AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2024: ನ್ಯೂಝಿಲೆಂಡ್​ಗೆ ಪವರ್​ಫುಲ್ ಜಯ: ಆದರೂ ದ್ವಿತೀಯ ಸುತ್ತಿಗೆ ಇಲ್ಲ ಚಾನ್ಸ್​

T20 World Cup 2024: ನ್ಯೂಝಿಲೆಂಡ್ ತಂಡವು ಈಗಾಗಲೇ ಟಿ20 ವಿಶ್ವಕಪ್​ನಿಂದ ಹೊರಬಿದ್ದಿದೆ. ಮೊದಲ ಪಂದ್ಯದಲ್ಲಿ ಅಫ್ಘಾನಿಸ್ತಾನ್ ವಿರುದ್ಧ ಸೋಲನುಭವಿಸುವ ಮೂಲಕ ವಿಶ್ವಕಪ್ ಅಭಿಯಾನ ಆರಂಭಿಸಿದ್ದ ಕೇನ್ ವಿಲಿಯಮ್ಸನ್ ಪಡೆ 2ನೇ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಸೋಲನುಭವಿಸಿತ್ತು. ಈ ಎರಡು ಸೋಲುಗಳಿಂದಾಗಿ ಇದೀಗ ನ್ಯೂಝಿಲೆಂಡ್ ಸೂಪರ್-8 ರೇಸ್​ನಿಂದ ಹೊರಬಿದ್ದಿದೆ.

T20 World Cup 2024: ನ್ಯೂಝಿಲೆಂಡ್​ಗೆ ಪವರ್​ಫುಲ್ ಜಯ: ಆದರೂ ದ್ವಿತೀಯ ಸುತ್ತಿಗೆ ಇಲ್ಲ ಚಾನ್ಸ್​
New Zealand
ಝಾಹಿರ್ ಯೂಸುಫ್
|

Updated on: Jun 15, 2024 | 10:34 AM

Share

T20 World Cup 2024: ಟಿ20 ವಿಶ್ವಕಪ್​ನ 32ನೇ ಪಂದ್ಯದಲ್ಲಿ ನ್ಯೂಝಿಲೆಂಡ್ ತಂಡವು ಜಯಭೇರಿ ಬಾರಿಸಿದೆ. ಮೊದಲ ಪಂದ್ಯದಲ್ಲಿ ಅಫ್ಘಾನಿಸ್ತಾನ್ ವಿರುದ್ಧ ಸೋತಿದ್ದ ಕಿವೀಸ್ ಪಡೆ, 2ನೇ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಮುಗ್ಗರಿಸಿತ್ತು. ಇದೀಗ ಉಗಾಂಡ ವಿರುದ್ಧ ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಝಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ ಉಗಾಂಡ ತಂಡವನ್ನು ಬ್ಯಾಟಿಂಗ್​ಗೆ ಆಹ್ವಾನಿಸಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಉಗಾಂಡ ತಂಡವು ಕಿವೀಸ್ ಪಡೆಯ ಮಾರಕ ದಾಳಿಗೆ ತತ್ತರಿಸಿ ಕೇವಲ 17 ರನ್​ಗಳಿಗೆ 5 ವಿಕೆಟ್ ಕಳೆದುಕೊಂಡಿತು.

ಈ ಹಂತದಲ್ಲಿ ನಾಯಕ ಮಸಾಬಾ 20 ಎಸೆತಗಳನ್ನು ಎದುರಿಸಿ ಕ್ರೀಸ್ ಕಚ್ಚಿ ನಿಂತರು. ಪರಿಣಾಮ ಉಗಾಂಡ ತಂಡವು ಆಲೌಟ್ ಆಗಲು 18.4 ಓವರ್​ಗಳನ್ನು ತೆಗೆದುಕೊಂಡಿತು. ಅಂತಿಮವಾಗಿ 19ನೇ ಓವರ್​ನಲ್ಲಿ ಕೇವಲ 40 ರನ್​ಗಳಿಸಿ ಉಗಾಂಡ ಇನಿಂಗ್ಸ್ ಅಂತ್ಯಗೊಳಿಸಿದೆ.

ನ್ಯೂಝಿಲೆಂಡ್ ಪರ ಕರಾರುವಾಕ್ ದಾಳಿ ಸಂಘಟಿಸಿದ ಟಿಮ್ ಸೌಥಿ 4 ಓವರ್​ಗಳಲ್ಲಿ ಕೇವಲ 4 ರನ್ ನೀಡಿ 3 ವಿಕೆಟ್ ಪಡೆದು ಮಿಂಚಿದರು. ಇನ್ನು ಟ್ರೆಂಟ್ ಬೌಲ್ಟ್, ರಚಿನ್ ರವೀಂದ್ರ, ಮಿಚೆಲ್ ಸ್ಯಾಂಟ್ನರ್ ತಲಾ 2 ವಿಕೆಟ್ ಕಬಳಿಸಿದರು.

41 ರನ್​ಗಳ ಗುರಿಯನ್ನು ಬೆನ್ನತ್ತಿದ ನ್ಯೂಝಿಲೆಂಡ್ ತಂಡವು ಕೇವಲ 5.2 ಓವರ್​ಗಳಲ್ಲಿ 1 ವಿಕೆಟ್ ಕಳೆದುಕೊಂಡು ಗುರಿ ಮುಟ್ಟಿದೆ. ಈ ಮೂಲಕ ಪವರ್​ಪ್ಲೇನಲ್ಲೇ ಪಂದ್ಯ ಮುಗಿಸಿ 9 ವಿಕೆಟ್​ಗಳ ಪವರ್​ಫುಲ್​ ಜಯ ಸಾಧಿಸಿದೆ.

ದ್ವಿತೀಯ ಸುತ್ತಿನಿಂದ ಔಟ್:

ನ್ಯೂಝಿಲೆಂಡ್ ತಂಡವು ಈಗಾಗಲೇ ಟಿ20 ವಿಶ್ವಕಪ್​ನಿಂದ ಹೊರಬಿದ್ದಿದೆ. ಮೊದಲೆರಡು ಪಂದ್ಯಗಳಲ್ಲಿ ಸೋತಿದ್ದ ಕಿವೀಸ್ ಪಡೆ ಮುಂದಿನ ಮ್ಯಾಚ್​ನಲ್ಲಿ ಗೆದ್ದರೂ ಒಟ್ಟು 4 ಅಂಕಗಳನ್ನು ಮಾತ್ರ ಸಂಪಾದಿಸಲಿದೆ.

ಅತ್ತ ವೆಸ್ಟ್ ಇಂಡೀಸ್ ಹಾಗೂ ಅಫ್ಘಾನಿಸ್ತಾನ್ ತಂಡಗಳು ತಲಾ 3 ಗೆಲುವುಗಳೊಂದಿಗೆ 6 ಅಂಕಗಳಿಸಿ ಈಗಾಗಲೇ ಸೂಪರ್-8 ಹಂತಕ್ಕೇರಿದೆ. ಹೀಗಾಗಿ ಮುಂದಿನ ಪಂದ್ಯದಲ್ಲಿ ಗೆದ್ದರೂ ನ್ಯೂಝಿಲೆಂಡ್ ತಂಡಕ್ಕೆ ಮುಂದಿನ ಹಂತಕ್ಕೇರಲು ಸಾಧ್ಯವಾಗುವುದಿಲ್ಲ.

ನ್ಯೂಝಿಲೆಂಡ್ ಪ್ಲೇಯಿಂಗ್ 11: ಡೆವೊನ್ ಕಾನ್ವೆ (ವಿಕೆಟ್ ಕೀಪರ್) , ಫಿನ್ ಅಲೆನ್ , ರಚಿನ್ ರವೀಂದ್ರ , ಕೇನ್ ವಿಲಿಯಮ್ಸನ್ (ನಾಯಕ) , ಡೇರಿಲ್ ಮಿಚೆಲ್ , ಗ್ಲೆನ್ ಫಿಲಿಪ್ಸ್ , ಜೇಮ್ಸ್ ನೀಶಮ್ , ಮಿಚೆಲ್ ಸ್ಯಾಂಟ್ನರ್ , ಟಿಮ್ ಸೌಥಿ , ಟ್ರೆಂಟ್ ಬೌಲ್ಟ್ , ಲಾಕಿ ಫರ್ಗುಸನ್.

ಇದನ್ನೂ ಓದಿ: T20 World Cup 2024: ವಿಶ್ವ ದಾಖಲೆಯ ವಿಜಯ ಸಾಧಿಸಿದ ಇಂಗ್ಲೆಂಡ್

ಉಗಾಂಡ ಪ್ಲೇಯಿಂಗ್ 11: ರೋನಕ್ ಪಟೇಲ್ , ಸೈಮನ್ ಸ್ಸೆಸಾಜಿ , ರಾಬಿನ್ಸನ್ ಒಬುಯಾ , ರಿಯಾಜತ್ ಅಲಿ ಶಾ , ಅಲ್ಪೇಶ್ ರಾಮ್​ಜಾನಿ , ದಿನೇಶ್ ನಕ್ರಾಣಿ , ಕೆನ್ನೆತ್ ವೈಸ್ವಾ , ಬ್ರಿಯಾನ್ ಮಸಾಬಾ (ನಾಯಕ) , ಫ್ರೆಡ್ ಅಚೆಲಂ (ವಿಕೆಟ್ ಕೀಪರ್) , ಜುಮಾ ಮಿಯಾಗಿ , ಕಾಸ್ಮಾಸ್ ಕ್ಯೆವುಟಾ.

Follow Us
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ