AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs BAN: ಭಾರತ- ಬಾಂಗ್ಲಾ ಪಂದ್ಯ ನಡೆಯಲ್ಲಿರುವ ಆಂಟಿಗುವಾ ಪಿಚ್ ಯಾರಿಗೆ ಸಹಕಾರಿ?

T20 World Cup 2024, IND vs BAN: ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯವು ಆಂಟಿಗುವಾದ ನಾರ್ತ್ ಸೌಂಡ್‌ನ ಸರ್ ವಿವಿಯನ್ ರಿಚರ್ಡ್ಸ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಇಲ್ಲಿನ ಪಿಚ್ ಬಗ್ಗೆ ಹೇಳುವುದಾದರೆ ಈ ಪಿಚ್​ ಬ್ಯಾಟ್ಸ್​ಮನ್​ಗಳ ಸ್ವರ್ಗ ಎನಿಸಿಕೊಂಡಿದೆ. ಇಂತಹ ಪರಿಸ್ಥಿತಿಯಲ್ಲಿ ಎಲ್ಲರೂ ಭಾರತದ ಬ್ಯಾಟ್ಸ್‌ಮನ್‌ಗಳಿಂದ ದೊಡ್ಡ ಇನ್ನಿಂಗ್ಸ್‌ಗಳನ್ನು ನಿರೀಕ್ಷಿಸಲಿದ್ದಾರೆ.

IND vs BAN: ಭಾರತ- ಬಾಂಗ್ಲಾ ಪಂದ್ಯ ನಡೆಯಲ್ಲಿರುವ ಆಂಟಿಗುವಾ ಪಿಚ್ ಯಾರಿಗೆ ಸಹಕಾರಿ?
ಆ್ಯಂಟಿಗುವಾ ಪಿಚ್
ಪೃಥ್ವಿಶಂಕರ
|

Updated on: Jun 21, 2024 | 10:20 PM

Share

ಟಿ20 ವಿಶ್ವಕಪ್ 2024 (T20 World Cup 2024) ರ ಸೂಪರ್ 8 ಸುತ್ತಿನಲ್ಲಿ ಟೀಮ್ ಇಂಡಿಯಾ ತನ್ನ ಮುಂದಿನ ಪಂದ್ಯವನ್ನು ಬಾಂಗ್ಲಾದೇಶ (IND vs BAN) ವಿರುದ್ಧ ಜೂನ್ 22ರ ಶನಿವಾರದಂದು ಆಂಟಿಗುವಾದ ಸರ್ ವಿವಿಯನ್ ರಿಚರ್ಡ್ಸ್ ಕ್ರೀಡಾಂಗಣದಲ್ಲಿ ಆಡಲಿದೆ. ಈ ಸುತ್ತಿನಲ್ಲಿ ಭಾರತ ತನ್ನ ಮೊದಲ ಪಂದ್ಯದಲ್ಲಿ ಅಫ್ಘಾನಿಸ್ತಾನ ವಿರುದ್ಧ ಅದ್ಭುತ ಜಯ ಸಾಧಿಸಿತ್ತು. ಇದೀಗ ಭಾರತ ತಂಡ ತನ್ನ ಎರಡನೇ ಪಂದ್ಯದಲ್ಲಿ ಬಾಂಗ್ಲಾದೇಶವನ್ನು ಎದುರಿಸಲಿದೆ. ಹಾಗಾದರೆ ಈ ಪಂದ್ಯಕ್ಕೆ ಆತಿಥ್ಯವಹಿಸುತ್ತಿರುವ ಆಂಟಿಗುವಾ ಪಿಚ್ ಹೇಗಿರಲಿದೆ (Antigua Pitch Report) ಎಂಬುದನ್ನು ನೋಡುವುದಾದರೆ..

ಆಂಟಿಗುವಾ ಪಿಚ್ ಹೇಗಿರಲಿದೆ?

ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯವು ಆಂಟಿಗುವಾದ ನಾರ್ತ್ ಸೌಂಡ್‌ನ ಸರ್ ವಿವಿಯನ್ ರಿಚರ್ಡ್ಸ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಇಲ್ಲಿನ ಪಿಚ್ ಬಗ್ಗೆ ಹೇಳುವುದಾದರೆ ಈ ಪಿಚ್​ ಬ್ಯಾಟ್ಸ್​ಮನ್​ಗಳ ಸ್ವರ್ಗ ಎನಿಸಿಕೊಂಡಿದೆ. ಇಂತಹ ಪರಿಸ್ಥಿತಿಯಲ್ಲಿ ಎಲ್ಲರೂ ಭಾರತದ ಬ್ಯಾಟ್ಸ್‌ಮನ್‌ಗಳಿಂದ ದೊಡ್ಡ ಇನ್ನಿಂಗ್ಸ್‌ಗಳನ್ನು ನಿರೀಕ್ಷಿಸಲಿದ್ದಾರೆ. ಇಲ್ಲಿ, 2024 ರ ಟಿ20 ವಿಶ್ವಕಪ್‌ನಲ್ಲಿ ಇದುವರೆಗೆ 6 ಪಂದ್ಯಗಳನ್ನು ಆಡಲಾಗಿದ್ದು, ಇದರಲ್ಲಿ ಗುರಿಯನ್ನು ಬೆನ್ನಟ್ಟಿದ ತಂಡವು 4 ಪಂದ್ಯಗಳಲ್ಲಿ ಗೆದ್ದಿದೆ, ಕೇವಲ 2 ಪಂದ್ಯಗಳಲ್ಲಿ ಮಾತ್ರ ಮೊದಲು ಬ್ಯಾಟ್ ಮಾಡಿದ ತಂಡ ಗೆಲುವು ಸಾಧಿಸಿದೆ.

ಆಂಟಿಗುವಾದ ಈ ಮೈದಾನದಲ್ಲಿ ಇದುವರೆಗೆ 19 ಟಿ20 ಪಂದ್ಯಗಳು ನಡೆದಿದ್ದು, ಇವುಗಳಲ್ಲಿ ಮೊದಲು ಬ್ಯಾಟ್ ಮಾಡಿದ ತಂಡ 12 ಪಂದ್ಯಗಳನ್ನು ಗೆದ್ದಿದ್ದರೆ, ಗುರಿ ಬೆನ್ನಟ್ಟಿದ ತಂಡ 7 ಬಾರಿ ಪಂದ್ಯ ಗೆದ್ದಿದೆ.

IND vs BAN: ಭಾರತ- ಬಾಂಗ್ಲಾ ನಡುವೆ ಹೈವೋಲ್ಟೇಜ್ ಕದನ; ಪಂದ್ಯಕ್ಕೆ ಮಳೆಯ ಆತಂಕ

ಭಾರತದ ಮೇಲುಗೈ

ಭಾರತ ಮತ್ತು ಬಾಂಗ್ಲಾದೇಶ ನಡುವೆ ಟಿ20 ಕ್ರಿಕೆಟ್‌ನಲ್ಲಿ ಇಲ್ಲಿಯವರೆಗೆ ಒಟ್ಟು 13 ಪಂದ್ಯಗಳು ನಡೆದಿವೆ. ಈ ಅವಧಿಯಲ್ಲಿ ಭಾರತ 12 ಪಂದ್ಯಗಳನ್ನು ಗೆದ್ದಿದ್ದು, ಬಾಂಗ್ಲಾದೇಶ ತಂಡ ಕೇವಲ ಒಂದು ಪಂದ್ಯವನ್ನು ಗೆದ್ದಿದೆ. ಹೀಗಾಗಿ ಬಾಂಗ್ಲಾದೇಶ ವಿರುದ್ಧ ಭಾರತವೇ ಮೇಲುಗೈ ಸಾಧಿಸಿರುವುದು ಸ್ಪಷ್ಟವಾಗಿದೆ.

ಪಂದ್ಯ ಎಷ್ಟು ಗಂಟೆಗೆ ಪ್ರಾರಂಭವಾಗುತ್ತದೆ?

ಸೂಪರ್-8 ಸುತ್ತಿನ ಕೆಲವು ಪಂದ್ಯಗಳು ಬೆಳಿಗ್ಗೆ 6 ಗಂಟೆಗೆ ನಡೆಯುತ್ತಿದ್ದರೆ, ಕೆಲವು ಪಂದ್ಯಗಳು ರಾತ್ರಿ 8 ಗಂಟೆಗೆ ನಡೆಯುತ್ತವೆ. ಭಾರತ ತಂಡದ ಎಲ್ಲಾ ಪಂದ್ಯಗಳು ರಾತ್ರಿ 8 ಗಂಟೆಗೆ ಪ್ರಾರಂಭವಾಗುತ್ತವೆ. ಇಂತಹ ಪರಿಸ್ಥಿತಿಯಲ್ಲಿ ಜೂನ್ 22 ರಂದು ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯವೂ ರಾತ್ರಿ 8 ಗಂಟೆಗೆ ಆರಂಭವಾಗಲಿದೆ.

ಸಂಭಾವ್ಯ ಉಭಯ ತಂಡಗಳು

ಭಾರತ: ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ರಿಷಬ್ ಪಂತ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್/ ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ.

ಬಾಂಗ್ಲಾದೇಶ: ತಂಜೀದ್ ಹಸನ್, ಲಿಟನ್ ದಾಸ್ (ವಿಕೆಟ್ ಕೀಪರ್), ನಜ್ಮುಲ್ ಹೊಸೈನ್ ಶಾಂಟೊ (ನಾಯಕ), ಶಕೀಬ್ ಅಲ್ ಹಸನ್, ತೌಹೀದ್ ಹೃದಯೋಯ್, ಮಹಮ್ಮದುಲ್ಲಾ, ಮಹೇದಿ ಹಸನ್, ರಿಶಾದ್ ಹೊಸೈನ್, ತಸ್ಕಿನ್ ಅಹ್ಮದ್, ತಂಜೀಮ್ ಹಸನ್ ಶಕೀಬ್, ಮುಸ್ತಾಫಿಜುರ್ ರಹಮಾನ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ