AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SL vs BAN: ಶ್ರೀಲಂಕಾ ವಿರುದ್ಧ ಬಾಂಗ್ಲಾದೇಶ್​ಗೆ ರೋಚಕ ಜಯ

T20 World Cup 2024: ಶ್ರೀಲಂಕಾ ವಿರುದ್ಧದ ಈ ಪಂದ್ಯದಲ್ಲಿ ಬಾಂಗ್ಲಾದೇಶ್ ಪರ ಉತ್ತಮ ದಾಳಿ ಸಂಘಟಿಸಿದ ಮುಸ್ತಫಿಜುರ್ ರೆಹಮಾನ್ 4 ಓವರ್​ಗಳಲ್ಲಿ 17 ರನ್ ನೀಡಿ 3 ವಿಕೆಟ್ ಕಬಳಿಸಿದರೆ, ಉತ್ತಮ ಸಾಥ್ ನೀಡಿದ ರಿಶಾದ್ ಹೊಸೈನ್ 4 ಓವರ್​ಗಳಲ್ಲಿ 22 ರನ್ ನೀಡಿ 3 ವಿಕೆಟ್ ಪಡೆದರು. ಈ ಮೂಲಕ ಲಂಕಾ ತಂಡವನ್ನು 124 ರನ್​ಗಳಿಗೆ ನಿಯಂತ್ರಿಸುವಲ್ಲಿ ಪ್ರಮುಖ ಪಾತ್ರವಹಿಸಿದರು.

SL vs BAN: ಶ್ರೀಲಂಕಾ ವಿರುದ್ಧ ಬಾಂಗ್ಲಾದೇಶ್​ಗೆ ರೋಚಕ ಜಯ
Bangladesh
ಝಾಹಿರ್ ಯೂಸುಫ್
|

Updated on: Jun 08, 2024 | 10:34 AM

Share

T20 World Cup 2024: ಡಲ್ಲಾಸ್​ನ ಗ್ರ್ಯಾಂಡ್ ಪ್ರೈರೀ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್​ನ 15ನೇ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಬಾಂಗ್ಲಾದೇಶ್ ತಂಡ ರೋಚಕ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಬಾಂಗ್ಲಾದೇಶ್ ತಂಡವು ಶ್ರೀಲಂಕಾ ತಂಡವನ್ನು ಬ್ಯಾಟಿಂಗ್​ಗೆ ಆಹ್ವಾನಿಸಿತು. ಅದರಂತೆ ಇನಿಂಗ್ಸ್ ಆರಂಭಿಸಿದ ಲಂಕಾ ತಂಡಕ್ಕೆ ಆರಂಭಿಕ ಆಟಗಾರ ಪಾತುಮ್ ನಿಸ್ಸಂಕಾ ಉತ್ತಮ ಆರಂಭ ಒದಗಿಸಿದ್ದರು. 28 ಎಸೆತಗಳನ್ನು ಎದುರಿಸಿದ ನಿಸ್ಸಂಕಾ 1 ಭರ್ಜರಿ ಸಿಕ್ಸ್ ಹಾಗೂ 6 ಫೋರ್​ಗಳೊಂದಿಗೆ 47 ರನ್ ಬಾರಿಸಿ ಔಟಾದರು.

ಆದರೆ ನಿಸ್ಸಂಕಾ ನಿರ್ಗಮನದ ಬಳಿಕ ಉಳಿದ ಬ್ಯಾಟರ್​ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಧನಂಜಯ ಡಿಸಿಲ್ವಾ 21 ರನ್ ಬಾರಿಸಿದ್ದು ಬಿಟ್ಟರೆ ಉಳಿದ ಬ್ಯಾಟರ್​ಗಳು ರನ್​ಗಳಿಸಲು ಪರದಾಡಿದರು. ಪರಿಣಾಮ ಶ್ರೀಲಂಕಾ ತಂಡವು 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 124 ರನ್​ಗಳಿಸಲಷ್ಟೇ ಶಕ್ತವಾಯಿತು.

ಬಾಂಗ್ಲಾದೇಶ್ ಪರ ಉತ್ತಮ ದಾಳಿ ಸಂಘಟಿಸಿದ ಮುಸ್ತಫಿಜುರ್ ರೆಹಮಾನ್ 4 ಓವರ್​ಗಳಲ್ಲಿ 17 ರನ್ ನೀಡಿ 3 ವಿಕೆಟ್ ಕಬಳಿಸಿದರೆ, ಉತ್ತಮ ಸಾಥ್ ನೀಡಿದ ರಿಶಾದ್ ಹೊಸೈನ್ 4 ಓವರ್​ಗಳಲ್ಲಿ 22 ರನ್ ನೀಡಿ 3 ವಿಕೆಟ್ ಪಡೆದರು.

ಇನ್ನು 125 ರನ್​ಗಳ ಸುಲಭ ಗುರಿಯನ್ನು ಬೆನ್ನತ್ತಿದ ಬಾಂಗ್ಲಾದೇಶ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಕೇವಲ 6 ರನ್​ಗಳಿಸುವಷ್ಟರಲ್ಲಿ ಇಬ್ಬರು ಆರಂಭಿಕರನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು.

ಈ ಹಂತದಲ್ಲಿ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿದ ಲಿಟ್ಟನ್ ದಾಸ್ 38 ಎಸೆತಗಳಲ್ಲಿ 36 ರನ್ ಬಾರಿಸಿ ತಂಡಕ್ಕೆ ಆಸರೆಯಾಗಿ ನಿಂತರು. ಮತ್ತೊಂದೆಡೆ ತೌಹಿದ್ ಹೃದೋಯ್ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದರು.

20 ಎಸೆತಗಳನ್ನು ಎದುರಿಸಿದ ಹೃದೋಯ್ 4 ಭರ್ಜರಿ ಸಿಕ್ಸ್ ಹಾಗೂ 1 ಫೋರ್​ನೊಂದಿಗೆ 40 ರನ್ ಕಲೆಹಾಕಿದರು. ಆದರೆ ಅಂತಿಮ ಓವರ್​ಗಳ ವೇಳೆ ಲಿಟ್ಟನ್ ದಾಸ್ ಹಾಗೂ ತೌಹಿದ್ ಹೃದೋಯ್ ವಿಕೆಟ್ ಕಬಳಿಸುವ ಮೂಲಕ ಶ್ರೀಲಂಕಾ ಬೌಲರ್​ಗಳು ಪಂದ್ಯದ ಮೇಲೆ ಹಿಡಿತ ಸಾಧಿಸಿದರು.

ಪರಿಣಾಮ ಕೊನೆಯ 12 ಎಸೆತಗಳಲ್ಲಿ ಬಾಂಗ್ಲಾದೇಶ್ ತಂಡಕ್ಕೆ 11 ರನ್​ಗಳ ಅವಶ್ಯಕತೆಯಿತ್ತು. ಅತ್ತ ಶ್ರೀಲಂಕಾ ತಂಡಕ್ಕೆ 2 ವಿಕೆಟ್​ಗಳ ಅಗತ್ಯತೆಯಿತ್ತು. ಆದರೆ ದಸುನ್ ಶಾನಕ ಎಸೆದ 19ನೇ ಓವರ್​ನ ಮೊದಲ ಎಸೆತದಲ್ಲೇ ಸಿಕ್ಸ್ ಸಿಡಿಸುವ ಮೂಲಕ ಮಹಮ್ಮದುಲ್ಲಾ ತಂಡವನ್ನು ಗೆಲುವಿನತ್ತ ಮುನ್ನಡೆಸಿದರು.

ಅಲ್ಲದೆ ಇದೇ ಓವರ್​ನಲ್ಲಿ 11 ರನ್ ಬಾರಿಸುವ ಮೂಲಕ ಬಾಂಗ್ಲಾದೇಶ್ ತಂಡವು 19 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು ಗುರಿ ಮುಟ್ಟಿತು. ಈ ಮೂಲಕ ಬಾಂಗ್ಲಾ ಪಡೆ 2 ವಿಕೆಟ್​ಗಳ ರೋಚಕ ಜಯ ಸಾಧಿಸಿತು. ಈ ಗೆಲುವಿನೊಂದಿಗೆ ಬಾಂಗ್ಲಾದೇಶ್ ತಂಡವು ಟಿ20 ವಿಶ್ವಕಪ್​ನಲ್ಲಿ ಶುಭಾರಂಭ ಮಾಡಿದೆ.

ಶ್ರೀಲಂಕಾ ಪ್ಲೇಯಿಂಗ್ 11: ಪಾತುಮ್ ನಿಸ್ಸಾಂಕಾ , ಕುಸಲ್ ಮೆಂಡಿಸ್ (ವಿಕೆಟ್ ಕೀಪರ್) , ಕಮಿಂದು ಮೆಂಡಿಸ್ , ಧನಂಜಯ ಡಿ ಸಿಲ್ವ , ಚರಿತ್ ಅಸಲಂಕ , ವನಿಂದು ಹಸರಂಗ (ನಾಯಕ) , ಏಂಜೆಲೊ ಮ್ಯಾಥ್ಯೂಸ್ , ದಾಸುನ್ ಶಾನಕ , ಮಹೀಶ್ ತೀಕ್ಷಣ , ನುವಾನ್ ತುಷಾರ , ಮತೀಶ ಪತಿರಾಣ.

ಇದನ್ನೂ ಓದಿ: Babar Azam: ಬಾಬರ್ ಅಬ್ಬರಕ್ಕೆ ಕಿಂಗ್ ಕೊಹ್ಲಿಯ ದಾಖಲೆ ಉಡೀಸ್

ಬಾಂಗ್ಲಾದೇಶ್ ಪ್ಲೇಯಿಂಗ್ 11: ತಂಝಿದ್ ಹಸನ್ , ಸೌಮ್ಯ ಸರ್ಕಾರ್ , ಲಿಟ್ಟನ್ ದಾಸ್ (ವಿಕೆಟ್ ಕೀಪರ್) , ನಜ್ಮುಲ್ ಹೊಸೈನ್ ಶಾಂಟೋ (ನಾಯಕ) , ತೌಹಿದ್ ಹೃದೋಯ್, ಶಾಕಿಬ್ ಅಲ್ ಹಸನ್ , ಮಹಮದುಲ್ಲಾ , ರಿಶಾದ್ ಹೊಸೈನ್ , ತಸ್ಕಿನ್ ಅಹ್ಮದ್ , ಮುಸ್ತಾಫಿಜುರ್ ರೆಹಮಾನ್ , ತನ್ಜಿಮ್ ಹಸನ್.

Follow Us
ತಾತನಾಗಿ ಬಡ್ತಿ ಪಡೆದ ಡಿಕೆ ಶಿವಕುಮಾರ್ ಫಸ್ಟ್ ರಿಯಾಕ್ಷನ್ ಹೇಗಿತ್ತು ನೋಡಿ
ತಾತನಾಗಿ ಬಡ್ತಿ ಪಡೆದ ಡಿಕೆ ಶಿವಕುಮಾರ್ ಫಸ್ಟ್ ರಿಯಾಕ್ಷನ್ ಹೇಗಿತ್ತು ನೋಡಿ
ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು
ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
RV ರಸ್ತೆ-ಸಿಲ್ಕ್ ಬೋರ್ಡ್ ಡಬಲ್‌ ಡೆಕ್ಕರ್‌ ಫ್ಲೈಓವರ್​​​ಗೆ ಚಾಲನೆ
RV ರಸ್ತೆ-ಸಿಲ್ಕ್ ಬೋರ್ಡ್ ಡಬಲ್‌ ಡೆಕ್ಕರ್‌ ಫ್ಲೈಓವರ್​​​ಗೆ ಚಾಲನೆ
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ
‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ