AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

VIDEO: ಬಣ್ಣದೋಕುಳಿ, ರಸ್ತೆಗಳು ಬಂದ್… ಕುಣಿದು ಕುಪ್ಪಳಿಸಿದ ಅಫ್ಘಾನಿಸ್ತಾನ್ ಅಭಿಮಾನಿಗಳು

T20 World Cup 2024: ಟಿ20 ವಿಶ್ವಕಪ್​ನ ಸೆಮಿಫೈನಲ್ ಪಂದ್ಯದಲ್ಲಿ ಭಾರತ, ಅಫ್ಘಾನಿಸ್ತಾನ್, ಇಂಗ್ಲೆಂಡ್ ಮತ್ತು ಸೌತ್ ಆಫ್ರಿಕಾ ತಂಡಗಳು ಕಣಕ್ಕಿಳಿಯಲಿದೆ. ಇಲ್ಲಿ ಅಫ್ಘಾನಿಸ್ತಾನ್ ತಂಡಕ್ಕೆ ಸೌತ್ ಆಫ್ರಿಕಾ ಎದುರಾಳಿಯಾದರೆ, ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಮತ್ತು ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯಗಳಲ್ಲಿ ಗೆಲ್ಲುವ ತಂಡ ಫೈನಲ್​ಗೆ ಪ್ರವೇಶಿಸಲಿದೆ.

VIDEO: ಬಣ್ಣದೋಕುಳಿ, ರಸ್ತೆಗಳು ಬಂದ್... ಕುಣಿದು ಕುಪ್ಪಳಿಸಿದ ಅಫ್ಘಾನಿಸ್ತಾನ್ ಅಭಿಮಾನಿಗಳು
Afghanistan
ಝಾಹಿರ್ ಯೂಸುಫ್
|

Updated on: Jun 25, 2024 | 7:03 PM

Share

ಐಸಿಸಿ ಟೂರ್ನಿಯಲ್ಲಿ ಇದೇ ಮೊದಲ ಬಾರಿಗೆ ಅಫ್ಘಾನಿಸ್ತಾನ್ (Afghanistan) ತಂಡ ಸೆಮಿಫೈನಲ್​ಗೇರಿದೆ. ಕಿಂಗ್ಸ್​ಟೌನ್​ನಲ್ಲಿ ನಡೆದ ನಿರ್ಣಾಯಕ ಪಂದ್ಯದಲ್ಲಿ ಬಾಂಗ್ಲಾದೇಶ್ ವಿರುದ್ಧ ರೋಚಕ ಜಯ ಸಾಧಿಸಿ ಅಫ್ಘಾನ್ ಪಡೆ ನಾಕೌಟ್ ಹಂತಕ್ಕೇರಿದೆ. ಇದಕ್ಕೂ ಮುನ್ನ ಈ ಪಂದ್ಯದಲ್ಲಿ ಟಾಸ್ ಗೆದ್ದ ಅಫ್ಘಾನಿಸ್ತಾನ್ ತಂಡದ ನಾಯಕ ರಶೀದ್ ಖಾನ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಅಫ್ಘಾನಿಸ್ತಾನ್ ತಂಡಕ್ಕೆ ಆರಂಭಿಕರಾದ ರಹಮಾನುಲ್ಲಾ ಗುರ್ಬಾಝ್ ಹಾಗೂ ಇಬ್ರಾಹಿಂ ಝದ್ರಾನ್ ಉತ್ತಮ ಆರಂಭ ಒದಗಿಸಿದ್ದರು. ಮೊದಲ ವಿಕೆಟ್​ಗೆ 59 ರನ್​ಗಳ ಜೊತೆಯಾಟವಾಡಿದ ಬಳಿಕ ಇಬ್ರಾಹಿಂ ಝದ್ರಾನ್ (18) ವಿಕೆಟ್ ಒಪ್ಪಿಸಿದರು.

ಆ ಬಳಿಕ ಬಂದ ಅಝ್ಮತುಲ್ಲಾ (10) ಬೇಗನೆ ನಿರ್ಗಮಿಸಿದರೆ, ರಹಮಾನುಲ್ಲಾ ಗುರ್ಬಾಝ್ 43 ರನ್ ಬಾರಿಸಿ ಔಟಾದರು. ಅಂತಿಮ ಹಂತದಲ್ಲಿ ರಶೀದ್ ಖಾನ್ 10 ಎಸೆತಗಳಲ್ಲಿ 3 ಭರ್ಜರಿ ಸಿಕ್ಸ್​​ನೊಂದಿಗೆ 19 ರನ್ ಸಿಡಿಸಿದರು. ಈ ಮೂಲಕ ಅಫ್ಘಾನಿಸ್ತಾನ್ ತಂಡ 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 115 ರನ್ ಕಲೆಹಾಕಿತು.

ಈ ಗುರಿಯನ್ನು ಬೆನ್ನತ್ತಿದ ಬಾಂಗ್ಲಾದೇಶ್ ತಂಡಕ್ಕೆ ಆರಂಭಿಕ ಆಘಾತ ನೀಡುವಲ್ಲಿ ಅಫ್ಘಾನ್ ಬೌಲರ್​ಗಳು ಯಶಸ್ವಿಯಾದರು. ಕೇವಲ 23 ರನ್​ಗಳಿಗೆ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದಾಗ, ಮಳೆ ಕೂಡ ಬರಲಾರಂಭಿಸಿತು.

ಹೀಗಾಗಿ ಒಂದು ಓವರ್​ ಕಡಿತದೊಂದಿಗೆ ಬಾಂಗ್ಲಾದೇಶ್ ತಂಡಕ್ಕೆ 114 ರನ್​ಗಳ ಗುರಿ ನೀಡಲಾಯಿತು. ಈ ಗುರಿಯನ್ನು ಬೆನ್ನತ್ತುವ ವಿಶ್ವಾಸದೊಂದಿಗೆ ಬ್ಯಾಟ್ ಬೀಸಿದ ಲಿಟ್ಟನ್ ದಾಸ್ ಒಂದೆಡೆ ಗಟ್ಟಿಯಾಗಿ ನೆಲೆಯೂರಿದರೆ, ಮತ್ತೊಂದು ತುದಿಯಲ್ಲಿ ಬಾಂಗ್ಲಾ ಬ್ಯಾಟರ್​ಗಳು ಪೆವಿಲಿಯನ್ ಪರೇಡ್ ನಡೆಸಿದರು.

ಇದನ್ನೂ ಓದಿ: T20 World Cup 2024: ಟಿ20 ವಿಶ್ವಕಪ್ ಸೆಮಿಫೈನಲ್ ವೇಳಾಪಟ್ಟಿ

ಪರಿಣಾಮ ಲಿಟ್ಟನ್ ದಾಸ್ (54) ಅರ್ಧಶತಕ ಬಾರಿಸಿ ಅಜೇಯರಾಗಿ ಉಳಿದರು. ಆದರೆ ಬಾಂಗ್ಲಾದೇಶ್ ತಂಡವು 17.5 ಓವರ್​ಗಳಲ್ಲಿ 105 ರನ್​ಗಳಿಸಿ ಆಲೌಟ್ ಆಯಿತು. ಈ ಮೂಲಕ ಅಫ್ಘಾನಿಸ್ತಾನ್ ತಂಡ ಡಕ್​ವರ್ತ್​ ಲೂಯಿಸ್ ನಿಯಮದ ಪ್ರಕಾರ 8 ರನ್​ಗಳ ರೋಚಕ ಜಯ ಸಾಧಿಸಿ ಸೆಮಿಫೈನಲ್​ಗೆ ಪ್ರವೇಶಿಸಿತು.

ತಾಲಿಬಾನಿಗಳ ನಾಡಲ್ಲಿ ಕ್ರಿಕೆಟ್ ಕಲರವ:

ಕೆರಿಬಿಯನ್ ದ್ವೀಪದ ಕಿಂಗ್ಸ್​ಟೌನ್​ನಲ್ಲಿ ಅಫ್ಘಾನಿಸ್ತಾನ್ ತಂಡ ವಿಜಯ ಸಾಧಿಸುತ್ತಿದ್ದಂತೆ, ಅತ್ತ ತಾಲಿಬಾನಿಗಳ ನಾಡದಲ್ಲಿ ಸಂಭ್ರಮ ಮಾಡಿತ್ತು. ಕಾಬೂಲ್ ಸೇರಿದಂತೆ ಅಫ್ಘಾನಿಸ್ತಾನದ ಪ್ರಮುಖ ನಗರಗಳಲ್ಲಿ ಅಭಿಮಾನಿಗಳು ಕುಣಿದು ಕುಪ್ಪಳಿಸಿದರು. ಬಣ್ಣದೋಕುಳಿಯೊಂದಿಗೆ ಸಂಭ್ರಮಿಸಿದರು. ಇದೀಗ ಅಫ್ಘಾನಿಸ್ತಾನಿಗಳ ಸಖತ್ ಸಂಭ್ರಮದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಕ್ರಿಕೆಟ್​ ಪ್ರೇಮಿಗಳಿಂದ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

ಇನ್ನು ಸೆಮಿಫೈನಲ್​ಗೇರಿರುವ ಅಫ್ಘಾನಿಸ್ತಾನ್ ತಂಡವು ನಾಕೌಟ್ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡವನ್ನು ಎದುರಿಸಲಿದೆ. ಜೂನ್ 26 ರಂದು (ಭಾರತದಲ್ಲಿ ಜೂನ್ 27) ನಡೆಯಲಿರುವ ಈ ಪಂದ್ಯವು ಟ್ರಿನಿಡಾಡ್- ಟೊಬಾಗೊದ ಬ್ರಿಯಾನ್ ಲಾರಾ ಕ್ರಿಕೆಟ್ ಅಕಾಡೆಮಿ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಪಂದ್ಯದಲ್ಲೂ ಗೆಲ್ಲುವ ಮೂಲಕ ಅಫ್ಘಾನ್ ಪಡೆ ಫೈನಲ್​ಗೆ ಪ್ರವೇಶಿಸಲಿದೆಯಾ ಕಾದು ನೋಡಬೇಕಿದೆ.

ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?