ಭಾರತ- ಪಾಕ್ ಪಂದ್ಯಕ್ಕೂ ಮುನ್ನ ನ್ಯೂಯಾರ್ಕ್ ಪಿಚ್ ಬದಲಾವಣೆಗೆ ಮುಂದಾದ ಐಸಿಸಿ..!

T20 World Cup 2024: ಭಾರತ- ಪಾಕ್ ಪಂದ್ಯಕ್ಕೂ ಮುನ್ನ ಐಸಿಸಿ ಹೇಳಿಕೆ ನೀಡಿದ್ದು, ಈ ಕ್ರೀಡಾಂಗಣದ ಪಿಚ್ ನಾವೆಲ್ಲರೂ ಬಯಸಿದ ರೀತಿಯಲ್ಲಿ ವರ್ತಿಸುತ್ತಿಲ್ಲ. ಹೀಗಾಗಿ ಉಳಿದ ಪಂದ್ಯಗಳಿಗೆ ಉತ್ತಮ ಪಿಚ್‌ಗಳನ್ನು ಒದಗಿಸಲು ವಿಶ್ವ ದರ್ಜೆಯ ಮೈದಾನ ಸಿಬ್ಬಂದಿಗಳ ತಂಡ ಶ್ರಮಿಸುತ್ತಿದೆ ಎಂದಿದೆ. ಇದರರ್ಥ ಭಾರತ-ಪಾಕಿಸ್ತಾನ ಪಂದ್ಯದ ವೇಳೆ ಪಿಚ್​ನಲ್ಲಿ ಬದಲಾವಣೆಯಾಗಿರುವುದನ್ನು ನಾವು ಕಾಣಬಹುದಾಗಿದೆ.

ಭಾರತ- ಪಾಕ್ ಪಂದ್ಯಕ್ಕೂ ಮುನ್ನ ನ್ಯೂಯಾರ್ಕ್ ಪಿಚ್ ಬದಲಾವಣೆಗೆ ಮುಂದಾದ ಐಸಿಸಿ..!
ಟೀಂ ಇಂಡಿಯಾ
Follow us
|

Updated on: Jun 07, 2024 | 10:53 PM

ಟಿ20 ವಿಶ್ವಕಪ್‌ನಲ್ಲಿ (T20 World Cup 2024) ಬರುವ ಭಾನುವಾರ ಅಂದರೆ ಜೂನ್ 9 ರಂದು ಭಾರತ ಮತ್ತು ಪಾಕಿಸ್ತಾನ (India vs Pakistan) ನಡುವೆ ಈ ವಿಶ್ವಕಪ್​ನ ಹೈವೋಲ್ಟೇಜ್ ಕದನ ನಡೆಯಲಿದೆ. ಈ ಪಂದ್ಯಕ್ಕೆ ನ್ಯೂಯಾರ್ಕ್ ನಸ್ಸೌ ಕೌಂಟಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ (Nassau County Cricket Stadium) ಆತಿಥ್ಯವಹಿಸುತ್ತಿದೆ. ಉಭಯ ತಂಡಗಳ ನಡುವೆ ನಡೆಯುವ ಈ ಪಂದ್ಯಕ್ಕಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಒಂದೆಡೆ, ಟೀಂ ಇಂಡಿಯಾ 2024 ರ ಟಿ20 ವಿಶ್ವಕಪ್‌ನಲ್ಲಿ ಗೆಲುವಿನೊಂದಿಗೆ ಶುಭಾರಂಭ ಮಾಡಿದೆ. ಮತ್ತೊಂದೆಡೆ, ಪಾಕಿಸ್ತಾನ ತಂಡವು ತನ್ನ ಮೊದಲ ಪಂದ್ಯದಲ್ಲಿ ಅಮೆರಿಕ ವಿರುದ್ಧ ಹೀನಾಯ ಸೋಲು ಕಂಡಿದೆ. ಹೀಗಿರುವಾಗ ಜೂನ್ 9ರಂದು ಭಾರತ ಮತ್ತು ಪಾಕಿಸ್ತಾನ ಮುಖಾಮುಖಿಯಾಗಲಿದ್ದು, ಯಾವ ಮಟ್ಟದ ಕ್ರಿಕೆಟ್ ಪಂದ್ಯ ನಡೆಯಲಿದೆ ಎಂಬುದು ಕುತೂಹಲ ಮೂಡಿಸಿದೆ.

ನ್ಯೂಯಾರ್ಕ್ ಪಿಚ್ ಬಗ್ಗೆ ಪ್ರಶ್ನೆ

ಉಭಯ ತಂಡಗಳ ನಡುವೆ ನಡೆಯಲಿರುವ ಈ ಅಮೋಘ ಪಂದ್ಯದ ಮೇಲೆ ಇಡೀ ವಿಶ್ವವೇ ಕಣ್ಣಿಟ್ಟಿದೆ. ಅದೇ ಸಮಯದಲ್ಲಿ, ಐಸಿಸಿ ಕೂಡ ಅಭಿಮಾನಿಗಳು ರೋಚಕ ಪಂದ್ಯವನ್ನು ನೋಡಬೇಕೆಂದು ಬಯಸುತ್ತದೆ. ಹೀಗಿರುವಾಗ ಈ ಪಂದ್ಯಕ್ಕೂ ಮುನ್ನ ಐಸಿಸಿ ಪಿಚ್ ಬಗ್ಗೆ ದೊಡ್ಡ ಹೇಳಿಕೆ ನೀಡಿದೆ. ನಸ್ಸೌ ಕೌಂಟಿ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿನ ಪಿಚ್‌ಗಳು ಗುಣಮಟ್ಟದಿಂದ ಕೂಡಿಲ್ಲ ಎಂದು ಒಪ್ಪಿಕೊಂಡಿರುವ ಐಸಿಸಿ, ಮುಂಬರುವ ಪಂದ್ಯಗಳಿಗೆ ಈ ಪಿಚ್​ಗಳನ್ನು ಸುಧಾರಿಸುವ ಭರವಸೆ ನೀಡಿದೆ.

T20 World Cup 2024: ಬಾಬರ್ ಆಝಂ ಸರ್ವಾಧಿಕಾರಿ ಧೋರಣೆಯಿಂದ ಪಾಕ್ ತಂಡದಲ್ಲಿ ಒಡಕು..!

ನ್ಯೂಯಾರ್ಕ್‌ನ ಈ ಮೈದಾನದಲ್ಲಿ ನಡೆದ ಎರಡು ಪಂದ್ಯಗಳಲ್ಲಿ ಮೊದಲು ಬ್ಯಾಟ್ ಮಾಡಿದ ತಂಡಗಳು 100ಕ್ಕಿಂತ ಕಡಿಮೆ ರನ್ ಗಳಿಸಿದ್ದು, ವಿಕೆಟ್‌ನಿಂದ ಹೆಚ್ಚುವರಿ ಬೌನ್ಸ್ ಮತ್ತು ಸ್ವಿಂಗ್ ಎರಡನೇ ಇನ್ನಿಂಗ್ಸ್‌ನಲ್ಲಿ ಆಡುತ್ತಿರುವ ತಂಡಗಳನ್ನು ತೊಂದರೆಗೀಡು ಮಾಡಿದೆ. ಈ ಮೈದಾನದಲ್ಲಿ ನಡೆದ ಮೊದಲ ಪಂದ್ಯದಲ್ಲಿ ಶ್ರೀಲಂಕಾ ತಂಡ 77 ರನ್‌ಗಳಿಗೆ ಆಲೌಟ್ ಆಗಿತ್ತು. ಈ ಸಾಧಾರಣ ಮೊತ್ತವನ್ನು ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ತಂಡ 16ನೇ ಓವರ್‌ನಲ್ಲಿ ಗೆಲುವಿನ ನಗೆಬೀರಿತು. ಎರಡನೇ ಪಂದ್ಯದಲ್ಲಿ ಟೀಂ ಇಂಡಿಯಾ ಐರ್ಲೆಂಡ್ ತಂಡವನ್ನು 96 ರನ್‌ಗಳಿಗೆ ಆಲೌಟ್ ಮಾಡಿತ್ತು. ಎರಡನೇ ಇನ್ನಿಂಗ್ಸ್‌ನಲ್ಲಿ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ ಬ್ಯಾಟ್ಸ್‌ಮನ್‌ಗಳು ಈ ಪಿಚ್​ನಲ್ಲಿ ಸಾಕಷ್ಟು ಸಮಸ್ಯೆ ಎದುರಿಸಬೇಕಾಯಿತು.

ಪಿಚ್ ಸುಧಾರಿಸುವ ಹೇಳಿಕೆ ನೀಡಿದ ಐಸಿಸಿ

ಜೂನ್ 9ರಂದು ಇದೇ ಮೈದಾನದಲ್ಲಿ ಭಾರತ ತಂಡ ಪಾಕಿಸ್ತಾನವನ್ನು ಎದುರಿಸಬೇಕಾಗಿದ್ದು, ಪಂದ್ಯದ ಫಲಿತಾಂಶದಲ್ಲಿ ಪಿಚ್ ದೊಡ್ಡ ಪಾತ್ರ ವಹಿಸುವ ಆತಂಕ ಎದುರಾಗಿದೆ. ಈ ದೊಡ್ಡ ಪಂದ್ಯಕ್ಕೂ ಮುನ್ನ ಐಸಿಸಿ ಹೇಳಿಕೆ ನೀಡಿದ್ದು, ಈ ಕ್ರೀಡಾಂಗಣದ ಪಿಚ್ ನಾವೆಲ್ಲರೂ ಬಯಸಿದ ರೀತಿಯಲ್ಲಿ ವರ್ತಿಸುತ್ತಿಲ್ಲ. ಹೀಗಾಗಿ ಉಳಿದ ಪಂದ್ಯಗಳಿಗೆ ಉತ್ತಮ ಪಿಚ್‌ಗಳನ್ನು ಒದಗಿಸಲು ವಿಶ್ವ ದರ್ಜೆಯ ಮೈದಾನ ಸಿಬ್ಬಂದಿಗಳ ತಂಡ ಶ್ರಮಿಸುತ್ತಿದೆ ಎಂದಿದೆ. ಇದರರ್ಥ ಭಾರತ-ಪಾಕಿಸ್ತಾನ ಪಂದ್ಯದ ವೇಳೆ ಪಿಚ್​ನಲ್ಲಿ ಬದಲಾವಣೆಯಾಗಿರುವುದನ್ನು ನಾವು ಕಾಣಬಹುದಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಬರೋಬ್ಬರಿ 111 ಎಸೆತಗಳು... ಕೆಟ್ಟ ರೀತಿಯಲ್ಲಿ ಔಟಾದ ಕೆಎಲ್ ರಾಹುಲ್
ಬರೋಬ್ಬರಿ 111 ಎಸೆತಗಳು... ಕೆಟ್ಟ ರೀತಿಯಲ್ಲಿ ಔಟಾದ ಕೆಎಲ್ ರಾಹುಲ್