AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs IRE: ಮೊದಲ ಪಂದ್ಯಕ್ಕೆ ಟೀಮ್ ಇಂಡಿಯಾ ಪ್ಲೇಯಿಂಗ್ 11 ಹೀಗಿರಲಿದೆ

India vs Ireland: ಭಾರತ ಮತ್ತು ಐರ್ಲೆಂಡ್ ತಂಡಗಳು ಈವರೆಗೆ 7 ಟಿ20 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಏಳು ಪಂದ್ಯಗಳಲ್ಲೂ ಟೀಮ್ ಇಂಡಿಯಾ ಜಯ ಸಾಧಿಸಿದೆ. ಹೀಗಾಗಿ ಬುಧವಾರ ನ್ಯೂಯಾರ್ಕ್​ನ ನಸ್ಸೌ ಕೌಂಟಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆಯಲಿರುವ ಟಿ20 ವಿಶ್ವಕಪ್​ ಪಂದ್ಯದಲ್ಲೂ ಭಾರತ ತಂಡವೇ ಗೆಲ್ಲುವ ಫೇವರೇಟ್ ಎನಿಸಿಕೊಂಡಿದೆ.

IND vs IRE: ಮೊದಲ ಪಂದ್ಯಕ್ಕೆ ಟೀಮ್ ಇಂಡಿಯಾ ಪ್ಲೇಯಿಂಗ್ 11 ಹೀಗಿರಲಿದೆ
Team India
ಝಾಹಿರ್ ಯೂಸುಫ್
|

Updated on: Jun 04, 2024 | 3:28 PM

Share

ನ್ಯೂಯಾರ್ಕ್​ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್​ನ (T20 World Cup 2024) 8ನೇ ಪಂದ್ಯದಲ್ಲಿ ಭಾರತ ಮತ್ತು ಐರ್ಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಬುಧವಾರ (ಜೂನ್.5) ನಡೆಯಲಿರುವ ಈ ಪಂದ್ಯದ ಮೂಲಕ ಭಾರತ ತಂಡವು ಟಿ20 ವಿಶ್ವಕಪ್ ಅಭಿಯಾನ ಪ್ರಾರಂಭಿಸಲಿದೆ. ಹೀಗಾಗಿ ಮೊದಲ ಪಂದ್ಯದಲ್ಲೇ ಬಲಿಷ್ಠ ಪಡೆಯನ್ನೇ ಕಣಕ್ಕಿಳಿಸಲಿದೆ.

ಇಲ್ಲಿ ಟೀಮ್ ಇಂಡಿಯಾ ಪರ ಆರಂಭಿಕರಾಗಿ ಕಣಕ್ಕಿಳಿಯುವ ಜೋಡಿ ಯಾರೆಂಬುದೇ ಕುತೂಹಲ. ಏಕೆಂದರೆ ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್ ಹಾಗೂ ವಿರಾಟ್ ಕೊಹ್ಲಿ… ಆರಂಭಿಕರಾಗಿ ನಮ್ಮ ಮುಂದೆ ಮೂವರ ಆಯ್ಕೆಗಳಿವೆ. ಹೀಗಾಗಿ ಯಾರನ್ನು ಕಣಕ್ಕಿಳಿಸಬೇಕೆಂದು ಅಂತಿಮ ಹಂತದಲ್ಲಿ ನಿರ್ಧರಿಸಲಿದ್ದೇವೆ ಎಂದು ಕೋಚ್ ರಾಹುಲ್ ದ್ರಾವಿಡ್ ತಿಳಿಸಿದ್ದಾರೆ.

ಅದರಂತೆ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಆರಂಭಿಕರಾಗಿ ಕಣಕ್ಕಿಳಿದರೆ ಯಶಸ್ವಿ ಜೈಸ್ವಾಲ್ ಹೊರಬೀಳಲಿದ್ದಾರೆ. ಅಲ್ಲದೆ ಕೊಹ್ಲಿಯ ಸ್ಥಾನದಲ್ಲಿ ಆಲ್​ರೌಂಡರ್ ಶಿವಂ ದುಬೆಗೆ ಚಾನ್ಸ್ ಸಿಗಬಹುದು. ಇನ್ನು ಯಶಸ್ವಿ ಜೈಸ್ವಾಲ್ ಹಾಗೂ ರೋಹಿತ್ ಶರ್ಮಾ ಓಪನರ್​ಗಳಾಗಿ ಕಣಕ್ಕಿಳಿದರೆ ವಿರಾಟ್ ಕೊಹ್ಲಿ 3ನೇ ಕ್ರಮಾಂಕದಲ್ಲಿ ಆಡಬಹುದು.

ಇನ್ನು 4ನೇ ಕ್ರಮಾಂಕದಲ್ಲಿ ಸೂರ್ಯಕುಮಾರ್ ಯಾದವ್ ಕಣಕ್ಕಿಳಿಯುವುದು ಖಚಿತ. ಹಾಗೆಯೇ ವಿಕೆಟ್ ಕೀಪರ್ ಬ್ಯಾಟರ್ ಆಗಿ ರಿಷಭ್ ಪಂತ್​ಗೆ ಸ್ಥಾನ ಸಿಗಲಿದೆ. ಇನ್ನು ಆಲ್​ರೌಂಡರ್​ಗಳಾಗಿ ಹಾರ್ದಿಕ್ ಪಾಂಡ್ಯ ಮತ್ತು ರವೀಂದ್ರ ಜಡೇಜಾ ಕಣಕ್ಕಿಳಿಯಲಿದ್ದಾರೆ. ಅದೇ ರೀತಿ ಪ್ರಮುಖ ಸ್ಪಿನ್ನರ್​ ಆಗಿ ಕುಲ್ದೀಪ್ ಯಾದವ್​ಗೆ ಚಾನ್ಸ್ ಸಿಗುವ ಸಾಧ್ಯತೆ ಹೆಚ್ಚಿದೆ.

ಅದೇ ರೀತಿ ವೇಗಿಗಳಾಗಿ ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್ ಮತ್ತು ಮೊಹಮ್ಮದ್ ಸಿರಾಜ್ ಕಣಕ್ಕಿಳಿಯಬಹುದು. ಇಲ್ಲಿ ಕುಲ್ದೀಪ್ ಯಾದವ್ ಅವರನ್ನು 4ನೇ ಬೌಲರ್​ ಆಗಿ ಬಳಸಿಕೊಂಡರೆ, ಹೆಚ್ಚುವರಿ ಬೌಲರ್​ಗಳಾಗಿ ಹಾರ್ದಿಕ್ ಪಾಂಡ್ಯ ಮತ್ತು ರವೀಂದ್ರ ಜಡೇಜಾ ತಂಡದಲ್ಲಿದ್ದಾರೆ. ಈ ಮೂಲಕ ಒಟ್ಟು 6 ಬೌಲರ್​ಗಳನ್ನು ಬಳಸಿಕೊಳ್ಳುವ ಅವಕಾಶ ರೋಹಿತ್ ಶರ್ಮಾ ಮುಂದಿರಲಿದೆ. ಅದರಂತೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿರಲಿದೆ…

  1. ರೋಹಿತ್ ಶರ್ಮಾ
  2. ಯಶಸ್ವಿ ಜೈಸ್ವಾಲ್
  3. ವಿರಾಟ್ ಕೊಹ್ಲಿ
  4. ಸೂರ್ಯಕುಮಾರ್ ಯಾದವ್
  5. ರಿಷಭ್ ಪಂತ್
  6. ಹಾರ್ದಿಕ್ ಪಾಂಡ್ಯ
  7. ರವೀಂದ್ರ ಜಡೇಜಾ
  8. ಕುಲ್ದೀಪ್ ಯಾದವ್
  9. ಜಸ್​ಪ್ರೀತ್ ಬುಮ್ರಾ
  10. ಅರ್ಷದೀಪ್ ಸಿಂಗ್
  11. ಮೊಹಮ್ಮದ್ ಸಿರಾಜ್.

ಇದನ್ನೂ ಓದಿ: Anrich Nortje: 18 ಡಾಟ್ ಬಾಲ್, 4 ವಿಕೆಟ್: ವಿಶ್ವ ದಾಖಲೆ ಬರೆದ ಅನ್ರಿಕ್ ನೋಕಿಯಾ

ಭಾರತ ತಂಡ 

ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ಸಂಜು ಸ್ಯಾಮ್ಸನ್, ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಸರ್ ಪಟೇಲ್, ಕುಲ್ದೀಪ್ ಯಾದವ್, ಯುಜ್ವೇಂದ್ರ ಚಹಲ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ಜಸ್​ಪ್ರೀತ್ ಬುಮ್ರಾ.

ಮೀಸಲು ಆಟಗಾರರು: ಶುಭ್​ಮನ್ ಗಿಲ್, ಅವೇಶ್ ಖಾನ್, ರಿಂಕು ಸಿಂಗ್, ಖಲೀಲ್ ಅಹ್ಮದ್.

Follow Us
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಬ್ಯಾಂಕ್​ಗೆ ಬೀಗ ಹಾಕಿ ರಾತ್ರಿಯಿಡೀ ಗ್ರಾಹಕರ ಪ್ರತಿಭಟನೆ!
ಬ್ಯಾಂಕ್​ಗೆ ಬೀಗ ಹಾಕಿ ರಾತ್ರಿಯಿಡೀ ಗ್ರಾಹಕರ ಪ್ರತಿಭಟನೆ!