T20 World Cup 2024: 8 ಗಂಟೆ ನಿಗದಿ; 2ನೇ ಸೆಮಿಫೈನಲ್ ಪಂದ್ಯಕ್ಕೆ ಮೀಸಲು ದಿನವಿಲ್ಲ..! ಕಾರಣವೇನು?

T20 World Cup 2024: ಟಿ20 ವಿಶ್ವಕಪ್‌ನ ಎರಡನೇ ಸೆಮಿಫೈನಲ್‌ ಪಂದ್ಯಕ್ಕೆ 4 ಗಂಟೆಗಳ ಬದಲು 8 ಗಂಟೆ ಸಮಯವಕಾಶವನ್ನು ನಿಗದಿಪಡಿಸಿದೆ. ಅಂದರೆ ಹೆಚ್ಚುವರಿಯಾಗಿ 4 ಗಂಟೆ ಅವಧಿಯನ್ನು ವಿಸ್ತರಿಸಿದೆ. ಇದರರ್ಥ ಎರಡನೇ ಸೆಮಿಫೈನಲ್‌ ಪಂದ್ಯಕ್ಕೆ ಮೀಸಲು ದಿನವನ್ನು ಇರಿಸದೆ, ಈಗ ನಿಗದಿಪಡಿಸಿರುವ ದಿನದಂದೇ ಪಂದ್ಯವನ್ನು ಮುಗಿಸುವ ಯೋಜನೆಯನ್ನು ಐಸಿಸಿ ಹಾಕಿಕೊಂಡಿದೆ.

T20 World Cup 2024: 8 ಗಂಟೆ ನಿಗದಿ; 2ನೇ ಸೆಮಿಫೈನಲ್ ಪಂದ್ಯಕ್ಕೆ ಮೀಸಲು ದಿನವಿಲ್ಲ..! ಕಾರಣವೇನು?
ಟಿ20 ವಿಶ್ವಕಪ್ 2024
Follow us
| Updated By: Digi Tech Desk

Updated on:May 16, 2024 | 12:32 PM

9ನೇ ಆವೃತ್ತಿಯ ಟಿ20 ವಿಶ್ವಕಪ್ (T20 World Cup 2024) ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ಐಪಿಎಲ್ (IPL 2024) ಅಂತ್ಯಗೊಂಡ 5 ದಿನಗಳ ಬಳಿಕ ಅಂದರೆ ಜೂನ್ 1 ರಿಂದ ಈ ಮಿನಿ ವಿಶ್ವಸಮರ ಪ್ರಾರಂಭವಾಗುತ್ತಿದೆ. ವೆಸ್ಟ್ ಇಂಡೀಸ್ ಮತ್ತು ಅಮೆರಿಕದ ನೆಲದಲ್ಲಿ ನಡೆಯುತ್ತಿರುವ ಈ ಬಾರಿಯ ಟಿ20 ವಿಶ್ವಕಪ್‌ನಲ್ಲಿ 20 ತಂಡಗಳು ಭಾಗವಹಿಸುತ್ತಿವೆ. ಈ ಕಾರಣಕ್ಕಾಗಿ ಲೀಗ್​ನ ಮೆರಗು ಹೆಚ್ಚಾಗಿದೆ. ಇದಕ್ಕಾಗಿ ಐಸಿಸಿ (ICC) ಈಗಾಗಲೇ ವೇಳಾಪಟ್ಟಿ ಬಿಡುಗಡೆ ಮಾಡಿದೆ. ಅದರಂತೆ ಜೂನ್ 1 ರಿಂದ ಆರಂಭವಾಗಲಿರುವ ಈ ಟೂರ್ನಿ ಜೂನ್ 29 ರಂದು ನಡೆಯಲ್ಲಿರುವ ಫೈನಲ್ ಪಂದ್ಯದೊಂದಿಗೆ ಅಂತ್ಯಗೊಳ್ಳಲಿದೆ. ಆದರೆ ಟೂರ್ನಿ ಆರಂಭಕ್ಕೂ ಮುನ್ನ ಜೂನ್ 26 ಹಾಗೂ 27 ರಂದು ನಡೆಯಲ್ಲಿರುವ ಮೊದಲ ಸೆಮಿಫೈನಲ್ ಹಾಗೂ ಎರಡನೇ ಸೆಮಿಫೈನಲ್ ಪಂದ್ಯದ ಬಗ್ಗೆ ಐಸಿಸಿ ಹೊಸ ಅಪ್​ಡೇಟ್ ನೀಡಿದೆ.

2ನೇ ಸೆಮಿಫೈನಲ್‌ಗೆ ಹೆಚ್ಚುವರಿ ಸಮಯ

ಕ್ರಿಕ್‌ಬಜ್ ವರದಿಯ ಪ್ರಕಾರ, ಟಿ20 ವಿಶ್ವಕಪ್‌ನ ಎರಡನೇ ಸೆಮಿಫೈನಲ್‌ ಪಂದ್ಯಕ್ಕೆ 4 ಗಂಟೆಗಳ ಬದಲು 8 ಗಂಟೆ ಸಮಯವಕಾಶವನ್ನು ನಿಗದಿಪಡಿಸಿದೆ. ಅಂದರೆ ಹೆಚ್ಚುವರಿಯಾಗಿ 4 ಗಂಟೆ ಅವಧಿಯನ್ನು ವಿಸ್ತರಿಸಿದೆ. ಇದರರ್ಥ ಎರಡನೇ ಸೆಮಿಫೈನಲ್‌ ಪಂದ್ಯಕ್ಕೆ ಮೀಸಲು ದಿನವನ್ನು ಇರಿಸದೆ, ಈಗ ನಿಗದಿಪಡಿಸಿರುವ ದಿನದಂದೇ ಪಂದ್ಯವನ್ನು ಮುಗಿಸುವ ಯೋಜನೆಯನ್ನು ಐಸಿಸಿ ಹಾಕಿಕೊಂಡಿದೆ. ಮೇಲೆ ಹೇಳಿದಂತೆ ಎರಡನೇ ಸೆಮಿಫೈನಲ್‌ ಪಂದ್ಯಕ್ಕೆ ಯಾವುದೇ ಮೀಸಲು ದಿನವನ್ನು ಇರಿಸಲಾಗಿಲ್ಲ. ಇದಕ್ಕೆ ಕಾರಣ ಈ ಪಂದ್ಯ ಮುಗಿದ ಮುಂದಿನ ದಿನವೇ ಅಂದರೆ ಜೂನ್ 29 ರಂದೇ ಫೈನಲ್ ಪಂದ್ಯವನ್ನು ನಿಗದಿಪಡಿಸಿರುವುದು.

T20 World Cup 2024: ಒಲ್ಲದ ಮನಸ್ಸಿನಲ್ಲಿ ಟಿ20 ವಿಶ್ವಕಪ್ ತಂಡಕ್ಕೆ ಹಾರ್ದಿಕ್ ಪಾಂಡ್ಯ ಆಯ್ಕೆ..!

ಮೊದಲ ಸೆಮಿಫೈನಲ್‌ಗೆ ಮೀಸಲು ದಿನ

ಮೊದಲ ಸೆಮಿಫೈನಲ್ ಪಂದ್ಯ ಜೂನ್ 26 ರಂದು ಟ್ರಿನಿಡಾಡ್‌ನಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಮಳೆಯಾದರೆ, ಐಸಿಸಿ ಈ ಪಂದ್ಯಕ್ಕೆ ಮೀಸಲು ದಿನವನ್ನು ಇರಿಸಿದೆ. ನಿಗದಿಪಡಿಸಿದ ದಿನ ಮಳೆ ಬಂದು ಪಂದ್ಯ ರದ್ದಾದರೆ, ಆ ಪಂದ್ಯವನ್ನು ಜೂನ್ 27ರಂದು ನಡೆಸಲಾಗುತ್ತದೆ. ಇನ್ನು ಎರಡನೇ ಸೆಮಿಫೈನಲ್ ಪಂದ್ಯ ಗಯಾನಾದಲ್ಲಿ ಜೂನ್ 27 ರಂದು ನಡೆಯಲಿದ್ದು, ಭಾರತೀಯ ಕಾಲಮಾನ ರಾತ್ರಿ 8.30ಕ್ಕೆ ಆರಂಭವಾಗಲಿದೆ. ಅದೇ ದಿನ ಈ ಪಂದ್ಯ ಮುಕ್ತಾಯವಾಗಲಿದೆ. ಏಕೆಂದರೆ ಐಸಿಸಿ ಈ ಪಂದ್ಯಕ್ಕಾಗಿ ಸುಮಾರು ನಾಲ್ಕು ಗಂಟೆಗಳ ಕಾಲ ವಿಸ್ತರಿಸಿದೆ. ಅಂದರೆ, ಎರಡನೇ ಸೆಮಿಫೈನಲ್‌ ಪಂದ್ಯದ ವೇಳೆ ಮಳೆ ಬಂದರೆ, ಈ ಟಿ20 ಪಂದ್ಯದ ಕಾಲಾವಕಾಶ ಎಂಟು ಗಂಟೆಗಳವರೆಗೆ ಇರುತ್ತದೆ.

ಎ ಗುಂಪಿನಲ್ಲಿ ಭಾರತ ತಂಡ

ಈ ಬಾರಿಯ ವಿಶ್ವಕಪ್​ನಲ್ಲಿ ಭಾರತ ಎ ಗುಂಪಿನಲ್ಲಿ ಸ್ಥಾನ ಪಡೆದಿದೆ. ಭಾರತವನ್ನು ಹೊರತುಪಡಿಸಿ, ಈ ಗುಂಪಿನಲ್ಲಿ ಪಾಕಿಸ್ತಾನ, ನೆದರ್ಲ್ಯಾಂಡ್ಸ್, ಕೆನಡಾ ಮತ್ತು ಅಮೆರಿಕದ ತಂಡಗಳು ಸೇರಿವೆ. ಟೀಂ ಇಂಡಿಯಾ ತನ್ನ ಮೊದಲ ಪಂದ್ಯವನ್ನು ಜೂನ್ 5 ರಂದು ಐರ್ಲೆಂಡ್ ವಿರುದ್ಧ ಆಡಲಿದೆ. ಜೂನ್ 9 ರಂದು ಭಾರತ ತಂಡ ಪಾಕಿಸ್ತಾನದ ವಿರುದ್ಧ ಹೈವೋಲ್ಟೇಜ್ ಪಂದ್ಯವನ್ನಾಡಲಿದೆ.

ಟಿ20 ವಿಶ್ವಕಪ್​ಗೆ ಟೀಂ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ಸಂಜು ಸ್ಯಾಮ್ಸನ್, ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಅರ್ಷದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.

ಮೀಸಲು ಆಟಗಾರರು: ಶುಭ್‌ಮನ್ ಗಿಲ್, ರಿಂಕು ಸಿಂಗ್, ಖಲೀಲ್ ಅಹ್ಮದ್, ಅವೇಶ್ ಖಾನ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:58 pm, Tue, 14 May 24

ತಾಜಾ ಸುದ್ದಿ
ಅಸ್ಸಾಂನಲ್ಲಿ ಭೀಕರ ಪ್ರವಾಹ; ಪ್ರಾಣ ಒತ್ತೆಯಿಟ್ಟು ಕರುವನ್ನು ಕಾಪಾಡಿದ ಜನ
ಅಸ್ಸಾಂನಲ್ಲಿ ಭೀಕರ ಪ್ರವಾಹ; ಪ್ರಾಣ ಒತ್ತೆಯಿಟ್ಟು ಕರುವನ್ನು ಕಾಪಾಡಿದ ಜನ
ದರ್ಶನ್​ ಮಾಡಿದ್ದೇ ಸರಿ ಎನ್ನುವ ಅಭಿಮಾನಿಗಳಿಗೆ ಕಿವಿಮಾತು ಹೇಳಿದ ಸುಮಲತಾ
ದರ್ಶನ್​ ಮಾಡಿದ್ದೇ ಸರಿ ಎನ್ನುವ ಅಭಿಮಾನಿಗಳಿಗೆ ಕಿವಿಮಾತು ಹೇಳಿದ ಸುಮಲತಾ
ಟೀಂ ಇಂಡಿಯಾ ವಿಜಯೋತ್ಸವದಲ್ಲಿ ಅಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಟ್ಟ ಫ್ಯಾನ್ಸ್
ಟೀಂ ಇಂಡಿಯಾ ವಿಜಯೋತ್ಸವದಲ್ಲಿ ಅಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಟ್ಟ ಫ್ಯಾನ್ಸ್
ಬ್ರಹ್ಮಾವರ ತಾಲ್ಲೂಕಿನ ಮಡಿಸಾಲು ಹಳ್ಳ ಉಕ್ಕಿ ತಗ್ಗುಪ್ರದೇಶಗಳು ಜಲಾವೃತ
ಬ್ರಹ್ಮಾವರ ತಾಲ್ಲೂಕಿನ ಮಡಿಸಾಲು ಹಳ್ಳ ಉಕ್ಕಿ ತಗ್ಗುಪ್ರದೇಶಗಳು ಜಲಾವೃತ
ಮುಂಬೈ ಏರ್‌ಪೋರ್ಟ್‌ನಲ್ಲಿ ಟೀಂ ಇಂಡಿಯಾದ ಆಟಗಾರರಿಗೆ ವಾಟರ್ ಸೆಲ್ಯೂಟ್‌
ಮುಂಬೈ ಏರ್‌ಪೋರ್ಟ್‌ನಲ್ಲಿ ಟೀಂ ಇಂಡಿಯಾದ ಆಟಗಾರರಿಗೆ ವಾಟರ್ ಸೆಲ್ಯೂಟ್‌
ದರ್ಶನ್ ಹಾಗೆ ಮಾಡಿರಲು ಸಾಧ್ಯವಿಲ್ಲ: ಸುಮಲತಾ ಅಂಬರೀಶ್
ದರ್ಶನ್ ಹಾಗೆ ಮಾಡಿರಲು ಸಾಧ್ಯವಿಲ್ಲ: ಸುಮಲತಾ ಅಂಬರೀಶ್
ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಮುಂಬೈ ಬಂದ ಟೀಮ್ ಇಂಡಿಯಾಗೆ ಭವ್ಯ ಸ್ವಾಗತ
ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಮುಂಬೈ ಬಂದ ಟೀಮ್ ಇಂಡಿಯಾಗೆ ಭವ್ಯ ಸ್ವಾಗತ
ಟೀಂ ಇಂಡಿಯಾ ವಿಜಯೋತ್ಸವಕ್ಕೆ ಕಡಲ ಕಿನಾರೆಯಲ್ಲಿ ಜನ ಸಾಗರ: ವಿಹಂಗಮ ನೋಟ
ಟೀಂ ಇಂಡಿಯಾ ವಿಜಯೋತ್ಸವಕ್ಕೆ ಕಡಲ ಕಿನಾರೆಯಲ್ಲಿ ಜನ ಸಾಗರ: ವಿಹಂಗಮ ನೋಟ
ದರ್ಶನ್ ಕುಟುಂಬ  ಜೊತೆ ನಿರಂತರವಾಗಿ ಸಂಪರ್ಕದಲ್ಲಿರುವೆ: ಸುಮಲತಾ ಅಂಬರೀಶ್
ದರ್ಶನ್ ಕುಟುಂಬ  ಜೊತೆ ನಿರಂತರವಾಗಿ ಸಂಪರ್ಕದಲ್ಲಿರುವೆ: ಸುಮಲತಾ ಅಂಬರೀಶ್
ಶ್ರೀರಾಮ ಮಂದಿರ ಮೇಲ್ಚಾವಣಿ ಸೋರಿಕೆಗೆ ಪೇಜಾವರಶ್ರೀ ಸ್ಪಷ್ಟನೆ
ಶ್ರೀರಾಮ ಮಂದಿರ ಮೇಲ್ಚಾವಣಿ ಸೋರಿಕೆಗೆ ಪೇಜಾವರಶ್ರೀ ಸ್ಪಷ್ಟನೆ