AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2022: ಟಿ20 ವಿಶ್ವಕಪ್ 2022 ಕ್ಕೆ 8 ತಂಡಗಳು ನೇರ ಎಂಟ್ರಿ

T20 World Cup 2021: ಟಿ20 ತಂಡಗಳ ರ್ಯಾಂಕಿಂಗ್​ನಲ್ಲಿರುವ 8 ಅಗ್ರ ತಂಡಗಳು ಮುಂದಿನ ಟಿ20 ವಿಶ್ವಕಪ್​ನ ಸೂಪರ್ 12 ಹಂತಕ್ಕೆ ನೇರವಾಗಿ ಅರ್ಹತೆ ಪಡೆಯುತ್ತದೆ.

T20 World Cup 2022: ಟಿ20 ವಿಶ್ವಕಪ್ 2022 ಕ್ಕೆ 8 ತಂಡಗಳು ನೇರ ಎಂಟ್ರಿ
T20 World Cup 2022
TV9 Web
| Edited By: |

Updated on: Nov 07, 2021 | 4:00 PM

Share

ಈ ಬಾರಿಯ ಟಿ20 ವಿಶ್ವಕಪ್​ನ (T20 World Cup 2021) ಲೀಗ್ ಹಂತದ ಪಂದ್ಯಗಳು ಮುಕ್ತಾಯಕ್ಕೆ ಬಂದು ನಿಂತಿದೆ. ಇದರ ಬೆನ್ನಲ್ಲೇ ಮುಂದಿನ ಟಿ20 ವಿಶ್ವಕಪ್ (T20 World Cup 2022)​ ಸಿದ್ಧತೆಗಳು ಕೂಡ ಶುರುವಾಗಿದೆ. 2020 ರಲ್ಲಿ ಆಸ್ಟ್ರೇಲಿಯಾದಲ್ಲಿ ನಡೆಯಬೇಕಿದ್ದ ಟಿ20 ವಿಶ್ವಕಪ್​ ಅನ್ನು ಕೊರೋನಾ ಕಾರಣ 2022ಕ್ಕೆ ಮುಂದೂಡಲಾಗಿತ್ತು. ಅದರಂತೆ ಮುಂದಿನ ವರ್ಷ ಆಸ್ಟ್ರೇಲಿಯಾದಲ್ಲಿ ಮತ್ತೆ ಚುಟುಕು ಕ್ರಿಕೆಟ್ ಕದನ ನಡೆಯಲಿದೆ. ಈ ವಿಶ್ವಕಪ್​ನಲ್ಲಿ 8 ತಂಡಗಳು ನೇರವಾಗಿ ಅರ್ಹತೆ ಪಡೆದುಕೊಂಡಿದೆ.

ಟಿ20 ತಂಡಗಳ ರ್ಯಾಂಕಿಂಗ್​ನಲ್ಲಿರುವ 8 ಅಗ್ರ ತಂಡಗಳು ಮುಂದಿನ ಟಿ20 ವಿಶ್ವಕಪ್​ನ ಸೂಪರ್ 12 ಹಂತಕ್ಕೆ ನೇರವಾಗಿ ಅರ್ಹತೆ ಪಡೆಯುತ್ತದೆ. ಅದರಂತೆ ಭಾರತ, ಆಸ್ಟ್ರೇಲಿಯಾ, ಇಂಗ್ಲೆಂಡ್, ನ್ಯೂಜಿಲ್ಯಾಂಡ್, ದಕ್ಷಿಣ ಆಫ್ರಿಕಾ, ಅಫ್ಘಾನಿಸ್ಥಾನ್, ಪಾಕಿಸ್ತಾನ್ ಮತ್ತು ಬಾಂಗ್ಲಾದೇಶ ತಂಡಗಳು ನೇರ ಅರ್ಹತೆ ಪಡೆದಿದೆ.

ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಅರ್ಹತಾ ಸುತ್ತಿನ ಮೂಲಕ ಸೂಪರ್ 12 ನಲ್ಲಿ ಕಾಣಿಸಿಕೊಂಡಿದ್ದ ಬಾಂಗ್ಲಾದೇಶ ತಂಡವು ರ್ಯಾಂಕಿಂಗ್​ನಲ್ಲಿ ಉನ್ನತಿ ಕಂಡಿದ್ದು, ಹೀಗಾಗಿ ನೇರ ಅರ್ಹತೆ ಪಡೆದಿದೆ. ಅತ್ತ ಈ ಬಾರಿ 5 ಪಂದ್ಯಗಳಲ್ಲಿ 4 ಸೋಲನುಭವಿಸಿರುವ ವೆಸ್ಟ್ ಇಂಡೀಸ್ ತಂಡವು ರ್ಯಾಂಕಿಂಗ್ ಕುಸಿತ ಕಂಡಿದ್ದು, ಇದರಿಂದ ರ್ಯಾಂಕಿಂಗ್​ನಲ್ಲಿ 10ನೇ ಸ್ಥಾನ ಪಡೆದಿದೆ. ಹಾಗಾಗಿ 9ನೇ ಮತ್ತು 10ನೇ ಸ್ಥಾನದಲ್ಲಿರುವ ಶ್ರೀಲಂಕಾ ಹಾಗೂ ವೆಸ್ಟ್ ಇಂಡೀಸ್ ತಂಡಗಳು ಅರ್ಹತಾ ಸುತ್ತಿನ ಮೂಲಕ ಸೂಪರ್ 12 ಗೆ ಅರ್ಹತೆ ಪಡೆಯಬೇಕಿದೆ.

ಇನ್ನು ಈ ಸಲ ಟಿ20 ವಿಶ್ವಕಪ್​ನಲ್ಲಿ ಕಾಣಿಸಿಕೊಂಡಿರುವ ಸ್ಕಾಟ್ಲೆಂಡ್ ಹಾಗೂ ನಮೀಬಿಯಾ ತಂಡಗಳು ಕೂಡ ಅರ್ಹತಾ ಸುತ್ತಿಗೆ ಪ್ರವೇಶ ಪಡೆದಿದ್ದು, ಇನ್ನುಳಿದ ತಂಡಗಳು ಯಾವುವು ಎಂಬುದನ್ನು ಐಸಿಸಿ ಶೀಘ್ರದಲ್ಲೇ ಪ್ರಕಟಿಸಲಿದೆ.

ಇದನ್ನೂ ಓದಿ: ICC T20 Rankings: ನೂತನ ಟಿ20 ರ‍್ಯಾಂಕಿಂಗ್ ಪ್ರಕಟ: ಎಲ್ಲರನ್ನು ಹಿಂದಿಕ್ಕಿದ ಬಾಬರ್

ಇದನ್ನೂ ಓದಿ: IPL 2022: RCB ಈ ನಾಲ್ವರು ಆಟಗಾರರನ್ನು ಉಳಿಸಿಕೊಳ್ಳಬಹುದು..!

ಇದನ್ನೂ ಓದಿ: T20 World Cup 2021: ಸೆಹ್ವಾಗ್-ಗಂಭೀರ್ ದಾಖಲೆ ಮುರಿದ ಕೆಎಲ್ ರಾಹುಲ್-ರೋಹಿತ್ ಶರ್ಮಾ

(T20 World Cup 2022: 8 Teams Assured Of Super 12 Spot In 2022 T20 WC)

ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ