IND vs PAK: ನಿನ್ನೆಯ ಪಂದ್ಯವನ್ನು ಕಣ್ತುಂಬಿಕೊಳ್ಳಲು ಸಾಧ್ಯವಾಗಲಿಲ್ಲವೇ? ಇಲ್ಲಿದೆ ನೋಡಿ ಪೂರ್ಣ ಪಂದ್ಯದ ಝಲಕ್

IND vs PAK, T20 World Cup 2024: ಮೊದಲು ಬ್ಯಾಟಿಂಗ್ ಮಾಡಿದ ಭಾರತದ ಬ್ಯಾಟಿಂಗ್ ಅತ್ಯಂತ ಕಳಪೆಯಾಗಿತ್ತು. ಹೀಗಾಗಿ ಅನೇಕ ಭಾರತೀಯ ಅಭಿಮಾನಿಗಳು ಮ್ಯಾಚ್ ನೋಡಿರುವ ಸಾಧ್ಯತೆ ತೀರ ಕಡಿಮೆ. ಇನ್ನು ಕೆಲವರಿಗೆ ಕಾರಣಗಳಿಂದಾಗಿ ಪಂದ್ಯವನ್ನು ವೀಕ್ಷಿಸಲು ಸಾಧ್ಯವಾಗದಿರಬಹುದು. ಅಂತಹವರಿಗೆಲ್ಲ ಪಂದ್ಯದ ಝಲಕ್ ತೋರಿಸುವ ಸಲುವಾಗಿ ಐಸಿಸಿ ಈ ರೋಚಕ ಪಂದ್ಯದ ರೋಚಕ ಕ್ಷಣಗಳನ್ನು ವಿಡಿಯೋ ಮೂಲಕ ಹಂಚಿಕೊಂಡಿದೆ.

IND vs PAK: ನಿನ್ನೆಯ ಪಂದ್ಯವನ್ನು ಕಣ್ತುಂಬಿಕೊಳ್ಳಲು ಸಾಧ್ಯವಾಗಲಿಲ್ಲವೇ? ಇಲ್ಲಿದೆ ನೋಡಿ ಪೂರ್ಣ ಪಂದ್ಯದ ಝಲಕ್
ಭಾರತ- ಪಾಕಿಸ್ತಾನ
Follow us
|

Updated on:Jun 10, 2024 | 6:56 PM

ಟಿ20 ವಿಶ್ವಕಪ್​ನಲ್ಲಿ (T20 World Cup 2024) ನಿನ್ನೆ ನಡೆದ ಹೈ-ವೋಲ್ಟೇಜ್ ಪಂದ್ಯದಲ್ಲಿ ಭಾರತವು, ಪಾಕಿಸ್ತಾನವನ್ನು (India vs Pakistan) ಆರು ರನ್‌ಗಳಿಂದ ಸೋಲಿಸಿತು. ಈ ಗೆಲುವಿನೊಂದಿಗೆ ಟೀಂ ಇಂಡಿಯಾ ಸೂಪರ್ ಎಂಟಕ್ಕೇರುವ ಹಕ್ಕು ಬಲಗೊಂಡಿದೆ. ಅದೇ ವೇಳೆ ಪಾಕಿಸ್ತಾನ ತಂಡ ಹೊರಬೀಳುವ ಭೀತಿಯಲ್ಲಿದೆ. ಇದು ಕಡಿಮೆ ಸ್ಕೋರಿಂಗ್ ಪಂದ್ಯ ಆಗಿದ್ದ ಕಾರಣ ಪಂದ್ಯ ಯಾವ ಕಡೆ ತಿರುಗುತ್ತದೆ ಎಂದು ಅಭಿಮಾನಿಗಳು ಊಹಿಸಲು ಸಾಧ್ಯವಾಗಲಿಲ್ಲ. ಅದರಲ್ಲೂ ಮೊದಲು ಬ್ಯಾಟಿಂಗ್ ಮಾಡಿದ ಭಾರತದ ಬ್ಯಾಟಿಂಗ್ ಅತ್ಯಂತ ಕಳಪೆಯಾಗಿತ್ತು. ಹೀಗಾಗಿ ಅನೇಕ ಭಾರತೀಯ ಅಭಿಮಾನಿಗಳು ಮ್ಯಾಚ್ ನೋಡಿರುವ ಸಾಧ್ಯತೆ ತೀರ ಕಡಿಮೆ. ಇನ್ನು ಕೆಲವರಿಗೆ ಕಾರಣಗಳಿಂದಾಗಿ ಪಂದ್ಯವನ್ನು ವೀಕ್ಷಿಸಲು ಸಾಧ್ಯವಾಗದಿರಬಹುದು. ಅಂತಹವರಿಗೆಲ್ಲ ಪಂದ್ಯದ ಝಲಕ್ ತೋರಿಸುವ ಸಲುವಾಗಿ ಐಸಿಸಿ (ICC) ಈ ರೋಚಕ ಪಂದ್ಯದ ರೋಚಕ ಕ್ಷಣಗಳನ್ನು ವಿಡಿಯೋ ಮೂಲಕ ಹಂಚಿಕೊಂಡಿದೆ.

ಭಾರತದ ಬ್ಯಾಟಿಂಗ್ ವೈಫಲ್ಯ

ಪಂದ್ಯದ ಬಗ್ಗೆ ಹೇಳುವುದಾದರೆ.. ಈ ರೋಚಕ ಪಂದ್ಯದಲ್ಲಿ ಭಾರತ ತಂಡ ಪಾಕಿಸ್ತಾನವನ್ನು ಆರು ರನ್‌ಗಳಿಂದ ಸೋಲಿಸಿತು. ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ 19 ಓವರ್‌ಗಳಲ್ಲಿ 119 ರನ್‌ಗಳಿಗೆ ಆಲೌಟ್ ಆಯಿತು. ತಂಡದ ಪರ ರೋಹಿತ್ ಶರ್ಮಾ 13 ರನ್, ವಿರಾಟ್ ಕೊಹ್ಲಿ ನಾಲ್ಕು ರನ್, ಅಕ್ಷರ್ ಪಟೇಲ್ 20 ರನ್, ಸೂರ್ಯಕುಮಾರ್ ಯಾದವ್ ಏಳು ರನ್, ಶಿವಂ ದುಬೆ ಮೂರು ರನ್ ಗಳಿಸಿ ಔಟಾದರು. ಹಾರ್ದಿಕ್ ಪಾಂಡ್ಯ ಏಳು ರನ್ ಗಳಿಸಿದರೆ, ರವೀಂದ್ರ ಜಡೇಜಾ ಮತ್ತು ಜಸ್ಪ್ರೀತ್ ಬುಮ್ರಾ ಖಾತೆ ತೆರೆಯಲು ಸಾಧ್ಯವಾಗಲಿಲ್ಲ. ಅರ್ಷದೀಪ್ ಸಿಂಗ್ ಒಂಬತ್ತು ರನ್ ಗಳಿಸಿ ರನೌಟ್ ಆದರೆ, ಸಿರಾಜ್ ಏಳು ರನ್ ಗಳಿಸಿ ಅಜೇಯರಾಗಿ ಉಳಿದರು. ಭಾರತದ ಪರ ರಿಷಬ್ ಪಂತ್ ಗರಿಷ್ಠ 42 ರನ್ ಬಾರಿಸಿದರು. ಪಾಕ್ ಪರ ನಸೀಮ್ ಶಾ ಮತ್ತು ಹ್ಯಾರಿಸ್ ರೌಫ್ ತಲಾ ಮೂರು ವಿಕೆಟ್ ಪಡೆದರು. ಮೊಹಮ್ಮದ್ ಆಮಿರ್ ಎರಡು ವಿಕೆಟ್ ಪಡೆದರೆ, ಶಾಹೀನ್ ಅಫ್ರಿದಿ ಒಂದು ವಿಕೆಟ್ ಪಡೆದರು.

View this post on Instagram

A post shared by ICC (@icc)

ಪಂದ್ಯ ಕೈಚೆಲ್ಲಿದ ಪಾಕಿಸ್ತಾನ

ಇದಕ್ಕುತ್ತರವಾಗಿ ಗುರಿ ಬೆನ್ನಟ್ಟಿದ ಪಾಕಿಸ್ತಾನ ತಂಡ ಸುಲಭವಾಗಿ ಗೆಲ್ಲುವ ಲಕ್ಷಣಗಳಿದ್ದವು. ಒಂದು ಹಂತದಲ್ಲಿ ತಂಡ 14 ಓವರ್ ಅಂತ್ಯಕ್ಕೆ ಮೂರು ವಿಕೆಟ್‌ ಕಳೆದುಕೊಂಡು 80 ರನ್ ಕಲೆಹಾಕಿತ್ತು. ಆದರೆ ರಿಜ್ವಾನ್-ಶಾದಾಬ್ ಔಟಾದ ಬಳಿಕ ಪಂದ್ಯ ತಿರುವು ಪಡೆಯಿತು. ಜಸ್ಪ್ರೀತ್ ಬುಮ್ರಾ 19ನೇ ಓವರ್‌ನಲ್ಲಿ ಬೌಲಿಂಗ್ ಮಾಡಲು ಬಂದು ಕೇವಲ ಮೂರು ರನ್ ನೀಡಿ ಇಫ್ತಿಕರ್ ವಿಕೆಟ್ ಪಡೆದರು. 20ನೇ ಓವರ್‌ನಲ್ಲಿ ಪಾಕಿಸ್ತಾನ ಗೆಲುವಿಗೆ 18 ರನ್‌ಗಳ ಅಗತ್ಯವಿತ್ತು. ಆದರೆ, ಅರ್ಷದೀಪ್ ಕೇವಲ 11 ರನ್ ನೀಡಿ ಇಮಾದ್ ವಾಸಿಮ್ ವಿಕೆಟ್ ಪಡೆದರು.

ಪಾಕಿಸ್ತಾನ ಪರ ರಿಜ್ವಾನ್ ಗರಿಷ್ಠ 31 ರನ್ ಗಳಿಸಿದರೆ, ಬಾಬರ್ ಆಝಂ 13 ರನ್, ಉಸ್ಮಾನ್ ಖಾನ್ 13 ರನ್, ಫಖರ್ ಜಮಾನ್ 13 ರನ್ ಮತ್ತು ಇಮಾದ್ ವಾಸಿಮ್ 15 ರನ್ ಗಳಿಸಿ ಔಟಾದರು. ಶಾದಾಬ್ ಖಾನ್ ನಾಲ್ಕು ರನ್, ಇಫ್ತಿಕರ್ ಅಹ್ಮದ್ ಐದು ರನ್ ಗಳಿಸಲಷ್ಟೇ ಶಕ್ತರಾದರೆ, ನಸೀಮ್ ಶಾ 10 ರನ್ ಗಳಿಸಿ ಅಜೇಯರಾಗಿ ಉಳಿದರು. ಭಾರತದ ಪರ ಬುಮ್ರಾ ಮೂರು ವಿಕೆಟ್ ಪಡೆದು ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರೆ, ಹಾರ್ದಿಕ್ ಎರಡು ವಿಕೆಟ್, ಅರ್ಷದೀಪ್ ಮತ್ತು ಅಕ್ಷರ್ ತಲಾ ಒಂದು ವಿಕೆಟ್ ಪಡೆದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:56 pm, Mon, 10 June 24

ತಾಜಾ ಸುದ್ದಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ
ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ