AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2021: ಟೂರ್ನಿಯಿಂದ ಹೊರಬೀಳುವ ಭಯ! ಕೊಹ್ಲಿ ತಲೆನೋವು ಹೆಚ್ಚಿಸಿವೆ ತಂಡದ ಈ 4 ಸಮಸ್ಯೆಗಳು

T20 World Cup 2021: ಟೀಮ್ ಇಂಡಿಯಾ ಒಂದಕ್ಕಿಂತ ಹೆಚ್ಚು ಮ್ಯಾಚ್ ವಿನ್ನರ್‌ಗಳಿಂದ ತುಂಬಿದೆ. ಆದರೆ ತಂಡದಲ್ಲಿರುವ ಈ 4 ದೌರ್ಬಲ್ಯಗಳಿಂದ ಕೊಹ್ಲಿಗೆ ತೆಲನೋವು ಹೆಚ್ಚಾಗಿದೆ.

T20 World Cup 2021: ಟೂರ್ನಿಯಿಂದ ಹೊರಬೀಳುವ ಭಯ! ಕೊಹ್ಲಿ ತಲೆನೋವು ಹೆಚ್ಚಿಸಿವೆ ತಂಡದ ಈ 4 ಸಮಸ್ಯೆಗಳು
ಹಾರ್ದಿಕ್ ಪಾಂಡ್ಯ, ವಿರಾಟ್ ಕೊಹ್ಲಿ
TV9 Web
| Edited By: |

Updated on: Oct 28, 2021 | 2:41 PM

Share

2021 ರ ಟಿ 20 ವಿಶ್ವಕಪ್‌ನಲ್ಲಿ ಭಾರತದ ಅತ್ಯಂತ ಕಳಪೆ ಆರಂಭವು ಈಗ ಕೊಹ್ಲಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಪಾಕಿಸ್ತಾನ ವಿರುದ್ಧ 10 ವಿಕೆಟ್‌ಗಳಿಂದ ಸೋತಿರುವ ಭಾರತ ತಂಡಕ್ಕೆ ಸೆಮಿಫೈನಲ್‌ ತಲುಪುವುದು ಈಗ ಕಷ್ಟದ ಕೆಲಸ. ಟೀಮ್ ಇಂಡಿಯಾ ಈಗ ಭಾನುವಾರ ನ್ಯೂಜಿಲೆಂಡ್ ವಿರುದ್ಧ ಪಂದ್ಯವನ್ನು ಆಡಬೇಕಾಗಿದೆ. ಅದರಲ್ಲಿ ಸೋಲಿನ ಹಾಲ್ ಅನ್ನು ಗೆಲ್ಲಬೇಕು, ಇಲ್ಲದಿದ್ದರೆ ಪಂದ್ಯಾವಳಿಯಿಂದ ಭಾರತ ಹೊರಹೋಗುವ ಸಾಧ್ಯತೆಗಳು ಹೆಚ್ಚಿವೆ. ಟೀಮ್ ಇಂಡಿಯಾ ಒಂದಕ್ಕಿಂತ ಹೆಚ್ಚು ಮ್ಯಾಚ್ ವಿನ್ನರ್‌ಗಳಿಂದ ತುಂಬಿದೆ. ಆದರೆ ತಂಡದಲ್ಲಿರುವ ಈ 4 ದೌರ್ಬಲ್ಯಗಳಿಂದ ಕೊಹ್ಲಿಗೆ ತೆಲನೋವು ಹೆಚ್ಚಾಗಿದೆ.

ಆಟಗಾರರು ಫಾರ್ಮ್‌ನಿಂದ ಹೊರಗಿದ್ದಾರೆ ಭಾರತದ ಪ್ಲೇಯಿಂಗ್ XI ನಲ್ಲಿ ಅನೇಕ ಆಟಗಾರರು ತಮ್ಮದೇ ಆದ ಸಾಮಥ್ಯ್ರ ಹೊಂದಿದ್ದಾರೆ. ಕೆಎಲ್ ರಾಹುಲ್, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಜಸ್ಪ್ರೀತ್ ಬುಮ್ರಾ ಅವರಂತಹ ದೊಡ್ಡ ಹೆಸರುಗಳು ಟೀಮ್ ಇಂಡಿಯಾದಲ್ಲಿದೆ. ಆದರೆ ಈ ತಂಡದ ಕೆಲವು ಆಟಗಾರರು ಫಾರ್ಮ್‌ನಲ್ಲಿ ಇಲ್ಲದಿರುವುದು ಭಾರತ ತಂಡವನ್ನು ದುರ್ಬಲಗೊಳಿಸುತ್ತಿದೆ. ಸೂರ್ಯಕುಮಾರ್ ಯಾದವ್ ಫಾರಂನಲ್ಲಿಲ್ಲ. IPL 2021 ರಿಂದ ರೋಹಿತ್ ಶರ್ಮಾ ಮಿಂಚುತ್ತಿಲ್ಲ. ಸೂರ್ಯಕುಮಾರ್ ಯಾದವ್ ವಿಷಯದಲ್ಲೂ ಅದೇ ಆಗಿದೆ. ಹಾರ್ದಿಕ್ ಪಾಂಡ್ಯ ಕೂಡ ಬ್ಯಾಟ್​ನಿಂದ ಸದ್ದು ಮಾಡುತ್ತಿಲ್ಲ ಮತ್ತು ಪಂತ್ ಕೂಡ ಬಲಿಷ್ಠ ಬ್ಯಾಟಿಂಗ್ ಮಾಡಲು ಸಾಧ್ಯವಾಗುತ್ತಿಲ್ಲ.

ಆರನೇ ಬೌಲರ್ ಕೊರತೆ ಬುಧವಾರ, ಹಾರ್ದಿಕ್ ಪಾಂಡ್ಯ ದುಬೈನಲ್ಲಿ ಬೌಲಿಂಗ್ ಅಭ್ಯಾಸ ಮಾಡಿದ್ದಾರೆ. ಇದರಿಂದ ಭಾರತೀಯ ತಂಡಕ್ಕೆ ಒಳ್ಳೆಯ ಸುದ್ದಿ ಸಿಕ್ಕಿತು ಆದರೆ ಅವರು ಕಿವೀ ತಂಡದ ವಿರುದ್ಧ ಬೌಲಿಂಗ್ ಮಾಡುವ ಬಗ್ಗೆ ಇನ್ನೂ ಯಾವುದೇ ನಿರ್ಧಾರವನ್ನು ತೆಗೆದುಕೊಂಡಿಲ್ಲ. ಭಾರತ ತಂಡದಲ್ಲಿ ಇನ್ನೂ ಆರನೇ ಬೌಲರ್ ಇಲ್ಲ ಮತ್ತು ಪಾಂಡ್ಯ ಬೌಲಿಂಗ್ ಮಾಡಿದರೂ ಅವರು ಚೆಂಡಿನೊಂದಿಗೆ ಎಷ್ಟು ಪರಿಣಾಮಕಾರಿಯಾಗುತ್ತಾರೆ ಎಂಬುದು ದೊಡ್ಡ ಪ್ರಶ್ನೆಯಾಗಿದೆ.

ಕೊಹ್ಲಿ ಟಾಸ್‌ನ ಬಾಸ್ ಆಗಬೇಕಾಗುತ್ತದೆ ಟಾಸ್ ಯಾರ ನಿಯಂತ್ರಣದಲ್ಲಿರುವುದಿಲ್ಲ, ಆದರೆ ವಿರಾಟ್ ಕೊಹ್ಲಿ ನ್ಯೂಜಿಲೆಂಡ್ ವಿರುದ್ಧ ಟಾಸ್ ಸೋತರೆ, ಅದು ತುಂಬಾ ಕಷ್ಟಕರವಾಗಿರುತ್ತದೆ. ದುಬೈನಲ್ಲಿ ಮೊದಲು ಬ್ಯಾಟ್ ಮಾಡುವುದು ಕಷ್ಟ ಮತ್ತು ಇಬ್ಬನಿಯಿಂದಾಗಿ ಬೆನ್ನಟ್ಟುವುದು ಅಷ್ಟೇ ಸುಲಭ. ಇದು ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲೂ ಕಂಡುಬಂದಿದೆ. ಒಂದು ವೇಳೆ ನ್ಯೂಜಿಲೆಂಡ್ ತಂಡ ಟಾಸ್ ಗೆದ್ದರೆ ಬೌಲಿಂಗ್ ಮಾಡಲಿದೆ.

ನ್ಯೂಜಿಲೆಂಡ್ ಭಾರತದ ವಿರುದ್ಧ ಅದ್ಭುತ ದಾಖಲೆಯನ್ನು ಹೊಂದಿದೆ ಐಸಿಸಿ ಪಂದ್ಯಾವಳಿಗಳಲ್ಲಿ ನ್ಯೂಜಿಲೆಂಡ್ ವಿರುದ್ಧದ ಭಾರತೀಯ ತಂಡದ ದಾಖಲೆಯು ತುಂಬಾ ಕೆಟ್ಟದಾಗಿದೆ. ಐಸಿಸಿ ಟೂರ್ನಿಯಲ್ಲಿ ಕಳೆದ 6 ಪಂದ್ಯಗಳಲ್ಲಿ ಭಾರತ ಕೇವಲ 1 ಪಂದ್ಯದಲ್ಲಿ ಮಾತ್ರ ನ್ಯೂಜಿಲೆಂಡ್‌ ತಂಡವನ್ನು ಸೋಲಿಸಿದೆ. ಸೌರವ್ ಗಂಗೂಲಿ ನಾಯಕತ್ವದಲ್ಲಿ 2003 ರ ವಿಶ್ವಕಪ್‌ನಲ್ಲಿ ಈ ವಿಜಯವನ್ನು ಸಾಧಿಸಲಾಯಿತು. ಅಂದಿನಿಂದ, ಭಾರತವು 2007 ರ ಟಿ 20 ವಿಶ್ವಕಪ್, 2016 ರ ಟಿ 20 ವಿಶ್ವಕಪ್, 2019 ರ ವಿಶ್ವಕಪ್ ಸೆಮಿಫೈನಲ್ ಮತ್ತು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ನ್ಯೂಜಿಲೆಂಡ್‌ನಿಂದ ಸೋಲಿಸಲ್ಪಟ್ಟಿದೆ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ