AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Team India: ಸೆಮಿಫೈನಲ್​ಗೇರಲು ಟೀಮ್ ಇಂಡಿಯಾ ಇನ್ನು ಎಷ್ಟು ಪಂದ್ಯ ಗೆಲ್ಲಬೇಕು?

T20 World Cup 2022: ಸದ್ಯ ಅಗ್ರಸ್ಥಾನದಲ್ಲಿರುವ ಸೌತ್ ಆಫ್ರಿಕಾ ತಂಡವು 3 ಪಂದ್ಯಗಳಿಂದ ಕಲೆಹಾಕಿರುವುದು ಕೇವಲ 5 ಪಾಯಿಂಟ್ ಮಾತ್ರ. ಅಂದರೆ ಜಿಂಬಾಬ್ವೆ ವಿರುದ್ಧದ ಪಂದ್ಯವು ಮಳೆಯ ಕಾರಣ ರದ್ದಾಗಿತ್ತು.

Team India: ಸೆಮಿಫೈನಲ್​ಗೇರಲು ಟೀಮ್ ಇಂಡಿಯಾ ಇನ್ನು ಎಷ್ಟು ಪಂದ್ಯ ಗೆಲ್ಲಬೇಕು?
Team India
TV9 Web
| Edited By: |

Updated on: Oct 30, 2022 | 9:24 PM

Share

T20 World Cup 2022:  ಪರ್ತ್​ನಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ (Team India) ಸೋಲನುಭವಿಸಿದೆ. ಇದರೊಂದಿಗೆ ಆಡಿದ ಮೂರು ಪಂದ್ಯಗಳಲ್ಲಿ 2 ಜಯ, 1 ಸೋಲಿನೊಂದಿಗೆ ಭಾರತ ತಂಡವು ಅಂಕ ಪಟ್ಟಿಯಲ್ಲಿ ಎರಡನೇ ಸ್ಥಾನ ಅಲಂಕರಿಸಿದೆ. ಇನ್ನು ಟೀಮ್ ಇಂಡಿಯಾಗೆ ಉಳಿದಿರುವುದು ಕೇವಲ 2 ಪಂದ್ಯ ಮಾತ್ರ. ಅಂದರೆ ಬಾಂಗ್ಲಾದೇಶ್ ಹಾಗೂ ಜಿಂಬಾಬ್ವೆ ವಿರುದ್ಧ ಟೀಮ್ ಇಂಡಿಯಾ ಪಂದ್ಯಗಳನ್ನಾಡಬೇಕಿದ್ದು,  ಈ ಎರಡೂ ಪಂದ್ಯಗಳಲ್ಲಿ ಟೀಮ್ ಭಾರತ ಭರ್ಜರಿಯಾಗಿ ಜಯಗಳಿಸಿ ಸೆಮಿಫೈನಲ್​ಗೇರಬಹುದು.

ಏಕೆಂದರೆ ಸದ್ಯ ಅಗ್ರಸ್ಥಾನದಲ್ಲಿರುವ ಸೌತ್ ಆಫ್ರಿಕಾ ತಂಡವು 3 ಪಂದ್ಯಗಳಿಂದ ಕಲೆಹಾಕಿರುವುದು ಕೇವಲ 5 ಪಾಯಿಂಟ್ ಮಾತ್ರ. ಅಂದರೆ ಜಿಂಬಾಬ್ವೆ ವಿರುದ್ಧದ ಪಂದ್ಯವು ಮಳೆಯ ಕಾರಣ ರದ್ದಾಗಿತ್ತು. ಹೀಗಾಗಿ ಸೌತ್ ಆಫ್ರಿಕಾಗೆ 1 ಪಾಯಿಂಟ್ ಮಾತ್ರ ಲಭಿಸಿತ್ತು. ಅದರಂತೆ ಇದೀಗ ಸೌತ್ ಆಫ್ರಿಕಾ ತಂಡವು 3 ಪಂದ್ಯಗಳಿಂದ ಒಟ್ಟು 5 ಪಾಯಿಂಟ್ ಹೊಂದಿದೆ.

ಇನ್ನುಳಿದ ಎರಡು ಪಂದ್ಯಗಳನ್ನು ಸೌತ್ ಆಫ್ರಿಕಾ ಗೆದ್ದರೂ 9 ಪಾಯಿಂಟ್ ಆಗಲಿದೆ. ಇತ್ತ ಟೀಮ್ ಇಂಡಿಯಾ ಕೊನೆಯ 2 ಪಂದ್ಯಗಳನ್ನು ಗೆದ್ದರೆ 8 ಪಾಯಿಂಟ್​ಗಳೊಂದಿಗೆ 2ನೇ ತಂಡವಾಗಿ ಸೆಮಿಫೈನಲ್​ಗೆ ಎಂಟ್ರಿ ಕೊಡಬಹುದು. ಹೀಗಾಗಿ ಮುಂದಿನ ಎರಡು ಪಂದ್ಯಗಳು ಭಾರತದ ಪಾಲಿಗೆ ತುಂಬಾ ಮಹತ್ವದ್ದು.

ಇದನ್ನೂ ಓದಿ
Image
Virat Kohli: ಒಂದಲ್ಲ, ಎರಡಲ್ಲ…ಹಲವು ವಿಶ್ವ ದಾಖಲೆಗಳನ್ನು ಉಡೀಸ್ ಮಾಡಿದ ಕಿಂಗ್ ಕೊಹ್ಲಿ
Image
India vs Pakistan: ಪಾಕ್​ನ ಬಗ್ಗು ಬಡಿದು ವಿಶ್ವ ದಾಖಲೆ ನಿರ್ಮಿಸಿದ ಟೀಮ್ ಇಂಡಿಯಾ
Image
IND vs PAK: ವಿಶ್ವಕಪ್​ನಲ್ಲಿ ವಿಶ್ವ ದಾಖಲೆ ಬರೆದ ರೋಹಿತ್ ಶರ್ಮಾ
Image
India vs Pakistan: ಹೊಸ ದಾಖಲೆ ನಿರ್ಮಿಸಿದ ದಿನೇಶ್ ಕಾರ್ತಿಕ್

ಒಂದು ವೇಳೆ ಟೀಮ್ ಇಂಡಿಯಾ ಮುಂದಿನ 2 ಪಂದ್ಯಗಳಲ್ಲಿ 1 ರಲ್ಲಿ ಸೋತರೂ ಬಾಂಗ್ಲಾದೇಶ್ ಅಥವಾ ಜಿಂಬಾಬ್ವೆ  ತಂಡಗಳಿಗೂ ಸೆಮಿಫೈನಲ್​ಗೇರುವ ಅವಕಾಶ ದೊರೆಯಲಿದೆ. ಅಂದರೆ ಉಳಿದ ತಂಡಗಳು 6 ಪಾಯಿಂಟ್ ಕಲೆಹಾಕಿದರೆ ನೆಟ್​ ರನ್​ ರೇಟ್ ಅನ್ನು ಅವಲಂಭಿಸಬೇಕಾಗುತ್ತದೆ.

ಹೀಗಾಗಿ ಮುಂದಿನ ಎರಡು ಪಂದ್ಯಗಳಲ್ಲಿ ಜಯ ಸಾಧಿಸುವ ಮೂಲಕ ಟೀಮ್ ಇಂಡಿಯಾ ನೇರವಾಗಿ ಸೆಮಿಫೈನಲ್​ಗೇರಲು ಪ್ರಯತ್ನಿಸಬಹುದು. ಇದರಿಂದ ನೆಟ್​ ರನ್​ ರೇಟ್ ಕೂಡ ಲೆಕ್ಕಕ್ಕೆ ಬರುವುದಿಲ್ಲ. ಹಾಗಾಗಿ ಮುಂದಿನ 2 ಪಂದ್ಯಗಳು ಭಾರತ ತಂಡದ ಪಾಲಿಗೆ ಮಾಡು ಇಲ್ಲವೇ ಮಡಿ ಪಂದ್ಯ ಎಂದೇ ಹೇಳಬಹುದು.

ಭಾರತ ತಂಡ:

ರೋಹಿತ್ ಶರ್ಮಾ (ನಾಯಕ) , ದಿನೇಶ್ ಕಾರ್ತಿಕ್, ಕೆಎಲ್ ರಾಹುಲ್ , ವಿರಾಟ್ ಕೊಹ್ಲಿ , ಸೂರ್ಯಕುಮಾರ್ ಯಾದವ್ , ಹಾರ್ದಿಕ್ ಪಾಂಡ್ಯ , ಅಕ್ಷರ್ ಪಟೇಲ್ , ರವಿಚಂದ್ರನ್ ಅಶ್ವಿನ್ , ಭುವನೇಶ್ವರ್ ಕುಮಾರ್ , ಮೊಹಮ್ಮದ್ ಶಮಿ , ಅರ್ಷದೀಪ್ ಸಿಂಗ್ , ರಿಷಭ್ ಪಂತ್ , ದೀಪಕ್ ಹೂಡಾ, ಹರ್ಷಲ್ ಪಟೇಲ್. ಯುಜ್ವೇಂದ್ರ ಚಹಾಲ್.

‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು