AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ಭಾರತವನ್ನು ಚಾಂಪಿಯನ್ ಮಾಡಿದ ಸೂರ್ಯ ಹಿಡಿದ ಅದೊಂದು ಕ್ಯಾಚ್..! ವಿಡಿಯೋ ನೋಡಿ

T20 World Cup 2024, Suryakumar Yadav: ವಾಸ್ತವವಾಗಿ ದಕ್ಷಿಣ ಆಫ್ರಿಕಾ ಗೆಲುವಿಗೆ 6 ಎಸೆತಗಳಲ್ಲಿ 16 ರನ್‌ಗಳ ಅಗತ್ಯವಿದ್ದಾಗ, ಡೇವಿಡ್ ಮಿಲ್ಲರ್ ಮೊದಲ ಎಸೆತದಲ್ಲಿ ಬೃಹತ್ ಸಿಕ್ಸರ್ ಬಾರಿಸಲು ಯತ್ನಿಸಿದರು. ಆದರೆ ಬೌಂಡರಿಯಲ್ಲಿದ್ದ ಸೂರ್ಯಕುಮಾರ್ ಯಾದವ್ ಯಾವುದೇ ತಪ್ಪು ಮಾಡದೆ ಅಮೋಘ ಕ್ಯಾಚ್ ಪಡೆದರು. ಈ ಕ್ಯಾಚ್ ಹಿಡಿಯುವಲ್ಲಿ ಸೂರ್ಯಕುಮಾರ್ ಯಾದವ್ ಸಣ್ಣ ತಪ್ಪು ಮಾಡಿದ್ದರೆ ವಿಶ್ವಕಪ್ ಕನಸು ಭಗ್ನವಾಗುತ್ತಿತ್ತು.

IND vs SA: ಭಾರತವನ್ನು ಚಾಂಪಿಯನ್ ಮಾಡಿದ ಸೂರ್ಯ ಹಿಡಿದ ಅದೊಂದು ಕ್ಯಾಚ್..! ವಿಡಿಯೋ ನೋಡಿ
ಸೂರ್ಯಕುಮಾರ್ ಯಾದವ್
ಪೃಥ್ವಿಶಂಕರ
|

Updated on:Jun 30, 2024 | 12:44 AM

Share

ಕೊನೆಗೂ ಟೀಂ ಇಂಡಿಯಾ ಟಿ20 ವಿಶ್ವಕಪ್ ಗೆದ್ದುಕೊಂಡಿದೆ. ಕಳೆದ ಒಂದು ತಿಂಗಳಿನಿಂದ ಪ್ರಶಸ್ತಿ ಬೆನ್ನು ಹತ್ತಿದ್ದ ಟೀಂ ಇಂಡಿಯಾ ಕೊನೆಗೂ ಟ್ರೋಫಿ ಮೇಲೆ ತನ್ನ ಹೆಸರನ್ನು ನಮೂದಿಸಿದೆ. ಈ ಮೂಲಕ ಟೀಂ ಇಂಡಿಯಾ 11 ವರ್ಷಗಳ ಐಸಿಸಿ ಟ್ರೋಫಿಯ ಬರವನ್ನು ನೀಗಿಸಿದೆ. ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿತು. ಅದರಂತೆ ನಿಗದಿತ 20 ಓವರ್​ಗಳಲ್ಲಿ 7 ವಿಕೆಟ್ ನಷ್ಟಕ್ಕೆ 176 ರನ್ ಗಳಿಸಿ ಗೆಲುವಿಗೆ 177 ರನ್​ಗಳ ಸವಾಲನ್ನು ನೀಡಿತು. ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ತಂಡ ಕೊನೆಯ 5 ಓವರ್​ಗಳವರೆಗೂ ಗೆಲುವಿನ ಫೇವರೇಟ್ ಎನಿಸಿಕೊಂಡಿತ್ತು. ಆದರೆ ಸ್ಫೋಟಕ ಬ್ಯಾಟಿಂಗ್ ನಡೆಸುತ್ತಿದ್ದ ಹೆನ್ರಿಚ್ ಕ್ಲಾಸೆನ್ ಅವರನ್ನು ಹಾರ್ದಿಕ್ ಪಾಂಡ್ಯ ಔಟ್ ಮಾಡುವ ಮೂಲಕ ಪಂದ್ಯಕ್ಕೆ ತಿರುವು ನೀಡಿದರು. ಇದಲ್ಲದೆ ಕೊನೆಯ ಓವರ್​ನ ಮೊದಲ ಎಸೆತದಲ್ಲಿ ಡೇವಿಡ್ ಮಿಲ್ಲರ್ ಬಾರಿಸಿದ ಬಿಗ್ ಶಾಟ್ ಅನ್ನು ಕ್ಯಾಚ್ ಆಗಿ ಪರಿವರ್ತಿಸುವಲ್ಲಿ ಯಶಸ್ವಿಯಾದ ಸೂರ್ಯಕುಮಾರ್ ಯಾದವ್ ಪಂದ್ಯ ಭಾರತದ ಬತ್ತಳಿಕೆಗೆ ಬೀಳುವಂತೆ ಮಾಡಿದರು.

ಅದ್ಭುತ ಕ್ಯಾಚ್ ಹಿಡಿದ ಸೂರ್ಯ

ವಾಸ್ತವವಾಗಿ ದಕ್ಷಿಣ ಆಫ್ರಿಕಾ ಗೆಲುವಿಗೆ 6 ಎಸೆತಗಳಲ್ಲಿ 16 ರನ್‌ಗಳ ಅಗತ್ಯವಿದ್ದಾಗ, ಡೇವಿಡ್ ಮಿಲ್ಲರ್ ಮೊದಲ ಎಸೆತದಲ್ಲಿ ಬೃಹತ್ ಸಿಕ್ಸರ್ ಬಾರಿಸಲು ಯತ್ನಿಸಿದರು. ಆದರೆ ಬೌಂಡರಿಯಲ್ಲಿದ್ದ ಸೂರ್ಯಕುಮಾರ್ ಯಾದವ್ ಯಾವುದೇ ತಪ್ಪು ಮಾಡದೆ ಅಮೋಘ ಕ್ಯಾಚ್ ಪಡೆದರು. ಈ ಕ್ಯಾಚ್ ಹಿಡಿಯುವಲ್ಲಿ ಸೂರ್ಯಕುಮಾರ್ ಯಾದವ್ ಸಣ್ಣ ತಪ್ಪು ಮಾಡಿದ್ದರೆ ವಿಶ್ವಕಪ್ ಕನಸು ಭಗ್ನವಾಗುತ್ತಿತ್ತು. ಮೊದಲ ಎಸೆತದಲ್ಲಿಯೇ ಹಾರ್ದಿಕ್ ಪಾಂಡ್ಯ ವೈಡ್ ಫುಲ್ ಟಾಸ್ ಬೌಲ್ಡ್ ಮಾಡಿದರು. ಅದನ್ನು ಡೇವಿಡ್ ಮಿಲ್ಲರ್ ಸಿಕ್ಸರ್ ಬಾರಿಸಲು ಯತ್ನಿಸಿದರು. ಮಿಲ್ಲರ್ ಬ್ಯಾಟಿಗೆ ತಾಕಿದ ಚೆಂಡು ಗಗನದೆತ್ತರಕ್ಕೆ ಹಾರಿತು. ಹಾಗಾಗಿ ಇದು ಸಿಕ್ಸರ್ ಆಗಲಿದೆ ಎಂದು ಎಲ್ಲರೂ ಭಾವಿಸಿದ್ದರು. ಆದರೆ ಸೂರ್ಯ ಬೌಂಡರಿ ಒಳಗೆ ಆ ಚೆಂಡನ್ನು ಕ್ಯಾಚ್ ಮಾಡಿದ ಸೂರ್ಯ, ತಾನು ಬೌಂಡರಿ ದಾಟುವ ಮುನ್ನವೇ ಚೆಂಡನ್ನು ಒಳಗೆ ಎಸೆದು ಮತ್ತೆ ಕ್ಯಾಚ್ ಪಡೆದರು. ಈ ಕ್ಯಾಚ್‌ನಿಂದಾಗಿ ಇಡೀ ಪಂದ್ಯ ಭಾರತದ ಪರ ವಾಲಿತು.

ಭಾರತಕ್ಕೆ 7 ರನ್ ಜಯ

ಡೇವಿಡ್ ಮಿಲ್ಲರ್ ಔಟಾದ ನಂತರ ದಕ್ಷಿಣ ಆಫ್ರಿಕಾ ತಂಡದ ಸೋಲು ಖಚಿತವಾಯಿತು. ಈ ವಿಕೆಟ್ ಬಳಿಕ ಆಫ್ರಿಕಾ ತಂಡದ ಯಾವುದೇ ಬ್ಯಾಟ್ಸ್ಮನ್ 5 ಎಸೆತಗಳಲ್ಲಿ 16 ರನ್ ಗಳಿಸಲು ಸಾಧ್ಯವಾಗಲಿಲ್ಲ.ಹೀಗಾಗಿ ಕೊನೆಗೂ ದಕ್ಷಿಣ ಆಫ್ರಿಕಾ ತಮ್ಮ ಚೋಕರ್ಸ್​ ಹಣೆಪಟ್ಟವನ್ನು ತನ್ನಲ್ಲೇ ಉಳಿಸಿಕೊಂಡಿತು. ಕೊನೆಯಲ್ಲಿ ರಬಾಡ ಮೊದಲ ಎಸೆತದಲ್ಲೇ ಬೌಂಡರಿ ಬಾರಿಸುವ ಮೂಲಕ ಮತ್ತೆ ಪಂದ್ಯವನ್ನು ರೋಚಕಗೊಳಿಸಿದರು. ಆದರೂ ತಮ್ಮ ಕರಾರುವಕ್ಕಾದ ದಾಳಿಯನ್ನು ಮುಂದುವರೆಸಿದ ಪಾಂಡ್ಯ ಪಂದ್ಯವನ್ನು 7 ರನ್‌ಗಳಿಂದ ಗೆಲ್ಲಿಸಿಕೊಡುವಲ್ಲಿ ಯಶಸ್ವಿಯಾದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:22 am, Sun, 30 June 24

ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ