AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2022: ಇಬ್ಬರು ಎಡಗೈ ವೇಗಿಯನ್ನು ಸೇರಿಸಿಕೊಂಡ ಟೀಮ್ ಇಂಡಿಯಾ

T20 World Cup 2022: ಅಕ್ಟೋಬರ್ 23 ರಂದು ಟೀಮ್ ಇಂಡಿಯಾ ಟಿ20 ವಿಶ್ವಕಪ್ ಅಭಿಯಾನ ಆರಂಭಿಸಲಿದೆ. ಅದು ಕೂಡ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ್ ವಿರುದ್ಧ ಎಂಬುದು ವಿಶೇಷ.

T20 World Cup 2022: ಇಬ್ಬರು ಎಡಗೈ ವೇಗಿಯನ್ನು ಸೇರಿಸಿಕೊಂಡ ಟೀಮ್ ಇಂಡಿಯಾ
ಟೀಮ್ ಇಂಡಿಯಾ
TV9 Web
| Edited By: |

Updated on: Oct 08, 2022 | 1:30 PM

Share

T20 World Cup 2022: ಟಿ20 ವಿಶ್ವಕಪ್​ 2022 ರ ಮೇಲೆ ಕಣ್ಣಿಟ್ಟಿರುವ ಟೀಮ್ ಇಂಡಿಯಾ (Team India) ಈಗಾಗಲೇ ಆಸ್ಟ್ರೇಲಿಯಾಗೆ ಪ್ರಯಾಣಿಸಿದೆ. 14 ಸದಸ್ಯರನ್ನು ಒಳಗೊಂಡ ತಂಡವು ಇದೀಗ ಮತ್ತಿಬ್ಬರು ವೇಗಿಗಳನ್ನು ನೆಟ್ ಬೌಲರ್​ಗಳನ್ನು ಹೆಚ್ಚುವರಿಯಾಗಿ ಆಯ್ಕೆ ಮಾಡಿಕೊಂಡಿದೆ. ಟೀಮ್ ಇಂಡಿಯಾದಲ್ಲಿ ಏಕೈಕ ಎಡಗೈ ವೇಗಿಯಾಗಿ ಅರ್ಷದೀಪ್ ಸಿಂಗ್ (Arshdeep Singh) ಮಾತ್ರ ಇದ್ದು, ಹೀಗಾಗಿ ಇದೀಗ ಯುವ ಎಡಗೈ ವೇಗದ ಬೌಲರ್​ಗಳಾದ ಚೇತನ್ ಸಕರಿಯಾ (Chetan Sakariya) ಹಾಗೂ ಮುಖೇಶ್ ಕುಮಾರ್ (Mukesh Choudhary) ಅವರನ್ನು ಟೀಮ್ ಇಂಡಿಯಾ ನೆಟ್ ಬೌಲರ್​ಗಳಾಗಿ ಆಯ್ಕೆ ಮಾಡಿದೆ.

ಐಪಿಎಲ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪರ ಆಡಿರುವ ಮುಖೇಶ್ ಕುಮಾರ್ ಉತ್ತಮ ಬೌಲಿಂಗ್ ಮೂಲಕ ಗಮನ ಸೆಳೆದಿದ್ದರು. ಇನ್ನು ಈ ಹಿಂದೆ ರಾಜಸ್ಥಾನ್ ರಾಯಲ್ಸ್ ಹಾಗೂ ಪ್ರಸ್ತುತ ಡೆಲ್ಲಿ ಕ್ಯಾಪಿಟಲ್ಸ್​ ತಂಡದ ವೇಗಿಯಾಗಿರುವ ಚೇತನ್ ಸಕರಿಯಾ ಕೂಡ ಯಾರ್ಕರ್ ದಾಳಿ ಮೂಲಕ ಉತ್ತಮ ಪ್ರದರ್ಶನ ನೀಡಿದ್ದರು. ಹೀಗಾಗಿ ಹೆಚ್ಚುವರಿ ನೆಟ್​ ಬೌಲರ್​ಗಳಾಗಿ ಈ ಇಬ್ಬರು ಎಡಗೈ ವೇಗಿಗಳನ್ನು ಆಯ್ಕೆ ಮಾಡಲಾಗಿದೆ.

ಅಕ್ಟೋಬರ್ 23 ರಂದು ಟೀಮ್ ಇಂಡಿಯಾ ಟಿ20 ವಿಶ್ವಕಪ್ ಅಭಿಯಾನ ಆರಂಭಿಸಲಿದೆ. ಅದು ಕೂಡ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ್ ವಿರುದ್ಧ ಎಂಬುದು ವಿಶೇಷ. ಅದಕ್ಕೂ ಮುನ್ನ ಭಾರತ ತಂಡವು 4 ಅಭ್ಯಾಸ ಪಂದ್ಯಗಳನ್ನು ಆಡಲಿದೆ. ಅದರಲ್ಲಿ ಎರಡು ಐಸಿಸಿ ನಿಗದಿ ಪಡಿಸಿರುವ ಅಭ್ಯಾಸ ಪಂದ್ಯಗಳಾದರೆ, ಮತ್ತೆರಡು ಪಂದ್ಯಗಳನ್ನು ಟೀಮ್ ಇಂಡಿಯಾ ಆಯೋಜಿಸುತ್ತಿದೆ.

ಇದನ್ನೂ ಓದಿ
Image
Anna Rajan: ಸಿಮ್ ಖರೀದಿಸಲು ಹೋದ ನಟಿಯನ್ನು ಶೋ ರೂಮ್​ನಲ್ಲಿ ಕೂಡಿ ಹಾಕಿದ ಸಿಬ್ಬಂದಿ..!
Image
David Miller: ಕಿಲ್ಲರ್ ಮಿಲ್ಲರ್ ಆರ್ಭಟಕ್ಕೆ ಧೋನಿ ದಾಖಲೆ ಧೂಳೀಪಟ
Image
Dinesh Karthik: ಸಿಡಿಲಬ್ಬರದ ಬ್ಯಾಟಿಂಗ್ ಮೂಲಕ ಹೊಸ ವಿಶ್ವ ದಾಖಲೆ ಬರೆದ DK
Image
Virat Kohli: ಸ್ಪೋಟಕ ಬ್ಯಾಟಿಂಗ್ ಮೂಲಕ ಹೊಸ ದಾಖಲೆ ಬರೆದ ಕಿಂಗ್ ಕೊಹ್ಲಿ

ಅಂದರೆ ವೆಸ್ಟರ್ನ್​ ಆಸ್ಟ್ರೇಲಿಯಾ ಇಲೆವೆನ್ ವಿರುದ್ಧ 2 ಅಭ್ಯಾಸ ಪಂದ್ಯಗಳನ್ನು ಆಯೋಜಿಸಲಾಗುತ್ತಿದೆ. ಈ ಪಂದ್ಯಗಳು ಅಕ್ಟೋಬರ್ 10 ಮತ್ತು ಅಕ್ಟೋಬರ್ 12 ರಂದು ನಡೆಯಲಿದೆ. ಇದಾದ ಬಳಿಕ ಟೀಮ್ ಇಂಡಿಯಾ ಐಸಿಸಿ ನಿಗದಿಪಡಿಸಿದ ಅಭ್ಯಾಸ ಪಂದ್ಯಗಳನ್ನು ಆಡಲಿದೆ.

ಟಿ20 ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾ ಅಭ್ಯಾಸ ಪಂದ್ಯಗಳ ವೇಳಾಪಟ್ಟಿ ಹೀಗಿದೆ:

  • ಅಕ್ಟೋಬರ್- 10 : ಭಾರತ vs WA11
  • ಅಕ್ಟೋಬರ್- 12 : ಭಾರತ vs WA11
  • ಅಕ್ಟೋಬರ್- 17 : ಭಾರತ vs ಆಸ್ಟ್ರೇಲಿಯಾ
  • ಅಕ್ಟೋಬರ್- 19 : ಭಾರತ vs ನ್ಯೂಜಿಲೆಂಡ್

ಟಿ20 ವಿಶ್ವಕಪ್​ಗೆ ಟೀಮ್ ಇಂಡಿಯಾ ಹೀಗಿದೆ:

ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಆರ್.ಅಶ್ವಿನ್, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್.

ಮೀಸಲು ಆಟಗಾರರು: ಮೊಹಮ್ಮದ್ ಶಮಿ, ಶ್ರೇಯಸ್ ಅಯ್ಯರ್, ರವಿ ಬಿಷ್ಣೋಯ್, ದೀಪಕ್ ಚಹರ್.

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ