AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ಬಾರ್ಬಡೋಸ್‌ನಲ್ಲಿ ಶೇ.70 ರಷ್ಟು ಮಳೆ; ಫೈನಲ್ ಪಂದ್ಯ ರದ್ದಾದರೆ ವಿಜೇತರ ಆಯ್ಕೆ ಹೇಗೆ? ಇಲ್ಲಿದೆ ವಿವರ

IND vs SA Final, Barbados Weather Update: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಅಂತಿಮ ಪಂದ್ಯ ಬಾರ್ಬಡೋಸ್‌ನ ಬ್ರಿಡ್ಜ್‌ಟೌನ್‌ನಲ್ಲಿ ನಡೆಯಲಿದೆ. ಅದೇ ಹೊತ್ತಿಗೆ ಈ ಪಂದ್ಯದ ಮೇಲೂ ಮಳೆಯ ಛಾಯೆ ಆವರಿಸಿದೆ. weather.com ಪ್ರಕಾರ, ಜೂನ್ 29 ರಂದು ಬಾರ್ಬಡೋಸ್‌ನಲ್ಲಿ ಬೀರುಗಾಳಿ ಮತ್ತು ಭಾರೀ ಮಳೆ ನಿರೀಕ್ಷಿಸಲಾಗಿದೆ. ಪಂದ್ಯದ ವೇಳೆ ಮಳೆ ಬೀಳುವ ಸಾಧ್ಯತೆ ಶೇ.70ರಷ್ಟಿದೆ. ಹೀಗಾಗಿ ಪಂದ್ಯಕ್ಕೆ ಮಳೆ ಅಡ್ಡಿಪಡಿಸುವುದು ಖಚಿತವಾಗಿದೆ.

IND vs SA: ಬಾರ್ಬಡೋಸ್‌ನಲ್ಲಿ ಶೇ.70 ರಷ್ಟು ಮಳೆ; ಫೈನಲ್ ಪಂದ್ಯ ರದ್ದಾದರೆ ವಿಜೇತರ ಆಯ್ಕೆ ಹೇಗೆ? ಇಲ್ಲಿದೆ ವಿವರ
ಭಾರತ- ದಕ್ಷಿಣ ಆಫ್ರಿಕಾ
ಪೃಥ್ವಿಶಂಕರ
|

Updated on: Jun 28, 2024 | 4:52 PM

Share

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 2024 ರ ಟಿ20 ವಿಶ್ವಕಪ್​ನ ಫೈನಲ್ ಪಂದ್ಯ ಬಾರ್ಬಡೋಸ್‌ನಲ್ಲಿ ಜೂನ್ 29 ರಂದು ಭಾರತೀಯ ಕಾಲಮಾನ ರಾತ್ರಿ 8 ಗಂಟೆಗೆ ನಡೆಯಲಿದೆ. ಒಂದೆಡೆ ಟೀಂ ಇಂಡಿಯಾ ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್ ತಂಡವನ್ನು ಸೋಲಿಸಿ ಫೈನಲ್‌ಗೆ ಲಗ್ಗೆ ಇಟ್ಟಿದ್ದರೆ, ಮತ್ತೊಂದೆಡೆ ದಕ್ಷಿಣ ಆಫ್ರಿಕಾ ತಂಡ ಅಫ್ಘಾನಿಸ್ತಾನವನ್ನು ಸೋಲಿಸಿ ಫೈನಲ್‌ಗೆ ತಲುಪಿದೆ. ಇದೀಗ ಈ ಎರಡೂ ತಂಡಗಳು ವಿಶ್ವಕಪ್‌ನ ಫೈನಲ್‌ನಲ್ಲಿ ಮೊದಲ ಬಾರಿಗೆ ಮುಖಾಮುಖಿಯಾಗಲಿವೆ. ಸೆಮಿಫೈನಲ್ ಪಂದ್ಯಗಳಂತೆಯೇ ಫೈನಲ್ ಪಂದ್ಯದ ಮೇಲೂ ಮಳೆಯ ಛಾಯೆ ಆವರಿಸಿದೆ. ಫೈನಲ್ ಪಂದ್ಯದ ದಿನದಂದು ಬಾರ್ಬಡೋಸ್‌ನಲ್ಲಿನ ಹವಾಮಾನದ ಕುರಿತು ದೊಡ್ಡ ಅಪ್​ಡೇಟ್ ಹೊರಬಂದಿದೆ.

ಫೈನಲ್‌ ಮೇಲೂ ಮಳೆಯ ನೆರಳು

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಅಂತಿಮ ಪಂದ್ಯ ಬಾರ್ಬಡೋಸ್‌ನ ಬ್ರಿಡ್ಜ್‌ಟೌನ್‌ನಲ್ಲಿ ನಡೆಯಲಿದೆ. ಅದೇ ಹೊತ್ತಿಗೆ ಈ ಪಂದ್ಯದ ಮೇಲೂ ಮಳೆಯ ಛಾಯೆ ಆವರಿಸಿದೆ. weather.com ಪ್ರಕಾರ, ಜೂನ್ 29 ರಂದು ಬಾರ್ಬಡೋಸ್‌ನಲ್ಲಿ ಬೀರುಗಾಳಿ ಮತ್ತು ಭಾರೀ ಮಳೆ ನಿರೀಕ್ಷಿಸಲಾಗಿದೆ. ಪಂದ್ಯದ ವೇಳೆ ಮಳೆ ಬೀಳುವ ಸಾಧ್ಯತೆ ಶೇ.70ರಷ್ಟಿದೆ. ಹೀಗಾಗಿ ಪಂದ್ಯಕ್ಕೆ ಮಳೆ ಅಡ್ಡಿಪಡಿಸುವುದು ಖಚಿತವಾಗಿದೆ.

ಫೈನಲ್‌ಗೆ ಮೀಸಲು ದಿನ

ಐಸಿಸಿ ಫೈನಲ್ ಪಂದ್ಯಕ್ಕಾಗಿ ಮೀಸಲು ದಿನವನ್ನು ಸಹ ಇರಿಸಿದೆ. ಜೂನ್ 29 ರಂದು ಮಳೆಯಿಂದಾಗಿ ಪಂದ್ಯ ರದ್ದಾದರೆ ಜೂನ್ 30 ರಂದು ಫೈನಲ್ ಪಂದ್ಯ ನಡೆಯಲಿದೆ. ಇದಲ್ಲದೇ ಫೈನಲ್ ಪಂದ್ಯಕ್ಕೆ 190 ನಿಮಿಷಗಳ ಹೆಚ್ಚುವರಿ ಸಮಯವನ್ನು ಕೂಡ ಇರಿಸಲಾಗಿದೆ. ಇದರ ಹೊರತಾಗಿಯೂ, ಮೀಸಲು ದಿನದಂದು ಸಹ ಮಳೆಯಿಂದಾಗಿ ಪಂದ್ಯವನ್ನು ರದ್ದುಗೊಳಿಸಿದರೆ, ನಂತರ ಭಾರತ ಮತ್ತು ದಕ್ಷಿಣ ಆಫ್ರಿಕಾವನ್ನು ಜಂಟಿ ವಿಜೇತರೆಂದು ಘೋಷಿಸಲಾಗುತ್ತದೆ.

IND vs SA: ವಿಶ್ವ ಕಿರೀಟ ತೊಡಲು ಬಾರ್ಬಡೋಸ್​ಗೆ ಬಂದಿಳಿದ ರೋಹಿತ್ ಪಡೆ; ವಿಡಿಯೋ ನೋಡಿ

ಎರಡೂ ತಂಡಗಳು ಅಜೇಯ

ಈ ಬಾರಿಯ ವಿಶ್ವಕಪ್‌ನಲ್ಲಿ ದಕ್ಷಿಣ ಆಫ್ರಿಕಾ ಮತ್ತು ಟೀಂ ಇಂಡಿಯಾ ಒಂದೇ ಒಂದು ಪಂದ್ಯವನ್ನು ಸೋತಿಲ್ಲ. ದಕ್ಷಿಣ ಆಫ್ರಿಕಾ 8 ಪಂದ್ಯಗಳನ್ನಾಡಿದ್ದರೆ, ಟೀಂ ಇಂಡಿಯಾ 7 ಪಂದ್ಯಗಳನ್ನಾಡಿದೆ. ಟೀಂ ಇಂಡಿಯಾದ ಒಂದು ಪಂದ್ಯ ಕೂಡ ಮಳೆಯಿಂದಾಗಿ ರದ್ದಾಗಿತ್ತು. ಟೀಂ ಇಂಡಿಯಾ ಮೂರನೇ ಬಾರಿಗೆ ಟಿ20 ವಿಶ್ವಕಪ್‌ನಲ್ಲಿ ಫೈನಲ್‌ಗೆ ಲಗ್ಗೆ ಇಟ್ಟಿದೆ. ಇತ್ತ ವಿಶ್ವಕಪ್ ಆರಂಭದ ನಂತರ ದಕ್ಷಿಣ ಆಫ್ರಿಕಾ ಮೊದಲ ಬಾರಿಗೆ ಫೈನಲ್‌ಗೆ ಲಗ್ಗೆ ಇಡುವಲ್ಲಿ ಯಶಸ್ವಿಯಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?