AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs PAK: ಭಾರತ vs ಪಾಕ್ ರಣರೋಚಕ ಪಂದ್ಯ ವೀಕ್ಷಿಸುತ್ತಿದ್ದ ಅಭಿಮಾನಿಗೆ ಹೃದಯಾಘಾತ..!

India vs Pakistan: ಹ್ಯಾರಿಸ್ ರೌಫ್ ಎಸೆದ 19ನೇ ಓವರ್​ನಲ್ಲಿ ಭರ್ಜರಿ 2 ಸಿಕ್ಸ್ ಸಿಡಿಸುವ ಮೂಲಕ ವಿರಾಟ್ ಕೊಹ್ಲಿ ಪಂದ್ಯ ಗೆಲ್ಲಿಸಿಕೊಡುವ ಭರವಸೆ ಮೂಡಿಸಿದರು. ಹಾಗೆಯೇ ಓವರ್​ನಲ್ಲಿ 16 ರನ್​ಗಳ ಗುರಿಯೊಂದಿಗೆ ಬ್ಯಾಟ್ ಬೀಸಿದ ಕೊಹ್ಲಿ ಬೌಲರ್​ ಮೇಲೆ ಒತ್ತಡ ಹೇರುವಲ್ಲಿ ಯಶಸ್ವಿಯಾದರು.

IND vs PAK: ಭಾರತ vs ಪಾಕ್ ರಣರೋಚಕ ಪಂದ್ಯ ವೀಕ್ಷಿಸುತ್ತಿದ್ದ ಅಭಿಮಾನಿಗೆ ಹೃದಯಾಘಾತ..!
India vs Pakistan
Follow us
TV9 Web
| Updated By: ಝಾಹಿರ್ ಯೂಸುಫ್

Updated on: Oct 24, 2022 | 2:32 PM

T20 World Cup 2022: ಮೆಲ್ಬೋರ್ನ್​ ಕ್ರಿಕೆಟ್ ಗ್ರೌಂಡ್​ನಲ್ಲಿ ಭಾನುವಾರ ಭಾರತ-ಪಾಕಿಸ್ತಾನ್ (India vs Pakistan) ನಡುವೆ ರಣರೋಚಕ ಪಂದ್ಯ ನಡೆಯಿತು. ಕೊನೆಯ ಎಸೆತದವರೆಗೂ ಪ್ರೇಕ್ಷಕರನ್ನು ತುದಿಗಾಲಲ್ಲಿ ಕೂರಿಸಿದ್ದ ಈ ಪಂದ್ಯದಲ್ಲಿ ಅಂತಿಮವಾಗಿ ಟೀಮ್ ಇಂಡಿಯಾ (Team India) ಜಯಭೇರಿ ಬಾರಿಸಿತ್ತು. ಆದರೆ ಈ ಅಮೋಘ ಗೆಲುವಿನ ನಿರೀಕ್ಷೆಯಲ್ಲಿದ್ದ ಅಭಿಮಾನಿಯೊಬ್ಬರು ಜಯದ ಸಂಭ್ರಮಕ್ಕೂ ಮೊದಲೇ ಇಹಲೋಕ ತ್ಯಜಿಸಿದ್ದರು. ಹೌದು, ಭಾರತ-ಪಾಕಿಸ್ತಾನ್ ನಡುವಣ ಪಂದ್ಯ ವೀಕ್ಷಿಸುತ್ತಿದ್ದ ವೇಳೆ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ನಿಧನರಾಗಿರುವ ಘಟನೆ ಅಸ್ಸಾಂನಲ್ಲಿ ನಡೆದಿದೆ.

ಅಸ್ಸಾಂನ ಶಿವಸಾಗರ್ ಜಿಲ್ಲೆಯಲ್ಲಿ ಭಾರತ-ಪಾಕಿಸ್ತಾನ್​ ಪಂದ್ಯವನ್ನು ಥಿಯೇಟರ್​ನಲ್ಲಿ ಪ್ರದರ್ಶಿಸಲಾಗಿತ್ತು. ಇತ್ತ ಸ್ನೇಹಿತರೊಂದಿಗೆ 34 ವರ್ಷದ ಬಿತು ಗೊಗೊಯ್ ಕೂಡ ಪಂದ್ಯ ವೀಕ್ಷಿಸಲು ತೆರಳಿದ್ದರು. ಆದರೆ ಪಂದ್ಯವು ರಣರೋಚಕ ತಿರುವಿನತ್ತ ತಿರುಗುತ್ತಿದ್ದಂತೆ ಇತ್ತ ಅಭಿಮಾನಿಗಳ ಎದೆಬಡಿತ ಹೆಚ್ಚಾಗಿತ್ತು. ಇದರ ನಡುವೆ ಟೀಮ್ ಇಂಡಿಯಾದ ಅಭಿಮಾನಿ ಇದ್ದಕ್ಕಿದ್ದಂತೆ ಗೊಗೊಯ್ ಪ್ರಜ್ಞಾಹೀನರಾಗಿ ಬಿದ್ದರು. ತಕ್ಷಣವೇ ಆತನನ್ನು ಸ್ನೇಹಿತರು ಹತ್ತಿರದ ಆಸ್ಪತ್ರೆಗೆ ಕರೆದೊಯ್ದರು. ಅಷ್ಟರಲ್ಲಾಗಲೇ ಪ್ರಾಣಪಕ್ಷಿ ಹಾರಿಹೋಗಿತ್ತು. ಆ ಬಳಿಕ ಪರೀಕ್ಷಿಸಿದ ವೈದ್ಯರು ಹೃದಯಾಘಾತದಿಂದ ಬಿತು ಗೊಗೊಯ್ ನಿಧನರಾಗಿರುವುದನ್ನು ದೃಢಪಡಿಸಿದರು.

ಗೊಗೊಯ್ ಅವರ ಕುಟುಂಬದ ಪ್ರಕಾರ, ಬಿತು ಆರೋಗ್ಯವಾಗಿದ್ದರು. ಅಲ್ಲದೆ ಯಾವುದೇ ಆರೋಗ್ಯ ಸಮಸ್ಯೆಗಳು ಇರಲಿಲ್ಲ. ಆದರೆ ಪಂದ್ಯದ ವೀಕ್ಷಣೆಯ ನಡುವೆ ಒತ್ತಡಕ್ಕೊಳಗಾಗಿ ಹೃದಯ ಸ್ತಂಭನವಾಗಿರುವ ಸಾಧ್ಯತೆಯಿದೆ ಎಂದು ತಿಳಿಸಿದ್ದಾರೆ. ಒಟ್ಟಿನಲ್ಲಿ ಟೀಮ್ ಇಂಡಿಯಾದ ಅಮೋಘ ಗೆಲುವಿನ ನಿರೀಕ್ಷೆಯಲ್ಲಿದ್ದ ಬಿತು ಗೊಗೊಯ್ ಅತ್ಯುತ್ತಮ ಗೆಲುವನ್ನು ಕಣ್ತುಂಬಿಕೊಳ್ಳುವ ಮುನ್ನವೇ ಕಣ್ಣು ಮುಚ್ಚಿದ್ದು ಮಾತ್ರ ದುರಂತವೇ ಸರಿ.

ಇದನ್ನೂ ಓದಿ
Image
Virat Kohli: ಒಂದಲ್ಲ, ಎರಡಲ್ಲ…ಹಲವು ವಿಶ್ವ ದಾಖಲೆಗಳನ್ನು ಉಡೀಸ್ ಮಾಡಿದ ಕಿಂಗ್ ಕೊಹ್ಲಿ
Image
India vs Pakistan: ಪಾಕ್​ನ ಬಗ್ಗು ಬಡಿದು ವಿಶ್ವ ದಾಖಲೆ ನಿರ್ಮಿಸಿದ ಟೀಮ್ ಇಂಡಿಯಾ
Image
IND vs PAK: ವಿಶ್ವಕಪ್​ನಲ್ಲಿ ವಿಶ್ವ ದಾಖಲೆ ಬರೆದ ರೋಹಿತ್ ಶರ್ಮಾ
Image
India vs Pakistan: ಹೊಸ ದಾಖಲೆ ನಿರ್ಮಿಸಿದ ದಿನೇಶ್ ಕಾರ್ತಿಕ್

ಟೀಮ್ ಇಂಡಿಯಾಗೆ ರೋಚಕ ಜಯ:

ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ ತಂಡವು ಟೀಮ್ ಇಂಡಿಯಾ 160 ರನ್​ಗಳ ಟಾರ್ಗೆಟ್ ನೀಡಿತ್ತು. ಈ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ಉತ್ತಮ ಆರಂಭ ಪಡೆದಿರಲಿಲ್ಲ. ಕೇವಲ 31 ರನ್​ಗಳಿಗೆ ಕೆಎಲ್ ರಾಹುಲ್, ರೋಹಿತ್ ಶರ್ಮಾ, ಅಕ್ಷರ್ ಪಟೇಲ್ ಹಾಗೂ ಸೂರ್ಯಕುಮಾರ್ ಯಾದವ್ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು.

ಈ ಹಂತದಲ್ಲಿ ಜೊತೆಯಾದ ವಿರಾಟ್ ಕೊಹ್ಲಿ ಹಾಗೂ ಹಾರ್ದಿಕ್ ಪಾಂಡ್ಯ 113 ರನ್​ಗಳ ಜೊತೆಯಾಟವಾಡುವ ಮೂಲಕ ತಂಡವನ್ನು ಗೆಲುವಿನತ್ತ ಮುನ್ನಡೆಸಿದರು. ಅದರಂತೆ ಅಂತಿಮ 3 ಓವರ್​ಗಳ ವೇಳೆ ಪಂದ್ಯವು ರೋಚಕಘಟ್ಟದತ್ತ ಸಾಗಿತ್ತು. ಅದರಂತೆ ಕೊನೆಯ 18 ಎಸೆತಗಳಲ್ಲಿ ಟೀಮ್ ಇಂಡಿಯಾಗೆ 48 ರನ್​ಗಳ ಅವಶ್ಯಕತೆಯಿತ್ತು. ಶಾಹೀನ್ ಅಫ್ರಿದಿ ಎಸೆದ 18ನೇ ಓವರ್​ನಲ್ಲಿ ಕೊಹ್ಲಿ ಮೂರು ಭರ್ಜರಿ ಬೌಂಡರಿ ಬಾರಿಸಿದರು. ಅಲ್ಲದೆ ಆ ಓವರ್​ನಲ್ಲಿ 17 ರನ್ ಕಲೆಹಾಕಿದರು. ಅಂತಿಮ 12 ಎಸೆತಗಳಲ್ಲಿ 31 ರನ್ ಗಳಿಸಬೇಕಿತ್ತು.

ಇದನ್ನೂ ಓದಿ: T20 World Cup 2022: ಟಿ20 ವಿಶ್ವಕಪ್​ನ ಟೀಮ್ ಇಂಡಿಯಾದ ಸಂಪೂರ್ಣ ವೇಳಾಪಟ್ಟಿ

ಹ್ಯಾರಿಸ್ ರೌಫ್ ಎಸೆದ 19ನೇ ಓವರ್​ನಲ್ಲಿ ಭರ್ಜರಿ 2 ಸಿಕ್ಸ್ ಸಿಡಿಸುವ ಮೂಲಕ ವಿರಾಟ್ ಕೊಹ್ಲಿ ಪಂದ್ಯ ಗೆಲ್ಲಿಸಿಕೊಡುವ ಭರವಸೆ ಮೂಡಿಸಿದರು. ಹಾಗೆಯೇ ಓವರ್​ನಲ್ಲಿ 16 ರನ್​ಗಳ ಗುರಿಯೊಂದಿಗೆ ಬ್ಯಾಟ್ ಬೀಸಿದ ಕೊಹ್ಲಿ ಬೌಲರ್​ ಮೇಲೆ ಒತ್ತಡ ಹೇರುವಲ್ಲಿ ಯಶಸ್ವಿಯಾದರು. ಅದರಲ್ಲೂ ಮೊಹಮ್ಮದ್ ನವಾಜ್ ಎಸೆತದಲ್ಲಿ ಭರ್ಜರಿ ಸಿಕ್ಸ್ ಸಿಡಿಸಿ ಗೆಲುವನ್ನು ಖಚಿತಪಡಿಸಿದರು. ಅಂತಿಮವಾಗಿ ಕೊನೆಯ ಎಸೆತದಲ್ಲಿ ಅಶ್ವಿನ್ 1 ರನ್ ಕಲೆಹಾಕುವ ಮೂಲಕ ಟೀಮ್ ಇಂಡಿಯಾ 4 ವಿಕೆಟ್​ಗಳ ಜಯ ಸಾಧಿಸಿತು. ಈ ಮೂಲಕ ಪಾಕಿಸ್ತಾನ್ ತಂಡಕ್ಕೆ ಸೋಲುಣಿಸಿ 2021 ರ ಟಿ20 ವಿಶ್ವಕಪ್ ಸೋಲಿನ ಸೇಡನ್ನು ಟೀಮ್ ಇಂಡಿಯಾ ತೀರಿಸಿಕೊಂಡಿದೆ.

ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಹೋರಿಗೆ ಕೇಕ್ ತಿನ್ನಿಸಿ ತಾನೂ ತಿಂದ ಮಾಜಿ ಸಚಿವ ರೇಣುಕಾಚಾರ್ಯ
ಹೋರಿಗೆ ಕೇಕ್ ತಿನ್ನಿಸಿ ತಾನೂ ತಿಂದ ಮಾಜಿ ಸಚಿವ ರೇಣುಕಾಚಾರ್ಯ
ಚಾರ್ಮಾಡಿ ಘಾಟಿ ಡೇಂಜರ್ ಡೇಂಜರ್ ಮತ್ತಷ್ಟು ಕುಸಿಯುವ ಆತಂಕ
ಚಾರ್ಮಾಡಿ ಘಾಟಿ ಡೇಂಜರ್ ಡೇಂಜರ್ ಮತ್ತಷ್ಟು ಕುಸಿಯುವ ಆತಂಕ
ಯಾದಗಿರಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ; ವಾಹನ ಸಂಚಾರ, ಜನಜೀವನ ಅಸ್ತವ್ಯಸ್ತ
ಯಾದಗಿರಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ; ವಾಹನ ಸಂಚಾರ, ಜನಜೀವನ ಅಸ್ತವ್ಯಸ್ತ
ಸಚಿವರ ಬೇಜವಾಬ್ದಾರಿತನಕ್ಕೆ ಅಸಮಾಧಾನ ಹೊರಹಾಕಿದ ಸಿದ್ದರಾಮಯ್ಯ
ಸಚಿವರ ಬೇಜವಾಬ್ದಾರಿತನಕ್ಕೆ ಅಸಮಾಧಾನ ಹೊರಹಾಕಿದ ಸಿದ್ದರಾಮಯ್ಯ