AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಸೇಡಿನ ಸಮರದಲ್ಲಿ ಆಂಗ್ಲರನ್ನು ಬಗ್ಗುಬಡಿದು ಫೈನಲ್​ಗೇರಿದ ಭಾರತ..!

T20 World Cup 2024 IND vs ENG: ಗಯಾನಾದ ಪ್ರಾವಿಡೆನ್ಸ್ ಸ್ಟೇಡಿಯಂನಲ್ಲಿ ನಡೆದ ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟಿ20 ವಿಶ್ವಕಪ್​ನ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ 68 ರನ್​​ಗಳಿಂದ ಗೆದ್ದು ಫೈನಲ್​ ಪ್ರವೇಶಿಸಿದೆ. ಟಿ20 ವಿಶ್ವಕಪ್ ಇತಿಹಾಸದಲ್ಲಿ ಇದು ಮೂರನೇ ಬಾರಿಗೆ ಟೀಂ ಇಂಡಿಯಾ ಫೈನಲ್​ಗೇರಿದ ಸಾಧನೆ ಮಾಡಿದೆ.

IND vs ENG: ಸೇಡಿನ ಸಮರದಲ್ಲಿ ಆಂಗ್ಲರನ್ನು ಬಗ್ಗುಬಡಿದು ಫೈನಲ್​ಗೇರಿದ ಭಾರತ..!
ಟೀಂ ಇಂಡಿಯಾ
ಪೃಥ್ವಿಶಂಕರ
|

Updated on:Jun 28, 2024 | 1:55 AM

Share

ಗಯಾನಾದ ಪ್ರಾವಿಡೆನ್ಸ್ ಸ್ಟೇಡಿಯಂನಲ್ಲಿ ನಡೆದ ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟಿ20 ವಿಶ್ವಕಪ್​ನ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ 68 ರನ್​​ಗಳಿಂದ ಗೆದ್ದು ಫೈನಲ್​ ಪ್ರವೇಶಿಸಿದೆ. ಟಿ20 ವಿಶ್ವಕಪ್ ಇತಿಹಾಸದಲ್ಲಿ ಇದು ಮೂರನೇ ಬಾರಿಗೆ ಟೀಂ ಇಂಡಿಯಾ ಫೈನಲ್​ಗೇರಿದ ಸಾಧನೆ ಮಾಡಿದೆ. ಇದರ ಜೊತೆಗೆ ಅಜೇಯ ತಂಡವಾಗಿ ಫೈನಲ್​ಗೆ ಲಗ್ಗೆ ಇಟ್ಟಿರುವ ಟೀಂ ಇಂಡಿಯಾ, ಕಳೆದ ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಇದೇ ಇಂಗ್ಲೆಂಡ್ ವಿರುದ್ಧ ಎದುರಿಸಿದ್ದ 10 ವಿಕೆಟ್​ಗಳ ಹೀನಾಯ ಸೋಲಿಗೆ ಸರಿಯಾಗಿ ಸೇಡು ತೀರಿಸಿಕೊಂಡಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ ನಿಗದಿತ 20 ಓವರ್​ಗಳಲ್ಲಿ 171 ರನ್ ಕಲೆಹಾಕಿತು. ಆದರೆ ಈ ಗುರಿ ಬೆನ್ನಟ್ಟಿದ ಇಂಗ್ಲೆಂಡ್ ತಂಡ 16.4 ಓವರ್‌ಗಳಲ್ಲಿ 103 ರನ್‌ಗಳಿಗೆ ಆಲೌಟ್ ಆಯಿತು. ಇದೀಗ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ, ದಕ್ಷಿಣ ಆಫ್ರಿಕಾ ತಂಡವನ್ನು ಎದುರಿಸಲಿದೆ.

ಮತ್ತೆ ಕೊಹ್ಲಿ ವಿಫಲ

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾಗೆ ಎಂದಿನಂತೆ ನಿರೀಕ್ಷಿತ ಆರಂಭ ಸಿಗಲಿಲ್ಲ. ಟೀಂ ಇಂಡಿಯಾ 19 ರನ್ ಗಳಿಸಿದ್ದಾಗ ವಿರಾಟ್ ಕೊಹ್ಲಿ 9 ರನ್ ಗಳಿಸಿ ಔಟಾದರು. ಆ ಬಳಿಕ ರಿಷಬ್ ಪಂತ್ ಕೂಡ 4 ರನ್ ಗಳಿಸಿ ಪೆವಿಲಿಯನ್​ಗೆ ಮರಳಿದರು. ಹೀಗಾಗಿ ಟೀಂ ಇಂಡಿಯಾ ಮೊದಲ 6 ಓವರ್​ಗಳಲ್ಲಿ 40 ರನ್​ ಕಲೆಹಾಕುವಷ್ಟರಲ್ಲಿ ಪ್ರಮುಖ 2 ವಿಕೆಟ್ ಕಳೆದುಕೊಂಡಿತು. ಆದರೆ ಆ ನಂತರ ರೋಹಿತ್ ಶರ್ಮಾ ಮತ್ತು ಸೂರ್ಯಕುಮಾರ್ ಯಾದವ್ ಇಬ್ಬರೂ ಟೀಮ್ ಇಂಡಿಯಾದ ಇನ್ನಿಂಗ್ಸ್ ನಿಭಾಯಿಸಿದಲ್ಲದೆ, ಈ ಇಬ್ಬರೂ 73 ರನ್‌ಗಳ ಜೊತೆಯಾಟವನ್ನು ಹಂಚಿಕೊಂಡರು.

ಭಾರತಕ್ಕೆ ರೋಹಿತ್- ಸೂರ್ಯ ಆಸರೆ

ಇದೇ ವೇಳೆ ರೋಹಿತ್ 32ನೇ ಅರ್ಧಶತಕ ದಾಖಲಿಸಿದರು. ಆದರೆ ಆ ನಂತರ ರೋಹಿತ್ ಮತ್ತು ಸೂರ್ಯ ಜೋಡಿ ಬೇಗನೆ ಮುರಿದುಬಿತ್ತು. ರೋಹಿತ್ 57 ರನ್ ಬಾರಿಸಿ ಇನ್ನಿಂಗ್ಸ್ ಮುಗಿಸಿದರೆ, ಸೂರ್ಯಕುಮಾರ್ 47 ರನ್​ಗಳ ಕಾಣಿಕೆ ನೀಡಿದರು. ನಂತರ ರವೀಂದ್ರ ಜಡೇಜಾ ಔಟಾಗದೆ 17 ರನ್ ಬಾರಿಸಿದರೆ, ಹಾರ್ದಿಕ್ ಪಾಂಡ್ಯ 23 ರನ್​ಗಳ ಸ್ಫೋಟಕ ಇನ್ನಿಂಗ್ಸ್ ಕಟ್ಟಿದರು. ಅಕ್ಷರ್ ಪಟೇಲ್ 10 ರನ್ ಬಾರಿಸಿದರೆ, ಅರ್ಷದೀಪ್ ಸಿಂಗ್ ಅಜೇಯ 1 ರನ್​ಗಳ ಕಾಣಿಕೆ ನೀಡಿದರು. ಇಂಗ್ಲೆಂಡ್ ಪರ ಬೌಲ್ ಮಾಡಿದ 6 ಬೌಲರ್​ಗಳ ಪೈಕಿ ನಾಲ್ವರು ತಲಾ 1 ವಿಕೆಟ್ ಪಡೆದರೆ, ಕ್ರಿಸ್ ಜೋರ್ಡಾನ್ ಅತಿ ಹೆಚ್ಚು 3 ವಿಕೆಟ್ ಪಡೆದರು.

ಇಂಗ್ಲೆಂಡ್ ಪೆವಿಲಿಯನ್ ಪರೇಡ್

ಗೆಲುವಿಗೆ 171 ರನ್​ಗಳ ಗುರಿ ಬೆನ್ನಟ್ಟಿದ ಇಂಗ್ಲೆಂಡ್​ಗೆ ಮೊದಲ ವಿಕೆಟ್​ಗೆ 26 ರನ್​​ಗಳ ಜೊತೆಯಾಟ ಸಿಕ್ಕಿತು. ಆದರೆ ನಾಯಕ ಜೋಸ್ ಬಟ್ಲರ್ ವಿಕೆಟ್ ಪತನದೊಂದಿಗೆ ಇಂಗ್ಲೆಂಡ್ ತಂಡದ ಪೆವಿಲಿಯನ್ ಪರೇಡ್ ಆರಂಭವಾಯಿತು. ಆಂಗ್ಲ ತಂಡದ ಪರ ಹ್ಯಾರಿ ಬ್ರೂಕ್ 25 ರನ್ ಬಾರಿಸಿ ಅಗ್ರ ಸ್ಕೋರರ್ ಎನಿಸಿಕೊಂಡರೆ, ಜೋಸ್ ಬಟ್ಲರ್ 23 ರನ್​ಗಳ ಕಾಣಿಕೆ ನೀಡಿದರು. ಕೊನೆಯಲ್ಲಿ ವೇಗಿ ಜೋಫ್ರಾ ಆರ್ಚರ್ 21 ರನ್​ಗಳ ಸ್ಫೋಟಕ ಇನ್ನಿಂಗ್ಸ್ ಆಡಿದರು. ಉಳಿದಂತೆ ತಂಡದ ಯಾವೊಬ್ಬ ಬ್ಯಾಟರ್ ಕೂಡ ಒಂದಂಕಿ ದಾಟಲಿಲ್ಲ. ಭಾರತದ ಪರ  ಕುಲ್ದೀಪ್ ಯಾದವ್ 19 ರನ್ ನೀಡಿ ಮೂರು ವಿಕೆಟ್ ಪಡೆದರೆ, ಅಕ್ಷರ್ ಪಟೇಲ್ 23 ರನ್ ನೀಡಿ 3 ವಿಕೆಟ್ ಪಡೆದರು. ಅಕ್ಷರ್ ಅವರ ಪ್ರದರ್ಶನಕ್ಕಾಗಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:43 am, Fri, 28 June 24

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?