AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2024: ಇಂಚುಗಳ ಅಂತರದಲ್ಲಿ ಸೋತ ನೇಪಾಳ..!

T20 World Cup 2024: ನೇಪಾಳ ವಿರುದ್ಧದ ಗೆಲುವಿನೊಂದಿಗೆ ಸೌತ್ ಆಫ್ರಿಕಾ ತಂಡವು ಗ್ರೂಪ್-ಡಿ ನಲ್ಲಿ ಸೋಲಿಲ್ಲದ ಸರದಾರನಾಗಿ ಲೀಗ್ ಹಂತದ ಪಂದ್ಯಗಳನ್ನು ಮುಗಿಸಿದೆ. ಈ ಮೂಲಕ ಸೌತ್ ಆಫ್ರಿಕಾ ಒಟ್ಟು 8 ಅಂಕಗಳೊಂದಿಗೆ ದ್ವಿತೀಯ ಸುತ್ತಿಗೆ ಪ್ರವೇಶಿಸಿದೆ. ಇನ್ನು ನೇಪಾಳ ತಂಡವು ತನ್ನ ಮುಂದಿನ ಪಂದ್ಯದಲ್ಲಿ ಬಾಂಗ್ಲಾದೇಶ್ ತಂಡವನ್ನು ಎದುರಿಸಲಿದೆ.

T20 World Cup 2024: ಇಂಚುಗಳ ಅಂತರದಲ್ಲಿ ಸೋತ ನೇಪಾಳ..!
NEP vs SA
ಝಾಹಿರ್ ಯೂಸುಫ್
|

Updated on:Jun 15, 2024 | 9:07 AM

Share

T20 World Cup 2024: ಟಿ20 ವಿಶ್ವಕಪ್​ನ 31ನೇ ಪಂದ್ಯದಲ್ಲಿ ಸೌತ್ ಆಫ್ರಿಕಾ ವಿರುದ್ಧ ನೇಪಾಳ ತಂಡವು ವಿರೋಚಿತ ಸೋಲನುಭವಿಸಿದೆ. ಕಿಂಗ್​ಸ್ಟೌನ್​ನ ಅರ್ನೋಸ್ ವೇಲ್ ಗ್ರೌಂಡ್​ನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ನೇಪಾಳ ತಂಡವು ಬೌಲಿಂಗ್ ಆಯ್ದುಕೊಂಡಿತ್ತು. ಅದರಂತೆ ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ತಂಡಕ್ಕೆ ಆರಂಭಿಕ ಆಟಗಾರ ರೀಝ ಹೆಂಡ್ರಿಕ್ಸ್ ಉತ್ತಮ ಆರಂಭ ಒದಗಿಸಿದ್ದರು.

ಎಚ್ಚರಿಕೆಯ ಬ್ಯಾಟಿಂಗ್ ಪ್ರದರ್ಶಿಸಿದ ರೀಝ ಹೆಂಡ್ರಿಕ್ಸ್ 49 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 5 ಫೋರ್​ಗಳೊಂದಿಗೆ 43 ರನ್ ಬಾರಿಸಿದರೆ, ಕ್ವಿಂಟನ್ ಡಿಕಾಕ್ ಕೇವಲ 10 ರನ್​ಗಳಿಸಿ ಔಟಾಗಿದ್ದರು. ಇನ್ನು ಐಡೆನ್ ಮಾರ್ಕ್ರಾಮ್ (15) ಹಾಗೂ ಹೆನ್ರಿಕ್ ಕ್ಲಾಸೆನ್ (3) ಬೇಗನೆ ವಿಕೆಟ್ ಒಪ್ಪಿಸಿದರು.

ಇದಾಗ್ಯೂ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಟ್ರಿಸ್ಟನ್ ಸ್ಟಬ್ಸ್ 18 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 2 ಫೋರ್​ಗಳೊಂದಿಗೆ 27 ರನ್ ಸಿಡಿಸಿದರು. ಈ ಮೂಲಕ ಸೌತ್ ಆಫ್ರಿಕಾ ತಂಡವು 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 115 ರನ್ ಕಲೆಹಾಕಿತು.

ನೇಪಾಳ ಪರ ಕುಶಾಲ್ ಭುರ್ಟೆಲ್ 4 ಓವರ್​ಗಳಲ್ಲಿ 19 ರನ್ ನೀಡಿ 4 ವಿಕೆಟ್ ಕಬಳಿಸಿದರೆ, ದೀಪೇಂದ್ರ ಸಿಂಗ್ 4 ಓವರ್​ಗಳಲ್ಲಿ 21 ರನ್ ನೀಡಿ 3 ವಿಕೆಟ್ ಪಡೆದು ಮಿಂಚಿದರು.

ನೇಪಾಳ ತಂಡದ ಕೆಚ್ಚೆದೆಯ ಹೋರಾಟ:

116 ರನ್​ಗಳ ಗುರಿ ಪಡೆದ ನೇಪಾಳ ತಂಡವು ಉತ್ತಮ ಆರಂಭ ಪಡೆದಿತ್ತು. ಸೌತ್ ಆಫ್ರಿಕಾದ ಅನುಭವಿ ವೇಗಿಗಳ ವಿರುದ್ಧ ಮೊದಲ ವಿಕೆಟ್​ಗೆ ಆರಂಭಿಕರಾದ ಕುಶಾಲ್ ಭುರ್ಟೆಲ್ ಹಾಗೂ ಆಸಿಫ್ ಶೇಖ್ 35 ರನ್​ಗಳ ಜೊತೆಯಾಟವಾಡಿದ್ದರು.

ಆದರೆ 8ನೇ ಓವರ್​ನಲ್ಲಿ ಕುಶಾಲ್ ಭುರ್ಟೆಲ್ (13) ಔಟಾದರು. ಇದರ ಬೆನ್ನಲ್ಲೇ ರೋಹಿತ್ ಪೌಡೆಲ್ (0) ಕೂಡ ಬಂದ ವೇಗದಲ್ಲೇ ಹಿಂತಿರುಗಿದರು. ಇನ್ನು ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಅನಿಲ್ ಸಾಹ್ 24 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 3 ಫೋರ್​ಗಳೊಂದಿಗೆ 27 ರನ್​ಗಳ ಕೊಡುಗೆ ನೀಡಿದರು.

ಇದಾಗ್ಯೂ ಮತ್ತೊಂದೆಡೆ ಆಸಿಫ್ ಶೇಖ್ ಜವಾಬ್ದಾರಿಯುತ ಬ್ಯಾಟಿಂಗ್ ಮುಂದುವರೆಸಿದರು. 49 ಎಸೆತಗಳನ್ನು ಎದುರಿಸಿದ ಆಸಿಫ್ 1 ಸಿಕ್ಸ್ ಹಾಗೂ 4 ಫೋರ್​ಗಳೊಂದಿಗೆ 42 ರನ್ ಬಾರಿಸಿ ಔಟಾದರು. ಈ ವೇಳೆಗೆ ನೇಪಾಳ ತಂಡವು 15 ಓವರ್​ಗಳಲ್ಲಿ 100 ರನ್ ಕಲೆಹಾಕಿತ್ತು.

ಅಂತಿಮ 2 ಓವರ್​ಗಳಲ್ಲಿ ನೇಪಾಳ ತಂಡಕ್ಕೆ 16 ರನ್​ಗಳ ಅವಶ್ಯಕತೆಯಿತ್ತು. ಅನ್ರಿಕ್ ನೋಕಿಯಾ ಎಸೆದ 19ನೇ ಓವರ್​ನ ಮೊದಲ 4 ಎಸೆತಗಳಲ್ಲಿ ಯಾವುದೇ ರನ್ ಮೂಡಿ ಬಂದಿರಲಿಲ್ಲ. 5ನೇ ಎಸೆತದಲ್ಲಿ ಸೋಂಪಾಲ್ ಕಮಿ ಭರ್ಜರಿ ಸಿಕ್ಸ್ ಸಿಡಿಸಿದರು. ಇನ್ನು ಕೊನೆಯ ಎಸೆತದಲ್ಲಿ 2 ರನ್ ಕಲೆಹಾಕಿದರು.

ಅದರಂತೆ ಕೊನೆಯ 6 ಎಸೆತಗಳಲ್ಲಿ ನೇಪಾಳ ತಂಡಕ್ಕೆ 8 ರನ್​ಗಳ ಅವಶ್ಯಕತೆಯಿತ್ತು. ಒಟ್ನೀಲ್ ಬಾರ್ಟ್ಮನ್ ಎಸೆದ ಕೊನೆಯ ಓವರ್​ನ ಮೊದಲ 2 ಎಸೆತಗಳನ್ನು ಎದುರಿಸಿದ ಗುಲ್ಶನ್ ಜಾ ಯಾವುದೇ ರನ್ ಕಲೆಹಾಕಲಿಲ್ಲ.

3ನೇ ಎಸೆತದಲ್ಲಿ ಗುಲ್ಶನ್ ಫೋರ್ ಬಾರಿಸಿದರು. 4ನೇ ಎಸೆತದಲ್ಲಿ ಮತ್ತೆರಡು ರನ್ ಕಲೆಹಾಕಿದರು. 5ನೇ ಎಸೆತದಲ್ಲಿ ಯಾವುದೇ ರನ್ ಇಲ್ಲ. ಕೊನೆಯ ಎಸೆತದಲ್ಲಿ 2 ರನ್​ಗಳು ಬೇಕಿತ್ತು. ಬಾರ್ಟ್ಮನ್ ಎಸೆದ ಚೆಂಡು ವಿಕೆಟ್ ಕೀಪರ್ ಕೈ ಸೇರಿತು. ಇತ್ತ ನೇಪಾಳ ಬ್ಯಾಟರ್​ಗಳು ರನ್​ಗಾಗಿ ಓಡಿದರು.

ಆದರೆ ನಿಧಾನಗತಿಯ ಓಟದಿಂದಾಗಿ ಗುಲ್ಶನ್ ಜಾ ನಾನ್​ ಸ್ಟ್ರೈಕರ್ ಎಂಡ್​ನಲ್ಲಿ ರನೌಟ್ ಆದರು. ಈ ಮೂಲಕ ಇಂಚುಗಳ ಅಂತರದಿಂದ ನೇಪಾಳ ತಂಡವು ಸೋಲನುಭವಿಸಿತು. ಈ ಮೂಲಕ ಸೌತ್ ಆಫ್ರಿಕಾ ತಂಡವು ಕೇವಲ 1 ರನ್​ಗಳ ರೋಚಕ ಜಯ ಸಾಧಿಸಿದೆ. ಈ ವಿರೋಚಿತ ಸೋಲಿನ ಬೆನ್ನಲ್ಲೇ ನೇಪಾಳ ಯುವ ಪಡೆಯ ಭರ್ಜರಿ ಪ್ರದರ್ಶನಕ್ಕೆ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

ಅಂತಿಮ ಓವರ್​ನ ಕೊನೆಯ ಎಸೆತದ ವಿಡಿಯೋ:

ಸೌತ್ ಆಫ್ರಿಕಾ ಪ್ಲೇಯಿಂಗ್ 11: ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್) , ರೀಝ ಹೆಂಡ್ರಿಕ್ಸ್ , ಐಡೆನ್ ಮಾರ್ಕ್ರಾಮ್ (ನಾಯಕ) , ಹೆನ್ರಿಚ್ ಕ್ಲಾಸೆನ್ , ಡೇವಿಡ್ ಮಿಲ್ಲರ್ , ಟ್ರಿಸ್ಟನ್ ಸ್ಟಬ್ಸ್ , ಮಾರ್ಕೊ ಯಾನ್ಸೆನ್ , ಕಗಿಸೊ ರಬಾಡಾ , ಅನ್ರಿಕ್ ನೋಕಿಯಾ, ಒಟ್ನೀಲ್ ಬಾರ್ಟ್ಮನ್ , ತಬ್ರೇಝ್ ಶಮ್ಸಿ.

ಇದನ್ನೂ ಓದಿ: T20 World Cup 2026: ಭಾರತದಲ್ಲಿ ನಡೆಯಲಿರುವ ವಿಶ್ವಕಪ್​ಗೆ ನೇರ ಅರ್ಹತೆ ಪಡೆದ ಅಮೆರಿಕ..!

ನೇಪಾಳ ಪ್ಲೇಯಿಂಗ್ 11: ಕುಶಾಲ್ ಭುರ್ಟೆಲ್ , ಆಸಿಫ್ ಶೇಖ್ (ವಿಕೆಟ್ ಕೀಪರ್) , ಅನಿಲ್ ಸಾಹ್ , ರೋಹಿತ್ ಪೌಡೆಲ್ (ನಾಯಕ) , ಕುಶಾಲ್ ಮಲ್ಲಾ , ದೀಪೇಂದ್ರ ಸಿಂಗ್ ಐರಿ , ಗುಲ್ಶನ್ ಜಾ , ಸೋಂಪಾಲ್ ಕಾಮಿ , ಕರಣ್ ಕೆಸಿ , ಸಂದೀಪ್ ಲಮಿಚಾನೆ , ಅಬಿನಾಶ್ ಬೋಹರಾ.

Published On - 9:05 am, Sat, 15 June 24

Follow Us
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಬರೋಬ್ಬರಿ 6 ಕಿ.ಮೀ. ಓಡಿದ ದಳಪತಿ ವಿಜಯ್
ಬರೋಬ್ಬರಿ 6 ಕಿ.ಮೀ. ಓಡಿದ ದಳಪತಿ ವಿಜಯ್
ಮಂತ್ರಾಲಯಕ್ಕೆ ಭಕ್ತ ಸಾಗರ: 21 ದಿನಗಳಲ್ಲೇ ಬಂತು ಕೋಟಿ ಕೋಟಿ ಕಾಣಿಕೆ!
ಮಂತ್ರಾಲಯಕ್ಕೆ ಭಕ್ತ ಸಾಗರ: 21 ದಿನಗಳಲ್ಲೇ ಬಂತು ಕೋಟಿ ಕೋಟಿ ಕಾಣಿಕೆ!
ಚಲಿಸುತ್ತಿದ್ದ ಓಮಿನಿ ಕಾರಿನಿಂದ ಕೆಳಗೆ ಬಿದ್ದ ಐವರು ಮಕ್ಕಳು!
ಚಲಿಸುತ್ತಿದ್ದ ಓಮಿನಿ ಕಾರಿನಿಂದ ಕೆಳಗೆ ಬಿದ್ದ ಐವರು ಮಕ್ಕಳು!