AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ಬಾರ್ಬಡೋಸ್‌ ಪ್ರಸ್ತುತ ಹವಾಮಾನ ಹೇಗಿದೆ? ಸ್ಥಳೀಯರು ನೀಡಿದ ಅಪ್​ಡೇಟ್ ಇಲ್ಲಿದೆ

IND vs SA Barbados Weather Latest Update: ಇತ್ತೀಚಿನ ಮಾಹಿತಿಯ ಪ್ರಕಾರ, ಬಾರ್ಬಡೋಸ್‌ನ ಹವಾಮಾನ ತಿಳಿಯಾಗಿದೆ, ಆದರೆ ಮೋಡ ಕವಿದ ವಾತಾವರಣ ಮುಂದುವರೆದಿದೆ. ಕೊಂಚ ಬಿಸಿಲು ಕಾಣಿಸಿಕೊಂಡಿದೆಯಾದರೂ ಗಾಳಿ ಕೂಡ ಜೋರಾಗಿ ಬೀಸುತ್ತಿದೆ. ಈ ಪಂದ್ಯ ಬಾರ್ಬಡೋಸ್‌ನಲ್ಲಿ ಸ್ಥಳೀಯ ಕಾಲಮಾನ ಬೆಳಗ್ಗೆ 10.30ಕ್ಕೆ ಆರಂಭವಾಗಲಿದೆ.

IND vs SA: ಬಾರ್ಬಡೋಸ್‌ ಪ್ರಸ್ತುತ ಹವಾಮಾನ ಹೇಗಿದೆ? ಸ್ಥಳೀಯರು ನೀಡಿದ ಅಪ್​ಡೇಟ್ ಇಲ್ಲಿದೆ
ಬಾರ್ಬಡೋಸ್‌ ಪ್ರಸ್ತುತ ಹವಾಮಾನ ವರದಿ
ಪೃಥ್ವಿಶಂಕರ
|

Updated on: Jun 29, 2024 | 6:07 PM

Share

ಕೋಟ್ಯಾಂತರ ಕ್ರಿಕೆಟ್ ಅಭಿಮಾನಿಗಳು ಬಹಳ ದಿನಗಳಿಂದ ಕಾಯುತ್ತಿದ್ದ ಕ್ಷಣ ಕೊನೆಗೂ ಬಂದಿದೆ. ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ಟಿ20 ವಿಶ್ವಕಪ್‌ನ ಫೈನಲ್ ಪಂದ್ಯ ಇನ್ನು ಕೆಲವೇ ಗಂಟೆಗಳಲ್ಲಿ ಆರಂಭವಾಗಲಿದೆ. ಭಾರತೀಯ ಕಾಲಮಾನದ ಪ್ರಕಾರ ಈ ಪಂದ್ಯ ರಾತ್ರಿ 8 ಗಂಟೆಗೆ ಆರಂಭವಾಗಲಿದೆ. ಬಾರ್ಬಡೋಸ್‌ನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ಫೈನಲ್ ಪಂದ್ಯ ನಡೆಯಲಿದೆ. ಹೀಗಿರುವಾಗ ಇಲ್ಲಿನ ವಾತಾವರಣ ಉಭಯ ತಂಡಗಳ ಟೆನ್ಷನ್ ಹೆಚ್ಚಿಸಿದೆ. ಬಾರ್ಬಡೋಸ್‌ನ ಹವಾಮಾನದ ಕುರಿತು ದೊಡ್ಡ ಅಪ್​ಡೇಟ್ ಇದೀಗ ಹೊರಬಂದಿದೆ.

ಬಾರ್ಬಡೋಸ್‌ ಹವಾಮಾನ ವರದಿ

ಇತ್ತೀಚಿನ ಮಾಹಿತಿಯ ಪ್ರಕಾರ, ಬಾರ್ಬಡೋಸ್‌ನ ಹವಾಮಾನ ತಿಳಿಯಾಗಿದೆ, ಆದರೆ ಮೋಡ ಕವಿದ ವಾತಾವರಣ ಮುಂದುವರೆದಿದೆ. ಕೊಂಚ ಬಿಸಿಲು ಕಾಣಿಸಿಕೊಂಡಿದೆಯಾದರೂ ಗಾಳಿ ಕೂಡ ಜೋರಾಗಿ ಬೀಸುತ್ತಿದೆ. ಈ ಪಂದ್ಯ ಬಾರ್ಬಡೋಸ್‌ನಲ್ಲಿ ಸ್ಥಳೀಯ ಕಾಲಮಾನ ಬೆಳಗ್ಗೆ 10.30ಕ್ಕೆ ಆರಂಭವಾಗಲಿದೆ. ಹೀಗಾಗಿ ಈ ಪಂದ್ಯದ ಮೇಲೆ ಇಬ್ಬನಿ ಪ್ರಭಾವ ಬೀರುವ ಅವಕಾಶವಿಲ್ಲ. ಆದರೆ ಒದ್ದೆಯಾದ ಔಟ್‌ಫೀಲ್ಡ್‌ನಿಂದಾಗಿ ಉಭಯ ತಂಡಗಳಿಗೂ ಸಮಸ್ಯೆ ಎದುರಾಗಬಹುದು.

ಡಿಕೆ ಅಪ್​ಡೇಟ್ ಏನು?

ಕ್ರಿಕೆಟಿಗ ಮತ್ತು ಕಾಮೆಂಟೇಟರ್ ದಿನೇಶ್ ಕಾರ್ತಿಕ್ ಕೂಡ ಬಾರ್ಬಡೋಸ್‌ನ ಇತ್ತೀಚಿನ ಪರಿಸ್ಥಿತಿಯನ್ನು ತಮ್ಮ ಸೋಶೀಯಲ್ ಮೀಡಿಯಾ ಖಾತೆಯಲ್ಲಿ ವಿಡಿಯೋ ಪೋಸ್ಟ್ ಮಾಡಿ ಹಂಚಿಕೊಂಡಿದ್ದಾರೆ. ಇದರಲ್ಲಿ ಹವಾಮಾನವು ಸಾಕಷ್ಟು ಸ್ಪಷ್ಟವಾಗಿ ಕಾಣುತ್ತದೆ. ಕಾರ್ತಿಕ್ ಪ್ರಕಾರ, ಹವಾಮಾನವು ಸ್ಪಷ್ಟವಾಗಿದ್ದು, ಪಂದ್ಯವು ನಿಗದಿತ ಸಮಯಕ್ಕೆ ಪ್ರಾರಂಭವಾಗುವ ಸಾಧ್ಯತೆಯಿದೆ.

ಮೀಸಲು ದಿನ ನಿಗದಿ

ಶುಕ್ರವಾರ ಬಾರ್ಬಡೋಸ್‌ನಲ್ಲಿ ಮಳೆಯಾಗಿದೆ. ಇದು ಅಭಿಮಾನಿಗಳ ಟೆನ್ಷನ್ ಹೆಚ್ಚಿಸಿದೆ. ಆದರೆ, ಪಂದ್ಯದ ವೇಳೆ ಶೇ.60ರಷ್ಟು ಮಳೆಯಾಗುವ ಸಾಧ್ಯತೆ ಇದೆ. ಇಂತಹ ಪರಿಸ್ಥಿತಿಯಲ್ಲಿ ಈ ಪಂದ್ಯಕ್ಕೆ ಮೀಸಲು ದಿನ ಇಡಲಾಗಿದೆ. ಅಲ್ಲದೆ, ಶನಿವಾರವೂ ಪಂದ್ಯವನ್ನು ಪೂರ್ಣಗೊಳಿಸಲು 190 ನಿಮಿಷಗಳ ಹೆಚ್ಚುವರಿ ಸಮಯ ಲಭ್ಯವಿರುತ್ತದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?