AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೂಪರ್-12 ಸುತ್ತಿನ ಪಂದ್ಯಗಳು ಪ್ರಾರಂಭ; ಯಾವ ಗುಂಪಿನಲ್ಲಿ ಯಾವ ತಂಡವಿದೆ? ಇಲ್ಲಿದೆ ವಿವರ

T20 World Cup 2022: ಅರ್ಹತಾ ಸುತ್ತಿನಿಂದ ನಾಲ್ಕು ತಂಡಗಳು ಸೂಪರ್-12 ಸುತ್ತಿಗೆ ಲಗ್ಗೆ ಇಟ್ಟಿದ್ದು, ಯಾವ ತಂಡ ಯಾವ ಗುಂಪಿನಲ್ಲಿದೆ ಎಂಬುದರ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್-12 ಸುತ್ತಿನ ಪಂದ್ಯಗಳು ಪ್ರಾರಂಭ; ಯಾವ ಗುಂಪಿನಲ್ಲಿ ಯಾವ ತಂಡವಿದೆ? ಇಲ್ಲಿದೆ ವಿವರ
T20 World Cup 2022
TV9 Web
| Edited By: |

Updated on: Oct 22, 2022 | 11:41 AM

Share

ಟಿ20 ವಿಶ್ವಕಪ್​ನ (T20 World Cup 2022) ಅರ್ಹತಾ ಸುತ್ತಿನ ಪಂದ್ಯಗಳು ಮುಗಿದಿದ್ದು, ಈ ಸುತ್ತಿನಲ್ಲಿ ಬಹಳ ರೋಚಕ ಮತ್ತು ಆಘಾತಕಾರಿ ಫಲಿತಾಂಶಗಳು ಹೊರಬಿದ್ದಿವೆ. ಟೂರ್ನಿಯ ಮೊದಲ ಸುತ್ತಿನ ಎಲ್ಲಾ 16 ಪಂದ್ಯಗಳು ನಡೆದಿದ್ದು, ಈ ಸುತ್ತಿನಲ್ಲಿ ಮೂರು ಪಂದ್ಯಗಳಲ್ಲಿ ಹೊರಬಿದ್ದ ಪಲಿತಾಂಶ ಎಲ್ಲರನ್ನೂ ಅಚ್ಚರಿಗೊಳಿಸಿತ್ತು. ಇದರ ಸೈಡ್​ ಎಫೆಕ್ಟ್ ಎಂಬಂತೆ ಎರಡು ಬಾರಿಯ ಟಿ20 ವಿಶ್ವಕಪ್ ಚಾಂಪಿಯನ್ ವೆಸ್ಟ್ ಇಂಡೀಸ್ (West Indies) ತಂಡ ಪಂದ್ಯಾವಳಿಯಿಂದ ಹೊರಗುಳಿಯಬೇಕಾಯಿತು. ಇದರೊಂದಿಗೆ ಅರ್ಹತಾ ಸುತ್ತಿನಿಂದ ನಾಲ್ಕು ತಂಡಗಳು ಸೂಪರ್-12 ಸುತ್ತಿಗೆ (Super-12 round) ಲಗ್ಗೆ ಇಟ್ಟಿದ್ದು, ಯಾವ ತಂಡ ಯಾವ ಗುಂಪಿನಲ್ಲಿದೆ ಎಂಬುದರ ಸಂಪೂರ್ಣ ವಿವರ ಇಲ್ಲಿದೆ.

ಮೊದಲ ಸುತ್ತಿನ ಕೊನೆಯ ಎರಡು ಪಂದ್ಯಗಳನ್ನು ಶುಕ್ರವಾರ ಅಕ್ಟೋಬರ್ 21 ರಂದು ಆಡಲಾಯಿತು. ಇದರಲ್ಲಿ ಐರ್ಲೆಂಡ್ ತಂಡ ವೆಸ್ಟ್ ಇಂಡೀಸ್ ತಂಡವನ್ನು 9 ವಿಕೆಟ್‌ಗಳಿಂದ ಮಣಿಸಿತು. ಈ ಮೂಲಕ ಎರಡು ಬಾರಿಯ ಚಾಂಪಿಯನ್ ವೆಸ್ಟ್ ಇಂಡೀಸ್ ಟೂರ್ನಿಯ ಮೊದಲ ಸುತ್ತಿನಿಂದಲೇ ಹೊರಬಿದ್ದಿದ್ದು, ಐರ್ಲೆಂಡ್ ತಂಡ ಸೂಪರ್ 12 ಸುತ್ತಿನಲ್ಲಿ ಸ್ಥಾನ ಪಡೆದುಕೊಂಡಿದೆ. ಹಾಗೆಯೇ ಎರಡನೇ ಪಂದ್ಯದಲ್ಲಿ ಜಿಂಬಾಬ್ವೆ 5 ವಿಕೆಟ್‌ಗಳಿಂದ ಸ್ಕಾಟ್ಲೆಂಡ್ ತಂಡವನ್ನು ಸೋಲಿಸಿ, ಮೊದಲ ಬಾರಿಗೆ ಟಿ20 ವಿಶ್ವಕಪ್‌ನ ಎರಡನೇ ಸುತ್ತಿಗೆ ಲಗ್ಗೆ ಇಟ್ಟಿದೆ.

ಸೂಪರ್-12 ಸುತ್ತಿನ ಎರಡೂ ಗುಂಪುಗಳು

ಹೆಸರೇ ಸೂಚಿಸುವಂತೆ ಸೂಪರ್-12 ಸುತ್ತಿನಲ್ಲಿ ಒಟ್ಟು 12 ತಂಡಗಳಿದ್ದು, ತಲಾ 6 ತಂಡಗಳನ್ನು ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ. ಗುಂಪು-1 ಈಗಾಗಲೇ ವಿಶ್ವ ಚಾಂಪಿಯನ್ ಆಸ್ಟ್ರೇಲಿಯಾ, ನ್ಯೂಜಿಲೆಂಡ್, ಇಂಗ್ಲೆಂಡ್ ಮತ್ತು ಅಫ್ಘಾನಿಸ್ತಾನದ ತಂಡಗಳನ್ನು ಹೊಂದಿತ್ತು. ಅರ್ಹತಾ ಸುತ್ತಿನ ಫಲಿತಾಂಶದ ನಂತರ ಇದೀಗ ಎ ಗುಂಪಿನ ವಿಜೇತ ತಂಡ ಶ್ರೀಲಂಕಾ ಮತ್ತು ಬಿ ಗುಂಪಿನ ರನ್ನರ್ ಅಪ್ ಐರ್ಲೆಂಡ್ ತಂಡ ಗುಂಪು 1 ರಲ್ಲಿ ಸ್ಥಾನ ಪಡೆದಿವೆ. ಈ ರೀತಿಯಾಗಿ, ಗುಂಪು-1 ರಲ್ಲಿ ಆಸ್ಟ್ರೇಲಿಯಾ, ನ್ಯೂಜಿಲೆಂಡ್, ಇಂಗ್ಲೆಂಡ್, ಅಫ್ಘಾನಿಸ್ತಾನ, ಶ್ರೀಲಂಕಾ ಮತ್ತು ಐರ್ಲೆಂಡ್ ತಂಡಗಳು ಸ್ಥಾನ ಪಡೆದಿವೆ.

ಇದನ್ನೂ ಓದಿ: Rohit Sharma: ‘ನನಗೆ ನಂಬಿಕೆ ಇಲ್ಲ’; ಪಾಕ್ ಪತ್ರಕರ್ತನ ಪ್ರಶ್ನೆಗೆ ಖಡಕ್ ಉತ್ತರ ನೀಡಿದ ರೋಹಿತ್ ಶರ್ಮಾ

ನಾವು ಎರಡನೇ ಗುಂಪಿನ ಬಗ್ಗೆ ಮಾತನಾಡುವುದಾದರೆ, ಅದರಲ್ಲಿ ಭಾರತ, ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ನೇರ ಪ್ರವೇಶ ಪಡೆದಿದ್ದವು. ಈಗ ಎ ಗುಂಪಿನ ರನ್ನರ್ ಅಪ್ ತಂಡವಾದ ನೆದರ್ಲ್ಯಾಂಡ್ಸ್ ಹಾಗೂ ಬಿ ಗುಂಪಿನ ವಿಜೇತ ತಂಡವಾದ ಜಿಂಬಾಬ್ವೆ ಗುಂಪು 2 ರಲ್ಲಿ ಸ್ಥಾನ ಪಡೆದಿವೆ. ಈ ರೀತಿಯಾಗಿ ಗುಂಪು-2 ರಲ್ಲಿ ಬಾಂಗ್ಲಾದೇಶ, ಭಾರತ, ಪಾಕಿಸ್ತಾನ, ದಕ್ಷಿಣ ಆಫ್ರಿಕಾ, ನೆದರ್ಲ್ಯಾಂಡ್ಸ್ ಮತ್ತು ಜಿಂಬಾಬ್ವೆ ತಂಡಗಳು ಸ್ಥಾನ ಪಡೆದಿವೆ.

ಸೂಪರ್-12 ಪಂದ್ಯಗಳು ಯಾವಾಗ ಪ್ರಾರಂಭ?

ಸೂಪರ್-12 ಸುತ್ತು ಅಕ್ಟೋಬರ್ 22 ಶನಿವಾರದಿಂದ ಆರಂಭವಾಗಲಿದೆ. ಕಳೆದ ವಿಶ್ವಕಪ್‌ನ ಫೈನಲಿಸ್ಟ್ ತಂಡಗಳ ನಡುವೆ ಮೊದಲ ಪಂದ್ಯ ನಡೆಯಲಿದೆ. ಗುಂಪು-1 ರ ಪಂದ್ಯದಲ್ಲಿ ಚಾಂಪಿಯನ್ ಹಾಗೂ ಆತಿಥೇಯ ಆಸ್ಟ್ರೇಲಿಯಾ ತಂಡ ನ್ಯೂಜಿಲೆಂಡ್ ತಂಡವನ್ನು ಎದುರಿಸಲಿದೆ. ಈ ಪಂದ್ಯ ಹೋಬರ್ಟ್‌ನಲ್ಲಿ ನಡೆಯಲಿದ್ದು, ಇದರ ನಂತರ ಎರಡನೇ ಪಂದ್ಯದಲ್ಲಿ ಅಫ್ಘಾನಿಸ್ತಾನ ಮತ್ತು ಇಂಗ್ಲೆಂಡ್ ತಂಡಗಳು ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ಮುಖಾಮುಖಿಯಾಗಲಿವೆ.

ನಾವು ಗುಂಪು-2 ರ ಬಗ್ಗೆ ಮಾತನಾಡುವುದಾದರೆ, ಅದರ ಮೊದಲ ಪಂದ್ಯವು ಅಕ್ಟೋಬರ್ 23 ಭಾನುವಾರದಂದು ನಡೆಯಲಿದೆ. ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ನಡೆಯುವ ಈ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಪರಸ್ಪರ ಮುಖಾಮುಖಿಯಾಗಲಿವೆ.

ಇನ್ನಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ