AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2022: 8 ತಿಂಗಳು ಮುಂಚಿತವಾಗಿ ಭಾರತ-ಪಾಕ್ ಪಂದ್ಯದ ಎಲ್ಲಾ ಟಿಕೆಟ್​ ಮಾರಾಟ..!

T20 World Cup 2022: ಸೂಪರ್ 12 ಪಂದ್ಯಗಳು ಅಕ್ಟೋಬರ್ 22ರಿಂದ ಶುರುವಾಗಲಿದ್ದು, ಮೊದಲ ಪಂದ್ಯ ನ್ಯೂಜಿಲೆಂಡ್ ಮತ್ತು ಹಾಲಿ ಚಾಂಪಿಯನ್ ಆಸ್ಟ್ರೇಲಿಯಾ ನಡುವೆ ಸಿಡ್ನಿ ಕ್ರಿಕೆಟ್ ಗ್ರೌಂಡ್​ನಲ್ಲಿ ನಡೆಯಲಿದೆ.

T20 World Cup 2022: 8 ತಿಂಗಳು ಮುಂಚಿತವಾಗಿ ಭಾರತ-ಪಾಕ್ ಪಂದ್ಯದ ಎಲ್ಲಾ ಟಿಕೆಟ್​ ಮಾರಾಟ..!
India - Pakistan
TV9 Web
| Edited By: |

Updated on: Feb 07, 2022 | 2:55 PM

Share

ಐಸಿಸಿ ಟಿ20 ವಿಶ್ವಕಪ್ 2022 ರ ಟೂರ್ನಿಗಾಗಿ ಇಡೀ ವಿಶ್ವವೇ ಕಾತುರದಿಂದ ಕಾಯುತ್ತಿದೆ. ಅದರಲ್ಲೂ ಭಾರತ-ಪಾಕಿಸ್ತಾನ್ ಮುಖಾಮುಖಿಯನ್ನು ಕ್ರಿಕೆಟ್​ ಪ್ರೇಮಿಗಳು ಎದುರು ನೋಡುತ್ತಿದ್ದಾರೆ. ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್​ಗೆ ಅಕ್ಟೋಬರ್ 16 ರಂದು ಟೂರ್ನಿಗೆ ಚಾಲನೆ ಸಿಗಲಿದೆ. ಅಕ್ಟೋಬರ್ 23 ರಂದು ಭಾರತ ತನ್ನ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ (India vs Pakistan) ವಿರುದ್ಧ ಆಡುವ ಮೂಲಕ ಅಭಿಯಾನವನ್ನು ಆರಂಭಿಸಲಿದೆ. ಆದರೆ ಈ ಕದನ ಕುತೂಹಲದ ಪಂದ್ಯದ ಟಿಕೆಟ್​ಗಳು ಈಗಾಗಲೇ ಸಂಪೂರ್ಣವಾಗಿ ಮಾರಾಟವಾಗಿದೆ. ಪಂದ್ಯಕ್ಕೆ ಇನ್ನು 8 ತಿಂಗಳು ಬಾಕಿ ಇದ್ದು, ಇದಾಗ್ಯೂ ಆಸ್ಟ್ರೇಲಿಯಾದ ಅತಿದೊಡ್ಡ ಮೈದಾನ ಎಂಸಿಜಿಯಲ್ಲಿ ಉಭಯ ತಂಡಗಳ ನಡುವಿನ ಈ ಹಣಾಹಣಿ ವೀಕ್ಷಿಸಲು ಈಗಾಗಲೇ 60,000 ಟಿಕೆಟ್​ಗಳನ್ನು ಕ್ರಿಕೆಟ್ ಪ್ರೇಮಿಗಳು ಖರೀದಿಸಿದ್ದಾರೆ.

ಈಗಾಗಲೇ ಎಲ್ಲಾ ಟಿಕೆಟ್‌ಗಳು ಸೋಲ್ಡ್ ಔಟ್ ಆಗಿದ್ದು, ಹೀಗಾಗಿ ಅಕ್ಟೋಬರ್ 23 ರಂದು ನಡೆಯಲಿರುವ ಭಾರತ-ಪಾಕಿಸ್ತಾನ್ ನಡುವಣ ಪಂದ್ಯದ ಟಿಕೆಟ್​ಗಳು ಇನ್ನು ಲಭಿಸುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್​ 2022 ಗೆ ಅಕ್ಟೋಬರ್ 16 ರಿಂದ ಶುರವಾಗಲಿದ್ದು, ನವೆಂಬರ್ 9 ರಂದು ಮೊದಲ ಸೆಮಿಫೈನಲ್ ನಡೆಯಲಿದೆ. ನವೆಂಬರ್ 10 ರಂದು ಎರಡನೇ ಸೆಮಿಫೈನಲ್ ಮತ್ತು ನವೆಂಬರ್ 13 ರಂದು ಫೈನಲ್ ಪಂದ್ಯವನ್ನು ಏರ್ಪಡಿಸಲಾಗಿದೆ.

ಮೊದಲ ರೌಂಡ್​ನ ಮೊದಲ ಪಂದ್ಯ ಶ್ರೀಲಂಕಾ ಮತ್ತು ನಮೀಬಿಯಾ ನಡುವೆ ನಡೆಯಲಿದೆ. ಅಕ್ಟೋಬರ್ 21ರವರೆಗೆ ನಡೆಯುವ ಈ ಪಂದ್ಯಗಳಲ್ಲಿ ಅರ್ಹತೆ ಪಡೆದ ತಂಡಗಳು ಸೂಪರ್​-12 ಹಂತಕ್ಕೆ ಪ್ರವೇಶ ಪಡೆಯಲಿದೆ. ಮೊದಲ ರೌಂಡ್​ನಲ್ಲಿ ಶ್ರೀಲಂಕಾ, ನಮೀಬಿಯಾ, ಸ್ಕಾಟ್ಲೆಂಡ್, ವೆಸ್ಟ್​ ಇಂಡೀಸ್ ತಂಡಗಳು ಆಡಲಿವೆ.

ಇನ್ನು ಸೂಪರ್ 12 ಪಂದ್ಯಗಳು ಅಕ್ಟೋಬರ್ 22ರಿಂದ ಶುರುವಾಗಲಿದ್ದು, ಮೊದಲ ಪಂದ್ಯ ನ್ಯೂಜಿಲೆಂಡ್ ಮತ್ತು ಹಾಲಿ ಚಾಂಪಿಯನ್ ಆಸ್ಟ್ರೇಲಿಯಾ ನಡುವೆ ಸಿಡ್ನಿ ಕ್ರಿಕೆಟ್ ಗ್ರೌಂಡ್​ನಲ್ಲಿ ನಡೆಯಲಿದೆ. ಭಾರತ ಹಾಗೂ ಪಾಕಿಸ್ತಾನ ನಡುವಣ ಪಂದ್ಯವನ್ನು ಮೆಲ್ಬೋರ್ನ್​ ಕ್ರಿಕೆಟ್​ ಗ್ರೌಂಡ್​ನಲ್ಲಿ ಜರುಗಲಿದೆ.

ಭಾರತ ಪಂದ್ಯಗಳ ವೇಳಾಪಟ್ಟಿ:

ಭಾರತ vs ಪಾಕಿಸ್ತಾನ, ಮೆಲ್ಬೋರ್ನ್ ಕ್ರಿಕೆಟ್ ಗ್ರೌಂಡ್, ಅಕ್ಟೋಬರ್ 23

ಭಾರತ vs ಗ್ರೂಪ್ A ರನ್ನರ್ ಅಪ್, ಸಿಡ್ನಿ ಕ್ರಿಕೆಟ್ ಗ್ರೌಂಡ್, ಅಕ್ಟೋಬರ್ 27

ಭಾರತ vs ದಕ್ಷಿಣ ಆಫ್ರಿಕಾ, ಪರ್ತ್ ಸ್ಟೇಡಿಯಂ, ಅಕ್ಟೋಬರ್ 30

ಭಾರತ vs ಬಾಂಗ್ಲಾದೇಶ, ಅಡಿಲೇಡ್ ಓವಲ್, ನವೆಂಬರ್ 2

ಇದನ್ನೂ ಓದಿ: Yuzvendra Chahal: ವಿಕೆಟ್​ಗಳ ಶತಕ ಪೂರೈಸಿದ ಚಹಾಲ್

ಇದನ್ನೂ ಓದಿ: Rohit Sharma: ಸಚಿನ್ ದಾಖಲೆ ಮುರಿದ ಹಿಟ್​ಮ್ಯಾನ್ ರೋಹಿತ್ ಶರ್ಮಾ

ಇದನ್ನೂ ಓದಿ: Lata Mangeshkar: ಎಲ್ಲರೂ ಕೈಬಿಟ್ಟಾಗ ಟೀಮ್ ಇಂಡಿಯಾ ಕೈ ಹಿಡಿದಿದ್ದ ಲತಾ ಮಂಗೇಶ್ಕರ್..!

(T20 World Cup 2022: India Pakistan match Tickets sold out in a few minutes)

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ