AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2024: ಭಾರತಕ್ಕೆ ಸುಲಭ ತುತ್ತಾದ ಬಾಂಗ್ಲಾ; ರೋಹಿತ್ ಪಡೆಗೆ 60 ರನ್ ಜಯ

T20 World Cup 2024: ನ್ಯೂಯಾರ್ಕ್​ನ ನಸ್ಸೌ ಕೌಂಟಿ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಏಕೈಕ ಅಭ್ಯಾಸ ಪಂದ್ಯದಲ್ಲಿ ನಿರೀಕ್ಷೆಯಂತೆ ಟೀಂ ಇಂಡಿಯಾ 60 ರನ್​ಗಳ ಬೃಹತ್ ಜಯ ದಾಖಲಿಸಿದೆ.

T20 World Cup 2024: ಭಾರತಕ್ಕೆ ಸುಲಭ ತುತ್ತಾದ ಬಾಂಗ್ಲಾ; ರೋಹಿತ್ ಪಡೆಗೆ 60 ರನ್ ಜಯ
ಟೀಂ ಇಂಡಿಯಾ
ಪೃಥ್ವಿಶಂಕರ
|

Updated on:Jun 01, 2024 | 11:58 PM

Share

ನ್ಯೂಯಾರ್ಕ್​ನ ನಸ್ಸೌ ಕೌಂಟಿ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಭಾರತ ಹಾಗೂ ಬಾಂಗ್ಲಾದೇಶ (India vs Bangladesh) ನಡುವಿನ ಏಕೈಕ ಟಿ20 ವಿಶ್ವಕಪ್‌ (T20 World Cup 2024) ಅಭ್ಯಾಸ ಪಂದ್ಯದಲ್ಲಿ ನಿರೀಕ್ಷೆಯಂತೆ ಟೀಂ ಇಂಡಿಯಾ 60 ರನ್​ಗಳ ಬೃಹತ್ ಜಯ ದಾಖಲಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಭಾರತ ತಂಡ (Team India) 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 182 ರನ್ ಗಳಿಸಿತು. ತಂಡದ ಪರವಾಗಿ ರಿಷಬ್ ಪಂತ್ ಅರ್ಧಶತಕ ಸಿಡಿಸಿದರೆ, ಉಪನಾಯಕ ಹಾರ್ದಿಕ್ ಪಾಂಡ್ಯ 40 ಹಾಗೂ ಸೂರ್ಯಕುಮಾರ್ ಯಾದವ್ 31 ರನ್​ಗಳ ಕೊಡುಗೆ ನೀಡಿದರು. ಉತ್ತರವಾಗಿ ಗುರಿ ಬೆನ್ನಟ್ಟಿದ ಬಾಂಗ್ಲಾದೇಶ ತಂಡ 20 ಓವರ್‌ಗಳಲ್ಲಿ 9 ವಿಕೆಟ್‌ ಕಳೆದುಕೊಂಡು 121 ರನ್ ಗಳಿಸಲಷ್ಟೇ ಶಕ್ತವಾಯಿತು.

ತತ್ತರಿಸಿದ ಬಾಂಗ್ಲಾ ಬ್ಯಾಟಿಂಗ್ ವಿಭಾಗ

193 ರನ್‌ಗಳ ಗುರಿ ಬೆನ್ನಟ್ಟಿದ ಬಾಂಗ್ಲಾದೇಶ ತಂಡ ಕೆಟ್ಟ ಆರಂಭ ಪಡೆಯಿತು. ತಂಡದ ಇಬ್ಬರು ಆರಂಭಿಕ ಬ್ಯಾಟ್ಸ್‌ಮನ್‌ಗಳಾದ ಸೌಮ್ಯ ಸರ್ಕಾರ್ ಮತ್ತು ನಾಯಕ ನಜ್ಮುಲ್ ಹಸನ್ ಶಾಂಟೊ ಖಾತೆ ತೆರೆಯದೆ ಪೆವಿಲಿಯನ್‌ಗೆ ಮರಳಿದರು. ತಂಜಿದ್ ಹಸನ್ 17 ರನ್ ಮತ್ತು ಲಿಟನ್ ದಾಸ್ ಆರು ರನ್ ಗಳಿಸಿ ಪೆವಿಲಿಯನ್​ಗೆ ಮರಳಿದರು. ಇದಾದ ನಂತರ ಶಕೀಬ್ ಅಲ್ ಹಸನ್ (28) ಮತ್ತು ಮಹಮ್ಮದುಲ್ಲಾ (40) ತಂಡದ ಇನ್ನಿಂಗ್ಸ್ ನಿಭಾಯಿಸುವ ಕೆಲಸ ಮಾಡಿದರು. ಅದಾಗ್ಯೂ ಈ ಜೋಡಿ ಪೆವಿಲಿಯನ್ ಸೇರಿಕೊಂಡ ಬಳಿಕ ಮತ್ತೆ ಇನ್ನಿಂಗ್ಸ್ ಕುಸಿಯಲಾರಂಭಿಸಿತು.

T20 World Cup 2024: ಪಾಂಡ್ಯ ಪಂಚ್​​ಗೆ ನೆತ್ತರು ಚೆಲ್ಲಿದ ಬಾಂಗ್ಲಾ ಬೌಲರ್! ವಿಡಿಯೋ ನೋಡಿ

ರಿಷಾದ್ ಹುಸೇನ್ ಐದು ರನ್ ಗಳಿಸಿ ಔಟಾದರೆ, ಝಾಕಿರ್ ಅಲಿ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದರು. ಮೆಹದಿ ಹಸನ್ ಮತ್ತು ತಂಜೀಮ್ ಕ್ರಮವಾಗಿ ಎರಡು ಮತ್ತು ಒಂದು ರನ್ ಗಳಿಸಿ ಔಟಾದರು. ಭಾರತದ ಪರ ಅರ್ಷದೀಪ್ ಸಿಂಗ್ ಮತ್ತು ಶಿವಂ ದುಬೆ ತಲಾ ಎರಡು ವಿಕೆಟ್ ಪಡೆದರೆ, ಬುಮ್ರಾ, ಸಿರಾಜ್, ಪಾಂಡ್ಯ ಮತ್ತು ಅಕ್ಷರ್ ಪಟೇಲ್ ತಲಾ ಒಂದು ವಿಕೆಟ್ ಪಡೆದರು.

ಮಿಂಚಿದ ಪಂತ್, ಪಾಂಡ್ಯ, ಸೂರ್ಯ

ಟಾಸ್ ಗೆದ್ದು ಮೊದಲು ಬ್ಯಾಟಿಂಗ್‌ಗೆ ಬಂದ ಭಾರತ ತಂಡಕ್ಕೆ ಉತ್ತಮ ಆರಂಭ ಸಿಗಲಿಲ್ಲ. ರೋಹಿತ್ ಶರ್ಮಾ ಅವರೊಂದಿಗೆ ಆರಂಭಿಕರಾಗಿ ಕಣಕ್ಕಿಳಿದಿದ್ದ ಸಂಜು ಸ್ಯಾಮ್ಸನ್ ಕೇವಲ ಒಂದು ರನ್ ಗಳಿಸಲಷ್ಟೇ ಶಕ್ತರಾದರು. ಅವರನ್ನು ಷರೀಫುಲ್ ಇಸ್ಲಾಂ ಎಲ್‌ಬಿಡಬ್ಲ್ಯು ಔಟ್ ಮಾಡಿದರು. ನಾಯಕ ರೋಹಿತ್ ಕೂಡ 23 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಆದರೆ ಮೂರನೇ ಕ್ರಮಾಂಕದಲ್ಲಿ ಬಂದ ಸ್ಟಾರ್ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಿಷಬ್ ಪಂತ್ 53 ರನ್ ಗಳಿಸಿ ನಿವೃತ್ತರಾದರು. ಅವರ ಇನ್ನಿಂಗ್ಸ್​ನಲ್ಲಿ ನಾಲ್ಕು ಬೌಂಡರಿ ಹಾಗೂ 4 ಸಿಕ್ಸರ್ ಕೂಡ ಸೇರಿದ್ದವು.

ಸೂರ್ಯಕುಮಾರ್ ಯಾದವ್ 31, ಶಿವಂ ದುಬೆ 14, ಹಾರ್ದಿಕ್ ಪಾಂಡ್ಯ 40 ಮತ್ತು ರವೀಂದ್ರ ಜಡೇಜಾ ನಾಲ್ಕು ರನ್​ಗಳ ಕೊಡುಗೆ ನೀಡಿದರು. ಈ ಪಂದ್ಯದಲ್ಲಿ ಪಾಂಡ್ಯ ಮತ್ತು ಜಡೇಜಾ ಅಜೇಯರಾಗಿ ಉಳಿದರೆ, ಬಾಂಗ್ಲಾದೇಶ ಪರ ಮೆಹದಿ ಹಸನ್, ಶರೀಫುಲ್ ಇಸ್ಲಾಂ, ಮಹಮ್ಮದುಲ್ಲಾ ಮತ್ತು ತನ್ವೀರ್ ಇಸ್ಲಾಂ ತಲಾ ಒಂದು ವಿಕೆಟ್ ಪಡೆದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:47 pm, Sat, 1 June 24

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ