T20 World Cup 2024: ಆಂಗ್ಲರ ಕೈ ಹಿಡಿದ ಆಸ್ಟ್ರೇಲಿಯನ್ನರು

T20 World Cup 2024: ಆಸ್ಟ್ರೇಲಿಯಾ ತಂಡದ ಗೆಲುವಿನೊಂದಿಗೆ ಇಂಗ್ಲೆಂಡ್ ತಂಡವು ನೆಟ್​ ರನ್​ ರೇಟ್ (+3.611) ನೆರವಿನಿಂದ ಸ್ಕಾಟ್ಲೆಂಡ್ (+1.255) ತಂಡವನ್ನು ಹಿಂದಿಕ್ಕಿ ಸೂಪರ್-8 ಹಂತಕ್ಕೇರಿದೆ. ಈ ಮೂಲಕ ಜೋಸ್ ಬಟ್ಲರ್ ನೇತೃತ್ವದ ಇಂಗ್ಲೆಂಡ್ ತಂಡವು ದ್ವಿತೀಯ ಸುತ್ತಿನಲ್ಲಿ ಗ್ರೂಪ್-2 ನಲ್ಲಿ ಕಣಕ್ಕಿಳಿಯಲಿದೆ.

T20 World Cup 2024: ಆಂಗ್ಲರ ಕೈ ಹಿಡಿದ ಆಸ್ಟ್ರೇಲಿಯನ್ನರು
AUS-ENG
Follow us
|

Updated on: Jun 16, 2024 | 11:13 AM

T20 World Cup 2024:  ಹಾಲಿ ಚಾಂಪಿಯನ್ ಇಂಗ್ಲೆಂಡ್ ತಂಡವು ಟಿ20 ವಿಶ್ವಕಪ್​ನ ದ್ವಿತೀಯ ಸುತ್ತಿಗೆ ಪ್ರವೇಶಿಸಿದೆ. ಅದು ಕೂಡ ಕೇವಲ 5 ಅಂಕಗಳೊಂದಿಗೆ ಎಂಬುದು ವಿಶೇಷ. ಅಂದರೆ ಈ ಬಾರಿಯ ವಿಶ್ವಕಪ್​ನಲ್ಲಿ ಹಾಲಿ ಚಾಂಪಿಯನ್​ ಪಟ್ಟದೊಂದಿಗೆ ಕಣಕ್ಕಿಳಿದಿದ್ದ ಇಂಗ್ಲೆಂಡ್ ತಂಡದ ಮೊದಲ ಪಂದ್ಯವು ಮಳೆಗೆ ಅಹುತಿಯಾಗಿತ್ತು. ಇನ್ನು ದ್ವಿತೀಯ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋಲನುಭವಿಸಿತ್ತು.

ಮೂರನೇ ಪಂದ್ಯದಲ್ಲಿ ಒಮಾನ್ ವಿರುದ್ದ ಗೆಲ್ಲುವ ಮೂಲಕ ಗೆಲುವಿನ ಖಾತೆ ತೆರೆದ ಇಂಗ್ಲೆಂಡ್​ಗೆ ನಮೀಬಿಯಾ ವಿರುದ್ಧ ಪಂದ್ಯ ನಿರ್ಣಾಯಕವಾಗಿತ್ತು. ಅದರಂತೆ ನಮೀಬಿಯಾ ವಿರುದ್ಧ 41 ರನ್​ಗಳ ಜಯ ಸಾಧಿಸಿ ಅಂಕಪಟ್ಟಿಯಲ್ಲಿ 5 ಪಾಯಿಂಟ್ಸ್​ನೊಂದಿಗೆ ದ್ವಿತೀಯ ಸ್ಥಾನ ಅಲಂಕರಿಸುವಲ್ಲಿ ಯಶಸ್ವಿಯಾಗಿತ್ತು.

ಕೈ ಹಿಡಿದ ಆಸ್ಟ್ರೇಲಿಯನ್ನರು:

ಗ್ರೂಪ್-ಬಿ ಪಾಯಿಂಟ್ಸ್ ಟೇಬಲ್​ನಲ್ಲಿ ದ್ವಿತೀಯ ಸ್ಥಾನ ಅಲಂಕರಿಸಿದರೂ ಇಂಗ್ಲೆಂಡ್​ ಸೂಪರ್-8 ಹಂತಕ್ಕೇರುವುದು ಖಚಿತವಾಗಿರಲಿಲ್ಲ. ಏಕೆಂದರೆ ಅತ್ತ ಸ್ಕಾಟ್ಲೆಂಡ್ ತಂಡ ಕೂಡ 5 ಅಂಕಗಳೊಂದಿಗೆ 3ನೇ ಸ್ಥಾನದಲ್ಲಿತ್ತು.

ಹೀಗಾಗಿ ಆಸ್ಟ್ರೇಲಿಯಾ ಮತ್ತು ಸ್ಕಾಟ್ಲೆಂಡ್ ನಡುವಣ ಪಂದ್ಯವು ಇಂಗ್ಲೆಂಡ್ ಪಾಲಿಗೆ ನಿರ್ಣಾಯಕವಾಗಿತ್ತು. ಈ ಪಂದ್ಯದಲ್ಲಿ ಸ್ಟಾರ್ ಆಟಗಾರರಿಗೆ ವಿಶ್ರಾಂತಿ ನೀಡುತ್ತೇವೆ ಎನ್ನುವ ಮೂಲಕ ಆಸ್ಟ್ರೇಲಿಯಾ ಟೀಮ್ ಮ್ಯಾನೇಜ್ಮೆಂಟ್ ಇಂಗ್ಲೆಂಡ್​ನ ಚಿಂತೆ ಹೆಚ್ಚಿಸಿದ್ದರು.

ಅಲ್ಲದೆ ಇಂಗ್ಲೆಂಡ್ ತಂಡವನ್ನು ಸೂಪರ್-8 ಹಂತದಿಂದ ಹೊರಗಿಡುವುದೇ ನಮ್ಮ ಧ್ಯೇಯ ಎಂಬ ಹೇಳಿಕೆಗಳನ್ನು ಆಸ್ಟ್ರೇಲಿಯಾ ಆಟಗಾರರು ನೀಡಿದ್ದರು. ಹೀಗಾಗಿ ಸ್ಕಾಟ್ಲೆಂಡ್ ವಿರುದ್ಧ ಆಸೀಸ್ ಪಡೆ ಸೋಲಲಿದ್ದಾರಾ ಎಂಬ ಆತಂಕವೊಂದು ಆಂಗ್ಲರಲ್ಲಿ ಮನೆ ಮಾಡಿತ್ತು.

ಇದನ್ನೂ ಓದಿ: Tim Southee: 24 ಎಸೆತಗಳಲ್ಲಿ ಹೊಸ ಇತಿಹಾಸ ನಿರ್ನಿಸಿದ ಟಿಮ್ ಸೌಥಿ

ಆದರೆ ಇಂಗ್ಲೆಂಡ್ ಪಾಲಿಗೆ ನಿರ್ಣಾಯಕವಾಗಿದ್ದ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಭರ್ಜರಿ ಪ್ರದರ್ಶನ ನೀಡಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸ್ಕಾಟ್ಲೆಂಡ್ ತಂಡವು 20 ಓವರ್​ಗಳಲ್ಲಿ 180 ರನ್ ಕಲೆಹಾಕಿತು. ಈ ಕಠಿಣ ಗುರಿಯನ್ನು ಬೆನ್ನತ್ತಿದ ಆಸ್ಟ್ರೇಲಿಯಾ ತಂಡ 19.4 ಓವರ್​ಗಳಲ್ಲಿ ಗುರಿ ಮುಟ್ಟುವಲ್ಲಿ ಯಶಸ್ವಿಯಾಗಿದೆ. ಈ ಗೆಲುವಿನ ಮೂಲಕ ಇಂಗ್ಲೆಂಡ್ ತಂಡ ಸೂಪರ್-8 ಹಂತಕ್ಕೇರುವಲ್ಲಿ ಆಸ್ಟ್ರೇಲಿಯಾ ಪ್ರಮುಖ ಪಾತ್ರವಹಿಸಿದೆ.

ತಾಜಾ ಸುದ್ದಿ
ಕಾಲೇಜು ವಿದ್ಯಾರ್ಥಿಗಳಿಗೆ ವಿಶೇಷ ಆಫರ್ ಘೋಷಿಸಿದ ಆ್ಯಪಲ್
ಕಾಲೇಜು ವಿದ್ಯಾರ್ಥಿಗಳಿಗೆ ವಿಶೇಷ ಆಫರ್ ಘೋಷಿಸಿದ ಆ್ಯಪಲ್
ಆಹಾರ ಹೇಗೆ ಸೇವನೆ ಮಾಡಬೇಕು, ಪದ್ಧತಿ ಹೇಗಿರಬೇಕು? ಈ ವಿಡಿಯೋ ನೋಡಿ
ಆಹಾರ ಹೇಗೆ ಸೇವನೆ ಮಾಡಬೇಕು, ಪದ್ಧತಿ ಹೇಗಿರಬೇಕು? ಈ ವಿಡಿಯೋ ನೋಡಿ
ಮನಸ್ಸಿನ ನಿಯಂತ್ರಣದಿಂದ ಇಂದಿನ ಎಲ್ಲ ಒತ್ತಡವನ್ನೂ ಸರಿಮಾಡಿಕೊಳ್ಳುವಿರಿ
ಮನಸ್ಸಿನ ನಿಯಂತ್ರಣದಿಂದ ಇಂದಿನ ಎಲ್ಲ ಒತ್ತಡವನ್ನೂ ಸರಿಮಾಡಿಕೊಳ್ಳುವಿರಿ
ಹೊಸಕೋಟೆಯ ನಳಪಾಕ ಹೋಟೆಲ್​​ ಗೋಬಿಯಲ್ಲಿ ಹುಳ ಪತ್ತೆ: ಮುಂದೇನಾಯ್ತು ನೋಡಿ
ಹೊಸಕೋಟೆಯ ನಳಪಾಕ ಹೋಟೆಲ್​​ ಗೋಬಿಯಲ್ಲಿ ಹುಳ ಪತ್ತೆ: ಮುಂದೇನಾಯ್ತು ನೋಡಿ
ಜವಾಬ್ದಾರಿವಹಿಸಿಕೊಂಡವರ  ಪ್ರಮಾದಗಳಿಂದ ಪಕ್ಷಕ್ಕೆ ಹಿನ್ನಡೆಯಾಯಿತು: ಯತ್ನಾಳ್
ಜವಾಬ್ದಾರಿವಹಿಸಿಕೊಂಡವರ  ಪ್ರಮಾದಗಳಿಂದ ಪಕ್ಷಕ್ಕೆ ಹಿನ್ನಡೆಯಾಯಿತು: ಯತ್ನಾಳ್
ಪ್ರಜ್ವಲ್ ರೇವಣ್ಣಗೆ ಜುಲೈ 8ರವರೆಗೆ ನ್ಯಾಯಾಂಗ ಕಸ್ಟಡಿ, ಪುನಃ ಸೆಂಟ್ರಲ್ ಜೈಲ
ಪ್ರಜ್ವಲ್ ರೇವಣ್ಣಗೆ ಜುಲೈ 8ರವರೆಗೆ ನ್ಯಾಯಾಂಗ ಕಸ್ಟಡಿ, ಪುನಃ ಸೆಂಟ್ರಲ್ ಜೈಲ
ದೇಶ ನಮ್ಮದು, ಸ್ವಾತಂತ್ರ್ಯಕ್ಕಾಗಿ ಹೋರಾಡಿದ್ದು ಕಾಂಗ್ರೆಸ್: ಜಮೀರ್ ಅಹ್ಮದ್
ದೇಶ ನಮ್ಮದು, ಸ್ವಾತಂತ್ರ್ಯಕ್ಕಾಗಿ ಹೋರಾಡಿದ್ದು ಕಾಂಗ್ರೆಸ್: ಜಮೀರ್ ಅಹ್ಮದ್
ಬೇರೆಯವರ ಮೇಲೆ ಗೂಬೆಕೂರಿಸುವುದು ದೇವೇಗೌಡ ಕುಟುಂಬದ ಅಭ್ಯಾಸ: ಡಿಕೆ ಸುರೇಶ್
ಬೇರೆಯವರ ಮೇಲೆ ಗೂಬೆಕೂರಿಸುವುದು ದೇವೇಗೌಡ ಕುಟುಂಬದ ಅಭ್ಯಾಸ: ಡಿಕೆ ಸುರೇಶ್
ಚನ್ನಪಟ್ಟಣ ತಾಲ್ಲೂಕಿನ ಗ್ರಾಮ ಪಂಚಾಯಿತಿಗಳಲ್ಲಿ ತಾಂಡವಾಡುತ್ತಿದೆ ಲಂಚಗುಳಿತನ
ಚನ್ನಪಟ್ಟಣ ತಾಲ್ಲೂಕಿನ ಗ್ರಾಮ ಪಂಚಾಯಿತಿಗಳಲ್ಲಿ ತಾಂಡವಾಡುತ್ತಿದೆ ಲಂಚಗುಳಿತನ
ಅಂಗನವಾಡಿಗಳಲ್ಲಿ ಇನ್ಮುಂದೆ ಸರ್ಕಾರಿ ಮಾಂಟೆಸರಿ, LKG, UKG ಟೀಚಿಂಗ್
ಅಂಗನವಾಡಿಗಳಲ್ಲಿ ಇನ್ಮುಂದೆ ಸರ್ಕಾರಿ ಮಾಂಟೆಸರಿ, LKG, UKG ಟೀಚಿಂಗ್