AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2024: ಮೈ ಮರೆತರೆ ಟೀಮ್ ಇಂಡಿಯಾ ಹೊರಕ್ಕೆ..!

T20 World Cup 2024: ಪ್ರಸ್ತುತ ಅಂಕ ಪಟ್ಟಿಯಲ್ಲಿ ಟೀಮ್ ಇಂಡಿಯಾ 4 ಅಂಕಗಳೊಂದಿಗೆ +2.425 ನೆಟ್ ರನ್ ರೇಟ್ ಹೊಂದಿದೆ. ಇನ್ನು ದ್ವಿತೀಯ ಸ್ಥಾನದಲ್ಲಿರುವ ಆಸ್ಟ್ರೇಲಿಯಾ 2 ಅಂಕಗಳೊಂದಿಗೆ +0.223 ನೆಟ್ ರನ್ ಕಲೆಹಾಕಿದೆ. ಹಾಗೆಯೇ 2 ಅಂಕಗಳೊಂದಿಗೆ -0.650 ನೆಟ್ ರನ್ ರೇಟ್ ಹೊಂದಿರುವ ಅಫ್ಘಾನಿಸ್ತಾನ್ ತಂಡವು ಮೂರನೇ ಸ್ಥಾನದಲ್ಲಿದೆ.

T20 World Cup 2024: ಮೈ ಮರೆತರೆ ಟೀಮ್ ಇಂಡಿಯಾ ಹೊರಕ್ಕೆ..!
IND-AFG-AUS
ಝಾಹಿರ್ ಯೂಸುಫ್
|

Updated on:Jun 23, 2024 | 12:29 PM

Share

t20 World Cup 2024: ಟಿ20 ವಿಶ್ವಕಪ್​ನ ಸೂಪರ್-8 ಸುತ್ತಿನ ಪಂದ್ಯಗಳು ರಣರೋಚಕ ಘಟ್ಟದತ್ತ ಸಾಗುತ್ತಿದೆ. ಗ್ರೂಪ್-1 ರಲ್ಲಿ ಕಣಕ್ಕಿಳಿದಿರುವ 4 ತಂಡಗಳಲ್ಲಿ ಮೂರು ತಂಡಗಳು ಸೆಮಿಫೈನಲ್​ ರೇಸ್​ನಲ್ಲಿದೆ. ಅದರಲ್ಲೂ ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಪಂದ್ಯವು ಕ್ವಾರ್ಟರ್ ಫೈನಲ್ ಫೈಟ್ ಆಗಿ ಮಾರ್ಪಟ್ಟಿದೆ. ಜೂನ್ 24 ರಂದು ನಡೆಯಲಿರುವ ಈ ಪಂದ್ಯದಲ್ಲಿ ಗೆದ್ದರೆ ಮಾತ್ರ ಟೀಮ್ ಇಂಡಿಯಾ ನೇರವಾಗಿ ಸೆಮಿ ಫೈನಲ್​ಗೆ ಪ್ರವೇಶಿಸಲಿದೆ. ಒಂದು ವೇಳೆ ಈ ಮ್ಯಾಚ್​ನಲ್ಲಿ ಆಸ್ಟ್ರೇಲಿಯಾ ತಂಡ ಗೆದ್ದರೆ ನೆಟ್​ ರನ್ ರೇಟ್ ಗಣನೆಗೆ ಬರಲಿದೆ.

ಪ್ರಸ್ತುತ ಅಂಕ ಪಟ್ಟಿಯಲ್ಲಿ ಟೀಮ್ ಇಂಡಿಯಾ 4 ಅಂಕಗಳೊಂದಿಗೆ +2.425 ನೆಟ್ ರನ್ ರೇಟ್ ಹೊಂದಿದೆ. ಇನ್ನು ದ್ವಿತೀಯ ಸ್ಥಾನದಲ್ಲಿರುವ ಆಸ್ಟ್ರೇಲಿಯಾ 2 ಅಂಕಗಳೊಂದಿಗೆ +0.223 ನೆಟ್ ರನ್ ಕಲೆಹಾಕಿದೆ. ಹಾಗೆಯೇ 2 ಅಂಕಗಳೊಂದಿಗೆ -0.650 ನೆಟ್ ರನ್ ರೇಟ್ ಹೊಂದಿರುವ ಅಫ್ಘಾನಿಸ್ತಾನ್ ತಂಡವು ಮೂರನೇ ಸ್ಥಾನದಲ್ಲಿದೆ. ಇನ್ನು 2 ಪಂದ್ಯಗಳಲ್ಲೂ ಸೋಲನುಭವಿಸಿರುವ ಬಾಂಗ್ಲಾದೇಶ್ ತಂಡ -2.489 ನೆಟ್ ರನ್ ರೇಟ್​ನೊಂದಿಗೆ ನಾಲ್ಕನೇ ಸ್ಥಾನದಲ್ಲಿದೆ.

ಸೆಮಿಫೈನಲ್ ಹಾದಿ:

  • ಭಾರತ ತಂಡವು ಆಸ್ಟ್ರೇಲಿಯಾ ತಂಡವನ್ನು ಮಣಿಸಿದರೆ ನೇರವಾಗಿ ಸೆಮಿಫೈನಲ್​ಗೆ ಅರ್ಹತೆ ಪಡೆಯಲಿದೆ.
  • ಆಸ್ಟ್ರೇಲಿಯಾ ತಂಡ ಭಾರತ ತಂಡಕ್ಕೆ ಸೋಲುಣಿಸಿ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದರೆ, ಟೀಮ್ ಇಂಡಿಯಾ ಅಫ್ಘಾನಿಸ್ತಾನ್ ತಂಡದ ಫಲಿತಾಂಶವನ್ನು ಎದುರು ನೋಡಬೇಕಾಗುತ್ತದೆ.
  • ಒಂದು ವೇಳೆ ಭಾರತ ತಂಡ ಆಸ್ಟ್ರೇಲಿಯಾವನ್ನು ಸೋಲಿಸಿದರೆ, ಅಫ್ಘಾನಿಸ್ತಾನ್ ತಂಡ ಬಾಂಗ್ಲಾದೇಶ್ ವಿರುದ್ಧ ಗೆದ್ದು ಸೆಮಿಫೈನಲ್​ ಹಂತಕ್ಕೇರಬಹುದು.
  • ಆಸ್ಟ್ರೇಲಿಯಾ ತಂಡ ಟೀಮ್ ಇಂಡಿಯಾವನ್ನು ಸೋಲಿಸಿ ಉತ್ತಮ ನೆಟ್ ರನ್ ರೇಟ್​ನೊಂದಿಗೆ ಅಗ್ರಸ್ಥಾನಕ್ಕೇರಿದರೆ, ಭಾರತ ತಂಡವನ್ನು ನೆಟ್​ ರನ್ ರೇಟ್ ಮೂಲಕ ಹಿಂದಿಕ್ಕಿ ಸೆಮಿಫೈನಲ್​ಗೇರುವ ಅವಕಾಶ ಅಫ್ಘಾನಿಸ್ತಾನ್ ತಂಡಕ್ಕಿದೆ.

ಮೈಮರೆತರೆ ಟೀಮ್ ಇಂಡಿಯಾ ಹೊರಕ್ಕೆ:

ಆಸ್ಟ್ರೇಲಿಯಾ ವಿರುದ್ಧ ಟೀಮ್ ಇಂಡಿಯಾ ಹೀನಾಯವಾಗಿ ಸೋಲನುಭವಿಸಿದರೆ, ಅಫ್ಘಾನಿಸ್ತಾನ್ ತಂಡಕ್ಕೆ ಸೆಮಿಫೈನಲ್​ಗೇರುವ ಅವಕಾಶ ಹೆಚ್ಚಾಗಲಿದೆ. ಏಕೆಂದರೆ ಸೂಪರ್-8 ಸುತ್ತಿನ ಕೊನೆಯ ಪಂದ್ಯದಲ್ಲಿ ಅಫ್ಘಾನಿಸ್ತಾನ್ ಮತ್ತು ಬಾಂಗ್ಲಾದೇಶ್ ತಂಡಗಳು ಮುಖಾಮುಖಿಯಾಗಲಿದೆ.

ಇದರಿಂದ ಎಷ್ಟು ರನ್​ಗಳ ಅಂತರದಿಂದ ಗೆಲ್ಲಬೇಕೆಂಬ ಸ್ಪಷ್ಟ ಚಿತ್ರಣ ಅಫ್ಘಾನಿಸ್ತಾನ್ ತಂಡದ ಮುಂದಿರಲಿದೆ. ಈ ಮೂಲಕ ನೆಟ್ ರನ್ ರೇಟ್​ ಮೂಲಕ ಭಾರತ ಅಥವಾ ಆಸ್ಟ್ರೇಲಿಯಾ ತಂಡವನ್ನು ಹಿಂದಿಕ್ಕಿ ಸೆಮಿಫೈನಲ್​ಗೇರುವ ಅವಕಾಶ ಅಫ್ಘಾನಿಸ್ತಾನ್ ತಂಡಕ್ಕೆ ಇರಲಿದೆ. ಹೀಗಾಗಿ ಆಸ್ಟ್ರೇಲಿಯಾ ವಿರುದ್ಧ ಟೀಮ್ ಇಂಡಿಯಾ ಸೋಲುವ ಸಂದರ್ಭ ಎದುರಾದರೆ ನೆಟ್ ರನ್ ರೇಟ್ ಕುಸಿಯದಂತೆ ನೋಡಿಕೊಳ್ಳಬೇಕಾಗುತ್ತದೆ.

ಟೀಮ್ ಇಂಡಿಯಾ ಏನು ಮಾಡಬೇಕು?

ಭಾರತ ತಂಡವು ಆಸ್ಟ್ರೇಲಿಯಾ ವಿರುದ್ಧ ಗೆದ್ದರೆ ನೇರವಾಗಿ ಸೆಮಿಫೈನಲ್​ಗೇರಲಿದೆ. ಒಂದು ವೇಳೆ ಟೀಮ್ ಇಂಡಿಯಾ ಆಸೀಸ್ ವಿರುದ್ಧ ಸೋಲುವ ಪರಿಸ್ಥಿತಿ ಎದುರಾದರೆ ಹೀನಾಯ ಸೋಲನ್ನು ತಪ್ಪಿಸಿಕೊಳ್ಳಬೇಕು. ಈ ಮೂಲಕ ನೆಟ್ ರನ್ ರೇಟ್​ ಕುಸಿಯದಂತೆ ನೋಡಿಕೊಳ್ಳಬೇಕಿದೆ.

ಭಾರತ ತಂಡವು ಅಂಕ ಪಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೆ ಕುಸಿದರೆ ಟಿ20 ವಿಶ್ವಕಪ್​ನಿಂದ ಹೊರಬೀಳುವ ಸಾಧ್ಯತೆಯಿದೆ. ಏಕೆಂದರೆ ಕೊನೆಯ ಪಂದ್ಯದ ಮೂಲಕ ದ್ವಿತೀಯ ಸ್ಥಾನಕ್ಕೇರುವ ಅವಕಾಶ ಅಫ್ಘಾನಿಸ್ತಾನ್ ತಂಡಕ್ಕಿದೆ. ಹೀಗಾಗಿ ಟೀಮ್ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ ಗೆಲ್ಲಬೇಕು ಅಥವಾ ಹೀನಾಯ ಸೋಲನ್ನು ತಪ್ಪಿಸಿಕೊಳ್ಳಬೇಕು.

ಇದನ್ನೂ ಓದಿ:

ಈ ಮೂಲಕ ಟೀಮ್ ಇಂಡಿಯಾ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಕಾಯ್ದುಕೊಳ್ಳಬೇಕು. ಇದರಿಂದ ಭಾರತದ ವಿರುದ್ಧ ಗೆದ್ದರೂ ಆಸ್ಟ್ರೇಲಿಯಾ ಅಂಕ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲೇ ಇರಲಿದೆ. ಅತ್ತ ಬಾಂಗ್ಲಾದೇಶ್ ವಿರುದ್ಧ ಅಫ್ಘಾನಿಸ್ತಾನ್ ಅಮೋಘ ಗೆಲುವು ದಾಖಲಿಸಿ, ಉತ್ತಮ ನೆಟ್ ರನ್​ ರೇಟ್​ ನೆರವಿನಿಂದ ಆಸ್ಟ್ರೇಲಿಯಾ ತಂಡವನ್ನು ಹಿಂದಿಕ್ಕಿ ಅಂಕ ಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಬಹುದು. ಈ ಮೂಲಕ ಅಫ್ಘಾನಿಸ್ತಾನ್ ತಂಡ ಸೆಮಿಫೈನಲ್​ಗೆ ಪ್ರವೇಶಿಸಬಹುದು.

ಇದನ್ನೂ ಓದಿ: Virat Kohli: ದಾಖಲೆಗಳ ಸರದಾರನ ಹೆಸರಿಗೆ 3 ವಿಶ್ವ ದಾಖಲೆ ಸೇರ್ಪಡೆ

ಅಂದರೆ ಇಲ್ಲಿ ಭಾರತ ತಂಡವು ಆಸ್ಟ್ರೇಲಿಯಾ ವಿರುದ್ಧ ಗೆಲುವು ಸಾಧಿಸಬೇಕು. ಇಲ್ಲ ಹೀನಾಯಕ ಸೋಲನ್ನು ತಪ್ಪಿಸಿಕೊಳ್ಳಬೇಕಾದ ಅನಿವಾರ್ಯತೆಯಿದೆ. ಒಂದು ವೇಳೆ ಅಂತಿಮ ಪಂದ್ಯದಲ್ಲಿ ವಿಶ್ವ ಚಾಂಪಿಯನ್ನರ ವಿರುದ್ಧ ಭಾರತ ಮೈಮರೆತರೆ ಟಿ20 ವಿಶ್ವಕಪ್​ನಿಂದಲೇ ಹೊರಬೀಳಬಹುದು.

Published On - 10:54 am, Sun, 23 June 24

Follow Us
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಬಿಡದಿ ಟೌನ್​ಶಿಪ್​ ಯೋಜನೆ ವಿರೋಧಿಸಿ ಜೂನ್ 22ರಂದು ಬೃಹತ್ ಪ್ರತಿಭಟನೆ!
ಬಿಡದಿ ಟೌನ್​ಶಿಪ್​ ಯೋಜನೆ ವಿರೋಧಿಸಿ ಜೂನ್ 22ರಂದು ಬೃಹತ್ ಪ್ರತಿಭಟನೆ!
ಕಲಬುರಗಿಯಲ್ಲಿ ನಕಲಿ ಡಿಎಪಿ ರಸಗೊಬ್ಬರ ಮಾರಾಟ: ರೈತರ ತೀವ್ರ ಆಕ್ರೋಶ
ಕಲಬುರಗಿಯಲ್ಲಿ ನಕಲಿ ಡಿಎಪಿ ರಸಗೊಬ್ಬರ ಮಾರಾಟ: ರೈತರ ತೀವ್ರ ಆಕ್ರೋಶ
ಬಿಡದಿ ಟೌನ್​ಶಿಪ್​​ ಯೋಜನೆ ಲೂಟಿ ಸ್ಕೀಮ್​​​ ಡೌಟೇ ಬೇಡ: ಕುಮಾರಸ್ವಾಮಿ
ಬಿಡದಿ ಟೌನ್​ಶಿಪ್​​ ಯೋಜನೆ ಲೂಟಿ ಸ್ಕೀಮ್​​​ ಡೌಟೇ ಬೇಡ: ಕುಮಾರಸ್ವಾಮಿ
ಕೊಲೆ ಆರೋಪಿಗಳಿಂದ ಜೈಲಿನಲ್ಲಿ ಪುಂಡಾಟ: ವಾರ್ಡನ್ ಮೇಲೆ ಹಲ್ಲೆ!
ಕೊಲೆ ಆರೋಪಿಗಳಿಂದ ಜೈಲಿನಲ್ಲಿ ಪುಂಡಾಟ: ವಾರ್ಡನ್ ಮೇಲೆ ಹಲ್ಲೆ!
‘ಯತ್ನಾಳ್ ಯಾವುದೋ ಒಂದು ಕೋತಿಯ ಬ್ರೀಡ್’: ಪ್ರದೀಪ್ ಈಶ್ವರ್ ವಾಗ್ದಾಳಿ
‘ಯತ್ನಾಳ್ ಯಾವುದೋ ಒಂದು ಕೋತಿಯ ಬ್ರೀಡ್’: ಪ್ರದೀಪ್ ಈಶ್ವರ್ ವಾಗ್ದಾಳಿ
ಕೆಆರ್​ಎಸ್​ನಲ್ಲಿ ಕುಸಿದ ನೀರಿನ ಮಟ್ಟ; ಸಂಪೂರ್ಣ ಗೋಚರಿಸುತ್ತಿರುವ ದೇಗುಲ!
ಕೆಆರ್​ಎಸ್​ನಲ್ಲಿ ಕುಸಿದ ನೀರಿನ ಮಟ್ಟ; ಸಂಪೂರ್ಣ ಗೋಚರಿಸುತ್ತಿರುವ ದೇಗುಲ!
ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ನಿರ್ಮಲಾ ಸೀತಾರಾಮನ್ ಭೇಟಿ
ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ನಿರ್ಮಲಾ ಸೀತಾರಾಮನ್ ಭೇಟಿ
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದ ನಿರ್ಮಲಾ ಸೀತಾರಾಮನ್
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದ ನಿರ್ಮಲಾ ಸೀತಾರಾಮನ್
24 ಫೋರ್, 2 ಭರ್ಜರಿ ಸಿಕ್ಸ್​: ಸಿಡಿಲಬ್ಬರದ ಸೆಂಚುರಿ ಸಿಡಿಸಿದ ಕಾಕ್ಸ್​
24 ಫೋರ್, 2 ಭರ್ಜರಿ ಸಿಕ್ಸ್​: ಸಿಡಿಲಬ್ಬರದ ಸೆಂಚುರಿ ಸಿಡಿಸಿದ ಕಾಕ್ಸ್​
ರಾಮ್ ಚರಣ್ ಬಾಡಿಗಾರ್ಡ್ ಕೆವಿನ್ ಭರ್ಜರಿ ಕಸರತ್ತು; ವಿಡಿಯೋ ವೈರಲ್
ರಾಮ್ ಚರಣ್ ಬಾಡಿಗಾರ್ಡ್ ಕೆವಿನ್ ಭರ್ಜರಿ ಕಸರತ್ತು; ವಿಡಿಯೋ ವೈರಲ್