AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

VIDEO: ಪಾಕ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ, ಅಫ್ಘಾನಿಸ್ತಾನದಲ್ಲಿ ಸಂಭ್ರಮ..!

India vs Pakistan: ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ ತಂಡವು ಟೀಮ್ ಇಂಡಿಯಾ 160 ರನ್​ಗಳ ಟಾರ್ಗೆಟ್ ನೀಡಿತ್ತು. ಈ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ಉತ್ತಮ ಆರಂಭ ಪಡೆದಿರಲಿಲ್ಲ.

VIDEO: ಪಾಕ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ, ಅಫ್ಘಾನಿಸ್ತಾನದಲ್ಲಿ ಸಂಭ್ರಮ..!
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Oct 24, 2022 | 6:54 PM

Share

T20 World Cup 2022: ಭಾರತ-ಪಾಕಿಸ್ತಾನ್ (India vs Pakistan) ನಡುವಣ ಹೈವೋಲ್ಟೇಜ್ ಪಂದ್ಯ ಇದೀಗ ಬರೀ ಎರಡು ದೇಶಗಳ ಕ್ರಿಕೆಟ್ ಪ್ರೇಮಿಗಳ ಪ್ರತಿಷ್ಠೆಯಾಗಿ ಮಾತ್ರ ಉಳಿದಿಲ್ಲ. ಪಾಕಿಸ್ತಾನದ ನೆರೆರಾಷ್ಟ್ರ ಅಫ್ಘಾನಿಸ್ತಾನ್ (Afghanistan) ಕ್ರಿಕೆಟ್ ಪ್ರೇಮಿಗಳಿಗೂ ಭಾರತ-ಪಾಕ್ ಮುಖಾಮುಖಿ ಮಹತ್ವದ ಪಂದ್ಯವಾಗಿ ಮಾರ್ಪಟ್ಟಿದೆ. ಇದೇ ಕಾರಣದಿಂದಾಗಿ ಅಫ್ಘಾನ್ ಕ್ರಿಕೆಟ್ ಪ್ರೇಮಿಗಳು ಬದ್ಧವೈರಿಗಳ ಕದನದ ವೇಳೆ ಟೀಮ್ ಇಂಡಿಯಾಗೆ ಬೆಂಬಲ ಸೂಚಿಸುತ್ತಾರೆ. ಇದಕ್ಕೆ ಒಂದು ಕಾರಣ ಅಫ್ಘಾನಿಸ್ತಾನದಲ್ಲಿನ ಉಗ್ರ ಚಟುವಟಿಕೆಗಳಿಗೆ ಪಾಕ್ ಪರೋಕ್ಷ ಬೆಂಬಲ ನೀಡುತ್ತಿರುವುದು ಎನ್ನಬಹುದು.

ಇನ್ನು ಅಘ್ಘಾನ್​ನಲ್ಲಿ ಪಾಕ್ ಪ್ರೇರಿತ ದಬ್ಬಾಳಿಕೆಯನ್ನು ಸಹಿಸದ ಹೊಸ ತಲೆಮಾರಿನ ಯುವಕರು ಭಾರತದ ಮೇಲೆ ವಿಶೇಷ ಪ್ರೀತಿಯನ್ನು ಇಟ್ಟುಕೊಂಡಿದ್ದಾರೆ. ಅದರಲ್ಲೂ ಅಫ್ಘಾನಿಸ್ತಾನಕ್ಕೆ ಭಾರತವು ಸದಾ ಬೆಂಬಲವಾಗಿ ನಿಂತಿದೆ. ಇದೇ ಕಾರಣದಿಂದಾಗಿ ಪಾಕ್-ಭಾರತ ನಡುವಣ ಪಂದ್ಯದ ವೇಳೆ ಬಹುತೇಕ ಅಘ್ಘಾನ್ನರು ಟೀಮ್ ಇಂಡಿಯಾಗೆ ಬೆಂಬಲ ಸೂಚಿಸುತ್ತಾರೆ.

ಇದೀಗ ಇದಕ್ಕೆ ತಾಜಾ ಉದಾಹರಣೆಯಾಗಿ ಅಫ್ಘಾನಿಸ್ತಾನ್ ಕ್ರಿಕೆಟ್ ಪ್ರೇಮಿಗಳ ವಿಡಿಯೋವೊಂದು ವೈರಲ್ ಆಗಿದೆ. ಮೆಲ್ಬೋರ್ನ್​ನಲ್ಲಿ ಅಕ್ಟೋಬರ್ 23 ರಂದು ಪಾಕಿಸ್ತಾನ್ ವಿರುದ್ಧ ಟೀಮ್ ಇಂಡಿಯಾ ಗೆಲ್ಲುತ್ತಿದ್ದಂತೆ ಅಫ್ಘಾನಿಸ್ತಾನದ ಕಾಬೂಲ್ ನಗರದಲ್ಲಿ ಕ್ರಿಕೆಟ್​ ಪ್ರೇಮಿಗಳು ಕೇಕೆ ಹಾಕುತ್ತಾ ಸಂಭ್ರಮಿಸಿದ್ದರು. ಇದರ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.

ಇದನ್ನೂ ಓದಿ
Image
Virat Kohli: ಒಂದಲ್ಲ, ಎರಡಲ್ಲ…ಹಲವು ವಿಶ್ವ ದಾಖಲೆಗಳನ್ನು ಉಡೀಸ್ ಮಾಡಿದ ಕಿಂಗ್ ಕೊಹ್ಲಿ
Image
India vs Pakistan: ಪಾಕ್​ನ ಬಗ್ಗು ಬಡಿದು ವಿಶ್ವ ದಾಖಲೆ ನಿರ್ಮಿಸಿದ ಟೀಮ್ ಇಂಡಿಯಾ
Image
IND vs PAK: ವಿಶ್ವಕಪ್​ನಲ್ಲಿ ವಿಶ್ವ ದಾಖಲೆ ಬರೆದ ರೋಹಿತ್ ಶರ್ಮಾ
Image
India vs Pakistan: ಹೊಸ ದಾಖಲೆ ನಿರ್ಮಿಸಿದ ದಿನೇಶ್ ಕಾರ್ತಿಕ್

ಒಟ್ಟಿನಲ್ಲಿ ಭಾರತ-ಪಾಕಿಸ್ತಾನ್ ನಡುವಣ ಕದನದಲ್ಲಿ ಭಾರತೀಯರು ಮಾತ್ರವಲ್ಲದೆ, ಅತ್ತ ಅಫ್ಘಾನ್ನರು ಸಂಭ್ರಮಿಸುತ್ತಿರುವುದು ಪಾಕ್ ಕ್ರಿಕೆಟ್​ ಪ್ರೇಮಿಗಳ ಕಣ್ಣು ಕೆಂಪಾಗಿಸಿರುವುದಂತು ಸುಳ್ಳಲ್ಲ.

ಟೀಮ್ ಇಂಡಿಯಾಗೆ ರೋಚಕ ಜಯ:

ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ ತಂಡವು ಟೀಮ್ ಇಂಡಿಯಾ 160 ರನ್​ಗಳ ಟಾರ್ಗೆಟ್ ನೀಡಿತ್ತು. ಈ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ಉತ್ತಮ ಆರಂಭ ಪಡೆದಿರಲಿಲ್ಲ. ಕೇವಲ 31 ರನ್​ಗಳಿಗೆ ಕೆಎಲ್ ರಾಹುಲ್, ರೋಹಿತ್ ಶರ್ಮಾ, ಅಕ್ಷರ್ ಪಟೇಲ್ ಹಾಗೂ ಸೂರ್ಯಕುಮಾರ್ ಯಾದವ್ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು.

ಈ ಹಂತದಲ್ಲಿ ಜೊತೆಯಾದ ವಿರಾಟ್ ಕೊಹ್ಲಿ ಹಾಗೂ ಹಾರ್ದಿಕ್ ಪಾಂಡ್ಯ 113 ರನ್​ಗಳ ಜೊತೆಯಾಟವಾಡುವ ಮೂಲಕ ತಂಡವನ್ನು ಗೆಲುವಿನತ್ತ ಮುನ್ನಡೆಸಿದರು. ಅದರಂತೆ ಅಂತಿಮ 3 ಓವರ್​ಗಳ ವೇಳೆ ಪಂದ್ಯವು ರೋಚಕಘಟ್ಟದತ್ತ ಸಾಗಿತ್ತು. ಅದರಂತೆ ಕೊನೆಯ 18 ಎಸೆತಗಳಲ್ಲಿ ಟೀಮ್ ಇಂಡಿಯಾಗೆ 48 ರನ್​ಗಳ ಅವಶ್ಯಕತೆಯಿತ್ತು. ಶಾಹೀನ್ ಅಫ್ರಿದಿ ಎಸೆದ 18ನೇ ಓವರ್​ನಲ್ಲಿ ಕೊಹ್ಲಿ ಮೂರು ಭರ್ಜರಿ ಬೌಂಡರಿ ಬಾರಿಸಿದರು. ಅಲ್ಲದೆ ಆ ಓವರ್​ನಲ್ಲಿ 17 ರನ್ ಕಲೆಹಾಕಿದರು. ಅಂತಿಮ 12 ಎಸೆತಗಳಲ್ಲಿ 31 ರನ್ ಗಳಿಸಬೇಕಿತ್ತು.

ಇದನ್ನೂ ಓದಿ: T20 World Cup 2022: ಟಿ20 ವಿಶ್ವಕಪ್​ನ ಟೀಮ್ ಇಂಡಿಯಾದ ಸಂಪೂರ್ಣ ವೇಳಾಪಟ್ಟಿ

ಹ್ಯಾರಿಸ್ ರೌಫ್ ಎಸೆದ 19ನೇ ಓವರ್​ನಲ್ಲಿ ಭರ್ಜರಿ 2 ಸಿಕ್ಸ್ ಸಿಡಿಸುವ ಮೂಲಕ ವಿರಾಟ್ ಕೊಹ್ಲಿ ಪಂದ್ಯ ಗೆಲ್ಲಿಸಿಕೊಡುವ ಭರವಸೆ ಮೂಡಿಸಿದರು. ಹಾಗೆಯೇ ಓವರ್​ನಲ್ಲಿ 16 ರನ್​ಗಳ ಗುರಿಯೊಂದಿಗೆ ಬ್ಯಾಟ್ ಬೀಸಿದ ಕೊಹ್ಲಿ ಬೌಲರ್​ ಮೇಲೆ ಒತ್ತಡ ಹೇರುವಲ್ಲಿ ಯಶಸ್ವಿಯಾದರು. ಅದರಲ್ಲೂ ಮೊಹಮ್ಮದ್ ನವಾಜ್ ಎಸೆತದಲ್ಲಿ ಭರ್ಜರಿ ಸಿಕ್ಸ್ ಸಿಡಿಸಿ ಗೆಲುವನ್ನು ಖಚಿತಪಡಿಸಿದರು. ಅಂತಿಮವಾಗಿ ಕೊನೆಯ ಎಸೆತದಲ್ಲಿ ಅಶ್ವಿನ್ 1 ರನ್ ಕಲೆಹಾಕುವ ಮೂಲಕ ಟೀಮ್ ಇಂಡಿಯಾ 4 ವಿಕೆಟ್​ಗಳ ಜಯ ಸಾಧಿಸಿತು. ಈ ಮೂಲಕ ಪಾಕಿಸ್ತಾನ್ ತಂಡಕ್ಕೆ ಸೋಲುಣಿಸಿ 2021 ರ ಟಿ20 ವಿಶ್ವಕಪ್ ಸೋಲಿನ ಸೇಡನ್ನು ಟೀಮ್ ಇಂಡಿಯಾ ತೀರಿಸಿಕೊಂಡಿದೆ.

ಪ್ರೇಯಸಿಯ ಜೊತೆ ಶಾಪಿಂಗ್ ಮಾಡುವಾಗ ಮಕ್ಕಳ ಜೊತೆ ಅದೇ ಮಾಲ್​ಗೆ ಬಂದ ಹೆಂಡತಿ
ಪ್ರೇಯಸಿಯ ಜೊತೆ ಶಾಪಿಂಗ್ ಮಾಡುವಾಗ ಮಕ್ಕಳ ಜೊತೆ ಅದೇ ಮಾಲ್​ಗೆ ಬಂದ ಹೆಂಡತಿ
ಹೈಕಮಾಂಡ್ ಜತೆ ಯಾವುದರ ಬಗ್ಗೆ ಸಭೆ ಮಾಡಿದ್ದು? ಡಿಕೆಶಿ ಹೇಳಿದ್ದಿಷ್ಟು
ಹೈಕಮಾಂಡ್ ಜತೆ ಯಾವುದರ ಬಗ್ಗೆ ಸಭೆ ಮಾಡಿದ್ದು? ಡಿಕೆಶಿ ಹೇಳಿದ್ದಿಷ್ಟು
ಹೊಸ ರೂಪದ ಮೈಸೂರು ಸ್ಯಾಂಡಲ್ ಸೋಪ್ ಬಿಡುಗಡೆ ಮಾಡಿದ ತಮನ್ನಾ ಭಾಟಿಯಾ
ಹೊಸ ರೂಪದ ಮೈಸೂರು ಸ್ಯಾಂಡಲ್ ಸೋಪ್ ಬಿಡುಗಡೆ ಮಾಡಿದ ತಮನ್ನಾ ಭಾಟಿಯಾ
200 ಸಿನಿಮಾಗಳಿಗೆ ಸಬ್ಸಿಡಿ ಕೊಡಿ: ಸರ್ಕಾರಕ್ಕೆ ನಿರ್ಮಾಪಕ ಕೆ. ಮಂಜು ಮನವಿ
200 ಸಿನಿಮಾಗಳಿಗೆ ಸಬ್ಸಿಡಿ ಕೊಡಿ: ಸರ್ಕಾರಕ್ಕೆ ನಿರ್ಮಾಪಕ ಕೆ. ಮಂಜು ಮನವಿ
ಮೈಸೂರು ಸ್ಯಾಂಡಲ್ ಸೋಪ್​​ಗೆ ತಮನ್ನಾ ರಾಯಭಾರಿ; ಕನ್ನಡದಲ್ಲಿ ಮಾತು
ಮೈಸೂರು ಸ್ಯಾಂಡಲ್ ಸೋಪ್​​ಗೆ ತಮನ್ನಾ ರಾಯಭಾರಿ; ಕನ್ನಡದಲ್ಲಿ ಮಾತು
ಬಗೆದಷ್ಟು ಐತಿಹಾಸಿಕ ಸಿದ್ದೇಶ್ವರ ದೇವಸ್ಥಾನ ರಹಸ್ಯ ಬಯಲು
ಬಗೆದಷ್ಟು ಐತಿಹಾಸಿಕ ಸಿದ್ದೇಶ್ವರ ದೇವಸ್ಥಾನ ರಹಸ್ಯ ಬಯಲು
ಚಿತ್ರರಂಗದ 93ನೇ ವರ್ಷದ ಸಂಭ್ರಮಾಚರಣೆ ಬೇಡ: ಪ್ರಿಯಾ ಹಾಸನ್
ಚಿತ್ರರಂಗದ 93ನೇ ವರ್ಷದ ಸಂಭ್ರಮಾಚರಣೆ ಬೇಡ: ಪ್ರಿಯಾ ಹಾಸನ್
ಪರಿಹಾರ ಕೊಡದಿದ್ದಕ್ಕೆ ಸೇಡಿಗಾಗಿ ವಿಧಾನಸೌಧ ಬಳಿಯ ಗಂಧದ ಮರ ಕಡಿದು ರೈತ
ಪರಿಹಾರ ಕೊಡದಿದ್ದಕ್ಕೆ ಸೇಡಿಗಾಗಿ ವಿಧಾನಸೌಧ ಬಳಿಯ ಗಂಧದ ಮರ ಕಡಿದು ರೈತ
ಕಮಲಾಕರ ಭಟ್​​​ನ ತನ್ನ ತಾಳಕ್ಕೆ ಕುಣಿಸುತ್ತಿರುವ ಸುಚಿತ್ರಾಳ ವಿಡಿಯೋ
ಕಮಲಾಕರ ಭಟ್​​​ನ ತನ್ನ ತಾಳಕ್ಕೆ ಕುಣಿಸುತ್ತಿರುವ ಸುಚಿತ್ರಾಳ ವಿಡಿಯೋ
ಸಿನಿಮಾ ಸಬ್ಸಿಡಿ ಹೆಚ್ಚು ಮಾಡಿ: ನಿರ್ಮಾಪಕ ಕೆ ಮಂಜು
ಸಿನಿಮಾ ಸಬ್ಸಿಡಿ ಹೆಚ್ಚು ಮಾಡಿ: ನಿರ್ಮಾಪಕ ಕೆ ಮಂಜು