AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2024: ಸೆಮಿಫೈನಲ್‌ ಪಂದ್ಯಗಳು ಮಳೆಯಿಂದ ರದ್ದಾದರೆ ಯಾವ 2 ತಂಡಗಳು ಫೈನಲ್​ಗೇರಲಿವೆ ಗೊತ್ತಾ?

T20 World Cup 2024: ಐಸಿಸಿ ನಿಯಮಗಳ ಪ್ರಕಾರ ಸೆಮಿಫೈನಲ್ ಪಂದ್ಯದ ವೇಳೆ ಮಳೆ ಸುರಿದು ಪಂದ್ಯ ರದ್ದಾದರೆ ಅದರ ಗುಂಪಿನಲ್ಲಿ ಅಗ್ರಸ್ಥಾನದಲ್ಲಿರುವ ತಂಡ ಫೈನಲ್‌ಗೆ ಲಗ್ಗೆ ಇಡಲಿದೆ. ಗುಂಪಿನಲ್ಲಿ ಎರಡನೇ ಸ್ಥಾನ ಪಡೆಯುವ ತಂಡ ವಿಶ್ವಕಪ್‌ನಿಂದ ಹೊರಗುಳಿಯಲಿದೆ. ಇದರರ್ಥ 2 ಗುಂಪುಗಳಲ್ಲಿ ಅಗ್ರಸ್ಥಾನದಲ್ಲಿರುವ ಭಾರತ ಹಾಗೂ ದಕ್ಷಿಣ ಆಫ್ರಿಕಾ ಫೈನಲ್ ಆಡಲಿವೆ.

T20 World Cup 2024: ಸೆಮಿಫೈನಲ್‌ ಪಂದ್ಯಗಳು ಮಳೆಯಿಂದ ರದ್ದಾದರೆ ಯಾವ 2 ತಂಡಗಳು ಫೈನಲ್​ಗೇರಲಿವೆ ಗೊತ್ತಾ?
ಟಿ20 ವಿಶ್ವಕಪ್ ಸೆಮಿಫೈನಲ್
ಪೃಥ್ವಿಶಂಕರ
|

Updated on: Jun 26, 2024 | 4:45 PM

Share

ಟಿ20 ವಿಶ್ವಕಪ್‌ ಮುಕ್ತಾಯಕ್ಕೆ ಇನ್ನು ಕೇವಲ 3 ಪಂದ್ಯಗಳು ಮಾತ್ರ ಬಾಕಿ ಉಳಿದಿವೆ. ಈ ಮೂರು ಪಂದ್ಯಗಳಲ್ಲಿ ಎರಡು ಸೆಮಿಫೈನಲ್‌ ಪಂದ್ಯಗಳು ನಾಳೆ ಅಂದರೆ ಜೂನ್ 27 ರಂದು ನಡೆಯಲಿವೆ. ಮೊದಲ ಸೆಮಿಫೈನಲ್ ಪಂದ್ಯ ದಕ್ಷಿಣ ಆಫ್ರಿಕಾ ಮತ್ತು ಅಫ್ಘಾನಿಸ್ತಾನ ನಡುವೆ ನಡೆಯಲಿದ್ದು, ಎರಡನೇ ಸೆಮಿಫೈನಲ್‌ನಲ್ಲಿ ಭಾರತ ಮತ್ತು ಇಂಗ್ಲೆಂಡ್ ಮುಖಾಮುಖಿಯಾಗಲಿವೆ. ವೆಸ್ಟ್ ಇಂಡೀಸ್‌ನಲ್ಲಿ ನಡೆದ ಸೂಪರ್ 8 ಸುತ್ತಿನ ಹಲವು ಪಂದ್ಯಗಳಿಗೆ ಮಳೆ ಹಾಜರಿ ಹಾಕಿತ್ತು. ಹಾಗಾಗಿ ಸೆಮಿಫೈನಲ್‌ ಪಂದ್ಯಕ್ಕೂ ಮಳೆಯ ಅವಕೃಪೆ ಎದುರಾಗುವ ಸಾಧ್ಯತೆಗಳಿವೆ. ವೇಳಾಪಟ್ಟಿಯ ಪ್ರಕಾರ ಮೊದಲ ಸೆಮಿಫೈನಲ್‌ ಫೈನಲ್ ಪಂದ್ಯಕ್ಕೆ ಮೀಸಲು ದಿನವಿದೆ. ಆದರೆ ಎರಡನೇ ಸೆಮಿಫೈನಲ್‌ ಪಂದ್ಯಕ್ಕೆ ಮೀಸಲು ದಿನವಿಲ್ಲ. ಹೀಗಾಗಿ ಈ ಪಂದ್ಯ ನಾಳೆಯೇ ನಡೆಯಬೇಕಿದೆ. ಒಂದು ವೇಳೆ ಈ ಎರಡೂ ಸೆಮಿಫೈನಲ್‌ ಪಂದ್ಯಗಳು ಮಳೆಯಿಂದಾಗಿ ರದ್ದಾದರೆ ಯಾವ ತಂಡಗಳಿಗೆ ಲಾಭ? ಯಾವ ತಂಡಗಳು ಫೈನಲ್​ಗೆ ಹೋಗುತ್ತವೆ ಎಂಬ ಪ್ರಶ್ನೆ ಅಭಿಮಾನಿಗಳ ಮನದಲ್ಲಿ ಮೂಡಿದೆ.

ಮಳೆ ಬಂದರೆ ಯಾವೆರಡು ತಂಡಗಳಿಗೆ ಲಾಭ?

ವಿಶ್ವಕಪ್‌ನ ಮೊದಲ ಸೆಮಿಫೈನಲ್ ಪಂದ್ಯ ದಕ್ಷಿಣ ಆಫ್ರಿಕಾ ಮತ್ತು ಅಫ್ಘಾನಿಸ್ತಾನ ನಡುವೆ ಟ್ರಿನಿಡಾಡ್‌ನ ಬ್ರಿಯಾನ್ ಲಾರಾ ಸ್ಟೇಡಿಯಂನಲ್ಲಿ ಭಾರತೀಯ ಕಾಲಮಾನ ಬೆಳಿಗ್ಗೆ 6 ಗಂಟೆಗೆ ನಡೆಯಲಿದೆ. ಸದ್ಯ ಗುಂಪು-2ರಲ್ಲಿ ದಕ್ಷಿಣ ಆಫ್ರಿಕಾ ಮೊದಲ ಸ್ಥಾನದಲ್ಲಿದ್ದು, ಅಫ್ಘಾನಿಸ್ತಾನ ಎರಡನೇ ಸ್ಥಾನದಲ್ಲಿದೆ. ಒಂದು ವೇಳೆ ಮಳೆಯಿಂದಾಗಿ ಪಂದ್ಯ ರದ್ದುಗೊಂಡರೆ ಈ ಎರಡು ತಂಡಗಳಲ್ಲಿ ಯಾರು ಫೈನಲ್‌ಗೆ ಲಗ್ಗೆ ಇಡಬಹುದು ಎಂಬುದು ಈಗ ದೊಡ್ಡ ಪ್ರಶ್ನೆಯಾಗಿದೆ.

ICC T20I rankings: ಟಿ20 ರ‍್ಯಾಂಕಿಂಗ್​ನಲ್ಲಿ ಸೂರ್ಯನ ಅಧಿಪತ್ಯ ಅಂತ್ಯ..! ಅಗ್ರಸ್ಥಾನಕ್ಕೇರಿದ್ಯಾರು ಗೊತ್ತಾ?

ಐಸಿಸಿ ನಿಯಮಗಳ ಪ್ರಕಾರ ಸೆಮಿಫೈನಲ್ ಪಂದ್ಯದ ವೇಳೆ ಮಳೆ ಸುರಿದು ಪಂದ್ಯ ರದ್ದಾದರೆ ಅದರ ಗುಂಪಿನಲ್ಲಿ ಅಗ್ರಸ್ಥಾನದಲ್ಲಿರುವ ತಂಡ ಫೈನಲ್‌ಗೆ ಲಗ್ಗೆ ಇಡಲಿದೆ. ಗುಂಪಿನಲ್ಲಿ ಎರಡನೇ ಸ್ಥಾನ ಪಡೆಯುವ ತಂಡ ವಿಶ್ವಕಪ್‌ನಿಂದ ಹೊರಗುಳಿಯಲಿದೆ. ಇದೇ ಪರಿಸ್ಥಿತಿ ಭಾರತ ಮತ್ತು ಇಂಗ್ಲೆಂಡ್‌ ನಡುವಿನ ಪಂದ್ಯಕ್ಕೂ ಅನ್ವಯಿಸುತ್ತದೆ. ಈ ಎರಡೂ ತಂಡಗಳ ನಡುವಿನ ಹೈವೋಲ್ಟೇಜ್ ಪಂದ್ಯಕ್ಕೆ ಗಯಾನಾದ ಪ್ರಾವಿಡೆನ್ಸ್ ಕ್ರೀಡಾಂಗಣ ಆತಿಥ್ಯವಹಿಸುತ್ತಿದೆ. ಒಂದು ವೇಳೆ ಮಳೆಯಿಂದಾಗಿ ಈ ಪಂದ್ಯ ರದ್ದಾದರೆ, ಟೀಂ ಇಂಡಿಯಾ ನೇರವಾಗಿ ಫೈನಲ್‌ಗೆ ಪ್ರವೇಶಿಸಲಿದ್ದು, ಇಂಗ್ಲೆಂಡ್ ತಂಡ ವಿಶ್ವಕಪ್‌ನಿಂದ ಹೊರಬೀಳಲಿದೆ.

ಸೆಮಿಫೈನಲ್ ಪ್ರಯಾಣ ಹೀಗಿತ್ತು

ನಿನ್ನೆ ನಡೆದ ರೋಚಕ ಪಂದ್ಯದಲ್ಲಿ ಅಫ್ಘಾನಿಸ್ತಾನ, ಬಾಂಗ್ಲಾದೇಶವನ್ನು ಸೋಲಿಸಿ ಸೆಮಿಫೈನಲ್ ಪ್ರವೇಶಿಸಿದೆ. ಅಫ್ಘಾನಿಸ್ತಾನದ ಗೆಲುವಿನೊಂದಿಗೆ ಆಸ್ಟ್ರೇಲಿಯಾ ಮತ್ತು ಬಾಂಗ್ಲಾದೇಶ ಟೂರ್ನಿಯಿಂದ ಹೊರಬಿದ್ದಿವೆ. ಇತ್ತ ಆಸ್ಟ್ರೇಲಿಯಾವನ್ನು ಸೋಲಿಸುವ ಮೂಲಕ ಟೀಂ ಇಂಡಿಯಾ ಸೆಮಿಫೈನಲ್‌ಗೆ ಅರ್ಹತೆ ಪಡೆದಿದೆ. ಇಂಗ್ಲೆಂಡ್ ತಂಡವನ್ನು ಸೋಲಿಸಿ ದಕ್ಷಿಣ ಆಫ್ರಿಕಾ ಸೆಮಿಫೈನಲ್‌ನಲ್ಲಿ ಸ್ಥಾನ ಪಡೆದಿದ್ದರೆ, ಇಂಗ್ಲೆಂಡ್ ಅಮೆರಿಕ ತಂಡವನ್ನು ಸೋಲಿಸಿ ಸೆಮಿಫೈನಲ್‌ಗೆ ಲಗ್ಗೆ ಇಟ್ಟಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ