T20 World Cup 2024: ಭಾರತ ವಿರುದ್ಧ ಸೋತರೂ ಪಾಕ್ ತಂಡಕ್ಕಿದೆ ಸೂಪರ್​ 8 ಗೇರುವ ಅವಕಾಶ..!

IND vs PAK, T20 World Cup 2024: ನಸ್ಸೌ ಕೌಂಟಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾವನ್ನು ಗೆಲುವಿನ ಫೇವರಿಟ್ ಎಂದು ಪರಿಗಣಿಸಲಾಗುತ್ತಿದೆ. ಈ ಪಂದ್ಯದಲ್ಲಿ ಪಾಕಿಸ್ತಾನ ಸೋತರೆ ಅದು ತಂಡದ ಎರಡನೇ ಸೋಲು ಆಗಲಿದ್ದು, ಸೂಪರ್-8ಗೆ ಅರ್ಹತೆ ಪಡೆಯುವುದು ಕಷ್ಟವಾಗಲಿದೆ. ಆದರೆ, ಭಾರತ ವಿರುದ್ಧ ಸೋತರೂ ಪಾಕಿಸ್ತಾನ ತಂಡ ಸೂಪರ್ 8 ಹಂತಕ್ಕೆ ತಲುಪುವ ಅವಕಾಶ ಹೊಂದಿದೆ.

T20 World Cup 2024: ಭಾರತ ವಿರುದ್ಧ ಸೋತರೂ ಪಾಕ್ ತಂಡಕ್ಕಿದೆ ಸೂಪರ್​ 8 ಗೇರುವ ಅವಕಾಶ..!
ಪಾಕಿಸ್ತಾನ ತಂಡ
Follow us
|

Updated on: Jun 09, 2024 | 4:30 PM

2024 ರ ಟಿ20 ವಿಶ್ವಕಪ್​ನಲ್ಲಿ (T20 World Cup 2024) ಇಡೀ ಕ್ರಿಕೆಟ್ ಲೋಕವೇ ಕಾದು ಕುಳಿತಿದ್ದ ದಿನ ಅಂತಿಮವಾಗಿ ಬಂದಿದೆ. ಭಾನುವಾರ, ಜೂನ್ 9 ರಂದು ನ್ಯೂಯಾರ್ಕ್‌ನ ನಸ್ಸೌ ಕೌಂಟಿ ಕ್ರೀಡಾಂಗಣದಲ್ಲಿ (Nassau County International Cricket Stadium) ಭಾರತ ಮತ್ತು ಪಾಕಿಸ್ತಾನ (India vs Pakistan) ಮುಖಾಮುಖಿಯಾಗುತ್ತಿವೆ. ಲೀಗ್​ನಲ್ಲಿ ಭಾರತ ಗೆಲುವಿನ ಶುಭಾರಂಭ ಮಾಡಿದ್ದರೆ, ಅಮೆರಿಕ ವಿರುದ್ಧ ಸೋಲಿನ ಮುಖಭಂಗದೊಂದಿಗೆ ಪಾಕಿಸ್ತಾನ ತಂಡ ಈ ಪಂದ್ಯಕ್ಕೆ ಕಾಲಿಡುತ್ತಿದೆ. ಹೀಗಿರುವಾಗ ನಸ್ಸೌ ಕೌಂಟಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾವನ್ನು ಗೆಲುವಿನ ಫೇವರಿಟ್ ಎಂದು ಪರಿಗಣಿಸಲಾಗುತ್ತಿದೆ. ಈ ಪಂದ್ಯದಲ್ಲಿ ಪಾಕಿಸ್ತಾನ ಸೋತರೆ ಅದು ತಂಡದ ಎರಡನೇ ಸೋಲು ಆಗಲಿದ್ದು, ಸೂಪರ್-8ಗೆ ಅರ್ಹತೆ ಪಡೆಯುವುದು ಕಷ್ಟವಾಗಲಿದೆ. ಆದರೆ, ಭಾರತ ವಿರುದ್ಧ ಸೋತರೂ ಪಾಕಿಸ್ತಾನ ತಂಡ ಸೂಪರ್ 8 ಹಂತಕ್ಕೆ ತಲುಪುವ ಅವಕಾಶ ಹೊಂದಿದೆ.

ಪಾಕಿಸ್ತಾನ ಸೋತರೆ ಏನಾಗಬಹುದು?

ಈ ಬಾರಿಯ ವಿಶ್ವಕಪ್​ನಲ್ಲಿ ಒಟ್ಟು 20 ತಂಡಗಳು ಭಾಗವಹಿಸುತ್ತಿದ್ದು, ಇವುಗಳನ್ನು ತಲಾ 5ರ ನಾಲ್ಕು ಗುಂಪುಗಳಾಗಿ ವಿಂಗಡಿಸಲಾಗಿದೆ. ಭಾರತ ಮತ್ತು ಪಾಕಿಸ್ತಾನ ಎ ಗುಂಪಿನ ಭಾಗವಾಗಿವೆ. ಇವೆರಡರ ಹೊರತಾಗಿ ಅಮೆರಿಕ, ಕೆನಡಾ ಮತ್ತು ಐರ್ಲೆಂಡ್ ತಂಡಗಳು ಎ ಗುಂಪಿನಲ್ಲಿ ಸ್ಥಾನ ಪಡೆದಿವೆ. ಸದ್ಯ ಈ ಮೂರು ತಂಡಗಳು ತಲಾ 2 ಪಂದ್ಯಗಳನ್ನು ಆಡಿದ್ದು, ಇಂದು ನಡೆಯುವ ಪಂದ್ಯದ ನಂತರ ಟೀಂ ಇಂಡಿಯಾ ಮತ್ತು ಪಾಕಿಸ್ತಾನ ಕೂಡ ಎರಡು ಪಂದ್ಯಗಳನ್ನು ಆಡಿದಂತ್ತಾಗುತ್ತದೆ. ಈ ಗುಂಪಿನಲ್ಲಿ ಅಮೆರಿಕ ಆಡಿರುವ 2 ಪಂದ್ಯಗಳಲ್ಲಿ ಎರಡನ್ನು ಗೆದ್ದು 4 ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಭಾರತ ತಂಡ 2 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದರೆ, ಕೆನಡಾ ತಂಡ 2 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದೆ. ಪಾಕಿಸ್ತಾನ ಮತ್ತು ಐರ್ಲೆಂಡ್ ಒಂದೇ ಒಂದು ಪಂದ್ಯವನ್ನು ಗೆಲ್ಲದೆ ನಾಲ್ಕು ಮತ್ತು ಐದನೇ ಸ್ಥಾನದಲ್ಲಿ ಉಳಿದಿವೆ.

ಒಂದು ವೇಳೆ ಪಾಕ್ ತಂಡ ಭಾರತದ ವಿರುದ್ಧ ಸೋತರೆ, ಭಾರತ ಕೂಡ 4 ಅಂಕ ಗಳಿಸಿ ಅಂಕಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಲಿದೆ. ಆದರೆ ಪಾಕಿಸ್ತಾನ ತಂಡ ತನ್ನ ಸ್ಥಾನದಲ್ಲಿ ಉಳಿಯುತ್ತದೆ ಅಥವಾ ಕೊನೆಯ ಸ್ಥಾನಕ್ಕೆ ಕುಸಿಯುತ್ತದೆ. ಈ ಪಂದ್ಯದ ನಂತರ, ಎಲ್ಲಾ ತಂಡಗಳು ಇನ್ನ 2 ಪಂದ್ಯಗಳನ್ನು ಆಡಬೇಕಾಗುತ್ತದೆ. ಅಂದರೆ ಉಳಿದ ಎರಡೂ ಪಂದ್ಯಗಳಲ್ಲು ಗೆದ್ದರೂ, ಪಾಕಿಸ್ತಾನ ಗರಿಷ್ಠ 4 ಅಂಕಗಳನ್ನು ಮಾತ್ರ ಗಳಿಸಲು ಸಾಧ್ಯವಾಗುತ್ತದೆ. ಆದರೆ ಈಗಾಗಲೇ ಟೀಮ್ ಇಂಡಿಯಾ ಹಾಗೂ ಅಮೆರಿಕ 4 ಅಂಕಗಳನ್ನು ಹೊಂದಿವೆ. ಇದಲ್ಲದೇ ಇಬ್ಬರ ನೆಟ್ ರನ್ ರೇಟ್ ಕೂಡ ಪಾಕಿಸ್ತಾನಕ್ಕಿಂತ ಉತ್ತಮವಾಗಿದೆ. ಈ ಪರಿಸ್ಥಿತಿಯಲ್ಲಿ ಪಾಕಿಸ್ತಾನಕ್ಕೆ ಸೂಪರ್-8ಗೆ ಹೋಗುವುದು ಕಷ್ಟ.

ಪಾಕಿಸ್ತಾನ ಅರ್ಹತೆ ಪಡೆಯುವುದು ಹೇಗೆ?

ಭಾರತ ವಿರುದ್ಧ ಸೋತ ನಂತರ, ಪಾಕಿಸ್ತಾನ ಖಂಡಿತವಾಗಿಯೂ ಪಂದ್ಯಾವಳಿಯಿಂದ ಹೊರಗುಳಿಯುವ ಅಪಾಯದಲ್ಲಿದೆ. ಆದರೆ ಇದರ ಹೊರತಾಗಿಯೂ ಅದು ಈ ಪಂದ್ಯದಲ್ಲಿ ಉಳಿಯಬಹುದಾಗಿದೆ. ಇದಕ್ಕಾಗಿ ಪಾಕ್ ತಂಡ ತನ್ನ ಮುಂದಿನ ಎರಡು ಪಂದ್ಯಗಳಲ್ಲಿ ಐರ್ಲೆಂಡ್ ಮತ್ತು ಕೆನಡಾ ವಿರುದ್ಧ ಯಾವುದೇ ಬೆಲೆ ತೆತ್ತಾದರೂ ಗೆಲ್ಲಬೇಕಾಗುತ್ತದೆ. ಅಷ್ಟೇ ಅಲ್ಲದೆ ತನ್ನ ನೆಟ್ ರನ್ ರೇಟ್​ ಸುಧಾರಿಸಲು ದೊಡ್ಡ ಅಂತರದಿಂದ ಗೆಲ್ಲಲೇಬೇಕು.

ಒಂದು ವೇಳೆ ಭಾರತ ವಿರುದ್ಧ ಪಾಕಿಸ್ತಾನ ಸೋತು, ಅಮೆರಿಕ ಉಳಿದ 2 ಪಂದ್ಯಗಳಲ್ಲಿ ಒಂದನ್ನು ಗೆದ್ದರೆ ಅದು 6 ಅಂಕ ಸಂಪಾದಿಸಿದಂತ್ತಾಗುತ್ತದೆ. ಇದರಿಂದ ಪಾಕಿಸ್ತಾನ ತಂಡ ಲೀಗ್​ನಿಂದ ಹೊರಬೀಳಲಿದೆ. ಆದ್ದರಿಂದ ಅಮೆರಿಕ ತಂಡ ಭಾರತ ಮತ್ತು ಐರ್ಲೆಂಡ್ ವಿರುದ್ಧ ದೊಡ್ಡ ಅಂತರದಿಂದ ಸೋಲಬೇಕಿದೆ. ಇದು ಸಂಭವಿಸಿದಲ್ಲಿ ಅಮೆರಿಕ ಮತ್ತು ಪಾಕಿಸ್ತಾನ ತಲಾ 4 ಅಂಕಗಳನ್ನು ಹೊಂದಿದ್ದು, ನೆಟ್ ರನ್ ರೇಟ್ ಉತ್ತಮವಾಗಿರುವ ತಂಡ ಸೂಪರ್ 8 ಹಂತಕ್ಕೇರಲಿದೆ. ಅಂದರೆ ಪಾಕಿಸ್ತಾನ ತಂಡ ಉಳಿದ 2 ಪಂದ್ಯಗಳನ್ನು ಗೆಲ್ಲುವುದಲ್ಲದೆ, ತನ್ನ ನೆಟ್ ರನ್​ರೇಟ್​ ಅನ್ನು ಭಾರತ ಹಾಗೂ ಅಮೆರಿಕಕ್ಕಿಂತ ಉತ್ತಮಗೊಳಿಸಬೇಕಿದೆ. ಹಾಗಿದ್ದಾಗ ಮಾತ್ರ ಪಾಕಿಸ್ತಾನ ತಂಡ ಸೂಪರ್-8ಗೆ ಅರ್ಹತೆ ಪಡೆಯಲಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!