AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2024: ಹೀಗಾದ್ರೆ ಪಾಕಿಸ್ತಾನ್ ಸೂಪರ್-8 ಹಂತಕ್ಕೇರುವುದು ಖಚಿತ

T20 World Cup 2024: ಗ್ರೂಪ್-ಎ ನಲ್ಲಿರುವ ಐದು ತಂಡಗಳ ಪೈಕಿ ಭಾರತ ತಂಡವು ಈಗಾಗಲೇ ಸೂಪರ್-8 ಹಂತಕ್ಕೇರಿದೆ. ಇನ್ನು 2ನೇ ಸ್ಥಾನಕ್ಕಾಗಿ ಯುಎಸ್​ಎ, ಪಾಕಿಸ್ತಾನ್ ಮತ್ತು ಐರ್ಲೆಂಡ್ ನಡುವೆ ಪೈಪೋಟಿ ಇದೆ. ಅದರಲ್ಲೂ ಐರ್ಲೆಂಡ್ ಮತ್ತು ಯುಎಸ್​ಎ ನಡುವಣ ಪಂದ್ಯದ ಫಲಿತಾಂಶದ ಮೇಲೆ ಪಾಕಿಸ್ತಾನ್ ತಂಡದ ಟಿ20 ವಿಸ್ವಕಪ್ ಭವಿಷ್ಯ ನಿಂತಿದೆ.

T20 World Cup 2024: ಹೀಗಾದ್ರೆ ಪಾಕಿಸ್ತಾನ್ ಸೂಪರ್-8 ಹಂತಕ್ಕೇರುವುದು ಖಚಿತ
Pakistan
ಝಾಹಿರ್ ಯೂಸುಫ್
|

Updated on: Jun 13, 2024 | 3:24 PM

Share

T20 World Cup 2024: ಟಿ20 ವಿಶ್ವಕಪ್​ನ ಲೀಗ್ ಹಂತದ ಅಂತಿಮ ಪಂದ್ಯಗಳು ಇದೀಗ ಕುತೂಹಲದ ಕೇಂದ್ರವಾಗಿ ಮಾರ್ಪಟ್ಟಿದೆ. ಏಕೆಂದರೆ ಮೊದಲ ಸುತ್ತಿನ 26 ಪಂದ್ಯಗಳ ಮುಕ್ತಾಯದ ವೇಳೆಗೆ ಸೂಪರ್-8 ಹಂತಕ್ಕೇರಿರುವುದು ಕೇವಲ 4 ತಂಡಗಳು ಮಾತ್ರ. ಇನ್ನು ನಮೀಬಿಯಾ ಮತ್ತು ಒಮಾನ್ ತಂಡಗಳು ಈಗಾಗಲೇ ವಿಶ್ವಕಪ್ ರೇಸ್​ನಿಂದ ಹೊರಬಿದ್ದಿದೆ. ಇನ್ನುಳಿದಿರುವ 4 ಸ್ಥಾನಗಳಿಗಾಗಿ 14 ತಂಡಗಳ ನಡುವೆ ಪೈಪೋಟಿ ಇದೆ. ಈ ಪೈಪೋಟಿಯಲ್ಲಿ ಬಲಿಷ್ಠರು ಎನಿಸಿಕೊಂಡಿರುವ ಪಾಕಿಸ್ತಾನ್, ನ್ಯೂಝಿಲೆಂಡ್ ಮತ್ತು ಇಂಗ್ಲೆಂಡ್ ತಂಡಗಳಿವೆ.

ಇಲ್ಲಿ ಪಾಕಿಸ್ತಾನ್ ತಂಡಕ್ಕೆ ಸೂಪರ್-8 ಹಂತಕ್ಕೇರಲು ಯುಎಸ್​ಎ ತಂಡದ ಫಲಿತಾಂಶ ಮುಖ್ಯವಾಗುತ್ತದೆ. ಅದು ಹೇಗೆಂದರೆ…

  • ಗ್ರೂಪ್-ಎ ಅಂಕ ಪಟ್ಟಿಯಲ್ಲಿ ಭಾರತ  ಮೊದಲ ಸ್ಥಾನದೊಂದಿಗೆ ಸೂಪರ್-8 ಹಂತಕ್ಕೇರಿದೆ. ಇನ್ನು 4 ಅಂಕಗಳನ್ನು ಹೊಂದಿರುವ ಯುಎಸ್​ಎ ತಂಡ ದ್ವಿತೀಯ ಸ್ಥಾನದಲ್ಲಿದ್ದರೆ, 2 ಪಾಯಿಂಟ್ಸ್ ಹೊಂದಿರುವ ಪಾಕಿಸ್ತಾನ್ ತಂಡವು ಮೂರನೇ ಸ್ಥಾನದಲ್ಲಿದೆ.
  • ಇಲ್ಲಿ ಪಾಕಿಸ್ತಾನ್ ತಂಡವು ದ್ವಿತೀಯ ಸ್ಥಾನ ಅಲಂಕರಿಸಬೇಕಿದ್ದರೆ ಯುಎಸ್​ಎ ತಂಡ ಐರ್ಲೆಂಡ್ ವಿರುದ್ಧ ಸೋಲಬೇಕು. ಯುಎಸ್​ಎ ವಿರುದ್ಧ ಮುಂದಿನ ಪಂದ್ಯದಲ್ಲಿ ಐರ್ಲೆಂಡ್ ಗೆದ್ದರೆ ಪಾಕ್ ತಂಡದ ಸೂಪರ್-8 ಹಾದಿ ಸುಗಮವಾಗಲಿದೆ.
  • ಯುಎಸ್​ಎ ವಿರುದ್ಧ ಐರ್ಲೆಂಡ್ ಗೆದ್ದರೆ, ಪಾಕಿಸ್ತಾನ್ ತಂಡವು ತನ್ನ ಕೊನೆಯ ಪಂದ್ಯದಲ್ಲಿ ಗೆದ್ದರೆ ಸಾಕು. ಈ ಮೂಲಕ ಯುಎಸ್​ಎ ತಂಡವನ್ನು ಹಿಂದಿಕ್ಕಿ ಮುಂದಿನ ಹಂತಕ್ಕೇರಬಹುದು.
  • ಇಲ್ಲಿ ನೆಟ್ ರನ್​ ರೇಟ್ ಮುಖ್ಯವಾಗುವುದಿಲ್ಲ. ಏಕೆಂದರೆ ಯುಎಸ್​ಎ ತಂಡದ ಪ್ರಸ್ತುತ ನೆಟ್ ರನ್ ರೇಟ್. +0.127
  • ಇದೇ ವೇಳೆ ಪಾಕಿಸ್ತಾನ್ ತಂಡದ ಪ್ರಸ್ತುತ ನೆಟ್ ರನ್ ರೇಟ್ +0.191

ಇಲ್ಲಿ ಯುಎಸ್​ಎ ತಂಡಕ್ಕಿಂತ ಪಾಕಿಸ್ತಾನ್ ತಂಡದ ನೆಟ್ ರನ್ ರೇಟ್ ಉತ್ತಮವಾಗಿದೆ. ಹೀಗಾಗಿ ಮುಂದಿನ ಪಂದ್ಯದಲ್ಲಿ ಯುಎಸ್​ಎ ತಂಡ ಸೋತರೆ ಪಾಕ್ ತಂಡಕ್ಕೆ ಸೂಪರ್-8 ಹಂತಕ್ಕೇರಲು ಉತ್ತಮ ಅವಕಾಶ ಇರಲಿದೆ.

ಪಾಕ್ ಭವಿಷ್ಯ ನಾಳೆ ನಿರ್ಧಾರ:

ಯುಎಸ್​ಎ ತಂಡವು ತನ್ನ ಕೊನೆಯ ಪಂದ್ಯವನ್ನು ನಾಳೆ (ಜೂ.14) ಆಡಲಿದೆ. ಐರ್ಲೆಂಡ್ ವಿರುದ್ಧದ ಈ ಪಂದ್ಯದಲ್ಲಿ ಗೆದ್ದರೆ ಯುಎಸ್​ಎ ತಂಡವು ಸೂಪರ್-8 ಹಂತಕ್ಕೇರಲಿದೆ.

ಅತ್ತ ಯುಎಸ್​ಎ ತಂಡ ಗೆದ್ದರೆ ಟಿ20 ವಿಶ್ವಕಪ್​ನಿಂದ ಪಾಕಿಸ್ತಾನ್ ತಂಡವು ಅಧಿಕೃತವಾಗಿ ಹೊರಬೀಳಲಿದೆ. ಹೀಗಾಗಿ ನಾಳಿನ ಪಂದ್ಯದ ಫಲಿತಾಂಶದೊಂದಿಗೆ ಪಾಕಿಸ್ತಾನ್ ತಂಡದ ಟಿ20 ವಿಶ್ವಕಪ್ ಭವಿಷ್ಯ ನಿರ್ಧಾರವಾಗಲಿದೆ.

ಐರ್ಲೆಂಡ್ ತಂಡಕ್ಕೂ ಇದೆ ಚಾನ್ಸ್:

ವಿಶೇಷ ಎಂದರೆ ಯುಎಸ್​ಎ ಮತ್ತು ಪಾಕಿಸ್ತಾನ್ ತಂಡಗಳು ತಮ್ಮ ಕೊನೆಯ ಲೀಗ್ ಪಂದ್ಯದಲ್ಲಿ ಐರ್ಲೆಂಡ್ ತಂಡವನ್ನು ಎದುರಿಸಲಿದೆ. ಅಂದರೆ ಇಲ್ಲಿ ಸೂಪರ್-8 ಹಂತಕ್ಕೇರುವ ಅವಕಾಶವನ್ನು ಎದುರು ನೋಡುತ್ತಿರುವ ಎರಡೂ ತಂಡಗಳಿಗೂ ಐರ್ಲೆಂಡ್ ತಂಡವೇ ಎದುರಾಳಿ.

ಇದನ್ನೂ ಓದಿ: T20 World Cup 2024: ಟೀಮ್ ಇಂಡಿಯಾದ ಮುಂದಿನ ಎದುರಾಳಿ ಆಸ್ಟ್ರೇಲಿಯಾ

ಒಂದು ವೇಳೆ ಈ ಎರಡೂ ತಂಡಗಳ ವಿರುದ್ಧ ಐರ್ಲೆಂಡ್ ಭರ್ಜರಿ ಜಯ ಸಾಧಿಸಿ, ಉತ್ತಮ ನೆಟ್ ರನ್ ರೇಟ್ ಪಡೆದುಕೊಂಡರೆ ಸೂಪರ್-8 ಹಂತಕ್ಕೇರುವ ಅವಕಾಶ  ಇರಲಿದೆ. ಹೀಗಾಗಿ ಉಭಯ ತಂಡಗಳ ಲೆಕ್ಕಾಚಾರದ ನಡುವೆ ಐರ್ಲೆಂಡ್ ಕೂಡ ಮುಂದಿನ ಹಂತಕ್ಕೇರುವ ಆಕಾಂಕ್ಷೆಯನ್ನು ಹೊಂದಿದೆ.

Follow Us
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!