AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup: ನ್ಯೂಜಿಲೆಂಡ್ ವಿರುದ್ಧದ ಪಂದ್ಯಕ್ಕೂ ಮುನ್ನ ಭಾರತದ 4 ಬೌಲರ್​ಗಳು ಯುಎಇಯಿಂದ ವಾಪಸ್!

T20 World Cup: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಮಹತ್ವದ ನಿರ್ಧಾರ ಕೈಗೊಂಡಿದ್ದು, ತಂಡದ 4 ಬೌಲರ್‌ಗಳನ್ನು ಭಾರತಕ್ಕೆ ವಾಪಸ್ ಕರೆಸಿಕೊಂಡಿದೆ.

T20 World Cup: ನ್ಯೂಜಿಲೆಂಡ್ ವಿರುದ್ಧದ ಪಂದ್ಯಕ್ಕೂ ಮುನ್ನ ಭಾರತದ 4 ಬೌಲರ್​ಗಳು ಯುಎಇಯಿಂದ ವಾಪಸ್!
ಟೀಂ ಇಂಡಿಯಾ
TV9 Web
| Edited By: |

Updated on:Oct 28, 2021 | 4:41 PM

Share

2021 ರ ಟಿ 20 ವಿಶ್ವಕಪ್‌ನಲ್ಲಿ ಭಾರತ ತಂಡದ ಆರಂಭ ಉತ್ತಮವಾಗಿಲ್ಲ. ಪಾಕಿಸ್ತಾನ ವಿರುದ್ಧದ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ ಹೀನಾಯ ಸೋಲನ್ನು ಎದುರಿಸಬೇಕಾಯಿತು. ಪಾಕಿಸ್ತಾನದ ವೇಗದ ಬೌಲರ್‌ಗಳ ಮುಂದೆ ಭಾರತದ ಬ್ಯಾಟ್ಸ್‌ಮನ್‌ಗಳು ದೊಡ್ಡ ಮೊತ್ತ ಗಳಿಸಲು ವಿಫಲರಾದರು. ನಂತರ ತಂಡವು 10 ವಿಕೆಟ್‌ಗಳಿಂದ ಸೋಲನ್ನು ಎದುರಿಸಬೇಕಾಯಿತು. ಇದೀಗ ತಂಡವು ತನ್ನ ಎರಡನೇ ಪಂದ್ಯವನ್ನು ನ್ಯೂಜಿಲೆಂಡ್ ವಿರುದ್ಧ ಅಕ್ಟೋಬರ್ 31 ರಂದು ಆಡಬೇಕಿದ್ದು, ಇದಕ್ಕಾಗಿ ವಿರಾಟ್ ಕೊಹ್ಲಿ ಮತ್ತು ಕಂಪನಿ ತಯಾರಿ ನಡೆಸುತ್ತಿದೆ. ಆದರೆ ಈ ಮಹತ್ವದ ಪಂದ್ಯದ ಸಿದ್ಧತೆಯ ನಡುವೆಯೇ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಮಹತ್ವದ ನಿರ್ಧಾರ ಕೈಗೊಂಡಿದ್ದು, ತಂಡದ 4 ಬೌಲರ್‌ಗಳನ್ನು ಭಾರತಕ್ಕೆ ವಾಪಸ್ ಕರೆಸಿಕೊಂಡಿದೆ. ಈ ಬೌಲರ್‌ಗಳು ಯುಎಇಯಲ್ಲಿಯೇ ಟೀಮ್ ಇಂಡಿಯಾ ಜೊತೆಗಿದ್ದರು ಮತ್ತು ನೆಟ್ ಬೌಲರ್ ಆಗಿ ತಯಾರಿಯಲ್ಲಿ ಸಹಾಯ ಮಾಡುತ್ತಿದ್ದರು.

ಟೈಮ್ಸ್ ಆಫ್ ಇಂಡಿಯಾದ ಇಂಗ್ಲಿಷ್ ಪತ್ರಿಕೆಯ ವರದಿಯ ಪ್ರಕಾರ, ಟೀಮ್ ಇಂಡಿಯಾ ಮ್ಯಾನೇಜ್‌ಮೆಂಟ್ 4 ವೇಗದ ಬೌಲರ್‌ಗಳನ್ನು ಬಿಡುಗಡೆ ಮಾಡಿದೆ. ಹರ್ಷಲ್ ಪಟೇಲ್, ಅವೇಶ್ ಖಾನ್, ಉಮ್ರಾನ್ ಮಲಿಕ್ ಮತ್ತು ಲುಕ್ಮಾನ್ ಮೇರಿವಾಲಾ ದುಬೈನಲ್ಲಿರುವ ತಂಡದ ಬಯೋ-ಬಬಲ್‌ನಲ್ಲಿ ಮತ್ತು ಮಂಡಳಿಯ ಆದೇಶದಂತೆ ಅವರೆಲ್ಲರೂ ಈಗ ದೇಶಕ್ಕೆ ಮರಳುತ್ತಿದ್ದಾರೆ. ಈ ಎಲ್ಲಾ ನಾಲ್ಕು ಆಟಗಾರರು ಈಗ ಸೈಯದ್ ಮುಷ್ತಾಕ್ ಅಲಿ ಟ್ರೋಫಿ T20 ಪಂದ್ಯಾವಳಿಯಲ್ಲಿ ತಮ್ಮ ರಾಜ್ಯ ತಂಡಗಳಿಗೆ ಆಡಲು ಲಭ್ಯವಿರುತ್ತಾರೆ.

ವಿಶ್ವಕಪ್‌ಗೆ ಆಯ್ಕೆಯಾದ ಭಾರತೀಯ ತಂಡದ ಜೊತೆಗೆ, ಆಯ್ಕೆಗಾರರು 8 ಇತರ ಆಟಗಾರರನ್ನು ನೆಟ್ ಬೌಲರ್‌ಗಳಾಗಿ ಸೇರಿಸಿದ್ದಾರೆ. ಈ ಎಲ್ಲಾ ಆಟಗಾರರು ಐಪಿಎಲ್ 2021 ರ ಭಾಗವಾಗಿದ್ದರು ಮತ್ತು ಮೊದಲಿನಿಂದಲೂ ಯುಎಇಯಲ್ಲಿದ್ದರು. ಪಂದ್ಯಾವಳಿಯ ಅಂತ್ಯದಿಂದಲೂ, ಅವರು ವಿಶ್ವಕಪ್‌ನ ಬಯೋಬಬಲ್​ನಲ್ಲಿ ಟೀಮ್ ಇಂಡಿಯಾದೊಂದಿಗೆ ಇದ್ದು ಸಿದ್ಧತೆಯಲ್ಲಿ ಸಹಾಯ ಮಾಡುತ್ತಿದ್ದರು. ಈ ಪೈಕಿ ನಾಲ್ವರು ಬೌಲರ್‌ಗಳು ಪಾಕಿಸ್ತಾನ ವಿರುದ್ಧದ ಪಂದ್ಯಕ್ಕೂ ಮುನ್ನ ದೇಶಕ್ಕೆ ಮರಳಿದ್ದರು. ವಿಶ್ವಕಪ್‌ನಲ್ಲಿ ಭಾರತ ತಂಡದ ಮುಂದಿನ ಪಂದ್ಯಗಳ ನಡುವಿನ ಸಮಯ ತುಂಬಾ ಕಡಿಮೆ ಮತ್ತು ಅಂತಹ ಪರಿಸ್ಥಿತಿಯಲ್ಲಿ ನೆಟ್ ಬೌಲರ್‌ಗಳ ಅಗತ್ಯವಿಲ್ಲ ಎಂದು ತಂಡಕ್ಕೆ ಸಂಬಂಧಿಸಿದ ಮೂಲಗಳು ತಿಳಿಸಿದ್ದವು, ಇದರಿಂದಾಗಿ ಅವರನ್ನು ಹಿಂದಕ್ಕೆ ಕಳುಹಿಸಲಾಗಿದೆ.

ಇದರ ಆಧಾರದ ಮೇಲೆ ಈಗ ಉಳಿದ ನಾಲ್ವರು ಬೌಲರ್‌ಗಳನ್ನೂ ವಾಪಸ್ ಕಳುಹಿಸಲಾಗಿದೆ. ಈ ಎಲ್ಲಾ ಆಟಗಾರರು ಮುಷ್ತಾಕ್ ಅಲಿ ಟ್ರೋಫಿಯಲ್ಲಿ ತಮ್ಮ ತಮ್ಮ ರಾಜ್ಯಗಳ ತಂಡಕ್ಕೆ ತಮ್ಮ ಶಕ್ತಿಯನ್ನು ತೋರಿಸಲಿದ್ದಾರೆ. ಭಾರತದ ಪ್ರಮುಖ ದೇಶೀಯ ಟಿ20 ಟೂರ್ನಿ ನವೆಂಬರ್ 4ರಿಂದ ಆರಂಭವಾಗಲಿದೆ.

Published On - 4:28 pm, Thu, 28 October 21

Follow Us
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!