AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs BAN: 50 ರನ್​ಗಳಿಂದ ಬಾಂಗ್ಲಾ ತಂಡವನ್ನು ಮಣಿಸಿ ಸೆಮಿಫೈನಲ್‌ಗೇರಿದ ಟೀಂ ಇಂಡಿಯಾ..!

IND vs BAN, T20 World Cup 2024: ಆ್ಯಂಟಿಗುವಾದ ಸರ್ ವಿವಿಯನ್ ರಿಚರ್ಡ್ಸ್ ಕ್ರೀಡಾಂಗಣದಲ್ಲಿ ನಡೆದ ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಸೂಪರ್ 8 ಸುತ್ತಿನ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ರೋಹಿತ್ ಶರ್ಮಾ ನಾಯಕತ್ವದ ಟೀಂ ಇಂಡಿಯಾ 50 ರನ್​ಗಳ ಅಮೋಘ ಜಯ ಸಾಧಿಸಿದೆ. ಇದರೊಂದಿಗೆ ಇನ್ನೊಂದು ಪಂದ್ಯ ಬಾಕಿ ಇರುವಂತೆಯೇ ಮುಂದಿನ ಸುತ್ತಿಗೆ ಅಂದರೆ 2024 ರ ಟಿ20 ವಿಶ್ವಕಪ್​ನ ಸೆಮಿಫೈನಲ್​ಗೆ ಲಗ್ಗೆ ಇಟ್ಟಿದೆ.

IND vs BAN: 50 ರನ್​ಗಳಿಂದ ಬಾಂಗ್ಲಾ ತಂಡವನ್ನು ಮಣಿಸಿ ಸೆಮಿಫೈನಲ್‌ಗೇರಿದ ಟೀಂ ಇಂಡಿಯಾ..!
ಟೀಂ ಇಂಡಿಯಾ
ಪೃಥ್ವಿಶಂಕರ
|

Updated on:Jun 22, 2024 | 11:35 PM

Share

ಆ್ಯಂಟಿಗುವಾದ ಸರ್ ವಿವಿಯನ್ ರಿಚರ್ಡ್ಸ್ ಕ್ರೀಡಾಂಗಣದಲ್ಲಿ ನಡೆದ ಭಾರತ ಹಾಗೂ ಬಾಂಗ್ಲಾದೇಶ (IND vs BAN) ನಡುವಿನ ಸೂಪರ್ 8 ಸುತ್ತಿನ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ರೋಹಿತ್ ಶರ್ಮಾ ನಾಯಕತ್ವದ ಟೀಂ ಇಂಡಿಯಾ 50 ರನ್​ಗಳ ಅಮೋಘ ಜಯ ಸಾಧಿಸಿದೆ. ಇದರೊಂದಿಗೆ ಇನ್ನೊಂದು ಪಂದ್ಯ ಬಾಕಿ ಇರುವಂತೆಯೇ ಮುಂದಿನ ಸುತ್ತಿಗೆ ಅಂದರೆ 2024 ರ ಟಿ20 ವಿಶ್ವಕಪ್​ನ (T20 World Cup 2024) ಸೆಮಿಫೈನಲ್​ಗೆ ಬಹುತೇಕ ಲಗ್ಗೆ ಇಟ್ಟಿದೆ. ಸೂಪರ್ 8 ಸುತ್ತಿನಲ್ಲಿ ಭಾರತ ಇದುವರೆಗೆ 2 ಪಂದ್ಯಗಳನ್ನು ಆಡಿದ್ದು, ಎರಡೂ ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಅಷ್ಟೇ ಇಲ್ಲದೆ ಈ ಎರಡು ಪಂದ್ಯಗಳನ್ನು ಅತ್ಯುತ್ತಮ ನೆಟ್​ ರನ್​ರೇಟ್​ನೊಂದಿಗೆ ಗೆದ್ದಿದೆ. ಹೀಗಾಗಿ ಭಾರತ ಸೆಮೀಸ್​ಗೇರುವುದು ಖಚಿತವಾಗಿದೆ. ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ (Team India) 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 196 ರನ್ ಕಲೆಹಾಕಿತು. ಗುರಿ ಬೆನ್ನಟ್ಟಿದ ಬಾಂಗ್ಲಾದೇಶ 146 ರನ್ ಗಳಿಸಲಷ್ಟೇ ಶಕ್ತವಾಗಿ ಸೋಲೊಪ್ಪಿಕೊಂಡಿತು. ಈ ಮೂಲಕ ಬಾಂಗ್ಲಾ ತಂಡದ ಸೆಮಿಫೈನಲ್ ಕನಸು ಭಗ್ನಗೊಂಡಿತು.

ಅಮೋಘ ಬ್ಯಾಟಿಂಗ್ ಪ್ರದರ್ಶನ

ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 20 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 196 ರನ್ ಗಳಿಸಿತು. ಬಾಂಗ್ಲಾದೇಶದ ವಿರುದ್ಧ ಟೀಂ ಇಂಡಿಯಾದ ಎಲ್ಲಾ ಬ್ಯಾಟ್ಸ್​ಮನ್​ಗಳು ಸ್ಫೋಟಕ ಬ್ಯಾಟಿಂಗ್ ನಡೆಸಿದರು. ಸೂರ್ಯಕುಮಾರ್ ಯಾದವ್ ಹೊರತುಪಡಿಸಿ ಉಳಿದವರೆಲ್ಲರೂ ಎರಡಂಕಿ ಮೊತ್ತ ಕಲೆಹಾಕಿದರು. ತಂಡದ ಪರ ನಾಯಕ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಉತ್ತಮ ಆರಂಭ ನೀಡಿದರು. ಈ ಆರಂಭದ ಲಾಭವನ್ನು ಪಡೆದುಕೊಂಡು ಪ್ರತಿಯೊಬ್ಬ ಬ್ಯಾಟ್ಸ್‌ಮನ್‌ಗಳು ಟಾಪ್ ಗೇರ್‌ನಲ್ಲಿ ಬ್ಯಾಟ್ ಮಾಡಿದರು. ಹೀಗಾಗಿ ಟೀಂ ಇಂಡಿಯಾ ಬೃಹತ್ ಮೊತ್ತ ಕಲೆಹಾಕಿತು.

ಹಾರ್ದಿಕ್ ಆಲ್​ರೌಂಡರ್ ಆಟ

ಟೀಂ ಇಂಡಿಯಾ ಪರ ಉಪನಾಯಕ ಹಾರ್ದಿಕ್ ಪಾಂಡ್ಯ ಇನಿಂಗ್ಸ್​ನ ಕೊನೆಯ ಎಸೆತದಲ್ಲಿ ಬೌಂಡರಿ ಬಾರಿಸುವ ಮೂಲಕ ಅರ್ಧಶತಕ ಪೂರೈಸಿದರು. ಅಂತಿಮವಾಗಿ ಹಾರ್ದಿಕ್ 24 ಎಸೆತಗಳಲ್ಲಿ 4 ಬೌಂಡರಿ ಹಾಗೂ 3 ಸಿಕ್ಸರ್‌ಗಳ ನೆರವಿನಿಂದ ಅಜೇಯ 50 ರನ್ ಬಾರಿಸಿದರು. ನಾಯಕ ರೋಹಿತ್ ಶರ್ಮಾ 23, ವಿರಾಟ್ ಕೊಹ್ಲಿ 37, ರಿಷಬ್ ಪಂತ್ 36, ಸೂರ್ಯಕುಮಾರ್ ಯಾದವ್ 6 ಮತ್ತು ಶಿವಂ ದುಬೆ 34 ರನ್​ಗಳ ಕಾಣಿಕೆ ನೀಡಿದರು. ಬಾಂಗ್ಲಾದೇಶ ಪರ ರಿಷಾದ್ ಹೊಸೈನ್ ಮತ್ತು ತಂಜಿಮ್ ಹಸನ್ ಸಾಕಿಬ್ ತಲಾ 2 ವಿಕೆಟ್ ಪಡೆದರೆ, ಶಕೀಬ್ ಅಲ್ ಹಸನ್ 1 ವಿಕೆಟ್ ಪಡೆದರು.

IND vs BAN: 6 ತಂಡಗಳ ವಿರುದ್ಧ ಈ ಸಾಧನೆ ಮಾಡಿದ ವಿಶ್ವದ ಏಕೈಕ ಬ್ಯಾಟರ್ ರೋಹಿತ್ ಶರ್ಮಾ..!

ಬಾಂಗ್ಲಾ ತಂಡದ ಬ್ಯಾಟಿಂಗ್ ವಿಫಲ

197 ರನ್‌ಗಳ ಗುರಿಗೆ ಉತ್ತರವಾಗಿ ಬಾಂಗ್ಲಾದೇಶ ತಂಡ 146 ರನ್ ಗಳಿಸಲಷ್ಟೇ ಶಕ್ತವಾಯಿತು. ಈ ವೇಳೆ ನಜ್ಮುಲ್ ಹುಸೇನ್ ಶಾಂಟೊ ತಂಡದ ಪರ ಗರಿಷ್ಠ 40 ರನ್ ಬಾರಿಸಿದರೆ, ರಿಶಾದ್ ಹೊಸೈನ್ 24 ರನ್ ಕೊಡುಗೆ ನೀಡಿದರು. ಮತ್ತೊಂದೆಡೆ, ಕುಲ್ದೀಪ್ ಯಾದವ್ ಟೀಮ್ ಇಂಡಿಯಾ ಪರ ಗರಿಷ್ಠ 3 ವಿಕೆಟ್ ಪಡೆದರೆ, ಅರ್ಷದೀಪ್ ಸಿಂಗ್-ಜಸ್ಪ್ರೀತ್ ಬುಮ್ರಾ ತಲಾ 2 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು. ಹಾರ್ದಿಕ್ ಪಾಂಡ್ಯ ಕೂಡ 1 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:17 pm, Sat, 22 June 24

ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'