IND vs SA: ಬಾರ್ಬಡೋಸ್‌ನಲ್ಲಿ ಶೇ.70 ರಷ್ಟು ಮಳೆ; ಫೈನಲ್ ಪಂದ್ಯ ರದ್ದಾದರೆ ವಿಜೇತರ ಆಯ್ಕೆ ಹೇಗೆ? ಇಲ್ಲಿದೆ ವಿವರ

IND vs SA Final, Barbados Weather Update: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಅಂತಿಮ ಪಂದ್ಯ ಬಾರ್ಬಡೋಸ್‌ನ ಬ್ರಿಡ್ಜ್‌ಟೌನ್‌ನಲ್ಲಿ ನಡೆಯಲಿದೆ. ಅದೇ ಹೊತ್ತಿಗೆ ಈ ಪಂದ್ಯದ ಮೇಲೂ ಮಳೆಯ ಛಾಯೆ ಆವರಿಸಿದೆ. weather.com ಪ್ರಕಾರ, ಜೂನ್ 29 ರಂದು ಬಾರ್ಬಡೋಸ್‌ನಲ್ಲಿ ಬೀರುಗಾಳಿ ಮತ್ತು ಭಾರೀ ಮಳೆ ನಿರೀಕ್ಷಿಸಲಾಗಿದೆ. ಪಂದ್ಯದ ವೇಳೆ ಮಳೆ ಬೀಳುವ ಸಾಧ್ಯತೆ ಶೇ.70ರಷ್ಟಿದೆ. ಹೀಗಾಗಿ ಪಂದ್ಯಕ್ಕೆ ಮಳೆ ಅಡ್ಡಿಪಡಿಸುವುದು ಖಚಿತವಾಗಿದೆ.

IND vs SA: ಬಾರ್ಬಡೋಸ್‌ನಲ್ಲಿ ಶೇ.70 ರಷ್ಟು ಮಳೆ; ಫೈನಲ್ ಪಂದ್ಯ ರದ್ದಾದರೆ ವಿಜೇತರ ಆಯ್ಕೆ ಹೇಗೆ? ಇಲ್ಲಿದೆ ವಿವರ
ಭಾರತ- ದಕ್ಷಿಣ ಆಫ್ರಿಕಾ
Follow us
|

Updated on: Jun 28, 2024 | 4:52 PM

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 2024 ರ ಟಿ20 ವಿಶ್ವಕಪ್​ನ ಫೈನಲ್ ಪಂದ್ಯ ಬಾರ್ಬಡೋಸ್‌ನಲ್ಲಿ ಜೂನ್ 29 ರಂದು ಭಾರತೀಯ ಕಾಲಮಾನ ರಾತ್ರಿ 8 ಗಂಟೆಗೆ ನಡೆಯಲಿದೆ. ಒಂದೆಡೆ ಟೀಂ ಇಂಡಿಯಾ ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್ ತಂಡವನ್ನು ಸೋಲಿಸಿ ಫೈನಲ್‌ಗೆ ಲಗ್ಗೆ ಇಟ್ಟಿದ್ದರೆ, ಮತ್ತೊಂದೆಡೆ ದಕ್ಷಿಣ ಆಫ್ರಿಕಾ ತಂಡ ಅಫ್ಘಾನಿಸ್ತಾನವನ್ನು ಸೋಲಿಸಿ ಫೈನಲ್‌ಗೆ ತಲುಪಿದೆ. ಇದೀಗ ಈ ಎರಡೂ ತಂಡಗಳು ವಿಶ್ವಕಪ್‌ನ ಫೈನಲ್‌ನಲ್ಲಿ ಮೊದಲ ಬಾರಿಗೆ ಮುಖಾಮುಖಿಯಾಗಲಿವೆ. ಸೆಮಿಫೈನಲ್ ಪಂದ್ಯಗಳಂತೆಯೇ ಫೈನಲ್ ಪಂದ್ಯದ ಮೇಲೂ ಮಳೆಯ ಛಾಯೆ ಆವರಿಸಿದೆ. ಫೈನಲ್ ಪಂದ್ಯದ ದಿನದಂದು ಬಾರ್ಬಡೋಸ್‌ನಲ್ಲಿನ ಹವಾಮಾನದ ಕುರಿತು ದೊಡ್ಡ ಅಪ್​ಡೇಟ್ ಹೊರಬಂದಿದೆ.

ಫೈನಲ್‌ ಮೇಲೂ ಮಳೆಯ ನೆರಳು

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಅಂತಿಮ ಪಂದ್ಯ ಬಾರ್ಬಡೋಸ್‌ನ ಬ್ರಿಡ್ಜ್‌ಟೌನ್‌ನಲ್ಲಿ ನಡೆಯಲಿದೆ. ಅದೇ ಹೊತ್ತಿಗೆ ಈ ಪಂದ್ಯದ ಮೇಲೂ ಮಳೆಯ ಛಾಯೆ ಆವರಿಸಿದೆ. weather.com ಪ್ರಕಾರ, ಜೂನ್ 29 ರಂದು ಬಾರ್ಬಡೋಸ್‌ನಲ್ಲಿ ಬೀರುಗಾಳಿ ಮತ್ತು ಭಾರೀ ಮಳೆ ನಿರೀಕ್ಷಿಸಲಾಗಿದೆ. ಪಂದ್ಯದ ವೇಳೆ ಮಳೆ ಬೀಳುವ ಸಾಧ್ಯತೆ ಶೇ.70ರಷ್ಟಿದೆ. ಹೀಗಾಗಿ ಪಂದ್ಯಕ್ಕೆ ಮಳೆ ಅಡ್ಡಿಪಡಿಸುವುದು ಖಚಿತವಾಗಿದೆ.

ಫೈನಲ್‌ಗೆ ಮೀಸಲು ದಿನ

ಐಸಿಸಿ ಫೈನಲ್ ಪಂದ್ಯಕ್ಕಾಗಿ ಮೀಸಲು ದಿನವನ್ನು ಸಹ ಇರಿಸಿದೆ. ಜೂನ್ 29 ರಂದು ಮಳೆಯಿಂದಾಗಿ ಪಂದ್ಯ ರದ್ದಾದರೆ ಜೂನ್ 30 ರಂದು ಫೈನಲ್ ಪಂದ್ಯ ನಡೆಯಲಿದೆ. ಇದಲ್ಲದೇ ಫೈನಲ್ ಪಂದ್ಯಕ್ಕೆ 190 ನಿಮಿಷಗಳ ಹೆಚ್ಚುವರಿ ಸಮಯವನ್ನು ಕೂಡ ಇರಿಸಲಾಗಿದೆ. ಇದರ ಹೊರತಾಗಿಯೂ, ಮೀಸಲು ದಿನದಂದು ಸಹ ಮಳೆಯಿಂದಾಗಿ ಪಂದ್ಯವನ್ನು ರದ್ದುಗೊಳಿಸಿದರೆ, ನಂತರ ಭಾರತ ಮತ್ತು ದಕ್ಷಿಣ ಆಫ್ರಿಕಾವನ್ನು ಜಂಟಿ ವಿಜೇತರೆಂದು ಘೋಷಿಸಲಾಗುತ್ತದೆ.

IND vs SA: ವಿಶ್ವ ಕಿರೀಟ ತೊಡಲು ಬಾರ್ಬಡೋಸ್​ಗೆ ಬಂದಿಳಿದ ರೋಹಿತ್ ಪಡೆ; ವಿಡಿಯೋ ನೋಡಿ

ಎರಡೂ ತಂಡಗಳು ಅಜೇಯ

ಈ ಬಾರಿಯ ವಿಶ್ವಕಪ್‌ನಲ್ಲಿ ದಕ್ಷಿಣ ಆಫ್ರಿಕಾ ಮತ್ತು ಟೀಂ ಇಂಡಿಯಾ ಒಂದೇ ಒಂದು ಪಂದ್ಯವನ್ನು ಸೋತಿಲ್ಲ. ದಕ್ಷಿಣ ಆಫ್ರಿಕಾ 8 ಪಂದ್ಯಗಳನ್ನಾಡಿದ್ದರೆ, ಟೀಂ ಇಂಡಿಯಾ 7 ಪಂದ್ಯಗಳನ್ನಾಡಿದೆ. ಟೀಂ ಇಂಡಿಯಾದ ಒಂದು ಪಂದ್ಯ ಕೂಡ ಮಳೆಯಿಂದಾಗಿ ರದ್ದಾಗಿತ್ತು. ಟೀಂ ಇಂಡಿಯಾ ಮೂರನೇ ಬಾರಿಗೆ ಟಿ20 ವಿಶ್ವಕಪ್‌ನಲ್ಲಿ ಫೈನಲ್‌ಗೆ ಲಗ್ಗೆ ಇಟ್ಟಿದೆ. ಇತ್ತ ವಿಶ್ವಕಪ್ ಆರಂಭದ ನಂತರ ದಕ್ಷಿಣ ಆಫ್ರಿಕಾ ಮೊದಲ ಬಾರಿಗೆ ಫೈನಲ್‌ಗೆ ಲಗ್ಗೆ ಇಡುವಲ್ಲಿ ಯಶಸ್ವಿಯಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
‘ನಿಜ ಜೀವನದಲ್ಲಿ ಆ ರೀತಿ ಪಾತ್ರ ಆಗಬಾರದು’: ದರ್ಶನ್​ ಬಗ್ಗೆ ಹಂಸಲೇಖ ಮಾತು
‘ನಿಜ ಜೀವನದಲ್ಲಿ ಆ ರೀತಿ ಪಾತ್ರ ಆಗಬಾರದು’: ದರ್ಶನ್​ ಬಗ್ಗೆ ಹಂಸಲೇಖ ಮಾತು
‘ದರ್ಶನ್ ನೋಡಿದ್ರೆ ಧರ್ಮಸ್ಥಳ ಮಂಜುನಾಥ ಸ್ವಾಮಿ ನೋಡಿದಂತೆ’: ಅಭಿಮಾನಿ
‘ದರ್ಶನ್ ನೋಡಿದ್ರೆ ಧರ್ಮಸ್ಥಳ ಮಂಜುನಾಥ ಸ್ವಾಮಿ ನೋಡಿದಂತೆ’: ಅಭಿಮಾನಿ
ಬಿಜೆಪಿಯವರು ಇದನ್ನ ಪ್ರೂವ್​ ಮಾಡಿದ್ರೆ ರಾಜಕೀಯ ನಿವೃತ್ತಿ: ಜಮೀರ್ ಅಹ್ಮದ್‌
ಬಿಜೆಪಿಯವರು ಇದನ್ನ ಪ್ರೂವ್​ ಮಾಡಿದ್ರೆ ರಾಜಕೀಯ ನಿವೃತ್ತಿ: ಜಮೀರ್ ಅಹ್ಮದ್‌
‘6 ತಿಂಗಳಲ್ಲಿ ಕನ್ನಡಕ್ಕೆ ಹೊಸ ಒಟಿಟಿ’: ಸಿಹಿ ಸುದ್ದಿ ನೀಡಿದ ಸಾಧು ಕೋಕಿಲ
‘6 ತಿಂಗಳಲ್ಲಿ ಕನ್ನಡಕ್ಕೆ ಹೊಸ ಒಟಿಟಿ’: ಸಿಹಿ ಸುದ್ದಿ ನೀಡಿದ ಸಾಧು ಕೋಕಿಲ
ಲೋಕಲ್​ನವರನ್ನ ಹಿಡಿದ್ರೆ ಮನೆಗೆ ಕಳಿಸ್ತೇನೆ: ಪೊಲೀಸ್​ ಮೇಲೆ ಮಂಜು ದರ್ಪ
ಲೋಕಲ್​ನವರನ್ನ ಹಿಡಿದ್ರೆ ಮನೆಗೆ ಕಳಿಸ್ತೇನೆ: ಪೊಲೀಸ್​ ಮೇಲೆ ಮಂಜು ದರ್ಪ
ಆಗಾಗ ಸಿಎಂ ಸಿದ್ದರಾಮಯ್ಯರ ತಲೆ ತಿನ್ನುತ್ತಿರಬೇಕು: ಜಗ್ಗೇಶ್
ಆಗಾಗ ಸಿಎಂ ಸಿದ್ದರಾಮಯ್ಯರ ತಲೆ ತಿನ್ನುತ್ತಿರಬೇಕು: ಜಗ್ಗೇಶ್
ಸಿದ್ದರಾಮಯ್ಯ-ಡಿಕೆಶಿ ವಿರಾಟ್ ಕೊಹ್ಲಿ-ರೋಹಿತ್ ಇದ್ದಂತೆ: ವಚನಾನಂದ ಶ್ರೀ
ಸಿದ್ದರಾಮಯ್ಯ-ಡಿಕೆಶಿ ವಿರಾಟ್ ಕೊಹ್ಲಿ-ರೋಹಿತ್ ಇದ್ದಂತೆ: ವಚನಾನಂದ ಶ್ರೀ
ಅಶೋಕ್​ ನಮ್ಮ ಪಕ್ಷದ ಆಂತರಿಕದ ಬಗ್ಗೆ ನಿಮಗ್ಯಾಕೆ ತೆವಲು?: ಪ್ರದೀಪ್​ ಈಶ್ವರ್
ಅಶೋಕ್​ ನಮ್ಮ ಪಕ್ಷದ ಆಂತರಿಕದ ಬಗ್ಗೆ ನಿಮಗ್ಯಾಕೆ ತೆವಲು?: ಪ್ರದೀಪ್​ ಈಶ್ವರ್
ಬಸ್​ ಪಲ್ಟಿ.. 20ಕ್ಕೂ ಹೆಚ್ಚು ಜನರಿಗೆ ಗಾಯ: ಆಕ್ಸಿಡೆಂಟ್ ಆಗಿದ್ದೇಗೆ?
ಬಸ್​ ಪಲ್ಟಿ.. 20ಕ್ಕೂ ಹೆಚ್ಚು ಜನರಿಗೆ ಗಾಯ: ಆಕ್ಸಿಡೆಂಟ್ ಆಗಿದ್ದೇಗೆ?
ಭೋರ್ಗರೆಯುತ್ತಿದೆ ಚುಂಚನಕಟ್ಟೆ ಜಲಪಾತ, ವೈಭವ ನೋಡಲು ಪ್ರವಾಸಿಗರ ದಂಡು
ಭೋರ್ಗರೆಯುತ್ತಿದೆ ಚುಂಚನಕಟ್ಟೆ ಜಲಪಾತ, ವೈಭವ ನೋಡಲು ಪ್ರವಾಸಿಗರ ದಂಡು