AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20I World Cup 2022: ಇಂದು ಬ್ರಿಸ್ಬೇನ್ ತಲುಪಲಿದೆ ಭಾರತ: ಆಸೀಸ್, ಕಿವೀಸ್ ವಿರುದ್ಧ ಅಭ್ಯಾಸ ಪಂದ್ಯ ಯಾವಾಗ?, ಎಷ್ಟು ಗಂಟೆಗೆ?

India vs Australia Warm-up Match: ಇಂದು ಟೀಮ್ ಇಂಡಿಯಾ ಆಟಗಾರರು ಆಸ್ಟ್ರೇಲಿಯಾ ಹಾಗೂ ನ್ಯೂಜಿಲೆಂಡ್ ವಿರುದ್ಧದ ಐಸಿಸಿ ಟಿ20 ವಿಶ್ವಕಪ್ ಅಧಿಕೃತ ಅಭ್ಯಾಸ ಪಂದ್ಯಕ್ಕಾಗಿ ಬ್ರಿಸ್ಬೇನ್​ಗೆ ಪ್ರಯಾಣ ಬೆಳೆಸಲಿದ್ದಾರೆ.

T20I World Cup 2022: ಇಂದು ಬ್ರಿಸ್ಬೇನ್ ತಲುಪಲಿದೆ ಭಾರತ: ಆಸೀಸ್, ಕಿವೀಸ್ ವಿರುದ್ಧ ಅಭ್ಯಾಸ ಪಂದ್ಯ ಯಾವಾಗ?, ಎಷ್ಟು ಗಂಟೆಗೆ?
Team India T20 World Cup
TV9 Web
| Edited By: |

Updated on:Oct 14, 2022 | 9:38 AM

Share

ಐಸಿಸಿ ಟಿ20 ವಿಶ್ವಕಪ್​ಗಾಗಿ (T20I World Cup) ಆಸ್ಟ್ರೇಲಿಯಾಕ್ಕೆ ತೆರಳಿರುವ ಭಾರತಕ್ಕೆ ಆರಂಭದಲ್ಲೇ ಸೋಲು-ಗೆಲುವಿನ ದರ್ಶನವಾಗಿದೆ. ವೆಸ್ಟರ್ನ್ ಆಸ್ಟ್ರೇಲಿಯಾ ಇಲೆವೆನ್ ವಿರುದ್ಧ ಆಡಿದ ಎರಡು ಅನಧಿಕೃತ ಅಭ್ಯಾಸ ಪಂದ್ಯದಲ್ಲಿ ರೋಹಿತ್ ಪಡೆ ನಿರೀಕ್ಷೆಗೆ ತಕ್ಕ ಪ್ರದರ್ಶನ ನೀಡಲಿಲ್ಲ. ಮೊದಲ ಅಭ್ಯಾಸ ಪಂದ್ಯದಲ್ಲಿ ಗೆಲುವು ಸಾಧಿಸಿದರೆ, ದ್ವಿತೀಯ ಪಂದ್ಯದಲ್ಲಿ 36 ರನ್​ಗಳಿಂದ ಸೋಲುಂಡಿತು. ಮೊದಲ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಮಿಂಚಿದರೆ, ಎರಡನೇ ಪಂದ್ಯದಲ್ಲಿ ಕೆಎಲ್ ರಾಹುಲ್ ಅರ್ಧಶತಕ ಸಿಡಿಸಿದರು. ಇದರ ನಡುವೆ ಎರಡೂ ಪ್ರ್ಯಾಕ್ಟೀಸ್ ಮ್ಯಾಚ್​ನಲ್ಲಿ ವಿರಾಟ್ ಕೊಹ್ಲಿ (Virat Kohli) ಬ್ಯಾಟಿಂಗ್ ಮಾಡಲಿಲ್ಲ. ಬದಲಾಗಿ ನೆಟ್​ನಲ್ಲಿ ಒಬ್ಬರೇ ಬೆವರು ಹರಿಸುತ್ತಿದ್ದರು. ಎರಡನೇ ಪಂದ್ಯದಲ್ಲಿ ರೋಹಿತ್ ಶರ್ಮಾ ಹಾಗೂ ಸೂರ್ಯಕುಮಾರ್ ಯಾದವ್ ಫೀಲ್ಡಿಂಗ್ ಮಾತ್ರ ಮಾಡಿದ್ದರು. ಈ ವರೆಗೆ ಅಭ್ಯಾಸ ಪಂದ್ಯಕ್ಕಾಗಿ ಪರ್ತ್​ನಲ್ಲಿದ್ದ ಟೀಮ್ ಇಂಡಿಯಾ (Team India) ಇದೀಗ ಬ್ರಿಸ್ಬೇನ್​ಗೆ ತೆರಳಲು ಸಜ್ಜಾಗಿದೆ.

ಇಂದು ಟೀಮ್ ಇಂಡಿಯಾ ಆಟಗಾರರು ಆಸ್ಟ್ರೇಲಿಯಾ ಹಾಗೂ ನ್ಯೂಜಿಲೆಂಡ್ ವಿರುದ್ಧದ ಅಧಿಕೃತ ಅಭ್ಯಾಸ ಪಂದ್ಯಕ್ಕಾಗಿ ಬ್ರಿಸ್ಬೇನ್​ಗೆ ಪ್ರಯಾಣ ಬೆಳೆಸಲಿದ್ದಾರೆ. ಅಕ್ಟೋಬರ್ 17 ರಂದು ಬ್ರಿಸ್ಬೇನ್​ನ ಗಬ್ಬಾ ಕ್ರೀಡಾಂಗಣದಲ್ಲಿ ರೋಹಿತ್ ಪಡೆ ಆಸ್ಟ್ರೇಲಿಯಾ ವಿರುದ್ಧ ಮೊದಲ ಅಭ್ಯಾಸ ಪಂದ್ಯವನ್ನು ಆಡಲಿದೆ. ಇದು ಭಾರತೀಯ ಕಾಲಮಾನದ ಪ್ರಕಾರ ಬೆಳಗ್ಗೆ 9:30 ಕ್ಕೆ ಶುರುವಾಗಲಿದೆ.

ಕೊನೆಯ ವಾರ್ಮ್​-ಅಪ್ ಮ್ಯಾಚ್ ಅಕ್ಟೋಬರ್ 19 ರಂದು ನ್ಯೂಜಿಲೆಂಡ್ ವಿರುದ್ಧ ಆಡಲಿದೆ. ಇದು ಮಧ್ಯಾಹ್ನ 1:30 ಕ್ಕೆ ಶುರುವಾಗಲಿದೆ. ಇದಾದ ಬಳಿಕ ಟೀಮ್ ಇಂಡಿಯಾ ಅ. 23 ರಂದು ಮೆಲ್ಬೋರ್ನ್‌ ಸ್ಟೇಡಿಯಂನಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಸೆಣಸುವ ಮೂಲಕ ತನ್ನ ಅಭಿಯಾನವನ್ನು ಆರಂಭಿಸಲಿದೆ.

ಇದನ್ನೂ ಓದಿ
Image
Virat Kohli: ಅಭ್ಯಾಸ ಪಂದ್ಯದಲ್ಲಿ ಹೀನಾಯವಾಗಿ ಸೋತ ಬೆನ್ನಲ್ಲೇ ಮೈದಾನಕ್ಕಿಳಿದ ಕೊಹ್ಲಿ, ರೋಹಿತ್: ಯಾಕೆ ಗೊತ್ತೇ?
Image
SL-W vs PAK-W: ಪಾಕ್ ಮಹಿಳಾ ತಂಡದ ವಿರುದ್ಧ 1 ರನ್​ ರೋಚಕ ಜಯ ಸಾಧಿಸಿದಾಗ ಶ್ರೀಲಂಕಾ ಪ್ಲೇಯರ್ಸ್ ಏನು ಮಾಡಿದ್ರು ನೋಡಿ
Image
T20 World Cup: ಟಿ20 ವಿಶ್ವಕಪ್‌ ಇತಿಹಾಸದಲ್ಲಿ ಟೀಂ ಇಂಡಿಯಾ ಸೃಷ್ಟಿಸಿರುವ ಪ್ರಮುಖ 5 ದಾಖಲೆಗಳಿವು
Image
Video: ಹೀನಾಯ ಸೋಲಿನ ಬಳಿಕ 6 ಸಿಕ್ಸ್ ಸಿಡಿಸಿದ ರೋಹಿತ್ ಶರ್ಮಾ

ಅಭ್ಯಾಸ ಪಂದ್ಯದಲ್ಲಿ ಸೋಲು:

ಪಶ್ಚಿಮ ಆಸ್ಟ್ರೇಲಿಯಾ ವಿರುದ್ಧ ಮೊದಲ ಅನಧಿಕೃತ ಅಭ್ಯಾಸ ಪಂದ್ಯದಲ್ಲಿ ಗೆದ್ದಿದ್ದ ಭಾರತ ಎರಡನೇ ಪಂದ್ಯದಲ್ಲಿ ನಿರೀಕ್ಷೆಗೆ ತಕ್ಕ ಪ್ರದರ್ಶನ ನೀಡಲಿಲ್ಲ. ಮೊದಲು ಬ್ಯಾಟಿಂಗ್ ಮಾಡಿದ ಪಶ್ಚಿಮ ಆಸ್ಟ್ರೇಲಿಯಾ ನಿಕ್ ಹಾಬ್ಸನ್ ಮತ್ತು ಡಿ’ಆರ್ಸಿ ಶಾರ್ಟ್ ಅವರ ಅರ್ಧಶತಕಗಳ ನೆರವಿನಿಂದ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 168 ರನ್ ಗಳಿಸಿತು. ಆರ್. ಅಶ್ವಿನ್ ಮೂರು ವಿಕೆಟ್‌ ಪಡೆದು ಮಿಂಚಿದರೆ, ಹರ್ಷಲ್ ಪಟೇಲ್ 2 ಹಾಗೂ ಅರ್ಶ್​ದೀಪ್ ಸಿಂಗ್ 1 ವಿಕೆಟ್ ಕಿತ್ತರು.

169 ರನ್​ಗಳ ಟಾರ್ಗೆಟ್ ಬೆನ್ನಟ್ಟಿದ ಭಾರತ ತಂಡ ಆರಂಭದಲ್ಲಿ ನಿಧಾನಗತಿ ಆಟ ಆಡಿದ್ದು ಸಂಕಷ್ಟಕ್ಕೆ ಸಿಲುಕಿತು. ಜೊತೆಗೆ ಪಂತ್ (9) ವಿಕೆಟ್ ಕಳೆದುಕೊಂಡಿತು. ಸಿಕ್ಕ ಅವಕಾಶವನ್ನು ದೀಪಕ್ ಹೂಡ 6 ಉಪಯೋಗಿಸಿಕೊಳ್ಳಲಿಲ್ಲ. ಹಾರ್ದಿಕ್ ಪಾಂಡ್ಯ ಎರಡು ಸಿಕ್ಸ್​ ಸಿಡಿಸಿ 9 ಎಸೆತಗಳಲ್ಲಿ 17 ರನ್​ ಗಳಿಸಿ ನಿರ್ಗಮಿಸಿದರು. ಆಲ್‌ರೌಂಡರ್ ಅಕ್ಷರ್ ಪಟೇಲ್ ಆಟ2 ರನ್​ಗೆ ಅಂತ್ಯವಾಯಿತು. ಫಿನಿಶರ್ ದಿನೇಶ್ ಕಾರ್ತಿಕ್ (10) ಆಟ ಕೂಡ ನಡೆಯಲಿಲ್ಲ.

ಅರ್ಧಶತಕದ ಬಳಿಕ ಸ್ಫೋಟಕ ಆಟವಾಡಿದ ರಾಹುಲ್​ಗೆ ಗೆಲುವು ತಂದುಕೊಡಲು ಸಾಧ್ಯವಾಗಲಿಲ್ಲ. 55 ಎಸೆತಗಳಲ್ಲಿ 9 ಬೌಂಡರಿ ಮತ್ತು ಎರಡು ಸಿಕ್ಸರ್​ನೊಂದಿಗೆ ರಾಹುಲ್ 74 ರನ್ ಗಳಿಸಿ ಔಟಾದರು. ಅಂತಿಮವಾಗಿ ಟೀಮ್ ಇಂಡಿಯಾ 20 ಓವರ್‌ಗಳಲ್ಲಿ 8 ವಿಕೆಟ್​ ಕಳೆದುಕೊಂಡು ಕೇವಲ 132 ರನ್​ ಗಳಿಸಲು ಮಾತ್ರ ಶಕ್ತವಾಗಿ ಸೋಲು ಕಂಡಿತು.

Published On - 9:38 am, Fri, 14 October 22

ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್