AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rohit Sharma: ರೋಹಿತ್ ಶರ್ಮಾರ ಹಠಮಾರಿತನವೇ ಟೀಮ್ ಇಂಡಿಯಾ ಪಾಲಿನ ದೊಡ್ಡ ಸಮಸ್ಯೆ

T20 World Cup 2022: ಈ ಹಿಂದೆ ಕೂಲ್ ಕ್ಯಾಪ್ಟನ್ ಆಗಿ ಗುರುತಿಸಿಕೊಂಡಿದ್ದ ರೋಹಿತ್ ಶರ್ಮಾ, ಇದೀಗ ಮೈದಾನದಲ್ಲೇ ತಮ್ಮ ಕೋಪವನ್ನು ಹೊರಹಾಕುತ್ತಿದ್ದಾರೆ. ಇದಕ್ಕೆ ಸಾಕ್ಷಿಯಾಗಿ ಇದೀಗ ಹಲವು ವಿಡಿಯೋಗಳು ಹರಿದಾಡುತ್ತಿದೆ.

Rohit Sharma: ರೋಹಿತ್ ಶರ್ಮಾರ ಹಠಮಾರಿತನವೇ ಟೀಮ್ ಇಂಡಿಯಾ ಪಾಲಿನ ದೊಡ್ಡ ಸಮಸ್ಯೆ
Rohit Sharma
TV9 Web
| Edited By: |

Updated on: Sep 22, 2022 | 12:10 PM

Share

T20 World Cup 2022: ಟಿ20 ವಿಶ್ವಕಪ್​ಗೂ ಮುನ್ನ ಟೀಮ್ ಇಂಡಿಯಾದ (Team India) ಒಂದೊಂದೇ ಸಮಸ್ಯೆಗಳು ಬೆಳಕಿಗೆ ಬರುತ್ತಿವೆ. ಅದರಲ್ಲೂ ಏಷ್ಯಾಕಪ್​ನಲ್ಲಿನ ಸೋಲಿಗೆ ಕಳಪೆ ಬೌಲಿಂಗ್ ಕಾರಣ ಎಂಬುದು ಸ್ಪಷ್ಟವಾಗಿತ್ತು. ಇದೀಗ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲೂ ಆ ಸಮಸ್ಯೆ ಮುಂದುವರೆದಿದೆ. ಇತ್ತ ಭಾರತ ತಂಡದ ಬೌಲರ್​ಗಳು ಕೈ ಕೊಡುತ್ತಿದ್ದರೆ, ಅತ್ತ ನಾಯಕ ರೋಹಿತ್ ಶರ್ಮಾ ಕೂಡ ಸತತ ವೈಫಲ್ಯ ಹೊಂದುತ್ತಿರುವುದು ಟೀಮ್ ಇಂಡಿಯಾದ ಚಿಂತೆಯನ್ನು ಹೆಚ್ಚಿಸಿದೆ. ಅಂದರೆ ಆರಂಭಿಕನಾಗಿ ರೋಹಿತ್ ಶರ್ಮಾ ಸತತ ವೈಫಲ್ಯ ಅನುಭವಿಸುತ್ತಿದ್ದಾರೆ.

ಕಳೆದ 10 ಟಿ20 ಇನಿಂಗ್ಸ್​ಗಳಲ್ಲಿ ರೋಹಿತ್ ಶರ್ಮಾ ಪ್ರಮುಖ ತಂಡಗಳ ವಿರುದ್ಧ ಒಂದೇ ಅರ್ಧಶತಕ ಬಾರಿಸಿಲ್ಲ ಎಂಬುದು ಇಲ್ಲಿ ಉಲ್ಲೇಖಾರ್ಹ. ಇನ್ನು 2 ಹಾಫ್​ ಸೆಂಚುರಿ ಬಾರಿಸಿದ್ದು 1 ಶ್ರೀಲಂಕಾ ವಿರುದ್ದ, ಮತ್ತೊಂದು ವೆಸ್ಟ್ ಇಂಡೀಸ್ ವಿರುದ್ದ. ಇದಾಗ್ಯೂ ಬಲಿಷ್ಠ ಬೌಲಿಂಗ್ ಲೈನಪ್ ಹೊಂದಿರುವ ಇಂಗ್ಲೆಂಡ್, ಪಾಕಿಸ್ತಾನ್ ಹಾಗೂ ಆಸ್ಟ್ರೇಲಿಯಾ ವಿರುದ್ದ ಹಿಟ್​ಮ್ಯಾನ್​ ಬ್ಯಾಟ್​ನಿಂದ ದೊಡ್ಡ ಮೊತ್ತ ಮೂಡಿ ಬಂದಿಲ್ಲ. ಅದರಲ್ಲೂ ಏಷ್ಯಾಕಪ್​ನಲ್ಲಿ ಪಾಕಿಸ್ತಾನ್ ವಿರುದ್ದ 2 ಪಂದ್ಯಗಳಲ್ಲಿ ರೋಹಿತ್ ಶರ್ಮಾ ಕಲೆಹಾಕಿದ್ದು ಕೇವಲ 40 ರನ್​ ಮಾತ್ರ. ಅಂದರೆ ಟೀಮ್ ಇಂಡಿಯಾ ಪಾಲಿನ ಮಹತ್ವದ ಪಂದ್ಯಗಳಲ್ಲಿ ಹಿಟ್​ಮ್ಯಾನ್ ಕೈ ಕೊಡುತ್ತಿದ್ದಾರೆ.

ಇದನ್ನೂ ಓದಿ
Image
Team India New Jersey: 25 ಕ್ಕೂ ಹೆಚ್ಚು ಬಾರಿ ಜೆರ್ಸಿ ಬದಲಿಸಿದ ಟೀಮ್ ಇಂಡಿಯಾ: ಇಲ್ಲಿದೆ ಫೋಟೋಸ್
Image
RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
Image
Sanju Samson: ಧೋನಿ, ದ್ರಾವಿಡ್​ಗೂ ಸಾಧ್ಯವಾಗದ ದಾಖಲೆ ನಿರ್ಮಿಸಿದ ಸಂಜು ಸ್ಯಾಮ್ಸನ್
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಒಂದೆಡೆ ಬ್ಯಾಟಿಂಗ್ ವೈಫಲ್ಯದ ನಡುವೆ ರೋಹಿತ್ ಶರ್ಮಾ ಆರಂಭಿಕ ಓವರ್​ಗಳಲ್ಲೇ ಆಕ್ರಮಣಕಾರಿ ಆಟಕ್ಕೆ ಒತ್ತು ನೀಡುವ ಮೂಲಕ ವಿಕೆಟ್ ಒಪ್ಪಿಸುತ್ತಿರುವುದು ಕೂಡ ಟೀಮ್ ಇಂಡಿಯಾದ ಚಿಂತೆಯನ್ನು ಹೆಚ್ಚಿಸಿದೆ ಎನ್ನಬಹುದು. ಅಂದರೆ ಹಿಟ್​ಮ್ಯಾನ್ ಪವರ್​ಪ್ಲೇನಲ್ಲೇ ವಿಕೆಟ್ ಕೈಚೆಲ್ಲಿ ಪೆವಿಲಿಯನ್​ಗೆ ಮರಳುತ್ತಿದ್ದಾರೆ. ಆದರೆ ಕಳಪೆ ಫಾರ್ಮ್​ನಲ್ಲಿರುವ ರೋಹಿತ್ ಶರ್ಮಾ ತಮ್ಮ ಫಾರ್ಮ್​ಗಿಂತ ಸ್ಪೋಟಕ ಇನಿಂಗ್ಸ್​ಗೆ ಒತ್ತು ನೀಡುತ್ತಿರುವುದರಿಂದ ಟೀಮ್ ಇಂಡಿಯಾ ಆರಂಭಿಕ ಆಘಾತಕ್ಕೆ ಒಳಗಾಗುತ್ತಿರುವುದು ಸ್ಪಷ್ಟ.

ಇದು ರೋಹಿತ್ ಶರ್ಮಾ ಅವರ ಬ್ಯಾಟಿಂಗ್ ಸಮಸ್ಯೆಯಾದರೆ, ಅತ್ತ ನಾಯಕತ್ವದಲ್ಲೂ ಹಿಟ್​ಮ್ಯಾನ್ ಆಕ್ರಮಣಕಾರಿ ಮನೋಭಾವ ತಳೆದಿರುವುದು ಕೂಡ ಟೀಮ್ ಇಂಡಿಯಾ ಪಾಲಿಗೆ ಮುಳುವಾಗುತ್ತಿದೆ. ಅಂದರೆ ಮೈದಾನದಲ್ಲಿನ ಕೋಪವನ್ನು ಸಹ ಆಟಗಾರರ ಮೇಲೆ ವ್ಯಕ್ತಪಡಿಸುತ್ತಿರುವುದು ಕೂಡ ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್​ಗೆ ಹೊಸ ತಲೆನೋವನ್ನು ಉಂಟು ಮಾಡಿದೆ.

ಈ ಹಿಂದೆ ಕೂಲ್ ಕ್ಯಾಪ್ಟನ್ ಆಗಿ ಗುರುತಿಸಿಕೊಂಡಿದ್ದ ರೋಹಿತ್ ಶರ್ಮಾ, ಇದೀಗ ಮೈದಾನದಲ್ಲೇ ತಮ್ಮ ಕೋಪವನ್ನು ಹೊರಹಾಕುತ್ತಿದ್ದಾರೆ. ಇದಕ್ಕೆ ಸಾಕ್ಷಿಯಾಗಿ ಇದೀಗ ಹಲವು ವಿಡಿಯೋಗಳು ಹರಿದಾಡುತ್ತಿದೆ. ಅದರಲ್ಲೂ ಏಷ್ಯಾಕಪ್​ನಲ್ಲಿ ಯುವ ವೇಗಿ ಅರ್ಷದೀಪ್ ಸಿಂಗ್ ನಾಯಕ ರೋಹಿತ್ ಶರ್ಮಾಗೆ ಫೀಲ್ಡಿಂಗ್ ಬದಲಾವಣೆಯ ಆಗ್ರಹವನ್ನು ಮುಂದಿಟ್ಟಾಗ, ಅದನ್ನು ಕೇಳಿಯೂ ಕೇಳದಂತೆ ಬೆನ್ನು ತೋರಿಸಿ ಸಿಟ್ಟಿನಿಂದ ತೆರಳಿದ್ದರು. ಸಹ ಆಟಗಾರನ ಮುಂದೆ ರೋಹಿತ್ ಶರ್ಮಾ ಅವರ ಈ ನಡೆಯ ಬಗ್ಗೆ ಭಾರೀ ಆಕ್ರೋಶಗಳು ಕೇಳಿ ಬಂದಿತ್ತು. ಹಾಗೆಯೇ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದ ವೇಳೆಯೂ ಬೌಲರ್​ಗಳ ವಿರುದ್ಧ ಟೀಮ್ ಇಂಡಿಯಾ ನಾಯಕ ಹರಿಹಾಯ್ದಿದ್ದರು.

ಇದರ ಬೆನ್ನಲ್ಲೇ ರೋಹಿತ್ ಶರ್ಮಾ ಅವರ ಹಠಮಾರಿತನ ಹೊಸ ಚರ್ಚೆಗೆ ಕಾರಣವಾಗುತ್ತಿದೆ. ನಾಯಕನಾದ ಆಟಗಾರನು ತಮ್ಮ ಕೋಪ-ತಾಪಗಳನ್ನು ಅದುಮಿಟ್ಟುಕೊಳ್ಳಬೇಕೆಂಬ ಅಭಿಪ್ರಾಯಗಳು ಕೇಳಿ ಬರುತ್ತಿವೆ. ಅದರಲ್ಲೂ ಸತತ 3 ಪಂದ್ಯಗಳಲ್ಲೂ ಡೆತ್​ ಓವರ್​ಗಳಲ್ಲಿ ವಿಫಲರಾಗಿರುವ ಭುವನೇಶ್ವರ್ ಕುಮಾರ್ ಅವರನ್ನೇ ಅಂತಿಮ ಓವರ್​ಗಳಲ್ಲಿ ಬಳಸಿಕೊಳ್ಳಲು ಮುಂದಾಗುತ್ತಿರುವುದು ರೋಹಿತ್ ಶರ್ಮಾ ಅವರ ಹಠಮಾರಿತನಕ್ಕೆ ಸಾಕ್ಷಿ ಎಂದು ವಿಶ್ಲೇಷಿಸಲಾಗುತ್ತಿದೆ.

ಏಕೆಂದರೆ ಏಷ್ಯಾಕಪ್​ನಲ್ಲಿ ಭುವನೇಶ್ವರ್ ಕುಮಾರ್ ಸತತವಾಗಿ ಡೆತ್ ಓವರ್​ಗಳಲ್ಲಿ ವಿಫಲರಾಗಿದ್ದರು. ಇದಾಗ್ಯೂ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲೂ ರೋಹಿತ್ ಶರ್ಮಾ ಭುವಿಯನ್ನು ಅಂತಿಮ ಓವರ್​ಗಳಲ್ಲಿ ಬಳಸಿಕೊಂಡಿರುವುದು ಹೊಸ ಚರ್ಚೆಯನ್ನು ಹುಟ್ಟುಹಾಕಿದೆ. ಹಿಟ್​ಮ್ಯಾನ್ ಅವರ ಇಂತಹದೊಂದು ನಿರ್ಧಾರಕ್ಕೆ ಕಾರಣ, ಅವರು ಇತ್ತೀಚಿನ ಪ್ರೆಸ್​ಮೀಟ್​ನಲ್ಲಿ ಭುವನೇಶ್ವರ್​ ಕುಮಾರ್ ಅವರ ಡೆತ್ ಓವರ್​ ಸ್ಕಿಲ್ ಅನ್ನು ಬೆಂಬಲಿಸಿರುವುದು ಎನ್ನಲಾಗುತ್ತಿದೆ. ಇದೇ ಕಾರಣಕ್ಕೆ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಳ್ಳುವ ತವಕದಲ್ಲಿ ಭುವನೇಶ್ವರ್ ಕುಮಾರ್ ಅವರನ್ನು ಡೆತ್ ಓವರ್​ಗಳಲ್ಲಿ ಬಳಸಿಕೊಳ್ಳುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

ಒಟ್ಟಿನಲ್ಲಿ ಕಳಪೆ ಫಾರ್ಮ್​ ನಡುವೆ ಆಕ್ರಮಣಕಾರಿ ಆಟಕ್ಕೆ ಒತ್ತು ನೀಡಿ ವಿಕೆಟ್ ಒಪ್ಪಿಸುತ್ತಿರುವ ರೋಹಿತ್ ಶರ್ಮಾ, ಆ ಬಳಿಕ ಮೈದಾನದಲ್ಲೂ ಆಕ್ರೋಶಭರಿತರಾಗಿ ಕಾಣಿಸಿಕೊಳ್ಳುತ್ತಿರುವುದು ಟೀಮ್ ಇಂಡಿಯಾ ಪಾಲಿಗೆ ಶುಭ ಸೂಚನೆಯಂತು ಅಲ್ಲ. ಅದರಲ್ಲೂ ನಾಯಕತ್ವದೊಂದಿಗೆ ಹಠಮಾರಿನ ಸೇರಿಕೊಂಡರೆ ಅದು ಟಿ20 ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾ ಪಾಲಿಗೆ ಮುಳುವಾಗುವುದರಲ್ಲಿ ಅನುಮಾನವೇ ಇಲ್ಲ.

ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
ನಿಧಿ ಸಿಕ್ಕ ಜಾಗದಲ್ಲಿ ಮತ್ತೆ ಉತ್ಖನನ? ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ!
ನಿಧಿ ಸಿಕ್ಕ ಜಾಗದಲ್ಲಿ ಮತ್ತೆ ಉತ್ಖನನ? ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ!