AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರಾಚಿ ಏರ್​ಪೋರ್ಟ್​ಗೆ ಅರ್ಹತೆ ಪಡೆದ ಪಾಕಿಸ್ತಾನ್: ಫುಲ್ ಟ್ರೋಲ್ ಆದ ಬಾಬರ್ ಪಡೆ

T20 World Cup 2024: ಟಿ20 ವಿಶ್ವಕಪ್​ ಆರಂಭಕ್ಕೂ ಮುನ್ನ ಆರ್ಮಿ ಟ್ರೈನಿಂಗ್​ನೊಂದಿಗೆ ಸಕಲ ಸಿದ್ಧತೆ ಮಾಡಿಕೊಂಡಿದ್ದ ಪಾಕಿಸ್ತಾನ್ ತಂಡವು ಲೀಗ್ ಹಂತದಲ್ಲೇ ಮುಗ್ಗರಿಸಿದೆ. ಅದರಲ್ಲೂ ಈ ಬಾರಿ ಪಾಕ್ ಪಡೆಯು ಯುಎಸ್​ಎ ವಿರುದ್ಧ ಹೀನಾಯವಾಗಿ ಸೋಲನುಭವಿಸುವ ಮೂಲಕ ಭಾರೀ ಮುಖಭಂಗಕ್ಕೆ ಒಳಗಾಗಿದೆ. ಇದೀಗ ಟೂರ್ನಿಯಿಂದಲೇ ಹೊರಬಿದ್ದಿರುವ ಪಾಕಿಸ್ತಾನ್ ತಂಡವನ್ನು ಟ್ರೋಲ್ ಮಾಡಲಾಗುತ್ತಿದೆ.

ಕರಾಚಿ ಏರ್​ಪೋರ್ಟ್​ಗೆ ಅರ್ಹತೆ ಪಡೆದ ಪಾಕಿಸ್ತಾನ್: ಫುಲ್ ಟ್ರೋಲ್ ಆದ ಬಾಬರ್ ಪಡೆ
Pakistan Team
ಝಾಹಿರ್ ಯೂಸುಫ್
|

Updated on:Jun 15, 2024 | 11:38 AM

Share

T20 World Cup 2024: ಟಿ20 ವಿಶ್ವಕಪ್​ನಿಂದ ಪಾಕಿಸ್ತಾನ್ ತಂಡ ಹೊರಬಿದ್ದಿದೆ. ಮೊದಲ ಪಂದ್ಯದಲ್ಲಿ ಯುಎಸ್​ಎ ವಿರುದ್ಧ ಹೀನಾಯವಾಗಿ ಸೋತಿದ್ದ ಬಾಬರ್ ಪಡೆಯು, ಎರಡನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಮುಂದೆ ಮುಂಡಿಯೂರಿತ್ತು. ಇದಾಗ್ಯೂ ಕೊನೆಯ ಎರಡು ಪಂದ್ಯಗಳ ಮೂಲಕ ದ್ವಿತೀಯ ಸುತ್ತಿಗೆ ಪ್ರವೇಶಿಸುವ ಆಶಾಭಾವನೆಯಲ್ಲಿದ್ದ ಪಾಕಿಸ್ತಾನ್ ಪಾಲಿಗೆ ವರುಣ ಅವಕೃಪೆ ತೋರಿದ್ದಾನೆ.

ಯುಎಸ್​ಎ ಮತ್ತು ಐರ್ಲೆಂಡ್ ನಡುವಣ ಪಂದ್ಯವು ಮಳೆಯಿಂದಾಗಿ ರದ್ದಾಗಿದ್ದು, ಇದರೊಂದಿಗೆ ಯುಎಸ್​ಎ ತಂಡವು 5 ಅಂಕಗಳೊಂದಿಗೆ ಸೂಪರ್-8 ಹಂತಕ್ಕೆ ಅರ್ಹತೆ ಪಡೆದುಕೊಂಡಿದೆ. ಇನ್ನು ಪಾಕಿಸ್ತಾನ್ ತಂಡವು ತನ್ನ ಕೊನೆಯ ಪಂದ್ಯದಲ್ಲಿ ಐರ್ಲೆಂಡ್ ವಿರುದ್ಧ ಗೆದ್ದರೂ ಒಟ್ಟು 4 ಅಂಕಗಳನ್ನು ಮಾತ್ರ ಸಂಪಾದಿಸಲಿದೆ. ಹೀಗಾಗಿ ಅಂತಿಮ ಪಂದ್ಯಕ್ಕೂ ಮುನ್ನವೇ ಪಾಕಿಸ್ತಾನ್ ತಂಡ ಟಿ20 ವಿಶ್ವಕಪ್​ನಿಂದ ಹೊರಬಿದ್ದಿದೆ.

ಅತ್ತ ಪಾಕ್ ಪಡೆ ಟಿ20 ವಿಶ್ವಕಪ್​ನಿಂದ ಹೊರಬೀಳುತ್ತಿದ್ದಂತೆ ಇತ್ತ ಸೋಷಿಯಲ್ ಮೀಡಿಯಾದಲ್ಲಿ ಮೀಮ್ಸ್​​ಗಳ ಸುರಿಮಳೆ ಶುರುವಾಗಿತ್ತು. ಈ ಮೂಲಕ ಪಾಕ್ ತಂಡದ ನಾಯಕ ಬಾಬರ್ ಆಝಂ ಹಾಗೂ ಪಾಕಿಸ್ತಾನ್ ತಂಡವನ್ನು ಟ್ರೋಲ್ ಮಾಡಲಾಗುತ್ತಿದೆ. ಈ ಮೀಮ್ಸ್ ಮತ್ತು ಟ್ರೋಲ್​ಗಳ ಝಲಕ್ ಇಲ್ಲಿದೆ…

ಟಿ20 ವಿಶ್ವಕಪ್​ಗೂ ಮುನ್ನ ಆರ್ಮಿ ಟ್ರೈನಿಂಗ್ ಪಡೆದಿದ್ದ ಪಾಕ್ ಆಟಗಾರರನ್ನು ಸ್ಟೇಡಿಯಂ ನವೀಕರಣಕ್ಕಾಗಿ ಬಳಸಿಕೊಳ್ಳಬೇಕೆಂದು ಅಭಿಮಾನಿಯೊಬ್ಬರು ಸೋಷಿಯಲ್ ಮೀಡಿಯಾ ಮೂಲಕ ಆಗ್ರಹಿಸಿದ್ದಾರೆ.

ಈ ವಿಡಿಯೋದಲ್ಲಿ ಪಾಕಿಸ್ತಾನ್ ತಂಡವನ್ನು ಬಿಟ್ಟು ಉಳಿದ ಏಷ್ಯಾ ತಂಡಗಳು ಸೂಪರ್-8 ಹಂತಕ್ಕೆ ಹೋಗುತ್ತಿರುವುದನ್ನು ತೋರಿಸಲಾಗಿದೆ.

ಈ ಪೋಸ್ಟ್​ನಲ್ಲಿ ಪಾಕಿಸ್ತಾನ್ ತಂಡವು ಕರಾಚಿ ಏರ್​ಪೋರ್ಟ್​ಗೆ ಅರ್ಹತೆ ಪಡೆದುಕೊಂಡಿದೆ ಎಂದು ಟ್ರೋಲ್ ಮಾಡಲಾಗಿದೆ.

ಒಟ್ಟಿನಲ್ಲಿ ಟಿ20 ವಿಶ್ವಕಪ್​ ಆರಂಭಕ್ಕೂ ಮುನ್ನ ಆರ್ಮಿ ಟ್ರೈನಿಂಗ್​ನೊಂದಿಗೆ ಸಕಲ ಸಿದ್ಧತೆ ಮಾಡಿಕೊಂಡಿದ್ದ ಪಾಕಿಸ್ತಾನ್ ತಂಡವು ಲೀಗ್ ಹಂತದಲ್ಲೇ ಮುಗ್ಗರಿಸಿ ಇದೀಗ ಭಾರೀ ಮುಖಭಂಗಕ್ಕೆ ಒಳಗಾಗಿದೆ. ಅದರಲ್ಲೂ ಬಾಬರ್ ಪಡೆಯ ಈ ಹೀನಾಯ ಪ್ರದರ್ಶನವನ್ನು ಪಾಕಿಸ್ತಾನ್ ಕ್ರಿಕೆಟ್ ಪ್ರೇಮಿಗಳೇ ಟ್ರೋಲ್ ಮಾಡುತ್ತಿದ್ದಾರೆ.

Published On - 11:31 am, Sat, 15 June 24

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ