರಲ್ಲೂ ಟಿ20 ವಿಶ್ವಕಪ್​​ನಲ್ಲಿ ಭಾರತ ತಂಡದ ಆರಂಭಿಕರಾಗಿ ಯಾರು ಕಣಕ್ಕಿಳಿಯಲಿದ್ದಾರೆ ಎಂಬುದನ್ನು ಬಹಿರಂಗಪಡಿಸಿದರು.

ಈ ಹಿಂದೆ ಇಂಗ್ಲೆಂಡ್​ ವಿರುದ್ದದ ಟಿ20 ಸರಣಿ ವೇಳೆ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಆರಂಭಿಕರಾಗಿ ಕಣಕ್ಕಿಳಿದಿದ್ದರು. ಇದೇ ವೇಳೆ ಟಿ20 ವಿಶ್ವಕಪ್​ನಲ್ಲೂ ನಾನು ಓಪನರ್​ ಆಗಿ ಆಡಲಿದ್ದೇನೆ ಎಂದಿದ್ದರು. ಅದರಂತೆ ಐಪಿಎಲ್​ನಲ್ಲಿ ವಿರಾಟ್ ಕೊಹ್ಲಿ ಆರ್​ಸಿಬಿ ಪರ ಆರಂಭಿಕರಾಗಿ ಆಡಿದ್ದರು. ಹೀಗಾಗಿ ಟಿ20 ವಿಶ್ವಕಪ್​ನಲ್ಲೂ ಕೊಹ್ಲಿ ಆರಂಭಿಕರಾಗಿ ಆಡಲಿದ್ದಾರೆ ಎನ್ನಲಾಗಿತ್ತು.

ಇನ್ನೊಂದೆಡೆ ಕೊಹ್ಲಿ ಐಪಿಎಲ್​ ವೇಳೆ  ಟಿ20 ವಿಶ್ವಕಪ್​ ಆರಂಭಿಕನಾಗಿ ನೀನು ಕಣಕ್ಕಿಳಿಯಬೇಕು. ಅದಕ್ಕಾಗಿ ಈಗಾಗಲೇ ಸಿದ್ಧತೆಗಳನ್ನು ಆರಂಭಿಸು ಇಶಾನ್ ಕಿಶನ್​ಗೆ ಸೂಚಿಸಿದ್ದರು. ಅದರಂತೆ ಮುಂಬೈ ಇಂಡಿಯನ್ಸ್​ ತಂಡದ ಕೊನೆಯ 2 ಪಂದ್ಯಗಳಲ್ಲಿ ಕಿಶನ್ ಓಪನರ್​ ಆಗಿ ಬ್ಯಾಟ್ ಬೀಸಿದ್ದರು. ರಾಜಸ್ತಾನ್ ರಾಯಲ್ಸ್​ ವಿರುದ್ದ ಕಿಶನ್ ಕೇವಲ 25 ಎಸೆತಗಳಿಗೆ 50 ರನ್ ಬಾರಿಸಿ ಮಿಂಚಿದರು. ಅಷ್ಟೇ ಅಲ್ಲದೆ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ 32 ಎಸೆತಗಳಿಗೆ 11 ಬೌಂಡರಿ ಮತ್ತು 4 ಸಿಕ್ಸರ್​ನೊಂದಿಗೆ 84 ರನ್ ಚಚ್ಚಿದ್ದಾರೆ. ಹೀಗಾಗಿ ಕಿಶನ್ ಹಾಗೂ ರೋಹಿತ್ ಶರ್ಮಾ ಆರಂಭಿಕರಾಗಲಿದ್ದಾರೆ ಎನ್ನಲಾಗಿತ್ತು.

ಆದರೆ ಇಡೀ ಟೂರ್ನಿಯಲ್ಲಿ ಅಬ್ಬರಿಸಿ ಬೊಬ್ಬಿರಿಯುವ ಮೂಲಕ ಪಂಜಾಬ್ ಕಿಂಗ್ಸ್​ ತಂಡದ ನಾಯಕ ಕೆಎಲ್ ರಾಹುಲ್ 13 ಪಂದ್ಯಗಳಿಂದ 626 ರನ್ ಬಾರಿಸಿದ್ದರು. ಇದೇ ಕಾರಣದಿಂದ ಇದೀಗ ವಿರಾಟ್ ಕೊಹ್ಲಿ ಮನಸು ಬದಲಿಸಿದ್ದಾರೆ. ಇಂಗ್ಲೆಂಡ್​ ವಿರುದ್ದದ ಅಭ್ಯಾಸ ಪಂದ್ಯದ ವೇಳೆ ಮಾತನಾಡಿದ ಕೊಹ್ಲಿ, ಟಿ20 ವಿಶ್ವಕಪ್​ನಲ್ಲಿ ನಾನು 3ನೇ ಕ್ರಮಾಂಕದಲ್ಲಿ ಆಡಲಿದ್ದೇನೆ. ಹಾಗಾಗಿ ಆರಂಭಿಕರಾಗಿ ರೋಹಿತ್ ಶರ್ಮಾ ಹಾಗೂ ಕೆಎಲ್ ರಾಹುಲ್ ಇನಿಂಗ್ಸ್​ ಆರಂಭಿಸಲಿದ್ದಾರೆ ಎಂದಿದ್ದಾರೆ. ಇದರೊಂದಿಗೆ ಟಿ20 ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾ ಆರಂಭಿಕರು ಯಾರು ಎಂಬ ಗೊಂದಲಕ್ಕೆ ತೆರೆಬಿದ್ದಂತಾಗಿದೆ.

ಇದನ್ನೂ ಓದಿ: T20 World Cup 2021: ಕೆಎಲ್ ರಾಹುಲ್​ ಆರಂಭಿಕನಲ್ವಾ: ಕೊಹ್ಲಿ ಸಜ್ಜಾಗಿರಲು ಹೇಳಿದ್ದು ಯಾರಿಗೆ?

ಇದನ್ನೂ ಓದಿ:T20 World Cup 2021: ಟಿ20 ವಿಶ್ವಕಪ್ ಗೆದ್ದವರಿಗೆ ಸಿಗೋ ಹಣವೆಷ್ಟು? ಸೋತರೆ ಸಿಗೋದೆಷ್ಟು? 

ಇದನ್ನೂ ಓದಿ: T20 World Cup Winners: ಟಿ20 ವಿಶ್ವಕಪ್​ನಲ್ಲಿ ಯಾರು ವಿನ್ನರ್, ಯಾರು ರನ್ನರ್: ಇಲ್ಲಿದೆ ಸಂಪೂರ್ಣ ಪಟ್ಟಿ

(T20 World Cup 2021: I will be batting at 3 Says Virat Kohli)

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ