AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

VIDEO: ಸಹ ಆಟಗಾರನನ್ನು ‘ಘೇಂಡಾ’ ಎಂದು ಕರೆದ ಬಾಬರ್: ಅಭಿಮಾನಿಗಳ ಆಕ್ರೋಶ

T20 World Cup 2024: ಪಾಕಿಸ್ತಾನ್ ತಂಡವು ಜೂನ್ 6 ರಂದು ಯುಎಸ್ಎ ವಿರುದ್ಧ ಕಣಕ್ಕಿಳಿಯುವ ಮೂಲಕ ಟಿ20 ವಿಶ್ವಕಪ್ ಅಭಿಯಾನ ಆರಂಭಿಸಲಿದೆ. ಹಾಗೆಯೇ ಜೂನ್ 9 ರಂದು ನಡೆಯಲಿರುವ ಹೈವೋಲ್ಟೇಜ್ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ್ ಮುಖಾಮುಖಿಯಾಗಲಿದ್ದು, ಈ ಪಂದ್ಯಕ್ಕೆ ನ್ಯೂಯಾರ್ಕ್​ನ ನಸ್ಸೌ ಕೌಂಟಿ ಸ್ಟೇಡಿಯಂ ಆತಿಥ್ಯವಹಿಸಲಿದೆ.

VIDEO: ಸಹ ಆಟಗಾರನನ್ನು 'ಘೇಂಡಾ' ಎಂದು ಕರೆದ ಬಾಬರ್: ಅಭಿಮಾನಿಗಳ ಆಕ್ರೋಶ
Azam Khan - Babar Azam
ಝಾಹಿರ್ ಯೂಸುಫ್
| Edited By: |

Updated on:Jun 04, 2024 | 5:57 PM

Share

ಪಾಕಿಸ್ತಾನ್ ಕ್ರಿಕೆಟ್ ತಂಡದ ನಾಯಕ ಬಾಬರ್ ಆಝಂ (Babar Azam) ಹೊಸ ವಿವಾದದಲ್ಲಿ ಸಿಲುಕಿದ್ದಾರೆ. ತನ್ನ ಸಹ ಆಟಗಾರನನ್ನು ಹೀಯಾಳಿಸುವ ಮೂಲಕ ಪಾಕ್ ನಾಯಕ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಅಂದರೆ ಪಾಕ್ ತಂಡದ ಅಭ್ಯಾಸದ ವೇಳೆ ಆಝಂ ಖಾನ್ ಅವರನ್ನು ಬಾಬರ್ ಘೇಂಡಾ (ಘೇಂಡಾಮೃಗ) ಎಂದು ಕರೆದಿದ್ದಾರೆ.

ದಢೂತಿ ದೇಹ ಹೊಂದಿರುವ ಆಝಂ ಖಾನ್ ಅವರನ್ನು ಬಾಬರ್ ಆಝಂ ಘೇಂಡಾಮೃಗಕ್ಕೆ ಹೋಲಿಸಿರುವುದೇ ಈಗ ಹೊಸ ಚರ್ಚೆಯನ್ನು ಹುಟ್ಟುಹಾಕಿದೆ. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಇದರ ಬೆನ್ನಲ್ಲೇ ಪಾಕ್ ನಾಯಕನ ನಡೆಗೆ ಅನೇಕರು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನು ಕೆಲವರು ಬಾಬರ್ ಆಝಂ ಅವರ ಬೆಂಬಲಕ್ಕೆ ನಿಂತಿದ್ದು, ಇದು ಕೇವಲ ತಮಾಷೆಗೆ ಕರೆದಿರಬಹುದು ಎಂಬ ವಾದವನ್ನು ಮುಂದಿಟ್ಟಿದ್ದಾರೆ. ಏಕೆಂದರೆ, ಈ ಹಿಂದೆ ಆಝಂ ಖಾನ್ ಅವರನ್ನು ಟೀಕಿಸಿದಾಗ ಬಾಬರ್ ಅವರ ಬೆಂಬಲಕ್ಕೆ ನಿಂತಿದ್ದರು. ಹೀಗಾಗಿ ಆಝಂ ಖಾನ್ ಅವರನ್ನು ಹೀಯಾಳಿಸುವ ಉದ್ದೇಶದಿಂದ ಕರೆದಿರುವ ಸಾಧ್ಯತೆಯಿಲ್ಲ ಎಂದು ಅನೇಕರು ಪ್ರತಿಕ್ರಿಯಿಸಿದ್ದಾರೆ.

ಬಾಬರ್ ಆಝಂ ವಿಡಿಯೋ:

ಒಟ್ಟಿನಲ್ಲಿ ಟಿ20 ವಿಶ್ವಕಪ್​ನ ಮೊದಲ ಪಂದ್ಯಕ್ಕೂ ಮುನ್ನವೇ ಬಾಬರ್ ಆಝಂ ಹೊಸ ವಿವಾದದ ಸುಳಿಗೆ ಸಿಲುಕಿದ್ದು, ಈ ವಿವಾದಕ್ಕೆ ಏನು ಸ್ಪಷ್ಟನೆ ನೀಡಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.

ಪಾಕ್ ತಂಡದ ಮೊದಲ ಪಂದ್ಯ:

ಪಾಕಿಸ್ತಾನ್ ತಂಡವು ಜೂನ್ 6 ರಂದು ಯುಎಸ್ಎ ವಿರುದ್ಧ ಕಣಕ್ಕಿಳಿಯುವ ಮೂಲಕ ಟಿ20 ವಿಶ್ವಕಪ್ ಅಭಿಯಾನ ಆರಂಭಿಸಲಿದೆ. ಹಾಗೆಯೇ ಜೂನ್ 9 ರಂದು ನಡೆಯಲಿರುವ ಹೈವೋಲ್ಟೇಜ್ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ್ ಮುಖಾಮುಖಿಯಾಗಲಿದ್ದು, ಈ ಪಂದ್ಯಕ್ಕೆ ನ್ಯೂಯಾರ್ಕ್​ನ ನಸ್ಸೌ ಕೌಂಟಿ ಸ್ಟೇಡಿಯಂ ಆತಿಥ್ಯವಹಿಸಲಿದೆ.

ಪಾಕಿಸ್ತಾನ್ ತಂಡದ ವೇಳಾಪಟ್ಟಿ:

ಇದನ್ನೂ ಓದಿ: Anrich Nortje: 18 ಡಾಟ್ ಬಾಲ್, 4 ವಿಕೆಟ್: ವಿಶ್ವ ದಾಖಲೆ ಬರೆದ ಅನ್ರಿಕ್ ನೋಕಿಯಾ

ಪಾಕಿಸ್ತಾನ್ ​ಟಿ20 ವಿಶ್ವಕಪ್ ತಂಡ: ಬಾಬರ್ ಆಝಂ (ನಾಯಕ), ಅಬ್ರಾರ್ ಅಹ್ಮದ್, ಆಝಂ ಖಾನ್, ಫಖರ್ ಝಮಾನ್, ಹ್ಯಾರಿಸ್ ರೌಫ್, ಇಫ್ತಿಕರ್ ಅಹ್ಮದ್, ಇಮಾದ್ ವಾಸಿಂ, ಅಬ್ಬಾಸ್ ಅಫ್ರಿದಿ, ಮೊಹಮ್ಮದ್ ಅಮೀರ್, ಮೊಹಮ್ಮದ್ ರಿಝ್ವಾನ್, ನಸೀಮ್ ಶಾ, ಸೈಮ್ ಅಯೂಬ್, ಶಾದಾಬ್ ಖಾನ್, ಶಾಹೀನ್ ಶಾ ಅಫ್ರಿದಿ, ಉಸ್ಮಾನ್ ಖಾನ್.

Published On - 12:05 pm, Tue, 4 June 24

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ