T20 World Cup 2024: ಸತತ ಸೋಲು… ಪಾಕ್ ತಂಡಕ್ಕೆ ಮೇಜರ್ ಸರ್ಜರಿ

T20 World Cup 2024: ಪಾಕಿಸ್ತಾನ್ ತಂಡಕ್ಕೆ ಇನ್ನು 2 ಪಂದ್ಯಗಳಿವೆ. ತನ್ನ ಮೂರನೇ ಪಂದ್ಯದಲ್ಲಿ ಕೆನಡಾ ತಂಡವನ್ನು ಎದುರಿಸಿದರೆ, ನಾಲ್ಕನೇ ಪಂದ್ಯದಲ್ಲಿ ಐರ್ಲೆಂಡ್ ವಿರುದ್ಧ ಸೆಣಸಲಿದೆ. ಈ ಎರಡು ಮ್ಯಾಚ್​ಗಳಲ್ಲಿ ಗೆದ್ದರೆ ಪಾಕ್ ತಂಡ ಟಿ20 ವಿಶ್ವಕಪ್ ಆಸೆ ಜೀವಂತವಿರಲಿದೆ. ಏಕೆಂದರೆ ಯುಎಸ್​ಎ ತಂಡ ಮುಂದಿನ 2 ಮ್ಯಾಚ್​ಗಳಲ್ಲಿ ಸೋತರೆ ಪಾಕ್ ತಂಡಕ್ಕೆ ಸೂಪರ್-8 ಹಂತಕ್ಕೇರಲು ಅವಕಾಶ ಇರಲಿದೆ.

T20 World Cup 2024: ಸತತ ಸೋಲು... ಪಾಕ್ ತಂಡಕ್ಕೆ ಮೇಜರ್ ಸರ್ಜರಿ
Pakistan Team
Follow us
|

Updated on: Jun 11, 2024 | 8:09 PM

T20 World Cup 2024: ಟಿ20 ವಿಶ್ವಕಪ್ ಮುಕ್ತಾಯದ ಬೆನ್ನಲ್ಲೇ ಪಾಕಿಸ್ತಾನ್ ತಂಡಕ್ಕೆ ಮೇಜರ್ ಸರ್ಜರಿಯಾಗಲಿದೆ. ಇದನ್ನು ಹೇಳಿರುವುದು ಮತ್ಯಾರೂ ಅಲ್ಲ, ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಮುಖ್ಯಸ್ಥ ಮೊಹ್ಸಿನ್ ನಖ್ವಿ. ಎರಡು ಅವಮಾನಕರ ಸೋಲುಗಳ ಬಳಿಕ ಮಾತನಾಡಿದ ನಖ್ವಿ, ತಂಡದಲ್ಲಿ ಪ್ರಮುಖ ಬದಲಾವಣೆ ಮಾಡಬೇಕಾದ ಅಗತ್ಯವಿದೆ ಎಂದಿದ್ದಾರೆ.

ಮೊದಲ ಪಂದ್ಯದಲ್ಲಿ ಪಾಕಿಸ್ತಾನ್ ತಂಡ ಯುಎಸ್​ಎ ವಿರುದ್ಧ ಹೀನಾಯವಾಗಿ ಸೋತು ಭಾರೀ ಮುಖಭಂಗಕ್ಕೆ ಒಳಗಾಗಿತ್ತು. ಈ ಸೋಲಿನ ನೋವನ್ನು ಮರೆಯುವ ಮುನ್ನವೇ ಪಾಕ್​ ತಂಡವನ್ನು ಭಾರತ ಬಗ್ಗು ಬಡಿಯಿತು.

ಈ ಎರಡು ಸೋಲುಗಳಿಂದ ಇದೀಗ ಪಿಸಿಬಿ ಭಾರೀ ಟೀಕೆಗಳನ್ನು ಎದುರಿಸುತ್ತಿದೆ. ಅದರಲ್ಲೂ ತಂಡದ ಆಯ್ಕೆ ಬಗ್ಗೆ ಅನೇಕ ಮಾಜಿ ಆಟಗಾರರು ಅಪಸ್ವರ ಎತ್ತಿದ್ದಾರೆ. ಹೀಗಾಗಿ ಟಿ20 ವಿಶ್ವಕಪ್ ಬಳಿಕ ಪಾಕಿಸ್ತಾನ್ ತಂಡದಲ್ಲಿ ಮಹತ್ವದ ಬದಲಾವಣೆ ಕಂಡು ಬರುವುದು ಖಚಿತ.

ಭಾರತದ ವಿರುದ್ಧದ 6 ರನ್​ಗಳ ಸೋಲಿನ ಬಳಿಕ ಮಾತನಾಡಿದ ಪಾಕಿಸ್ತಾನ್ ಕ್ರಿಕೆಟ್ ಮಂಡಳಿಯ ಮುಖ್ಯಸ್ಥ ಮೊಹ್ಸಿನ್ ನಖ್ವಿ, “ಪಂದ್ಯಗಳನ್ನು ಗೆಲ್ಲಲು ತಂಡಕ್ಕೆ ಸಣ್ಣ ಸರ್ಜರಿ ಅಗತ್ಯವಿದೆ ಎಂದು ಭಾವಿಸಿದ್ದೆ. ಆದರೆ ಈಗ ನಾವು ದೊಡ್ಡ ಸರ್ಜರಿ ಮಾಡಬೇಕಾಗಿದೆ” ಎಂದಿದ್ದಾರೆ.

ಈ ಮೂಲಕ ಟಿ20 ವಿಶ್ವಕಪ್ ಟೂರ್ನಿ ಮುಕ್ತಾಯದ ಬೆನ್ನಲ್ಲೇ ಪಾಕಿಸ್ತಾನ್ ತಂಡದಿಂದ ಕೆಲ ಆಟಗಾರರನ್ನು ಕೈ ಬಿಡುವ ಸೂಚನೆ ನೀಡಿದ್ದಾರೆ. ಅದರಲ್ಲೂ ಪಾಕಿಸ್ತಾನ್ ತಂಡದ ನಾಯಕ ಬಾಬರ್ ಆಝಂ ಅವರ ತಲೆದಂಡವಾಗುವ ಸಾಧ್ಯತೆಯಿದೆ.

ಏಕೆಂದರೆ 2023ರ ಏಕದಿನ ವಿಶ್ವಕಪ್​ನಲ್ಲಿ ಪಾಕಿಸ್ತಾನ್ ತಂಡವು ಹೀನಾಯ ಪ್ರದರ್ಶನ ನೀಡಿದ್ದರಿಂದ ಬಾಬರ್ ಆಝಂ ಅವರನ್ನು ತಂಡದ ನಾಯಕತ್ವದಿಂದ ಕೆಳಗಿಳಿಸಲಾಗಿತ್ತು. ಆ ಬಳಿಕ ಶಾಹೀನ್ ಶಾ ಅಫ್ರಿದಿಯನ್ನು ನಾಯಕನನ್ನಾಗಿ ಮಾಡಲಾಗಿತ್ತು.

ಇದಾದ ಒಂದು ಸರಣಿ ಬಳಿಕ ಮತ್ತೆ ಬಾಬರ್ ಆಝಂಗೆ ಕ್ಯಾಪ್ಟನ್ಸಿ ನೀಡಲಾಗಿತ್ತು. ಆದರೀಗ ಮತ್ತೆ ಆಝಂ ನಾಯಕತ್ವದಲ್ಲಿ ಪಾಕಿಸ್ತಾನ್ ತಂಡ ಯುಎಸ್​ಎ ವಿರುದ್ಧ ಸೋತಿದೆ. ಕಳೆದ ಟಿ20 ವಿಶ್ವಕಪ್​ನಲ್ಲಿ ಝಿಂಬಾಬ್ವೆ ವಿರುದ್ಧ ಪರಾಜಯಗೊಂಡಿತ್ತು.

ಇದನ್ನೂ ಓದಿ: Babar Azam: ಬಾಬರ್ ಅಬ್ಬರಕ್ಕೆ ಕಿಂಗ್ ಕೊಹ್ಲಿಯ ದಾಖಲೆ ಉಡೀಸ್

ಇಂತಹ ಸಣ್ಣ ಪುಟ್ಟ ತಂಡಗಳ ವಿರುದ್ಧ ಬಾಬರ್ ಪಡೆಯು ಹೀನಾಯವಾಗಿ ಸೋಲುತ್ತಿರುವುದು ಇದೀಗ ಪಾಕ್ ಕ್ರಿಕೆಟ್ ಮಂಡಳಿಯ ಚಿಂತೆಯನ್ನು ಹೆಚ್ಚಿಸಿದೆ. ಹೀಗಾಗಿಯೇ ಟಿ20 ವಿಶ್ವಕಪ್ ಬಳಿಕ ತಂಡಕ್ಕೆ ಮೇಜರ್ ಸರ್ಜರಿ ಮಾಡಲಾಗುವುದು ಎಂದು ಪಿಸಿಬಿ ಮುಖ್ಯಸ್ಥ ಮೊಹ್ಸಿನ್ ನಖ್ವಿ ಹೇಳಿದ್ದಾರೆ.

ತಾಜಾ ಸುದ್ದಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್