T20 World Cup 2024: ಗೆದ್ದ ಆಸ್ಟ್ರೇಲಿಯಾ: ಸೂಪರ್-8 ಹಂತಕ್ಕೇರಿದ ಇಂಗ್ಲೆಂಡ್

T20 World Cup 2024: ಆಸ್ಟ್ರೇಲಿಯಾ ತಂಡದ ಈ ಗೆಲುವಿನೊಂದಿಗೆ ಇಂಗ್ಲೆಂಡ್ ತಂಡವು ದ್ವಿತೀಯ ಸುತ್ತಿಗೆ ಅರ್ಹತೆ ಪಡೆದುಕೊಂಡಿದೆ. ಒಂದು ವೇಳೆ ಈ ಮ್ಯಾಚ್​ನಲ್ಲಿ ಸ್ಕಾಟ್ಲೆಂಡ್ ಗೆದ್ದಿದ್ದರೆ ಸೂಪರ್-8 ಹಂತಕ್ಕೇರಲು ಅವಕಾಶವಿತ್ತು. ಆದರೆ ಆಸೀಸ್ ದಾಂಡಿಗರ ಭರ್ಜರಿ ಪ್ರದರ್ಶನದೊಂದಿಗೆ ಸ್ಕಾಟ್ಲೆಂಡ್ ತಂಡದ ಟಿ20 ವಿಶ್ವಕಪ್​ ಅಭಿಯಾನ ಅಂತ್ಯವಾಗಿದೆ.

T20 World Cup 2024: ಗೆದ್ದ ಆಸ್ಟ್ರೇಲಿಯಾ: ಸೂಪರ್-8 ಹಂತಕ್ಕೇರಿದ ಇಂಗ್ಲೆಂಡ್
Australia - England
Follow us
|

Updated on:Jun 16, 2024 | 9:29 AM

T20 World Cup 2024: ಟಿ20 ವಿಶ್ವಕಪ್​ನ 35ನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಸ್ಕಾಟ್ಲೆಂಡ್ ತಂಡ ಸೋಲನುಭವಿಸಿದೆ. ಈ ಸೋಲಿನೊಂದಿಗೆ ಸ್ಕಾಟ್ಲೆಂಡ್ ತಂಡ ಟಿ20 ವಿಶ್ವಕಪ್​ನಿಂದ ಹೊರಬಿದ್ದರೆ, ಅತ್ತ ಇಂಗ್ಲೆಂಡ್ ತಂಡವು ಸೂಪರ್-8 ಹಂತಕ್ಕೇರಿದೆ. ಇದಕ್ಕೂ ಮುನ್ನ ಸೆಂಟ್ ಲೂಸಿಯಾದ ಡಾರೆನ್ ಸ್ಯಾಮಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡವು ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ಸ್ಕಾಟ್ಲೆಂಡ್ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿತು. ಆರಂಭಿಕ ಆಟಗಾತ ಜಾರ್ಜ್ ಮುನ್ಸಿ 23 ಎಸೆತಗಳಲ್ಲಿ 3 ಭರ್ಜರಿ ಸಿಕ್ಸ್ ಹಾಗೂ 2 ಫೋರ್​ಗಳೊಂದಿಗೆ 35 ರನ್ ಬಾರಿಸಿ ಉತ್ತಮ ಆರಂಭ ಒದಗಿಸಿದ್ದರು.

ಇನ್ನು ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಬ್ರಾಂಡನ್ ಮೆಕ್​ಮುಲ್ಲೆನ್ ಅಕ್ಷರಶಃ ಅಬ್ಬರಿಸಿದರು. ಆಸೀಸ್ ಬೌಲರ್​ಗಳ ಬೆಂಡೆತ್ತಿದ ಮೆಕ್​ಮುಲ್ಲೆನ್ 34 ಎಸೆತಗಳಲ್ಲಿ 6 ಭರ್ಜರಿ ಸಿಕ್ಸ್ ಹಾಗೂ 2 ಫೋರ್​ಗಳೊಂದಿಗೆ 60 ರನ್ ಚಚ್ಚಿದರು. ಹಾಗೆಯೇ ನಾಯಕ ಬೆರಿಂಗ್ಟನ್ ಅಜೇಯ 42 ರನ್​ಗಳ ಕೊಡುಗೆ ನೀಡಿದರು. ಈ ಮೂಲಕ ಸ್ಕಾಟ್ಲೆಂಡ್ ತಂಡವು 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 180 ರನ್​ ಕಲೆಹಾಕಿತು.

ನಿಧಾನಗತಿಯ ಆರಂಭ:

181 ರನ್​ಗಳ ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ ಆಸ್ಟ್ರೇಲಿಯಾ ತಂಡವು ಬಿರುಸಿನ ಆರಂಭ ಪಡೆಯುವಲ್ಲಿ ವಿಫಲವಾಯಿತು. ಆರಂಭಿಕ ಆಟಗಾರ ಡೇವಿಡ್ ವಾರ್ನರ್ ಕೇವಲ 1 ರನ್​ಗಳಿಸಿ 2ನೇ ಓವರ್​ನಲ್ಲಿ ವೀಲ್​ಗೆ ವಿಕೆಟ್ ಒಪ್ಪಿಸಿದ್ದರು. ಆ ಬಳಿಕ ಬಂದ ಮಿಚೆಲ್ ಮಾರ್ಷ್ ಇನಿಂಗ್ಸ್​ ಕೇವಲ 8 ರನ್​ಗಳಿಗೆ ಸೀಮಿತವಾಯಿತು.

ಇನ್ನು ಗ್ಲೆನ್ ಮ್ಯಾಕ್ಸ್​ವೆಲ್ 11 ರನ್​ಗಳಿಸಿದ್ದ ವೇಳೆ ಮಾರ್ಕ್​ ವ್ಯಾಟ್ ಎಸೆತದಲ್ಲಿ ಕ್ಲೀನ್ ಬೌಲ್ಡ್ ಆದರು. ಇದಾಗ್ಯೂ ಒಂದೆಡೆ ಕ್ರೀಸ್ ಕಚ್ಚಿ ನಿಂತಿದ್ದ ಆರಂಭಿಕ ಆಟಗಾರ ಟ್ರಾವಿಸ್ ಹೆಡ್ ಅರ್ಧಶತಕ ಪೂರೈಸಲು ಬರೋಬ್ಬರಿ 45 ಎಸೆತಗಳನ್ನು ತೆಗೆದುಕೊಂಡಿದ್ದರು. ಈ ಹಂತದಲ್ಲಿ ಜೊತೆಗೂಡಿದ ಹೆಡ್ ಹಾಗೂ ಸ್ಟೋಯಿನಿಸ್ ಸ್ಪೋಟಕ ಬ್ಯಾಟಿಂಗ್​ಗೆ ಒತ್ತು ನೀಡಿದರು.

ಪರಿಣಾಮ ಆಸ್ಟ್ರೇಲಿಯಾ ತಂಡಕ್ಕೆ ಕೊನೆಯ 5 ಓವರ್​ಗಳಲ್ಲಿ 60 ರನ್​ಗಳ ಅವಶ್ಯಕತೆಯಿತ್ತು. 16ನೇ ಓವರ್​ನಲ್ಲಿ ಹ್ಯಾಟ್ರಿಕ್ ಸಿಕ್ಸ್ ಸಿಡಿಸಿದ ಟ್ರಾವಿಸ್ ಹೆಡ್ (68) ಔಟಾದರು. ಇದಾಗ್ಯೂ ಮತ್ತೊಂದೆಡೆ ಏಕಾಂಗಿ ಹೋರಾಟ ಮುಂದುವರೆಸಿದ ಮಾರ್ಕಸ್ ಸ್ಟೋಯಿನಿಸ್ 25 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಆದರೆ ಅರ್ಧಶತಕದ ಬೆನ್ನಲ್ಲೇ  ಸ್ಟೋಯಿನಿಸ್ (59) ಕ್ಲೀನ್ ಬೌಲ್ಡ್ ಆದರು.

ಕೊನೆಯ ಮೂರು ಓವರ್​ಗಳಲ್ಲಿ ಆಸ್ಟ್ರೇಲಿಯಾ ತಂಡಕ್ಕೆ 26 ರನ್​ಗಳ ಅವಶ್ಯಕತೆಯಿತ್ತು. ಈ ಹಂತದಲ್ಲಿ ಉತ್ತಮ ಜೊತೆಯಾಟ ಪ್ರದರ್ಶಿಸಿದ ಟಿಮ್ ಡೇವಿಡ್ ಹಾಗೂ ಮ್ಯಾಥ್ಯೂ ವೇಡ್ ತಂಡವನ್ನು ಗೆಲುವಿನತ್ತ ಮುನ್ನಡೆಸಿದರು. ಈ ಮೂಲಕ 19.4 ಓವರ್​ಗಳಲ್ಲಿ ಆಸ್ಟ್ರೇಲಿಯಾ ತಂಡ 181 ರನ್​ಗಳ ಗುರಿ ಮುಟ್ಟುವ ಮೂಲಕ 5 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು.

ಆಸ್ಟ್ರೇಲಿಯಾ ತಂಡದ ಈ ಗೆಲುವಿನೊಂದಿಗೆ ಇಂಗ್ಲೆಂಡ್ ತಂಡವು ದ್ವಿತೀಯ ಸುತ್ತಿಗೆ ಅರ್ಹತೆ ಪಡೆದುಕೊಂಡಿದೆ. ಒಂದು ವೇಳೆ ಈ ಮ್ಯಾಚ್​ನಲ್ಲಿ ಸ್ಕಾಟ್ಲೆಂಡ್ ಗೆದ್ದಿದ್ದರೆ ಸೂಪರ್-8 ಹಂತಕ್ಕೇರಲು ಅವಕಾಶವಿತ್ತು. ಆದರೆ ಆಸೀಸ್ ದಾಂಡಿಗರ ಭರ್ಜರಿ ಪ್ರದರ್ಶನದೊಂದಿಗೆ ಸ್ಕಾಟ್ಲೆಂಡ್ ತಂಡದ ಟಿ20 ವಿಶ್ವಕಪ್​ ಅಭಿಯಾನ ಅಂತ್ಯವಾಗಿದೆ.

ಆಸ್ಟ್ರೇಲಿಯಾ ಪ್ಲೇಯಿಂಗ್ 11: ಡೇವಿಡ್ ವಾರ್ನರ್ , ಟ್ರಾವಿಸ್ ಹೆಡ್ , ಮಿಚೆಲ್ ಮಾರ್ಷ್ (ನಾಯಕ) , ಗ್ಲೆನ್ ಮ್ಯಾಕ್ಸ್ ವೆಲ್ , ಮಾರ್ಕಸ್ ಸ್ಟೊಯಿನಿಸ್ , ಟಿಮ್ ಡೇವಿಡ್ , ಮ್ಯಾಥ್ಯೂ ವೇಡ್ (ವಿಕೆಟ್ ಕೀಪರ್) , ಮಿಚೆಲ್ ಸ್ಟಾರ್ಕ್ , ನಾಥನ್ ಎಲ್ಲಿಸ್ , ಆಡಮ್ ಝಂಪಾ , ಆಷ್ಟನ್ ಅಗರ್.

ಇದನ್ನೂ ಓದಿ: Tim Southee: 24 ಎಸೆತಗಳಲ್ಲಿ ಹೊಸ ಇತಿಹಾಸ ನಿರ್ನಿಸಿದ ಟಿಮ್ ಸೌಥಿ

ಸ್ಕಾಟ್ಲೆಂಡ್ ಪ್ಲೇಯಿಂಗ್ 11: ಜಾರ್ಜ್ ಮುನ್ಸಿ , ಮೈಕೆಲ್ ಜೋನ್ಸ್ , ಬ್ರಾಂಡನ್ ಮೆಕ್‌ಮುಲ್ಲೆನ್ , ರಿಚಿ ಬೆರಿಂಗ್ಟನ್ (ನಾಯಕ) , ಮ್ಯಾಥ್ಯೂ ಕ್ರಾಸ್ (ವಿಕೆಟ್ ಕೀಪರ್) , ಮೈಕೆಲ್ ಲೀಸ್ಕ್ , ಕ್ರಿಸ್ ಗ್ರೀವ್ಸ್ , ಮಾರ್ಕ್ ವ್ಯಾಟ್ , ಕ್ರಿಸ್ಟೋಫರ್ ಸೋಲ್ , ಬ್ರಾಡ್ ವೀಲ್ , ಸಫ್ಯಾನ್ ಷರೀಫ್.

Published On - 9:21 am, Sun, 16 June 24

ತಾಜಾ ಸುದ್ದಿ
ಕಾಲೇಜು ವಿದ್ಯಾರ್ಥಿಗಳಿಗೆ ವಿಶೇಷ ಆಫರ್ ಘೋಷಿಸಿದ ಆ್ಯಪಲ್
ಕಾಲೇಜು ವಿದ್ಯಾರ್ಥಿಗಳಿಗೆ ವಿಶೇಷ ಆಫರ್ ಘೋಷಿಸಿದ ಆ್ಯಪಲ್
ಆಹಾರ ಹೇಗೆ ಸೇವನೆ ಮಾಡಬೇಕು, ಪದ್ಧತಿ ಹೇಗಿರಬೇಕು? ಈ ವಿಡಿಯೋ ನೋಡಿ
ಆಹಾರ ಹೇಗೆ ಸೇವನೆ ಮಾಡಬೇಕು, ಪದ್ಧತಿ ಹೇಗಿರಬೇಕು? ಈ ವಿಡಿಯೋ ನೋಡಿ
ಮನಸ್ಸಿನ ನಿಯಂತ್ರಣದಿಂದ ಇಂದಿನ ಎಲ್ಲ ಒತ್ತಡವನ್ನೂ ಸರಿಮಾಡಿಕೊಳ್ಳುವಿರಿ
ಮನಸ್ಸಿನ ನಿಯಂತ್ರಣದಿಂದ ಇಂದಿನ ಎಲ್ಲ ಒತ್ತಡವನ್ನೂ ಸರಿಮಾಡಿಕೊಳ್ಳುವಿರಿ
ಹೊಸಕೋಟೆಯ ನಳಪಾಕ ಹೋಟೆಲ್​​ ಗೋಬಿಯಲ್ಲಿ ಹುಳ ಪತ್ತೆ: ಮುಂದೇನಾಯ್ತು ನೋಡಿ
ಹೊಸಕೋಟೆಯ ನಳಪಾಕ ಹೋಟೆಲ್​​ ಗೋಬಿಯಲ್ಲಿ ಹುಳ ಪತ್ತೆ: ಮುಂದೇನಾಯ್ತು ನೋಡಿ
ಜವಾಬ್ದಾರಿವಹಿಸಿಕೊಂಡವರ  ಪ್ರಮಾದಗಳಿಂದ ಪಕ್ಷಕ್ಕೆ ಹಿನ್ನಡೆಯಾಯಿತು: ಯತ್ನಾಳ್
ಜವಾಬ್ದಾರಿವಹಿಸಿಕೊಂಡವರ  ಪ್ರಮಾದಗಳಿಂದ ಪಕ್ಷಕ್ಕೆ ಹಿನ್ನಡೆಯಾಯಿತು: ಯತ್ನಾಳ್
ಪ್ರಜ್ವಲ್ ರೇವಣ್ಣಗೆ ಜುಲೈ 8ರವರೆಗೆ ನ್ಯಾಯಾಂಗ ಕಸ್ಟಡಿ, ಪುನಃ ಸೆಂಟ್ರಲ್ ಜೈಲ
ಪ್ರಜ್ವಲ್ ರೇವಣ್ಣಗೆ ಜುಲೈ 8ರವರೆಗೆ ನ್ಯಾಯಾಂಗ ಕಸ್ಟಡಿ, ಪುನಃ ಸೆಂಟ್ರಲ್ ಜೈಲ
ದೇಶ ನಮ್ಮದು, ಸ್ವಾತಂತ್ರ್ಯಕ್ಕಾಗಿ ಹೋರಾಡಿದ್ದು ಕಾಂಗ್ರೆಸ್: ಜಮೀರ್ ಅಹ್ಮದ್
ದೇಶ ನಮ್ಮದು, ಸ್ವಾತಂತ್ರ್ಯಕ್ಕಾಗಿ ಹೋರಾಡಿದ್ದು ಕಾಂಗ್ರೆಸ್: ಜಮೀರ್ ಅಹ್ಮದ್
ಬೇರೆಯವರ ಮೇಲೆ ಗೂಬೆಕೂರಿಸುವುದು ದೇವೇಗೌಡ ಕುಟುಂಬದ ಅಭ್ಯಾಸ: ಡಿಕೆ ಸುರೇಶ್
ಬೇರೆಯವರ ಮೇಲೆ ಗೂಬೆಕೂರಿಸುವುದು ದೇವೇಗೌಡ ಕುಟುಂಬದ ಅಭ್ಯಾಸ: ಡಿಕೆ ಸುರೇಶ್
ಚನ್ನಪಟ್ಟಣ ತಾಲ್ಲೂಕಿನ ಗ್ರಾಮ ಪಂಚಾಯಿತಿಗಳಲ್ಲಿ ತಾಂಡವಾಡುತ್ತಿದೆ ಲಂಚಗುಳಿತನ
ಚನ್ನಪಟ್ಟಣ ತಾಲ್ಲೂಕಿನ ಗ್ರಾಮ ಪಂಚಾಯಿತಿಗಳಲ್ಲಿ ತಾಂಡವಾಡುತ್ತಿದೆ ಲಂಚಗುಳಿತನ
ಅಂಗನವಾಡಿಗಳಲ್ಲಿ ಇನ್ಮುಂದೆ ಸರ್ಕಾರಿ ಮಾಂಟೆಸರಿ, LKG, UKG ಟೀಚಿಂಗ್
ಅಂಗನವಾಡಿಗಳಲ್ಲಿ ಇನ್ಮುಂದೆ ಸರ್ಕಾರಿ ಮಾಂಟೆಸರಿ, LKG, UKG ಟೀಚಿಂಗ್