IND vs AFG: ಸೂರ್ಯ, ಬುಮ್ರಾ ಆಟಕ್ಕೆ ಅಫ್ಘಾನ್ ತತ್ತರ; ಭಾರತಕ್ಕೆ 47 ರನ್ ಜಯ

T20 World Cup 2024: ಬಾರ್ಬಡೋಸ್‌ನ ಬ್ರಿಡ್ಜ್‌ಟೌನ್‌ ಕ್ರೀಡಾಂಗಣದಲ್ಲಿ ನಡೆದ ಭಾರತ ಹಾಗೂ ಅಫ್ಘಾನಿಸ್ತಾನ ನಡುವಿನ ಸೂಪರ್ 8 ಸುತ್ತಿನ ಪಂದ್ಯದಲ್ಲಿ ಟೀಂ ಇಂಡಿಯಾ 47 ರನ್​​ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಸತತ 4 ಪಂದ್ಯಗಳನ್ನು ಗೆಲ್ಲುವ ಮೂಲಕ ಟೀಂ ಇಂಡಿಯಾ ತನ್ನ ಅಜೇಯ ಓಟವನ್ನು ಮುಂದುವರೆಸಿದೆ

IND vs AFG: ಸೂರ್ಯ, ಬುಮ್ರಾ ಆಟಕ್ಕೆ ಅಫ್ಘಾನ್ ತತ್ತರ; ಭಾರತಕ್ಕೆ 47 ರನ್ ಜಯ
ಟೀಂ ಇಂಡಿಯಾ
Follow us
|

Updated on:Jun 20, 2024 | 11:56 PM

ಬಾರ್ಬಡೋಸ್‌ನ ಬ್ರಿಡ್ಜ್‌ಟೌನ್‌ ಕ್ರೀಡಾಂಗಣದಲ್ಲಿ ನಡೆದ ಭಾರತ ಹಾಗೂ ಅಫ್ಘಾನಿಸ್ತಾನ (India vs Afghanistan) ನಡುವಿನ ಸೂಪರ್ 8 ಸುತ್ತಿನ ಪಂದ್ಯದಲ್ಲಿ ಟೀಂ ಇಂಡಿಯಾ 47 ರನ್​​ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ (T20 World Cup 2024) ಸತತ 4 ಪಂದ್ಯಗಳನ್ನು ಗೆಲ್ಲುವ ಮೂಲಕ ಟೀಂ ಇಂಡಿಯಾ ತನ್ನ ಅಜೇಯ ಓಟವನ್ನು ಮುಂದುವರೆಸಿದೆ. ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ಸೂರ್ಯಕುಮಾರ್ ಯಾದವ್ (Suryakumar Yadav) ಸಿಡಿಸಿದ ಅಮೋಘ ಅರ್ಧಶತಕದ ಆಧಾರದ ಮೇಲೆ ನಿಗದಿತ 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 181 ರನ್ ಕಲೆಹಾಕಿತು. ಈ ಮೂಲಕ ಅಫ್ಘಾನಿಸ್ತಾನ ತಂಡಕ್ಕೆ 182 ರನ್​ಗಳ ಗೆಲುವಿನ ಗುರಿ ನೀಡಿತು. ಗುರಿ ಬೆನ್ನಟ್ಟಿದ ಅಫ್ಘಾನ್ ತಂಡ ಬುಮ್ರಾ (Jasprit Bumrah) ದಾಳಿಗೆ ನಲುಗಿ ನಿಯಮಿತ ಅಂತರದಲ್ಲಿ ವಿಕೆಟ್ ಕಳೆದುಕೊಂಡಿದಲ್ಲದೆ ಪಂದ್ಯದಲ್ಲಿ ಹೀನಾಯ ಸೋಲನುಭವಿಸಿತು.

ಮತ್ತೆ ಕಳಪೆ ಆರಂಭ

ಟಾಸ್ ಗೆದ್ದು ಮೊದಲು ಬ್ಯಾಡಿಂಗ್ ಮಾಡಿದ ಟೀಂ ಇಂಡಿಯಾ ಸೂರ್ಯಕುಮಾರ್ ಯಾದವ್ ಅವರ ಅದ್ಭುತ ಅರ್ಧಶತಕ ಮತ್ತು ಹಾರ್ದಿಕ್ ಪಾಂಡ್ಯ ಅವರ ಜೊತೆಯಾಟದ ಆಧಾರದ ಮೇಲೆ ಸ್ಪರ್ಧಾತ್ಮಕ ಮೊತ್ತ ಕಲೆಹಾಕಿತು. ಎಂದಿನಂತೆ ಈ ಪಂದ್ಯದಲ್ಲೂ ಭಾರತಕ್ಕೆ ಉತ್ತಮ ಆರಂಭ ಸಿಗಲಿಲ್ಲ. ನಾಯಕ ರೋಹಿತ್ ಕೇವಲ 8 ರನ್​ಗಳಿಗೆ ವಿಕೆಟ್ ಒಪ್ಪಿಸಿದರು. ಆ ನಂತರ ಬಂದ ಪಂತ್ ಕೂಡ 20 ರನ್​ಗಳಿಗೆ ಪೆವಿಲಿಯನ್ ಸೇರಿಕೊಂಡರು. ಕಳೆದ ಮೂರು ಪಂದ್ಯಗಳಲ್ಲಿ ಒಂದಂಕಿಗೆ ಸುಸ್ತಾಗಿದ್ದ ಕೊಹ್ಲಿ, ಈ ಪಂದ್ಯದಲ್ಲಿ 24 ರನ್ ಬಾರಿಸಿದರಾದರೂ ಅದಕ್ಕಾಗಿ 24 ಎಸೆತಗಳನ್ನು ತೆಗೆದುಕೊಂಡರು.

ಸೂರ್ಯ- ಪಾಂಡ್ಯ ಜೊತೆಯಾಟ

ಆ ನಂತರ ಜೊತೆಯಾದ ಸೂರ್ಯಕುಮಾರ್ ಯಾದವ್ ಹಾಗೂ ಹಾರ್ದಿಕ್ ಪಾಂಡ್ಯ ತಂಡದ ಇನ್ನಿಂಗ್ಸ್ ನಿಭಾಯಿಸಿದರು. ಸೂರ್ಯಕುಮಾರ್ 28 ಎಸೆತಗಳಲ್ಲಿ ಐದು ಬೌಂಡರಿ ಹಾಗೂ ಮೂರು ಸಿಕ್ಸರ್ ನೆರವಿನಿಂದ 53 ರನ್ ಗಳಿಸಿ ಔಟಾದರು. ಇವರನ್ನು ಹೊರತುಪಡಿಸಿ, ಭಾರತದ ಉಪನಾಯಕ ಹಾರ್ದಿಕ್ 24 ಎಸೆತಗಳಲ್ಲಿ ಮೂರು ಬೌಂಡರಿ ಮತ್ತು ಎರಡು ಸಿಕ್ಸರ್‌ಗಳ ಸಹಾಯದಿಂದ 32 ರನ್ ಗಳಿಸಿದರು. ಅಲ್ಲದೆ ಐದನೇ ವಿಕೆಟ್‌ಗೆ ಈ ಇಬ್ಬರು 60 ರನ್‌ಗಳ ಜೊತೆಯಾಟ ನೀಡುವ ಮೂಲಕ ತಂಡವನ್ನು ಸಂಕಷ್ಟದಿಂದ ಪಾರು ಮಾಡಿದರು. ಕೊನೆಯಲ್ಲಿ ಅಕ್ಷರ್ ಪಟೇಲ್ ಉತ್ತಮ ಹೊಡೆತಗಳನ್ನು ಬಾರಿಸಿ ತಂಡವನ್ನು 180 ರನ್ ಗಡಿ ದಾಟುವಂತೆ ಮಾಡಿದರು. ಅಫ್ಘಾನಿಸ್ತಾನ ಪರ ಫಜಲ್ಹಕ್ ಫಾರೂಕಿ ಮತ್ತು ನಾಯಕ ರಶೀದ್ ಖಾನ್ ತಲಾ ಮೂರು ವಿಕೆಟ್ ಪಡೆದರು.

ಭಾರತದ ದಾಳಿಗೆ ತತ್ತರಿಸಿದ ಅಫ್ಘಾನ್

ಭಾರತ ನೀಡಿದ 183 ರನ್​​ಗಳ ಗುರಿ ಬೆನ್ನಟ್ಟಿದ ಅಫ್ಘಾನಿಸ್ತಾನ ಪರ ಅಜ್ಮತುಲ್ಲಾ ಒಮರ್ಜಾಯ್ 20 ಎಸೆತಗಳಲ್ಲಿ ಎರಡು ಬೌಂಡರಿ ಹಾಗೂ ಒಂದು ಸಿಕ್ಸರ್ ನೆರವಿನಿಂದ ಗರಿಷ್ಠ 26 ರನ್ ಗಳಿಸಿದರು. ಗುರಿ ಬೆನ್ನಟ್ಟಿದ ಅಫ್ಘಾನಿಸ್ತಾನಕ್ಕೆ ಉತ್ತಮ ಆರಂಭ ಸಿಗದ ಕಾರಣ ತಂಡ ನಿಗದಿತ ಅಂತರದಲ್ಲಿ ವಿಕೆಟ್ ಕಳೆದುಕೊಳ್ಳುತ್ತಲೇ ಇತ್ತು. ಈ ಪಂದ್ಯದಲ್ಲೂ ಭಾರತದ ಬೌಲರ್‌ಗಳು ದಿಟ್ಟ ಪ್ರದರ್ಶನ ನೀಡಿ ಸ್ಕೋರ್ ಅನ್ನು ರಕ್ಷಿಸುವಲ್ಲಿ ಯಶಸ್ವಿಯಾದರು. ಭಾರತ ಈಗ ಶನಿವಾರ ಬಾಂಗ್ಲಾದೇಶವನ್ನು ಎದುರಿಸಲಿದೆ. ಸೂಪರ್ 8 ಹಂತದ ಗ್ರೂಪ್ 1 ರಲ್ಲಿ ಭಾರತ ಎರಡು ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:37 pm, Thu, 20 June 24

ತಾಜಾ ಸುದ್ದಿ
ಶ್ರೀಗಳು ಸ್ಥಾನ ಬಿಟ್ಟುಕೊಡಿ ಅಂದಿದ್ದು ಸಿದ್ದರಾಮಯ್ಯರನ್ನು ವಿಚಲಿತರಾಗಿಸಿದೆ
ಶ್ರೀಗಳು ಸ್ಥಾನ ಬಿಟ್ಟುಕೊಡಿ ಅಂದಿದ್ದು ಸಿದ್ದರಾಮಯ್ಯರನ್ನು ವಿಚಲಿತರಾಗಿಸಿದೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯೂ ಶಾಲೆಗ, ಕಾಲೇಜುಗಳಿಗೆ ರಜೆ ಘೋಷಣೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯೂ ಶಾಲೆಗ, ಕಾಲೇಜುಗಳಿಗೆ ರಜೆ ಘೋಷಣೆ
ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಕ್ಕರೆ ರಾಜಣ್ಣ ಮಂತ್ರಿ ಸ್ಥಾನ ತ್ಯಜಿಸುತ್ತಾರೆ?
ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಕ್ಕರೆ ರಾಜಣ್ಣ ಮಂತ್ರಿ ಸ್ಥಾನ ತ್ಯಜಿಸುತ್ತಾರೆ?
ಆ ಶ್ರೀ ಸ್ಥಾನ ಬಿಟ್ಟುಕೊಡ್ತಾರಾ? ಕೇಳಿ ನಾನೇ ಸ್ವಾಮೀಜಿ ಆಗ್ತೇನೆ: ರಾಜಣ್ಣ
ಆ ಶ್ರೀ ಸ್ಥಾನ ಬಿಟ್ಟುಕೊಡ್ತಾರಾ? ಕೇಳಿ ನಾನೇ ಸ್ವಾಮೀಜಿ ಆಗ್ತೇನೆ: ರಾಜಣ್ಣ
ಕೆಂಪೇಗೌಡರ ಜಯಂತಿಯಲ್ಲಿ ಹಾಸನ ಡಿಸಿ ಕಣ್ಣೀರು, ಕಾರಣವೇನು ಗೊತ್ತಾ?
ಕೆಂಪೇಗೌಡರ ಜಯಂತಿಯಲ್ಲಿ ಹಾಸನ ಡಿಸಿ ಕಣ್ಣೀರು, ಕಾರಣವೇನು ಗೊತ್ತಾ?
ಚಂದ್ರಶೇಖರ ಶ್ರೀಗಳು ನೀಡಿದ ಹೇಳಿಕೆಗೆ ಆರ್ ಅಶೋಕ ತಮ್ಮ ವ್ಯಾಖ್ಯಾನ ನೀಡಿದರು!
ಚಂದ್ರಶೇಖರ ಶ್ರೀಗಳು ನೀಡಿದ ಹೇಳಿಕೆಗೆ ಆರ್ ಅಶೋಕ ತಮ್ಮ ವ್ಯಾಖ್ಯಾನ ನೀಡಿದರು!
ದರ್ಶನ್ ಕಾಣಲು ಬಂದ ವಿಶೇಷ ಚೇತನ ಅಭಿಮಾನಿಯ ಮಾತು
ದರ್ಶನ್ ಕಾಣಲು ಬಂದ ವಿಶೇಷ ಚೇತನ ಅಭಿಮಾನಿಯ ಮಾತು
ಮಳೆಯಿಂದಾಗಿ ಯೂನಿಯನ್ ಬ್ಯಾಂಕ್ ಎಸಿಯೊಳಗೆ ಬಂದು ಅವಿತು ಕುಳಿತ ಮರಿ ಹೆಬ್ಬಾವು
ಮಳೆಯಿಂದಾಗಿ ಯೂನಿಯನ್ ಬ್ಯಾಂಕ್ ಎಸಿಯೊಳಗೆ ಬಂದು ಅವಿತು ಕುಳಿತ ಮರಿ ಹೆಬ್ಬಾವು
ಶ್ರೀಗಳು ಹೇಳಿದ ಮಾತ್ರಕ್ಕೆ ಸಿಎಂ ಬದಲಾವಣೆ ಆಗಲ್ಲ: ಶಾಮನೂರು ಶಿವಶಂಕರಪ್ಪ
ಶ್ರೀಗಳು ಹೇಳಿದ ಮಾತ್ರಕ್ಕೆ ಸಿಎಂ ಬದಲಾವಣೆ ಆಗಲ್ಲ: ಶಾಮನೂರು ಶಿವಶಂಕರಪ್ಪ
‘ಸೂಪರ್​ ಆಗಿದೆ’: ಬೆಂಗಳೂರಲ್ಲಿ ‘ಕಲ್ಕಿ 2898 ಎಡಿ’ ನೋಡಿ ಕನ್ನಡಿಗರು ಖುಷ್
‘ಸೂಪರ್​ ಆಗಿದೆ’: ಬೆಂಗಳೂರಲ್ಲಿ ‘ಕಲ್ಕಿ 2898 ಎಡಿ’ ನೋಡಿ ಕನ್ನಡಿಗರು ಖುಷ್