AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup: ಭಾರತ ಫೈನಲ್‌ನಲ್ಲಿರುತ್ತದೆ; ಟಿ20 ವಿಶ್ವಕಪ್‌ನಲ್ಲಿ ಕನ್ನಡಿಗ ಮಿಂಚಲಿದ್ದಾರೆ ಎಂದ ಬ್ರೆಟ್ ಲೀ!

T20 World Cup: ರಾಹುಲ್ ಹೆಚ್ಚು ರನ್ ಗಳಿಸುತ್ತಾರೆ ಎಂದು ನಾನು ಭಾವಿಸುತ್ತೇನೆ. ಐಪಿಎಲ್‌ನಲ್ಲಿ ಅವರ ಪ್ರದರ್ಶನ ಉತ್ತಮವಾಗಿತ್ತು. ಭಾರತವು ರಾಹುಲ್‌ನನ್ನು ಬ್ಯಾಟಿಂಗ್‌ನ ಪ್ರಮುಖ ಕೇಂದ್ರವನ್ನಾಗಿಸಬೇಕು

T20 World Cup: ಭಾರತ ಫೈನಲ್‌ನಲ್ಲಿರುತ್ತದೆ; ಟಿ20 ವಿಶ್ವಕಪ್‌ನಲ್ಲಿ ಕನ್ನಡಿಗ ಮಿಂಚಲಿದ್ದಾರೆ ಎಂದ ಬ್ರೆಟ್ ಲೀ!
ಕೆಎಲ್ ರಾಹುಲ್, ವಿರಾಟ್ ಕೊಹ್ಲಿ
TV9 Web
| Updated By: ಪೃಥ್ವಿಶಂಕರ|

Updated on: Oct 14, 2021 | 3:24 PM

Share

2021 ರ ಟಿ 20 ವಿಶ್ವಕಪ್‌ನಲ್ಲಿ ಭಾರತವು ಇನ್-ಫಾರ್ಮ್ ಬ್ಯಾಟ್ಸ್‌ಮನ್ ಕೆಎಲ್ ರಾಹುಲ್ ಅನ್ನು ಇನ್ನಿಂಗ್ಸ್‌ನ ಆಧಾರವಾಗಿಸಬೇಕು ಎಂದು ಆಸ್ಟ್ರೇಲಿಯಾದ ಮಾಜಿ ವೇಗದ ಬೌಲರ್ ಬ್ರೆಟ್ ಲೀ ಹೇಳಿದ್ದಾರೆ. ಇದು ನಾಯಕ ವಿರಾಟ್ ಕೊಹ್ಲಿಯ ಒತ್ತಡವನ್ನು ಕಡಿಮೆ ಮಾಡುತ್ತದೆ. 2007 ರ ಚಾಂಪಿಯನ್ ಭಾರತೀಯ ತಂಡ ಪ್ರಶಸ್ತಿಗಾಗಿ ಪ್ರಬಲ ಸ್ಪರ್ಧಿ ಎಂದು ಲೀ ಊಹಿಸಿದ್ದಾರೆ. ಅಕ್ಟೋಬರ್ 24 ರಂದು ನಡೆಯಲಿರುವ ಮೊದಲ ಪಂದ್ಯದಲ್ಲಿ ಭಾರತವು ಪಾಕಿಸ್ತಾನದೊಂದಿಗೆ ಆಡಬೇಕಿದೆ. ಲೀ ಫಾಕ್ಸ್ ಸ್ಪೋರ್ಟ್ಸ್ ಜೊತೆ ಮಾತನಾಡಿ, ಇಂಗ್ಲೆಂಡ್ ತಂಡವು ಯಾವಾಗಲೂ ತಮ್ಮ ಅನುಭವದ ಆಧಾರದ ಮೇಲೆ ಪ್ರಬಲ ಸ್ಪರ್ಧಿಯಾಗಿದೆ. ಆದರೆ ನನ್ನ ದೃಷ್ಟಿಯಲ್ಲಿ ಭಾರತ ಪ್ರಶಸ್ತಿಗಾಗಿ ಪ್ರಬಲ ಸ್ಪರ್ಧಿ. ಇಂಡಿಯನ್ ಪ್ರೀಮಿಯರ್ ಲೀಗ್​ನಿಂದಾಗಿ ಭಾರತವು ಅನೇಕ ಯುವ ಆಟಗಾರರನ್ನು ಹೊಂದಿದೆ. ಅವರು ವೇಗದ ಬೌಲರ್‌ಗಳನ್ನು ಹೊಂದಿದ್ದಾರೆ ಮತ್ತು ಭಾರತದ ಅಗ್ರ ಕ್ರಮಾಂಕವು ಅತ್ಯುತ್ತಮವಾಗಿದೆ. ಭಾರತವು ಈ ಬಾರಿ ಗೆಲುವಿಗೆ ಪ್ರಬಲ ಸ್ಪರ್ಧಿಯಾಗಲಿದ್ದು, ವಿಶ್ವಕಪ್ ಗೆಲ್ಲಬಹುದು ಎಂದಿದ್ದಾರೆ.

ವಿಶ್ವಕಪ್‌ನಲ್ಲಿ ರಾಹುಲ್ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎಂದು ಲೀ ಹೇಳಿದರು. ಟಿ 20 ಕ್ರಿಕೆಟ್​ನಲ್ಲಿ ಕೆಎಲ್ ರಾಹುಲ್ ಅವರ ಪ್ರದರ್ಶನ ಅತ್ಯುತ್ತಮವಾಗಿದೆ. ಅವರು ಐಪಿಎಲ್ 2021 ರಲ್ಲಿ ಇದುವರೆಗೆ ಅತಿ ಹೆಚ್ಚು ರನ್ ಗಳಿಸಿದ್ದಾರೆ. ಯುಎಇಯಲ್ಲಿ ನಡೆದ ದ್ವಿತೀಯಾರ್ಧದ ಆರು ಪಂದ್ಯಗಳಲ್ಲಿ ಅವರು 295 ರನ್ ಗಳಿಸಿದರು. ಬ್ರೆಟ್ ಲೀ, ರಾಹುಲ್ ಹೆಚ್ಚು ರನ್ ಗಳಿಸುತ್ತಾರೆ ಎಂದು ನಾನು ಭಾವಿಸುತ್ತೇನೆ. ಐಪಿಎಲ್‌ನಲ್ಲಿ ಅವರ ಪ್ರದರ್ಶನ ಉತ್ತಮವಾಗಿತ್ತು. ಭಾರತವು ರಾಹುಲ್‌ನನ್ನು ಬ್ಯಾಟಿಂಗ್‌ನ ಪ್ರಮುಖ ಕೇಂದ್ರವನ್ನಾಗಿಸಬೇಕು ಏಕೆಂದರೆ ಇದು ಕೊಹ್ಲಿಯ ಮೇಲಿನ ಒತ್ತಡವನ್ನು ಕಡಿಮೆ ಮಾಡುತ್ತದೆ. ಇದರೊಂದಿಗೆ ಕೊಹ್ಲಿ ತನ್ನ ಸಹಜ ಆಟವನ್ನು ತೋರಿಸಲು ಸಾಧ್ಯವಾಗುತ್ತದೆ. ಬಹುಶಃ ಇದು ನಾಯಕನಾಗಿ ಕೊಹ್ಲಿಯ ಕೊನೆಯ ಪಂದ್ಯಾವಳಿಯಾಗಿದೆ, ಆದ್ದರಿಂದ ಅವರು ಖಂಡಿತವಾಗಿಯೂ ಉತ್ತಮವಾಗಿ ಕಾರ್ಯನಿರ್ವಹಿಸಲು ಬಯಸುತ್ತಾರೆ ಎಂದಿದ್ದಾರೆ.

ರೋಹಿತ್ ಶರ್ಮಾ ಜೊತೆಗೆ ಕೆಎಲ್ ರಾಹುಲ್ ಭಾರತಕ್ಕೆ ಓಪನ್ ಮಾಡುವ ಸಾಧ್ಯತೆಯಿದೆ. ತಂಡವು ಅವrನ್ನು ಮಧ್ಯಮ ಕ್ರಮಾಂಕದಲ್ಲಿ ಪ್ರಯತ್ನಿಸಬಹುದು. ಅವರು ಏಕದಿನ ಪಂದ್ಯಗಳಲ್ಲಿ ಭಾರತಕ್ಕೆ ಆರಂಭಿಕ ಮತ್ತು ಫಿನಿಶರ್ ಪಾತ್ರದಲ್ಲಿ ಆಡಿದ್ದಾರೆ. ಟಿ 20 ವಿಶ್ವಕಪ್‌ನಲ್ಲಿ ಅವರು ಯಾವ ಪಾತ್ರ ವಹಿಸುತ್ತಾರೆ ಎಂಬುದನ್ನು ಕಾದು ನೋಡಬೇಕು.

ಸೂರ್ಯಕುಮಾರ್ ಮೇಲೆ ಭರವಸೆ ಸೂರ್ಯಕುಮಾರ್ ಯಾದವ್ ಭಾರತದ ಮುಂದಿನ ಸ್ಟಾರ್ ಎಂದು ಸಾಬೀತುಪಡಿಸುತ್ತಾರೆ ಎಂದು ಅವರು ಹೇಳಿದರು. ಸೂರ್ಯಕುಮಾರ್ ಯಾದವ್ ಮುಂದಿನ ತಾರೆಯಾಗುತ್ತಾರೆ ಎಂದು ನಾನು ಭಾವಿಸುತ್ತೇನೆ. ಆಸ್ಟ್ರೇಲಿಯಾ ಅತ್ಯುತ್ತಮ ತಂಡವನ್ನು ಆಯ್ಕೆ ಮಾಡಿದೆ ಮತ್ತು ಇದು ಭಾರತಕ್ಕೆ ಸವಾಲಾಗಿರಬಹುದು ಎಂದು ಲೀ ಹೇಳಿದರು. ಇದು ನಮ್ಮ ಅತ್ಯುತ್ತಮ ತಂಡ ಎಂದು ನಾನು ಭಾವಿಸುತ್ತೇನೆ. ನಾನು ತುಂಬಾ ದೇಶಭಕ್ತ. ಆಸ್ಟ್ರೇಲಿಯಾ ಗೆಲ್ಲಬೇಕೆಂದು ನಾನು ಬಯಸುತ್ತೇನೆ ಮತ್ತು ಅದು ಸಂಭವಿಸಬಹುದು ಎಂದು ನಾನು ಭಾವಿಸುತ್ತೇನೆ. ಆದರೆ ಭಾರತವು ಖಂಡಿತವಾಗಿಯೂ ಫೈನಲ್‌ನಲ್ಲಿರುತ್ತದೆ ಎಂದಿದ್ದಾರೆ. ಭಾರತ ಮತ್ತು ಆಸ್ಟ್ರೇಲಿಯಾ ಅಕ್ಟೋಬರ್ 20 ರಂದು ದುಬೈನಲ್ಲಿ ಅಭ್ಯಾಸ ಪಂದ್ಯವನ್ನು ಆಡಲಿದೆ.

ಇದನ್ನೂ ಓದಿ:KL Rahul: ಅನುಮಾನ ಹುಟ್ಟುಹಾಕಿದ ಕೆಎಲ್ ರಾಹುಲ್ ಟ್ವೀಟ್: ಪಂಜಾಬ್ ಬಿಟ್ಟು ಆರ್​ಸಿಬಿ ಸೇರುವುದು ಖಚಿತ?

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್