AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2021: ಸೆಮಿಫೈನಲ್ ಲೆಕ್ಕಾಚಾರ: ನ್ಯೂಜಿಲೆಂಡ್ ವಿರುದ್ದ ಟೀಮ್ ಇಂಡಿಯಾ ಗೆಲ್ಲಲೇಬೇಕು, ಯಾಕೆ ಗೊತ್ತಾ?

India vs New Zealand: ಇಲ್ಲಿ ಟೀಮ್ ಇಂಡಿಯಾ ಮುಂದಿರುವುದು ನ್ಯೂಜಿಲೆಂಡ್ ಎಂಬ ಬಲಿಷ್ಠ ತಂಡ ಮಾತ್ರ. ಇನ್ನು ಅಫ್ಘಾನಿಸ್ತಾನ್ ಉತ್ತಮ ಪ್ರದರ್ಶನ ನೀಡುತ್ತಾದರೂ ಭಾರತ ತಂಡದ ವಿರುದ್ದ ಮೇಲುಗೈ ಸಾಧಿಸಿದ ಇತಿಹಾಸವಿಲ್ಲ.

T20 World Cup 2021: ಸೆಮಿಫೈನಲ್ ಲೆಕ್ಕಾಚಾರ: ನ್ಯೂಜಿಲೆಂಡ್ ವಿರುದ್ದ ಟೀಮ್ ಇಂಡಿಯಾ ಗೆಲ್ಲಲೇಬೇಕು, ಯಾಕೆ ಗೊತ್ತಾ?
Team India
TV9 Web
| Edited By: |

Updated on: Oct 28, 2021 | 3:58 PM

Share

ಟಿ20 ವಿಶ್ವಕಪ್​ನ (T20 World Cup 2021) ಸೂಪರ್ 12 ಪಂದ್ಯಗಳು ಭರದಿಂದ ಸಾಗುತ್ತಿದೆ. ಈಗಾಗಲೇ ಎಲ್ಲಾ ತಂಡಗಳು ಒಂದೊಂದು ಪಂದ್ಯಗಳನ್ನು ಆಡಿದೆ. ಅದರಲ್ಲೂ ಗ್ರೂಪ್​-2 ನಲ್ಲಿ ಪಾಕಿಸ್ತಾನ್ ಹಾಗೂ ಸ್ಕಾಟ್ಲೆಂಡ್​ ತಂಡಗಳ 2 ಪಂದ್ಯಗಳು ಮುಗಿದಿವೆ. ಇನ್ನು ಭಾರತ (Team India), ಅಫ್ಘಾನಿಸ್ತಾನ್, ನಮೀಬಿಯಾ, ನ್ಯೂಜಿಲೆಂಡ್ (New Zealand)​ ತಂಡಗಳು ತಲಾ ಒಂದೊಂದು ಪಂದ್ಯಗಳನ್ನು ಆಡಿವೆ. ಇದರಲ್ಲಿ ಪಾಕ್ ತಂಡವು 2 ಪಂದ್ಯಗಳನ್ನು ಗೆದ್ದರೆ, ಸ್ಕಾಟ್ಲೆಂಡ್ 2 ಪಂದ್ಯಗಳನ್ನು ಸೋತಿದೆ. ಹಾಗೆಯೇ ಅಫ್ಘಾನಿಸ್ತಾನ್ ಹಾಗೂ ನಮೀಬಿಯಾ ತಲಾ ಒಂದು ಜಯ ಸಾಧಿಸಿದೆ.

ಇನ್ನು ಟೀಮ್ ಇಂಡಿಯಾ ಹಾಗೂ ನ್ಯೂಜಿಲೆಂಡ್ ತಂಡಗಳು ಮೊದಲ ಪಂದ್ಯದಲ್ಲೇ ಸೋಲನುಭವಿಸಿದೆ. ಹೀಗಾಗಿ ಮುಂದಿನ ಪಂದ್ಯ ಉಭಯ ತಂಡಗಳಿಗೆ ನಿರ್ಣಾಯಕ. ಮುಂದಿನ ಪಂದ್ಯದಲ್ಲಿ ಕಿವೀಸ್ ವಿರುದ್ದ ಟೀಮ್ ಇಂಡಿಯಾ ಗೆದ್ದರೆ ಸೆಮಿಫೈನಲ್ ಹಾದಿ ಮತ್ತಷ್ಟು ಸುಗಮವಾಗಲಿದೆ. ಅದರಂತೆ ಮುಂದಿನ 4 ಪಂದ್ಯಗಳನ್ನು ಭಾರತ ಗೆದ್ದರೆ ಸೆಮಿಫೈನಲ್ ಆಡೋದು ಬಹುತೇಕ ಖಚಿತ. ಇಲ್ಲಿ ಟೀಮ್ ಇಂಡಿಯಾ ಎದುರಾಳಿಗಳು ನ್ಯೂಜಿಲೆಂಡ್, ಅಫ್ಘಾನಿಸ್ತಾನ್, ಸ್ಕಾಟ್ಲೆಂಡ್ ಹಾಗೂ ನಮೀಬಿಯಾ.

ಅಂದರೆ ಇಲ್ಲಿ ಟೀಮ್ ಇಂಡಿಯಾ ಮುಂದಿರುವುದು ನ್ಯೂಜಿಲೆಂಡ್ ಎಂಬ ಬಲಿಷ್ಠ ತಂಡ ಮಾತ್ರ. ಇನ್ನು ಅಫ್ಘಾನಿಸ್ತಾನ್ ಉತ್ತಮ ಪ್ರದರ್ಶನ ನೀಡುತ್ತಾದರೂ ಭಾರತ ತಂಡದ ವಿರುದ್ದ ಮೇಲುಗೈ ಸಾಧಿಸಿದ ಇತಿಹಾಸವಿಲ್ಲ. ಹಾಗೆಯೇ ಸ್ಕಾಟ್ಲೆಂಡ್ ಹಾಗೂ ನಬೀಯಾ ತಂಡಗಳು ಅರ್ಹತಾ ಸುತ್ತಿನಿಂದ ಎಂಟ್ರಿ ಕೊಟ್ಟ ತಂಡಗಳಾಗಿವೆ. ಹೀಗಾಗಿ ಬಲಿಷ್ಠ ಪಡೆಯನ್ನು ಒಳಗೊಂಡಿರುವ ಭಾರತಕ್ಕೆ ಕೊನೆಯ ಎರಡು ಪಂದ್ಯಗಳಲ್ಲಿ ಜಯ ಖಚಿತ ಎನ್ನಬಹುದು.

ಹೀಗಾಗಿ ನ್ಯೂಜಿಲೆಂಡ್ ವಿರುದ್ದ ಟೀಮ್ ಇಂಡಿಯಾ ಗೆಲ್ಲಲೇಬೇಕು. ಒಂದು ವೇಳೆ ನ್ಯೂಜಿಲೆಂಡ್​ ವಿರುದ್ದ ಭಾರತ ಸೋತು ಮುಂದಿನ 3 ಪಂದ್ಯಗಳನ್ನು ಗೆದ್ದರೂ ಸೆಮಿ ಫೈನಲ್ ಹಾದಿ ಕಠಿಣವಾಗಲಿದೆ. ಏಕೆಂದರೆ ಈಗಾಗಲೇ ಪಾಕಿಸ್ತಾನ್ 4 ಅಂಕ ಪಡೆದಿದ್ದು, ಮುಂದಿನ 3 ಪಂದ್ಯಗಳಲ್ಲಿ 2 ರಲ್ಲಿ ಜಯ ಸಾಧಿಸಿದರೆ ಸೆಮಿಫೈನಲ್​ ಖಚಿತಪಡಿಸಿಕೊಳ್ಳಲಿದೆ.

ಇತ್ತ ಭಾರತ ನ್ಯೂಜಿಲೆಂಡ್ ವಿರುದ್ದ ಸೋತರೆ, ಸೆಮಿಫೈನಲ್​ ಪ್ರವೇಶಿಸಲು ಟೀಮ್ ಇಂಡಿಯಾ, ಅಫ್ಘಾನಿಸ್ತಾನ್ ಹಾಗೂ ನ್ಯೂಜಿಲೆಂಡ್ ನಡುವಣ ಫಲಿತಾಂಶವನ್ನು ಎದುರು ನೋಡಬೇಕಾಗುತ್ತದೆ. ಈ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ದ ಅಫ್ಘಾನ್​ ಗೆದ್ದರೆ ಮಾತ್ರ ಚಾನ್ಸ್ ಇರಲಿದೆ. ಒಂದು ವೇಳೆ ಅಫ್ಘಾನ್​ ಗೆದ್ದರೂ, ಅವರು ಪಾಕಿಸ್ತಾನ್ ವಿರುದ್ದ ಸೋಲುವುದನ್ನು ಕಾಯಬೇಕು. ಹೀಗೆ ಆದಲ್ಲಿ ಮಾತ್ರ ಅಂಕಪಟ್ಟಿಯಲ್ಲಿ 6 ಪಾಯಿಂಟ್​ಗಳಂತೆ ಸಮಬಲ ಕಂಡು ಬರಲಿದೆ. ಇಂತಹ ಸನ್ನಿವೇಶ ಎದುರಾದರೆ ಟೀಮ್ ಇಂಡಿಯಾ ಹೆಚ್ಚಿನ ರನ್​ ರೇಟ್ ಮೂಲಕ ಸೆಮಿಫೈನಲ್ ಪ್ರವೇಶಿಸಬಹುದು.

ಆದರೆ ಇಂತಹ ಕಠಿಣ ಹಾದಿಗಿಂತ ಟೀಮ್ ಇಂಡಿಯಾ ನ್ಯೂಜಿಲೆಂಡ್ ವಿರುದ್ದ ಗೆಲ್ಲುವ ಮೂಲಕ ಸುಲಭದ ಹಾದಿಯಲ್ಲಿ ಸೆಮಿಫೈನಲ್ ಪ್ರವೇಶಿಸುವುದನ್ನು ಎದುರು ನೋಡುತ್ತಿದೆ. ಹೀಗಾಗಿ ಕಿವೀಸ್ ವಿರುದ್ದದ ಪಂದ್ಯವು ಟೀಮ್ ಇಂಡಿಯಾ ಪಾಲಿಗೆ ನಿರ್ಣಾಯಕವಾಗಲಿದೆ. ಅತ್ತ ನ್ಯೂಜಿಲೆಂಡ್ ತಂಡಕ್ಕೂ ಕೂಡ ಟೀಮ್ ಇಂಡಿಯಾದಂತೆ ಈ ನಿರ್ಣಾಯಕ. ಹೀಗಾಗಿ ಉಭಯ ತಂಡಗಳಿಗೂ ಸೆಮಿಫೈನಲ್​ ರೇಸ್​ನಲ್ಲಿ ಅಗ್ರ ತಂಡವಾಗಿ ಉಳಿಯಲು ಅಕ್ಟೋಬರ್ 31 ರಂದು ನಡೆಯುವ ಪಂದ್ಯ ಬಹಳ ಮಹತ್ವದ್ದು. ಈ ಪಂದ್ಯದಲ್ಲಿ ಸೋಲುವ ತಂಡ ಮುಂದಿನ ಪಂದ್ಯಗಳ ಫಲಿತಾಂಶಗಳ ಆಧಾರ ಮೇಲೆ ಸೆಮಿಫೈನಲ್​ ರೇಸ್​ನಲ್ಲಿ ಇರಲಿದೆ. ಗೆದ್ದ ತಂಡವು ಮುಂದಿನ 3 ಪಂದ್ಯಗಳಲ್ಲಿ ಜಯ ಸಾಧಿಸಿ ಸೆಮಿಫೈನಲ್​ಗೆ ಎಂಟ್ರಿ ಕೊಡಬಹುದು.

ಹೀಗಾಗಿ ಮುಂದಿನ 4 ಪಂದ್ಯಗಳನ್ನು ಗೆಲ್ಲುವ ಮೂಲಕ ಟೀಮ್ ಇಂಡಿಯಾ ಹಾಗೂ ನ್ಯೂಜಿಲೆಂಡ್ ತಂಡಗಳು ಸೆಮಿಫೈನಲ್​ಗೇರಲು ಪ್ಲ್ಯಾನ್ ರೂಪಿಸುತ್ತಿದೆ. ಅದರಂತೆ ಅಕ್ಟೋಬರ್ 31 ರಂದು ದುಬೈನಲ್ಲಿ ನಡೆಯಲಿರುವ ಪಂದ್ಯವು ಉಭಯ ತಂಡಗಳಿಗೂ ಮಾಡು ಇಲ್ಲವೇ ಮಡಿ ಪಂದ್ಯವಾಗಿ ಮಾರ್ಪಟ್ಟಿದ್ದು, ಭಾರತ-ನ್ಯೂಜಿಲೆಂಡ್ ತಂಡಗಳಿಂದ ರೋಚಕ ಹೋರಾಟವನ್ನು ನಿರೀಕ್ಷಿಸಬಹುದು.

ಇದನ್ನೂ ಓದಿ: T20 World Cup 2021: ನ್ಯೂಜಿಲೆಂಡ್ ತಂಡಕ್ಕೆ ಬಿಗ್ ಶಾಕ್: ವಿಶ್ವಕಪ್​ನಿಂದ ಪ್ರಮುಖ ಆಟಗಾರ ಹೊರಕ್ಕೆ

ಇದನ್ನೂ ಓದಿ: T20 World Cup 2021: ಟಿ20 ರ‍್ಯಾಂಕಿಂಗ್‌​ನಲ್ಲಿ ನಂಬರ್ 1 ತಂಡ ಯಾವುದು ಗೊತ್ತಾ?

ಇದನ್ನೂ ಓದಿ: T20 World Cup 2021: 90 ಕೆ.ಜಿ ವಿಕೆಟ್ ಕೀಪರ್: ಅದ್ಭುತ ಕ್ಯಾಚ್​ ಹಿಡಿದು ಎಲ್ಲರನ್ನು ನಿಬ್ಬೆರಗಾಗಿಸಿದ ಶಹಝಾದ್

(T20 World Cup 2021: India’s chances of reaching the semi-finals)

Follow Us
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!