AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

VIDEO: ಭಾರತಕ್ಕೆ ಗೆಲುವು ತಂದುಕೊಟ್ಟು ಕಣ್ಣೀರಿಟ್ಟ ಕೊಹ್ಲಿ..!

Virat Kohli: ಈ ರೋಚಕ ಗೆಲುವಿನ ಬೆನ್ನಲ್ಲೇ ವಿರಾಟ್ ಕೊಹ್ಲಿ ಸಂಭ್ರಮಿಸಿದರೂ ಆ ಬಳಿಕ ಭಾವುಕರಾದರು. ಭಾರತ ತಂಡಕ್ಕೆ ಗೆಲುವು ತಂದುಕೊಟ್ಟ ಖುಷಿಯಲ್ಲೇ ಕಣ್ಣೀರಾದರು.

VIDEO: ಭಾರತಕ್ಕೆ ಗೆಲುವು ತಂದುಕೊಟ್ಟು ಕಣ್ಣೀರಿಟ್ಟ ಕೊಹ್ಲಿ..!
Virat Kohli
TV9 Web
| Edited By: |

Updated on: Oct 23, 2022 | 7:24 PM

Share

T20 World Cup 2022: ಮೆಲ್ಬೋರ್ನ್​ ಕ್ರಿಕೆಟ್​ ಗ್ರೌಂಡ್​ನಲ್ಲಿ ನಡೆದ ಬದ್ಧವೈರಿ ಪಾಕಿಸ್ತಾನ್ (India vs Pakistan) ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ (Team India) ರೋಚಕ ಗೆಲುವು ದಾಖಲಿಸಿತು. ಈ ಗೆಲುವಿನ ಹೀರೋ ವಿರಾಟ್ ಕೊಹ್ಲಿ (Virat Kohli). ಏಕೆಂದರೆ ಕೇವಲ 31 ರನ್​ಗಳಿಗೆ 4 ವಿಕೆಟ್ ಕಳೆದುಕೊಂಡಿದ್ದ ಟೀಮ್ ಇಂಡಿಯಾವನ್ನು ಅಜೇಯರಾಗಿ ಉಳಿದು ಕೊಹ್ಲಿ ಗುರಿ ಮುಟ್ಟಿಸಿದ್ದರು. ಪಾಕಿಸ್ತಾನ್ ನೀಡಿದ 160 ರನ್​ಗಳ ಟಾರ್ಗೆಟ್ ಬೆನ್ನತ್ತಿದ ಟೀಮ್ ಇಂಡಿಯಾ ಉತ್ತಮ ಆರಂಭ ಪಡೆದಿರಲಿಲ್ಲ. ಕೇವಲ 31 ರನ್​ಗಳಿಗೆ ಕೆಎಲ್ ರಾಹುಲ್, ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್ ಹಾಗೂ ಅಕ್ಷರ್ ಪಟೇಲ್ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಇದಾಗ್ಯೂ ಸ್ಥೈರ್ಯ ಕಳೆದುಕೊಳ್ಳದ ಕೊಹ್ಲಿ ಏಕಾಂಗಿಯಾಗಿ ಹೋರಾಟ ಮುಂದುವರೆಸಿದರು.

ಕೊಹ್ಲಿಗೆ ಉತ್ತಮ ಸಾಥ್ ನೀಡಿದ ಹಾರ್ದಿಕ್ ಪಾಂಡ್ಯ (40) ಜೊತೆಗೂಡಿ 113 ರನ್​ಗಳ ಜೊತೆಯಾಟವಾಡಿದರು. ಆದರೆ ಅಂತಿಮ ಹಂತದವರೆಗೂ ಪಾಂಡ್ಯಗೆ ಬಿರುಸಿನ ಬ್ಯಾಟಿಂಗ್ ನಡೆಸಲು ಸಾಧ್ಯವಾಗಿರಲಿಲ್ಲ. ಮತ್ತೊಂದೆಡೆ ನಿರ್ಣಾಯಕ ಓವರ್​ಗಳ ವೇಳೆ ಅಬ್ಬರಿಸಲಾರಂಭಿಸಿದ ವಿರಾಟ್ ಕೊಹ್ಲಿ ಇಡೀ ಪಂದ್ಯ ಚಿತ್ರಣ ಬದಲಿಸಿದರು. ಅದರಂತೆ ಕೊನೆಯ ಓವರ್​ನಲ್ಲಿ 16 ರನ್​ಗಳ ಟಾರ್ಗೆಟ್ ಪಡೆದ ಭಾರತಕ್ಕೆ ಭರ್ಜರಿ ಸಿಕ್ಸ್ ಸಿಡಿಸುವ ಮೂಲಕ ಗೆಲುವಿನ ಆಸೆಯನ್ನು ಕೊಹ್ಲಿ ಮತ್ತಷ್ಟು ಹೆಚ್ಚಿಸಿದರು. ಅಲ್ಲದೆ ಕೊನೆಯ ಓವರ್​ನಲ್ಲಿ ಬೌಲರ್​ನ ಮೇಲೆ ಒತ್ತಡ ಹೇರುವಲ್ಲಿ ಯಶಸ್ವಿಯಾದ ಕೊಹ್ಲಿ ಗೆಲುವನ್ನು ಖಚಿತಪಡಿಸಿದರು. ಅಂತಿಮ ಎಸೆತದಲ್ಲಿ ಅಶ್ವಿನ್ 1 ರನ್ ಕಲೆಹಾಕುವ ಮೂಲಕ ಟೀಮ್ ಇಂಡಿಯಾ ಗೆಲುವಿನ ನಗೆ ಬೀರಿತು.

ಇದನ್ನೂ ಓದಿ
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ವಿದೇಶಿ ತಂಡದ ಪರ ಆಡುತ್ತಿರುವ ಭಾರತೀಯ ಮೂಲದವರು ಯಾರೆಲ್ಲಾ ಗೊತ್ತಾ?
Image
T20 World Cup 2022 All Squad: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳ ಆಟಗಾರರ ಸಂಪೂರ್ಣ ಪಟ್ಟಿ ಇಲ್ಲಿದೆ
Image
T20 World Cup 2022: ಭಾರತ-ಪಾಕ್ ಅಲ್ಲ, ಈ ಬಾರಿ ಸೂರ್ಯ vs ರಿಜ್ವಾನ್..!
Image
Team India: ಟೀಮ್ ಇಂಡಿಯಾದ ಮೊದಲ ಟಿ20 ತಂಡದಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?

ಈ ರೋಚಕ ಗೆಲುವಿನ ಬೆನ್ನಲ್ಲೇ ವಿರಾಟ್ ಕೊಹ್ಲಿ ಸಂಭ್ರಮಿಸಿದರೂ ಆ ಬಳಿಕ ಭಾವುಕರಾದರು. ಭಾರತ ತಂಡಕ್ಕೆ ಗೆಲುವು ತಂದುಕೊಟ್ಟ ಖುಷಿಯಲ್ಲೇ ಕಣ್ಣೀರಾದರು. ಇತ್ತ ಕಿಂಗ್ ಕೊಹ್ಲಿಗೆ ಉತ್ತಮ ಸಾಥ್ ನೀಡಿದ ಹಾರ್ದಿಕ್ ಪಾಂಡ್ಯ ಕೂಡ ಮೈದಾನಕ್ಕೆ ಓಡಿ ಬಂದು ಕೊಹ್ಲಿ ಭಾವುಕತೆಯಲ್ಲಿ ಪಾಲುದಾರರಾದರು.

ಇದೀಗ ಕ್ರಿಕೆಟ್ ಅಂಗಳದ ಆಕ್ರಮಣಕಾರಿ ಆಟಗಾರನೆಂದೇ ಖ್ಯಾತರಾಗಿರುವ ಕಿಂಗ್ ಕೊಹ್ಲಿಯ ಕಣ್ಣೀರಿನ ಫೋಟೋ ಹಾಗೂ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ನಾನು ವಿರಾಟ್‌ ಕೊಹ್ಲಿಯನ್ನು ತುಂಬಾ ವರ್ಷಗಳಿಂದ ನೋಡಿದ್ದೇನೆ. ಆದರೆ ಯಾವತ್ತೂ ಅವರ ಕಣ್ಣಲ್ಲಿ ಕಣ್ಣೀರು ನೋಡಿರಲಿಲ್ಲ. ಇವತ್ತು ನೋಡಿದೆ. ಇದು ಅವಿಸ್ಮರಣೀಯವಾಗಿತ್ತು ಎಂದು ಖ್ಯಾತ ಕ್ರಿಕೆಟ್ ಕಾಮೆಂಟೇಟರ್ ಹರ್ಷ ಬೋಗ್ಲೆ ಟ್ವಿಟರ್​ನಲ್ಲಿ ಬರೆದುಕೊಂಡಿದ್ದಾರೆ.

ಒಟ್ಟಿನಲ್ಲಿ ಏಕಾಂಗಿ ಹೋರಾಟದ ಮೂಲಕ ಕಿಂಗ್ ಕೊಹ್ಲಿ ಇಡೀ ಭಾರತೀಯರ ಖುಷಿಗೆ ಕಾರಣರಾಗಿದ್ದಾರೆ. ಅದೇ ಖುಷಿಯಲ್ಲಿ ಅತ್ತ ಕೊಹ್ಲಿ ಆನಂದಬಾಷ್ಪ ಸುರಿಸಿದರೆ, ಇತ್ತ ಅಭಿಮಾನಿಗಳು ಪಟಾಕಿಗಳ ಸುರಿಮಳೆ ಸುರಿಸಿರುವುದು ವಿಶೇಷ.

Follow Us
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು 
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು 
ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ನಡೆ
ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ನಡೆ