AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2024: 6 ಬ್ಯಾಟರ್ಸ್​ಗಳು ಒಂದೇ ರೀತಿ ಔಟ್! ಹೀಗೊಂದು ದಾಖಲೆ ಸೃಷ್ಟಿ

T20 World Cup 2024: ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಒಮಾನ್ ತಂಡದ 6 ಬ್ಯಾಟ್ಸ್‌ಮನ್‌ಗಳು ಎಲ್‌ಬಿಡಬ್ಲ್ಯೂ ಆಗುವ ಮೂಲಕ ತಮ್ಮ ವಿಕೆಟ್ ಕೈಚೆಲ್ಲಿದರು. ಅಂತರಾಷ್ಟ್ರೀಯ ಟಿ20 ಕ್ರಿಕೆಟ್‌ ಇತಿಹಾಸದಲ್ಲಿ ಒಂದು ಇನ್ನಿಂಗ್ಸ್‌ನಲ್ಲಿ 6 ಬ್ಯಾಟ್ಸ್‌ಮನ್‌ಗಳು ಎಲ್‌ಬಿಡಬ್ಲ್ಯೂ ಆಗಿ ಔಟಾಗಿದ್ದು ಇದೇ ಮೊದಲು.

T20 World Cup 2024: 6 ಬ್ಯಾಟರ್ಸ್​ಗಳು ಒಂದೇ ರೀತಿ ಔಟ್! ಹೀಗೊಂದು ದಾಖಲೆ ಸೃಷ್ಟಿ
ನಮೀಬಿಯಾ- ಒಮಾನ್
ಪೃಥ್ವಿಶಂಕರ
|

Updated on:Jun 03, 2024 | 5:14 PM

Share

2024 ರ ಟಿ20 ವಿಶ್ವಕಪ್‌ನಲ್ಲಿ (T20 World Cup 2024) ಇಂದು ನಡೆದ ಮೂರನೇ ಪಂದ್ಯದಲ್ಲಿ ಒಮಾನ್ ತಂಡವನ್ನು ಸೂಪರ್ ಓವರ್​ನಲ್ಲಿ ಮಣಿಸಿದ ನಮೀಬಿಯಾ (Namibia vs Oman) ತಂಡ ಲೀಗ್​ನಲ್ಲಿ ಗೆಲುವಿನ ಶುಭಾರಂಭ ಮಾಡಿದೆ. ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಒಮಾನ್ ತಂಡ, ನಮೀಬಿಯಾ ಬೌಲರ್​ಗಳ ದಾಳಿಗೆ ನಲುಗಿ 109 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ನಮೀಬಿಯಾ ಕೂಡ ಈ ಅಲ್ಪ ಗುರಿ ಬೆನ್ನಟ್ಟಲು ಹರಸಾಹಸ ಪಡಬೇಕಾಯಿತು. ಅಂತಿಮವಾಗಿ ಪಂದ್ಯ ಸೂಪರ್ ಓವರ್​ ಮೂಲಕ ಅಂತ್ಯಗೊಂಡಿತು. ಇದು ಪಂದ್ಯದ ಪಲಿತಾಂಶವಾದರೆ, ಇದೇ ಪಂದ್ಯ ಪುರುಷರ ಟಿ20 ಕ್ರಿಕೆಟ್​ನಲ್ಲಿ ಹಿಂದೆಂದೂ ನಡೆಯದ ಘಟನೆಗೆ ಸಾಕ್ಷಿಯಾಯಿತು. ಒಮಾನ್ ತಂಡದ 6 ಬ್ಯಾಟ್ಸ್‌ಮನ್​ಗಳು ಒಂದೇ ರೀತಿಯಲ್ಲಿ ವಿಕೆಟ್ ಒಪ್ಪಿಸುವ ಮೂಲಕ ಟಿ20 ಕ್ರಿಕೆಟ್​ನಲ್ಲಿ ಬೇಡದ ದಾಖಲೆಯನ್ನು ತಮ್ಮ ಖಾತೆಗೆ ಹಾಕಿಕೊಂಡರು.

ಭಾರತೀಯ ಕಾಲಮಾನದ ಪ್ರಕಾರ ಇಂದು ಮುಂಜಾನೆ ಆರಂಭವಾದ ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಒಮಾನ್ ತಂಡದ 6 ಬ್ಯಾಟ್ಸ್‌ಮನ್‌ಗಳು ಎಲ್‌ಬಿಡಬ್ಲ್ಯೂ ಆಗುವ ಮೂಲಕ ತಮ್ಮ ವಿಕೆಟ್ ಕೈಚೆಲ್ಲಿದರು. ಅಂತರಾಷ್ಟ್ರೀಯ ಟಿ20 ಕ್ರಿಕೆಟ್‌ ಇತಿಹಾಸದಲ್ಲಿ ಒಂದು ಇನ್ನಿಂಗ್ಸ್‌ನಲ್ಲಿ 6 ಬ್ಯಾಟ್ಸ್‌ಮನ್‌ಗಳು ಎಲ್‌ಬಿಡಬ್ಲ್ಯೂ ಆಗಿ ಔಟಾಗಿದ್ದು ಇದೇ ಮೊದಲು.

ಎಲ್‌ಬಿಡಬ್ಲ್ಯೂಗೆ ಬಲಿಯಾದ 6 ಬ್ಯಾಟ್ಸ್‌ಮನ್‌ಗಳು!

ನಮೀಬಿಯಾ ವಿರುದ್ಧ ಮೊದಲು ಬ್ಯಾಟ್ ಮಾಡಿದ ಒಮಾನ್ ತಂಡದ6 ಬ್ಯಾಟ್ಸ್‌ಮನ್‌ಗಳಲ್ಲಿ ಮೂವರು (ಕಶ್ಯಪ್ ಪ್ರಜಾಪತಿ, ಅಕಿಬ್ ಇಲ್ಯಾಸ್, ಕಲೀಮುಲ್ಲಾ), ನಮೀಬಿಯಾ ಬೌಲರ್ ರೂಬೆನ್ ಟ್ರಂಪೆಲ್‌ಮನ್ ಅವರ ಬೌಲಿಂಗ್​ನಲ್ಲಿ ಎಲ್‌ಬಿಡಬ್ಲ್ಯೂ ಬಲೆಗೆ ಬಿದ್ದರೆ, ಎರಾಸ್ಮಸ್, ಡೇವಿಡ್ ವೀಸಾ ಮತ್ತು ಬರ್ನಾರ್ಡ್ ತಲಾ ಒಬ್ಬ ಬ್ಯಾಟ್ಸ್‌ಮನ್‌ ಅನ್ನು ಎಲ್‌ಬಿಡಬ್ಲ್ಯು ಮಾಡಿದರು. ನಮೀಬಿಯಾ ಪರ ಮಾರಕ ದಾಳಿ ನಡೆಸಿದ ರುಬೆನ್ ಟ್ರಂಪೆಲ್‌ಮನ್ 4 ಓವರ್‌ಗಳಲ್ಲಿ 21 ರನ್ ನೀಡಿ 4 ವಿಕೆಟ್ ಪಡೆದರೆ, ಡೇವಿಡ್ ವಿಸಾ 3.4 ಓವರ್‌ಗಳಲ್ಲಿ 28 ರನ್ ನೀಡಿ 3 ವಿಕೆಟ್ ಪಡೆದರು.

View this post on Instagram

A post shared by ICC (@icc)

ಮೊದಲ 2 ಎಸೆತಗಳಲ್ಲಿ 2 ವಿಕೆಟ್

ಇದಲ್ಲದೆ ಈ ಪಂದ್ಯದಲ್ಲಿ ನಮೀಬಿಯಾ ಪರ ಬೌಲಿಂಗ್ ದಾಳಿ ಆರಂಭಿಸಿದ ರುಬೆನ್ ಟ್ರಂಪೆಲ್‌ಮನ್ ಮೊದಲ ಎರಡು ಎಸೆತಗಳಲ್ಲಿ ಒಮಾನ್​ನ ಇಬ್ಬರು ಬ್ಯಾಟರ್​ಗಳನ್ನು ಶೂನ್ಯಕ್ಕೆ ಪೆವಿಲಿಯನ್​ಗಟ್ಟಿದರು. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಮೊದಲ ಎರಡು ಎಸೆತಗಳಲ್ಲಿ ಎರಡು ವಿಕೆಟ್ ಉರುಳಿಸಿದ ಮೊದಲ ಬೌಲರ್ ಎಂಬ ದಾಖಲೆಯನ್ನು ರುಬೆನ್ ಟ್ರಂಪೆಲ್‌ಮನ್ ಬರೆದರು. ಕುತೂಹಲಕಾರಿ ಸಂಗತಿಯೆಂದರೆ ಈ ಇಬ್ಬರು ಬ್ಯಾಟರ್​ಗಳು ಎಲ್‌ಬಿಡಬ್ಲ್ಯೂ ಆಗುವ ಮೂಲಕ ತಮ್ಮ ವಿಕೆಟ್ ಒಪ್ಪಿಸಿ ತಮ್ಮ ಇನ್ನಿಂಗ್ಸ್​ಗೆ ಅಂತ್ಯ ಹಾಡಿದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:14 pm, Mon, 3 June 24

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ