AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs CAN: ಫ್ಲೋರಿಡಾದಲ್ಲಿ ಭಾರಿ ಮಳೆ; ಭಾರತದ ಅಭ್ಯಾಸ ರದ್ದು! ಕೆನಡಾ ವಿರುದ್ಧದ ಪಂದ್ಯ ನಡೆಯುವುದು ಡೌಟ್

IND vs CAN, T20 World Cup 2024: ಫ್ಲೋರಿಡಾದಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದೆ. ಇದರಿಂದಾಗಿ ಟೀಂ ಇಂಡಿಯಾದ ಅಭ್ಯಾಸವನ್ನು ರದ್ದುಗೊಳಿಸಲಾಗಿದೆ. ಅಲ್ಲದೆ ಇದೀಗ ಭಾರತ ಮತ್ತು ಕೆನಡಾ ನಡುವಿನ ಪಂದ್ಯದ ಮೇಲೂ ಮಳೆಯ ಛಾಯೆ ಆವರಿಸಿದೆ.

IND vs CAN: ಫ್ಲೋರಿಡಾದಲ್ಲಿ ಭಾರಿ ಮಳೆ; ಭಾರತದ ಅಭ್ಯಾಸ ರದ್ದು! ಕೆನಡಾ ವಿರುದ್ಧದ ಪಂದ್ಯ ನಡೆಯುವುದು ಡೌಟ್
ಟೀಂ ಇಂಡಿಯಾ
ಪೃಥ್ವಿಶಂಕರ
|

Updated on: Jun 14, 2024 | 7:03 PM

Share

ಟಿ20ವಿಶ್ವಕಪ್‌ನಲ್ಲಿ (T20 World Cup 2024) ಸತತ ಮೂರು ಪಂದ್ಯಗಳನ್ನು ಗೆದ್ದು ಸೂಪರ್ 8 ಸುತ್ತಿಗೆ ಅರ್ಹತೆ ಪಡೆದುಕೊಂಡಿರುವ ಟೀಂ ಇಂಡಿಯಾ (Team India) ತನ್ನ ಕೊನೆಯ ಲೀಗ್ ಪಂದ್ಯವನ್ನು ಕೆನಡಾ ವಿರುದ್ಧ ಫ್ಲೋರಿಡಾದಲ್ಲಿ ಆಡಬೇಕಾಗಿದೆ. ಇದಕ್ಕಾಗಿ ಇಡೀ ತಂಡ ಈಗಾಗಲೇ ಫ್ಲೋರಿಡಾ (Florida) ತಲುಪಿದೆ ಟೀಂ ಇಂಡಿಯಾ ಈಗಾಗಲೇ ಸೂಪರ್-8ಗೆ ಅರ್ಹತೆ ಪಡೆದಿರುವ ಕಾರಣ ಈ ಸುತ್ತಿನಲ್ಲಿ 3 ಬಲಿಷ್ಠ ತಂಡಗಳನ್ನು ಎದುರಿಸಬೇಕಾಗಿದೆ. ಹೀಗಾಗಿ ತಂಡವನ್ನು ಇನ್ನಷ್ಟು ಬಲಪಡಿಸಲು ಅಭ್ಯಾಸ ಹಾಗೂ ಕೆನಡಾ ವಿರುದ್ಧದ (IND vs CAN) ಪಂದ್ಯ ಅತ್ಯವಶ್ಯಕವಾಗಿದೆ. ಆದರೆ ಫ್ಲೋರಿಡಾದಲ್ಲಿನ ಕಟ್ಟ ಹವಾಮಾನದಿಂದಾಗಿ (Bad Weather) ಕೆನಡಾ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾ ಮಾಡಬೇಕಾಗಿದ್ದ ಅಭ್ಯಾಸವನ್ನು ರದ್ದುಗೊಳಿಸಲಾಗಿದೆ. ಹಾಗೆಯೇ ಪಂದ್ಯಕ್ಕೂ ಮಳೆಯ ಕಾರ್ಮೋಡ ಆವರಿಸಿದೆ.

ಫ್ಲೋರಿಡಾದಲ್ಲಿ ಭಾರಿ ಮಳೆ

ವಾಸ್ತವವಾಗಿ, ಫ್ಲೋರಿಡಾದಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದೆ. ಇದರಿಂದಾಗಿ ಟೀಂ ಇಂಡಿಯಾದ ಅಭ್ಯಾಸವನ್ನು ರದ್ದುಗೊಳಿಸಲಾಗಿದೆ. ಅಲ್ಲದೆ ಇದೀಗ ಭಾರತ ಮತ್ತು ಕೆನಡಾ ನಡುವಿನ ಪಂದ್ಯದ ಮೇಲೂ ಮಳೆಯ ಛಾಯೆ ಆವರಿಸಿದೆ. ಭಾರತ ಮತ್ತು ಕೆನಡಾ ನಡುವಿನ ಈ ಪಂದ್ಯವು ಜೂನ್ 15 ರಂದು ಫ್ಲೋರಿಡಾದಲ್ಲಿ ನಡೆಯಲಿದೆ. ಆದರೆ ಫ್ಲೋರಿಡಾ ಹವಾಮಾನ ಇಲಾಖೆ ಮುಂದಿನ 2 ದಿನಗಳ ಕಾಲ ಮಳೆ ಮತ್ತು ಚಂಡಮಾರುತದ ಎಚ್ಚರಿಕೆ ನೀಡಿದೆ. ಹೀಗಾಗಿ ಭಾರತ ಕೊನೆಯ ಲೀಗ್ ಪಂದ್ಯ ನಡೆಯುವುದು ಅನುಮಾನವಾಗಿದೆ.

ಟೀಂ ಇಂಡಿಯಾ ಸಿದ್ಧತೆಗೆ ಹಿನ್ನಡೆ

ಸೂಪರ್-8ಸುತ್ತಿನಲ್ಲಿ ಟೀಂ ಇಂಡಿಯಾ ಯಾವ ತಂಡಗಳನ್ನು ಎದುರಿಸಲಿದೆ ಎಂಬುದು ಈಗಾಗಲೇ ಬಹುತೇಕ ಖಚಿತಗೊಂಡಿದೆ. ಟೀಂ ಇಂಡಿಯಾ ಮುಂದಿನ ಸುತ್ತಿನಲ್ಲಿ ಅಫ್ಘಾನಿಸ್ತಾನ, ಆಸ್ಟ್ರೇಲಿಯಾ ಮತ್ತು ಬಾಂಗ್ಲಾದೇಶ ತಂಡವನ್ನು ಎದುರಿಸುವ ಸಾಧ್ಯತೆಗಳಿವೆ. ಇಂತಹ ಪರಿಸ್ಥಿತಿಯಲ್ಲಿ ಟೀಂ ಇಂಡಿಯಾಗೆ ಪ್ರತಿಯೊಂದು ಅಭ್ಯಾಸ ಮತ್ತು ಪ್ರತಿಯೊಂದು ಪಂದ್ಯವೂ ಬಹಳ ಮುಖ್ಯವಾಗುತ್ತದೆ. ಆದರೆ ಇದೀಗ ಟೀಂ ಇಂಡಿಯಾದ ಅಭ್ಯಾಸವೇ ರದ್ದಾಗಿದೆ, ಇಂತಹ ಪರಿಸ್ಥಿತಿಯಲ್ಲಿ ಕೆನಡಾ ಜೊತೆಗಿನ ಪಂದ್ಯವೂ ರದ್ದಾದರೆ ಸೂಪರ್-8ಕ್ಕೂ ಮುನ್ನ ಟೀಂ ಇಂಡಿಯಾದ ಸಿದ್ಧತೆಗೆ ದೊಡ್ಡ ಪೆಟ್ಟು ಬೀಳಬಹುದು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ