Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2024: ಒಂದೇ ಓವರ್​ನಲ್ಲಿ 36 ರನ್​ ನೀಡಿದ ಅಫ್ಘಾನ್ ಬೌಲರ್

T20 World Cup 2024: ವೆಸ್ಟ್ ಇಂಡೀಸ್ ನೀಡಿದ 219 ರನ್​ಗಳ ಕಠಿಣ ಗುರಿಯನ್ನು ಬೆನ್ನತ್ತಿದ ಅಫ್ಘಾನಿಸ್ತಾನ್ ತಂಡವು ನಿರೀಕ್ಷಿತ ಆರಂಭ ಪಡೆಯುವಲ್ಲಿ ವಿಫಲವಾಯಿತು. ಕೇವಲ 63 ರನ್​ಗಳಿಗೆ 5 ಪ್ರಮುಖ ವಿಕೆಟ್ ಕಳೆದುಕೊಂಡು ಸಂಕಷ್ಟ ಸಿಲುಕಿದ ಅಫ್ಘಾನಿಸ್ತಾನ್ ವಿರುದ್ಧ ವೆಸ್ಟ್ ಇಂಡೀಸ್ ಬೌಲರ್​ಗಳು ಪಾರಾಕ್ರಮ ಮೆರೆದರು. ಪರಿಣಾಮ 114 ರನ್​ಗೆ ಅಫ್ಘಾನ್ ತಂಡ ಆಲೌಟ್ ಆಯಿತು.

T20 World Cup 2024: ಒಂದೇ ಓವರ್​ನಲ್ಲಿ 36 ರನ್​ ನೀಡಿದ ಅಫ್ಘಾನ್ ಬೌಲರ್
WI vs AFG
Follow us
ಝಾಹಿರ್ ಯೂಸುಫ್
|

Updated on: Jun 18, 2024 | 3:55 PM

T20 World Cup 2024: ಟಿ20 ವಿಶ್ವಕಪ್​ನ ಮೊದಲ ಸುತ್ತಿನ ಕೊನೆಯ ಪಂದ್ಯದಲ್ಲಿ ಆತಿಥೇಯ ವೆಸ್ಟ್ ಇಂಡೀಸ್ ಬ್ಯಾಟರ್​ಗಳು ಅಕ್ಷರಶಃ ಅಬ್ಬರಿಸಿದ್ದಾರೆ. ಸೆಂಟ್ ಲೂಸಿಯಾದ ಡಾರೆನ್ ಸ್ಯಾಮಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಅಫ್ಘಾನಿಸ್ತಾನ್ ತಂಡದ ನಾಯಕ ರಶೀದ್ ಖಾನ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ತಂಡಕ್ಕೆ ಜಾನ್ಸನ್ ಚಾರ್ಲ್ಸ್ಸ್ ಸ್ಪೋಟಕ ಆರಂಭ ಒದಗಿಸಿದ್ದರು.

ಕೇವಲ 27 ಎಸೆತಗಳನ್ನು ಎದುರಿಸಿದ ಜಾನ್ಸನ್ ಚಾರ್ಲ್ಸ್​ 8 ಫೋರ್​ಗಳೊಂದಿಗೆ 43 ರನ್ ಬಾರಿಸಿದ್ದರು. ಇನ್ನು ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ನಿಕೋಲಸ್ ಪೂರನ್ ತೂಫಾನ್ ಬ್ಯಾಟಿಂಗ್ ಪ್ರದರ್ಶಿಸಿದರು.

ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದ ಪೂರನ್ 53 ಎಸೆತಗಳಲ್ಲಿ 8 ಭರ್ಜರಿ ಸಿಕ್ಸ್ ಹಾಗೂ 6 ಫೋರ್​ಗಳೊಂದಿಗೆ 98 ರನ್ ಚಚ್ಚಿದರು. ಅಲ್ಲದೆ ಕೇವಲ 2 ರನ್​ಗಳಿಂದ ಶತಕ ವಂಚಿತರಾಗಿ ಪೆವಿಲಿಯನ್​ಗೆ ಹಿಂತಿರುಗಿದರು.

ಇನ್ನು ರೋವ್​ಮನ್ ಪೊವೆಲ್ (26) ಹಾಗೂ ಶಾಯ್ ಹೋಪ್ (25) ಕೊನೆಯ ಓವರ್​ಗಳಲ್ಲಿ ಅಬ್ಬರಿಸುವ ಮೂಲಕ ತಂಡದ ಮೊತ್ತವನ್ನು 200ರ ಗಡಿದಾಟಿಸಿದರು. ಈ ಮೂಲಕ ವೆಸ್ಟ್ ಇಂಡೀಸ್ 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 218 ರನ್​ ಕಲೆಹಾಕಿತು.

ಒಂದೇ ಓವರ್​ನಲ್ಲಿ 36 ರನ್​ಗಳು:

ಈ ಪಂದ್ಯದ 4ನೇ ಓವರ್​ನಲ್ಲಿ ಯುವ ವೇಗಿ ಅಝ್ಮತುಲ್ಲಾ ಒಮರ್​ಝೈ ಬರೋಬ್ಬರಿ 36 ರನ್ ನೀಡಿ ಕಳಪೆ ದಾಖಲೆಯೊಂದನ್ನು ತಮ್ಮದಾಗಿಸಿಕೊಂಡರು. ಈ ಓವರ್​ನ ಮೊದಲ ಎಸೆತದಲ್ಲಿ ನಿಕೋಲಸ್ ಪೂರನ್ ಭರ್ಜರಿ ಸಿಕ್ಸ್ ಸಿಡಿಸಿದ್ದರು. ಇನ್ನು 2ನೇ ಎಸೆತದಲ್ಲಿ ನೋಬಾಲ್​ಗೆ ಫೋರ್ ಬಾರಿಸಿದರು. ಆ ಬಳಿಕ ಎಸೆದ ಚೆಂಡು ವೈಡ್ ಆಗಿ ಬೌಂಡರಿ ಲೈನ್ ದಾಟಿತು. ಅದರಂತೆ 5 ರನ್ ಲಭಿಸಿದೆ.

ಇದಾದ ಬಳಿಕ ಎಸೆದ 2ನೇ ಮರು ಎಸೆತದಲ್ಲಿ ಯಾವುದೇ ರನ್ ನೀಡಲಿಲ್ಲ. 3ನೇ ಎಸೆತದಲ್ಲಿ ಲೈಗ್​ ಬೈ ಫೋರ್. 4ನೇ ಎಸೆತದಲ್ಲಿ ಪೂರನ್ ಮತ್ತೊಂದು ಫೋರ್ ಬಾರಿಸಿದರು. 5ನೇ ಎಸೆತದಲ್ಲಿ ಭರ್ಜರಿ ಸಿಕ್ಸ್ ಸಿಡಿಸಿದರು.

ಕೊನೆಯ ಎಸೆತದಲ್ಲಿ ನಿಕೋಲಸ್ ಪೂರನ್ ಲಾಂಗ್ ಆಫ್​ನತ್ತ ಸಿಕ್ಸ್ ಸಿಡಿಸಿದರು. ಈ ಮೂಲಕ ಅಝ್ಮತುಲ್ಲಾ ಒಮರ್​ಝೈ ಒಂದೇ ಓವರ್​ನಲ್ಲಿ 36 ರನ್ ಬಿಟ್ಟು ಕೊಟ್ಟರು.

ಸೋತ ಅಫ್ಘಾನಿಸ್ತಾನ್:

ವೆಸ್ಟ್ ಇಂಡೀಸ್ ನೀಡಿದ 219 ರನ್​ಗಳ ಕಠಿಣ ಗುರಿಯನ್ನು ಬೆನ್ನತ್ತಿದ ಅಫ್ಘಾನಿಸ್ತಾನ್ ತಂಡವು ನಿರೀಕ್ಷಿತ ಆರಂಭ ಪಡೆಯುವಲ್ಲಿ ವಿಫಲವಾಯಿತು. ಕೇವಲ 63 ರನ್​ಗಳಿಗೆ 5 ಪ್ರಮುಖ ವಿಕೆಟ್ ಕಳೆದುಕೊಂಡು ಸಂಕಷ್ಟ ಸಿಲುಕಿದ ಅಫ್ಘಾನಿಸ್ತಾನ್ ವಿರುದ್ಧ ವಿಂಡೀಸ್ ಪಡೆ ಪಾರಾಕ್ರಮ ಮೆರೆದರು.

ಪರಿಣಾಮ 16.2 ಓವರ್​ಗಳಲ್ಲಿ 114 ರನ್​ಗಳಿಗೆ ಅಫ್ಘಾನಿಸ್ತಾನ್ ಆಲೌಟ್ ಆಯಿತು. ಈ ಮೂಲಕ ವೆಸ್ಟ್ ಇಂಡೀಸ್ ತಂಡವು 104 ರನ್​ಗಳ ಭರ್ಜರಿ ಜಯ ಸಾಧಿಸಿದೆ.

ವೆಸ್ಟ್ ಇಂಡೀಸ್ ಪ್ಲೇಯಿಂಗ್ 11: ಬ್ರ್ಯಾಂಡನ್ ಕಿಂಗ್ , ಜಾನ್ಸನ್ ಚಾರ್ಲ್ಸ್ , ನಿಕೋಲಸ್ ಪೂರನ್ (ವಿಕೆಟ್ ಕೀಪರ್) , ಶಾಯ್ ಹೋಪ್ , ರೋವ್ಮನ್ ಪೊವೆಲ್ (ನಾಯಕ) , ಶೆರ್ಫೇನ್ ರುದರ್ಫೋರ್ಡ್ , ಆಂಡ್ರೆ ರಸೆಲ್ , ಅಕೇಲ್ ಹೋಸೇನ್ , ಅಲ್ಝಾರಿ ಜೋಸೆಫ್ , ಗುಡಕೇಶ್ ಮೋಟಿ , ಓಬೆಡ್ ಮೆಕಾಯ್.

ಇದನ್ನೂ ಓದಿ: Lockie Ferguson: ಟಿ20 ವಿಶ್ವಕಪ್​ನಲ್ಲಿ ವಿಶ್ವ ದಾಖಲೆ ಬರೆದ ಲಾಕಿ ಫರ್ಗುಸನ್

ಅಫ್ಘಾನಿಸ್ತಾನ್ ಪ್ಲೇಯಿಂಗ್ 11: ರಹಮಾನುಲ್ಲಾ ಗುರ್ಬಾಝ್ (ವಿಕೆಟ್ ಕೀಪರ್) , ಇಬ್ರಾಹಿಂ ಝದ್ರಾನ್ , ಗುಲ್ಬದಿನ್ ನೈಬ್ , ಅಝ್ಮತುಲ್ಲಾ ಒಮರ್​ಝೈ , ಮೊಹಮ್ಮದ್ ನಬಿ , ನಜಿಬುಲ್ಲಾ ಝದ್ರಾನ್ , ಕರೀಂ ಜನತ್ , ರಶೀದ್ ಖಾನ್ (ನಾಯಕ) , ನೂರ್ ಅಹ್ಮದ್ , ನವೀನ್-ಉಲ್-ಹಕ್ , ಫಝಲ್ಹಕ್ ಫಾರೂಖಿ.

ಸ್ಪೈಸ್‌ಜೆಟ್ ಪ್ರಯಾಣಿಕರೊಂದಿಗೆ ಡ್ಯಾನ್ಸ್ ಮಾಡಿ ಹೋಳಿ ಆಚರಿಸಿದ ಸಿಬ್ಬಂದಿ
ಸ್ಪೈಸ್‌ಜೆಟ್ ಪ್ರಯಾಣಿಕರೊಂದಿಗೆ ಡ್ಯಾನ್ಸ್ ಮಾಡಿ ಹೋಳಿ ಆಚರಿಸಿದ ಸಿಬ್ಬಂದಿ
ಬೆಂಗಳೂರಿನಲ್ಲಿ ಶ್ವಾನದ ಮೇಲೆ ಅತ್ಯಾಚಾರವೆಸಗಿ ವಿಕೃತಿ
ಬೆಂಗಳೂರಿನಲ್ಲಿ ಶ್ವಾನದ ಮೇಲೆ ಅತ್ಯಾಚಾರವೆಸಗಿ ವಿಕೃತಿ
ವೇದಿಕೆ ಮೇಲೆಯೇ ವಾಗ್ವಾದಕ್ಕಿಳಿದ ಸಂಸದ ಪಿಸಿ ಮೋಹನ್​, ಪ್ರದೀಪ್​ ಈಶ್ವರ್
ವೇದಿಕೆ ಮೇಲೆಯೇ ವಾಗ್ವಾದಕ್ಕಿಳಿದ ಸಂಸದ ಪಿಸಿ ಮೋಹನ್​, ಪ್ರದೀಪ್​ ಈಶ್ವರ್
ಆಶೀರ್ವಾದ ರೂಪದಲ್ಲಿ ಹಣ ನೀಡುವುದು ಮಠದ ಸಂಪ್ರದಾಯ: ಸ್ವಾಮೀಜಿ
ಆಶೀರ್ವಾದ ರೂಪದಲ್ಲಿ ಹಣ ನೀಡುವುದು ಮಠದ ಸಂಪ್ರದಾಯ: ಸ್ವಾಮೀಜಿ
ಗೋರಖ್‌ಪುರದಲ್ಲಿ ಬಣ್ಣ ಎರಚಿ ಸಿಎಂ ಯೋಗಿ ಆದಿತ್ಯನಾಥ್ ಹೋಳಿ ಸಂಭ್ರಮ
ಗೋರಖ್‌ಪುರದಲ್ಲಿ ಬಣ್ಣ ಎರಚಿ ಸಿಎಂ ಯೋಗಿ ಆದಿತ್ಯನಾಥ್ ಹೋಳಿ ಸಂಭ್ರಮ
ನೀವೆಲ್ಲ ಬರುವಂಗಿದಿದ್ರೆ ನಿಮ್ಮನ್ನೂ ಊಟಕ್ಕೆ ಕರೀಬಹುದಿತ್ತು: ಶಿವಕುಮಾರ್
ನೀವೆಲ್ಲ ಬರುವಂಗಿದಿದ್ರೆ ನಿಮ್ಮನ್ನೂ ಊಟಕ್ಕೆ ಕರೀಬಹುದಿತ್ತು: ಶಿವಕುಮಾರ್
‘ಅಪ್ಪು’ ಮರು ಬಿಡುಗಡೆ: ಅಣ್ಣಾವ್ರ ಅಭಿಮಾನಿಗಳಿಂದ ಮತ್ತೊಂದು ಬೇಡಿಕೆ
‘ಅಪ್ಪು’ ಮರು ಬಿಡುಗಡೆ: ಅಣ್ಣಾವ್ರ ಅಭಿಮಾನಿಗಳಿಂದ ಮತ್ತೊಂದು ಬೇಡಿಕೆ
ಶಾಸಕರು ಬಣ್ಣದಾಟ ಆಡುವಾಗ ಕೃಷ್ಣ ಭೈರೇಗೌಡ ತಪ್ಪಿಸಿಕೊಂಡಿದ್ದು ಹೇಗೆ ಗೊತ್ತಾ?
ಶಾಸಕರು ಬಣ್ಣದಾಟ ಆಡುವಾಗ ಕೃಷ್ಣ ಭೈರೇಗೌಡ ತಪ್ಪಿಸಿಕೊಂಡಿದ್ದು ಹೇಗೆ ಗೊತ್ತಾ?
ಪತಿ ಸೂರ್ಯ ಸಾವಿನ ಹಿಂದೆ ಶ್ವೇತಾಳ ಕೈವಾಡವಿದೆ ಎಂದ ಪತ್ನಿ ದೀಪಿಕಾ
ಪತಿ ಸೂರ್ಯ ಸಾವಿನ ಹಿಂದೆ ಶ್ವೇತಾಳ ಕೈವಾಡವಿದೆ ಎಂದ ಪತ್ನಿ ದೀಪಿಕಾ
ಸಿಐಡಿ ತನಿಖೆ ರಾಜ್ಯ ಸರ್ಕಾರ ಹಿಂತೆಗೆದುಕೊಂಡ ಕಾರಣ ಗೊತ್ತಿಲ್ಲ: ಅಣ್ಣಾಮಲೈ
ಸಿಐಡಿ ತನಿಖೆ ರಾಜ್ಯ ಸರ್ಕಾರ ಹಿಂತೆಗೆದುಕೊಂಡ ಕಾರಣ ಗೊತ್ತಿಲ್ಲ: ಅಣ್ಣಾಮಲೈ