AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2022: ಅಬ್ಬರಿಸಿದ ಸೂರ್ಯ: ವೆಸ್ಟರ್ನ್​ ಆಸ್ಟ್ರೇಲಿಯಾಗೆ ಸ್ಪರ್ಧಾತ್ಮಕ ಸವಾಲು

T20 World Cup 2022: ಈ ಹಂತದಲ್ಲಿ ಜೊತೆಗೂಡಿದ ದೀಪಕ್ ಹೂಡಾ ಹಾಗೂ ಸೂರ್ಯಕುಮಾರ್ ಯಾದವ್ ಉತ್ತಮ ಜೊತೆಯಾಟವಾಡಿದರು. ಆದರೆ 22 ರನ್​ಗಳಿಸಿದ್ದ ವೇಳೆ ಬೆಹ್ರೆಂಡಾರ್ಫ್ ಎಸೆತದಲ್ಲಿ ದೀಪಕ್ ಹೂಡಾ ವಿಕೆಟ್ ಅನ್ನು ಕೈಚೆಲ್ಲಿದರು.

T20 World Cup 2022: ಅಬ್ಬರಿಸಿದ ಸೂರ್ಯ: ವೆಸ್ಟರ್ನ್​ ಆಸ್ಟ್ರೇಲಿಯಾಗೆ ಸ್ಪರ್ಧಾತ್ಮಕ ಸವಾಲು
Team India
TV9 Web
| Edited By: |

Updated on: Oct 10, 2022 | 1:54 PM

Share

ಆಸ್ಟ್ರೇಲಿಯಾದ ಪರ್ತ್​ನಲ್ಲಿ ನಡೆಯುತ್ತಿರುವ ವೆಸ್ಟರ್ನ್​ ಆಸ್ಟ್ರೇಲಿಯಾ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಟೀಮ್ ಇಂಡಿಯಾದ ಮಧ್ಯಮ ಕ್ರಮಾಂಕದ ಬ್ಯಾಟ್ಸ್​ಮನ್ ಸೂರ್ಯಕುಮಾರ್ ಯಾದವ್ ಆಕರ್ಷಕ ಅರ್ಧಶತಕ ಬಾರಿಸಿ ಮಿಂಚಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ದುಕೊಂಡರು. ಕೆಎಲ್ ರಾಹುಲ್ ವಿಶ್ರಾಂತಿ ಹಿನ್ನೆಲೆಯಲ್ಲಿ ಟೀಮ್ ಇಂಡಿಯಾ ಪರ ರಿಷಭ್ ಪಂತ್ ಹಾಗೂ ರೋಹಿತ್ ಶರ್ಮಾ ಇನಿಂಗ್ಸ್ ಆರಂಭಿಸಿದ್ದರು. ಆದರೆ ಕೇವಲ 3 ರನ್​ಗಳಿಸಿ ರೋಹಿತ್ ಶರ್ಮಾ ಜೇಸನ್ ಬೆಹ್ರೆಂಡಾರ್ಫ್​ಗೆ ವಿಕೆಟ್ ಒಪ್ಪಿಸಿ ಹೊರನಡೆದರು. ಇದರ ಬೆನ್ನಲ್ಲೇ 17 ಎಸೆತಗಳಲ್ಲಿ 9 ರನ್ ಬಾರಿಸಿ ರಿಷಭ್ ಪಂತ್ ಕೂಡ ಪೆವಿಲಿಯನ್ ಕಡೆ ಮುಖ ಮಾಡಿದರು.

ಈ ಹಂತದಲ್ಲಿ ಜೊತೆಗೂಡಿದ ದೀಪಕ್ ಹೂಡಾ ಹಾಗೂ ಸೂರ್ಯಕುಮಾರ್ ಯಾದವ್ ಉತ್ತಮ ಜೊತೆಯಾಟವಾಡಿದರು. ಆದರೆ 22 ರನ್​ಗಳಿಸಿದ್ದ ವೇಳೆ ಬೆಹ್ರೆಂಡಾರ್ಫ್ ಎಸೆತದಲ್ಲಿ ದೀಪಕ್ ಹೂಡಾ ಔಟಾದರು. ಇದಾಗ್ಯೂ ಸೂರ್ಯಕುಮಾರ್ ಯಾದವ್ ಮಾತ್ರ ಭರ್ಜರಿ ಬ್ಯಾಟಿಂಗ್ ಮುಂದುವರೆಸಿದ್ದರು.

ಇನ್ನು ಐದನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಹಾರ್ದಿಕ್ ಪಾಂಡ್ಯ 20 ಎಸೆತಗಳಲ್ಲಿ ಬಿರುಸಿನ 29 ರನ್​ಗಳಿಸಿ ನಿರ್ಗಮಿಸಿದರು. ಮತ್ತೊಂದೆಡೆ 35 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ತಂಡಕ್ಕೆ ಆಸರೆಯಾದರು. ಅಂತಿಮವಾಗಿ 35 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 3 ಫೋರ್​ನೊಂದಿಗೆ ಸೂರ್ಯಕುಮಾರ್ ಯಾದವ್ 52 ರನ್​ ಕಲೆಹಾಕಿದರು. ಹಾಗೆಯೇ ಕೊನೆಯ ಓವರ್​ಗಳ ವೇಳೆ ದಿನೇಶ್ ಕಾರ್ತಿಕ್ ಬಿರುಸಿನ 19 ರನ್ ಬಾರಿಸುವ ಮೂಲಕ ಟೀಮ್ ಇಂಡಿಯಾ ಮೊತ್ತವನ್ನು 6 ವಿಕೆಟ್ ನಷ್ಟಕ್ಕೆ 158 ಕ್ಕೆ ತಂದು ನಿಲ್ಲಿಸಿದರು.

ಇದೀಗ ಇನಿಂಗ್ಸ್ ಆರಂಭಿಸಿರುವ ವೆಸ್ಟರ್ನ್​ ಆಸ್ಟ್ರೇಲಿಯಾ ತಂಡವು ಕೇವಲ 12 ರನ್​ಗಳಿಗೆ 4 ವಿಕೆಟ್ ಕಳೆದುಕೊಂಡಿದೆ.

ಭಾರತ (ಪ್ಲೇಯಿಂಗ್ XI): ರೋಹಿತ್ ಶರ್ಮಾ(ನಾಯಕ), ರಿಷಭ್ ಪಂತ್, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್, ಅಕ್ಷರ್ ಪಟೇಲ್, ಹರ್ಷಲ್ ಪಟೇಲ್, ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್, ಯುಜ್ವೇಂದ್ರ ಚಾಹಲ್

ವೆಸ್ಟರ್ನ್ ಆಸ್ಟ್ರೇಲಿಯ (ಪ್ಲೇಯಿಂಗ್ XI): ಡಿ ಆರ್ಸಿ ಶಾರ್ಟ್, ಆರನ್ ಹಾರ್ಡಿ, ಕ್ಯಾಮೆರಾನ್ ಬ್ಯಾಂಕ್ರಾಫ್ಟ್, ಆಶ್ಟನ್ ಟರ್ನರ್(ನಾಯಕ), ಸ್ಯಾಮ್ ಫಾನ್ನಿಂಗ್, ಹ್ಯಾಮಿಶ್ ಮೆಕೆಂಜಿ, ಜೈ ರಿಚರ್ಡ್ಸನ್, ಆಂಡ್ರ್ಯೂ ಟೈ, ಜೇಸನ್ ಬೆಹ್ರೆಂಡಾರ್ಫ್, ಮ್ಯಾಥ್ಯೂ ಕೆಲ್ಲಿ, ನಿಕ್ ಹಾಬ್ಸನ್

Follow Us
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?