AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2024: ಕೆನಡಾ ವಿರುದ್ಧ ತಂಡದಲ್ಲಿ ಬದಲಾವಣೆ ಮಾಡ್ತಾರಾ ರೋಹಿತ್?

T20 World Cup 2024: ಕೆನಡಾ ವಿರುದ್ಧದ ಪಂದ್ಯ ಟೀಂ ಇಂಡಿಯಾಕ್ಕೆ ಕೇವಲ ಔಪಚಾರಿಕವಾಗಿದ್ದು, ಕಳಪೆ ಫಾರ್ಮ್​ನಿಂದ ಬಳಲುತ್ತಿರುವ ಆಟಗಾರರನ್ನು ಹೊರಗಿಟ್ಟು, ಬೆಂಚ್​ನಲ್ಲಿರುವ ಆಟಗಾರರನ್ನು ತಂಡ ಪ್ರಯತ್ನಿಸಬಹುದಾಗಿದೆ. ಆದರೆ ಸತತ ಮೂರು ಪಂದ್ಯಗಳನ್ನು ಗೆದ್ದಿರುವ ತಂಡದಲ್ಲಿ ಬದಲಾವಣೆ ತರಲು ಆಯ್ಕೆ ಮಂಡಳಿ ಮುಂದಾಗುವ ಸಾಧ್ಯತೆಗಳು ತೀರ ಕಡಿಮೆ ಇವೆ.

T20 World Cup 2024: ಕೆನಡಾ ವಿರುದ್ಧ ತಂಡದಲ್ಲಿ ಬದಲಾವಣೆ ಮಾಡ್ತಾರಾ ರೋಹಿತ್?
ಟೀಂ ಇಂಡಿಯಾ
ಪೃಥ್ವಿಶಂಕರ
|

Updated on: Jun 14, 2024 | 10:01 PM

Share

ಭಾರತ ಮತ್ತು ಕೆನಡಾ (India vs Canada) ನಡುವಿನ ಟಿ20 ವಿಶ್ವಕಪ್ 2024 ರ (T20 World Cup 2024) ಲೀಗ್ ಪಂದ್ಯವು ಫ್ಲೋರಿಡಾದಲ್ಲಿ ನಡೆಯಲಿದೆ. ಆದರೆ ಈ ಪಂದ್ಯಕ್ಕೆ ಮಳೆಯ ಆತಂಕ ಎದುರಾಗಿದ್ದು, ಇಂದು ನಡೆಯಬೇಕಿದ್ದ ಟೀಂ ಇಂಡಿಯಾದ (Team India) ಅಭ್ಯಾಸವನ್ನು ಕೂಡ ಮಳೆಯಿಂದ ರದ್ದುಗೊಳಿಸಲಾಗಿದೆ. ಹವಾಮಾನ ಇಲಾಖೆಯ ವರದಿ ಪ್ರಕಾರ, ಫ್ಲೋರಿಡಾದಲ್ಲಿ ನಾಳೆಯೂ ರಣಭೀಕರ ಮಳೆಯಾಗಲಿದೆ ಎಂದು ವರದಿಯಾಗಿದೆ. ಹೀಗಾಗಿ ಪಂದ್ಯ ನಡೆಯುವುದು ಅನುಮಾನವಾಗಿದೆ. ಇದೆಲ್ಲದರ ನಡುವೆಯೂ ನಾಳಿನ ಪಂದ್ಯಕ್ಕೆ ವರುಣ ರಾಯ ಅನುವು ಮಾಡಿಕೊಟ್ಟರೆ, ಟೀಂ ಇಂಡಿಯಾ ಯಾವ ಪ್ಲೇಯಿಂಗ್ ಇಲೆವೆನ್​ನೊಂದಿಗೆ ಕಣಕ್ಕಿಳಿಯಲಿದೆ? ಅದರಲ್ಲೂ ಆರಂಭಿಕರು ಬದಲಾಗುತ್ತಾರಾ ಎಂಬ ಪ್ರಶ್ನೆ ಮೂಡಿದೆ.

ಕೊಹ್ಲಿ ವಿಫಲ

ಟಿ20 ವಿಶ್ವಕಪ್​ನಲ್ಲಿ ಟೀಂ ಇಂಡಿಯಾ ಸತತ ಮೂರು ಪಂದ್ಯಗಳನ್ನು ಗೆದ್ದರೂ ತಂಡದಲ್ಲಿ ಸಮತೋಲನ ಕಂಡು ಬರುತ್ತಿಲ್ಲ. ಆರಂಭಿಕರು ಉತ್ತಮ ಆರಂಭ ನೀಡಲು ವಿಫಲರಾಗುತ್ತಿದ್ದಾರೆ. ಐಪಿಎಲ್‌ನಲ್ಲಿ ರನ್​ ಶಿಖರ ಕಟ್ಟಿ ಆರೆಂಜ್ ಕ್ಯಾಪ್ ಗೆದ್ದಿದ್ದ ಕೊಹ್ಲಿ ಆಡಿದ ಮೂರು ಪಂದ್ಯಗಳಲ್ಲಿ ಕಳಪೆ ಪ್ರದರ್ಶನ ನೀಡಿದ್ದಾರೆ. ಇದುವರೆಗೆ ಕೊಹ್ಲಿ ಆಡಿರುವ ಮೂರು ಪಂದ್ಯಗಳಲ್ಲಿ 1.66 ರ ಸರಾಸರಿಯಲ್ಲಿ ಕೇವಲ ಐದು ರನ್ ಮಾತ್ರ ಕಲೆಹಾಕಿದ್ದಾರೆ. ಇದು ತಂಡದ ತಲೆನೋವಿಗೆ ಕಾರಣವಾಗಿದೆ.

ಉತ್ತಮ ಫಾರ್ಮ್​ನಲ್ಲಿ ಪಂತ್

ಅಲ್ಲದೆ ನಾಯಕ ರೋಹಿತ್ ಶರ್ಮಾ ಅವರೊಂದಿಗೆ ಇನ್ನಿಂಗ್ಸ್ ಆರಂಭಿಸುತ್ತಿರುವ ಕೊಹ್ಲಿ ಬೇಗನೇ ಔಟಾಗುತ್ತಿರುವ ಕಾರಣ ತಂಡಕ್ಕೆ ಉತ್ತಮ ಆರಂಭ ಸಿಗದೆ ನಂತರ ಬರುವ ಬ್ಯಾಟ್ಸ್​ಮನ್​ಗಳ ಮೇಲೆ ಒತ್ತಡ ಹೇರುತ್ತಿದೆ. ರಿಷಬ್ ಪಂತ್ ಮತ್ತು ಸೂರ್ಯಕುಮಾರ್ ಯಾದವ್ ಅವರಂತಹ ಬ್ಯಾಟ್ಸ್‌ಮನ್‌ಗಳು ಕೊಹ್ಲಿಯ ಕಳಪೆ ಪ್ರದರ್ಶನವನ್ನು ಸರಿದೂಗಿಸುವಲ್ಲಿ ಹೆಚ್ಚಿನ ಮಟ್ಟದಲ್ಲಿ ಯಶಸ್ವಿಯಾಗಿದ್ದಾರೆ. ಅದರಲ್ಲೂ ಅದ್ಭುತ ಫಾರ್ಮ್​ನಲ್ಲಿರುವ ಪಂತ್ ಐರ್ಲೆಂಡ್ ಮತ್ತು ಪಾಕಿಸ್ತಾನ ವಿರುದ್ಧ ಕ್ರಮವಾಗಿ 36 ಮತ್ತು 42 ರನ್‌ಗಳ ಇನ್ನಿಂಗ್ಸ್‌ಗಳನ್ನು ಆಡುವ ಮೂಲಕ ಎರಡೂ ಪಂದ್ಯಗಳಲ್ಲಿ ಭಾರತದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.

IND vs CAN: ಫ್ಲೋರಿಡಾದಲ್ಲಿ ಭಾರಿ ಮಳೆ; ಭಾರತದ ಅಭ್ಯಾಸ ರದ್ದು! ಕೆನಡಾ ವಿರುದ್ಧದ ಪಂದ್ಯ ನಡೆಯುವುದು ಡೌಟ್

ಫಾರ್ಮ್​ಗೆ ಮರಳಿದ ಸೂರ್ಯ- ದುಬೆ

ಪಂದ್ಯಾವಳಿಯಲ್ಲಿ ಕಳಪೆ ಆರಂಭದಿಂದ ಚೇತರಿಸಿಕೊಂಡಿರುವ ಸೂರ್ಯಕುಮಾರ್ ಯಾದವ್ ಅಮೇರಿಕಾ ವಿರುದ್ಧ ಗೆಲುವಿನ ಅರ್ಧಶತಕ ದಾಖಲಿಸಿದ್ದರು. ಕಳಪೆ ಫಾರ್ಮ್​ನಿಂದ ಬಳಲುತ್ತಿದ ಶಿವಂ ದುಬೆ ಕೂಡ ಅಮೆರಿಕ ವಿರುದ್ಧ 35 ಎಸೆತಗಳಲ್ಲಿ 31 ರನ್ ಗಳಿಸಿದರು. ಈ ಕಾರಣದಿಂದಾಗಿ ಅವರು ಮತ್ತೊಮ್ಮೆ ಸಂಜು ಸ್ಯಾಮ್ಸನ್ ಮತ್ತು ಯಶಸ್ವಿ ಜೈಸ್ವಾಲ್‌ಗಿಂತ ಆದ್ಯತೆ ಪಡೆಯುವ ನಿರೀಕ್ಷೆಯಿದೆ. ಉಳಿದಂತೆ ಆಲ್‌ರೌಂಡರ್ ಖೋಟಾದಲ್ಲಿ ಸ್ಥಾನ ಪಡೆದಿರುವ ಮೂವರು ಆಟಗಾರರ ಪೈಕಿ ಜಡೇಜಾರನ್ನು ಹೊರತುಪಡಿಸಿ ಅಕ್ಷರ್ ಪಟೇಲ್ ಹಾಗೂ ಹಾರ್ದಿಕ್ ಪಾಂಡ್ಯ ಇದುವರೆಗೆ ಉತ್ತಮ ಪ್ರದರ್ಶನ ನೀಡಿದ್ದಾರೆ.

ಬದಲಾವಣೆ ಸಾಧ್ಯತೆ ಕಡಿಮೆ

ಆರಂಭದಲ್ಲಿ ಕಳಪೆ ಫಾರ್ಮ್​ನಿಂದ ಬಳಲುತ್ತಿದ್ದ ಆಟಗಾರರು ಸಮಯ ಕಳೆದಂತೆ ಫಾರ್ಮ್​ಗೆ ಮರಳುತ್ತಿದ್ದಾರೆ. ಆರಂಭಿಕರಾಗಿ ಕೊಹ್ಲಿ ಒಬ್ಬರು ತಮ್ಮ ಹಳೆಯ ಫಾರ್ಮ್​ಗೆ ಮರಳಿದರೆ, ಟೀಂ ಇಂಡಿಯಾ ಇನ್ನಷ್ಟು ಬಲಿಷ್ಠಗೊಳ್ಳಿದೆ. ಅಲ್ಲದೆ ಕೆನಡಾ ವಿರುದ್ಧದ ಪಂದ್ಯ ಟೀಂ ಇಂಡಿಯಾಕ್ಕೆ ಕೇವಲ ಔಪಚಾರಿಕವಾಗಿದ್ದು, ಕಳಪೆ ಫಾರ್ಮ್​ನಿಂದ ಬಳಲುತ್ತಿರುವ ಆಟಗಾರರನ್ನು ಹೊರಗಿಟ್ಟು, ಬೆಂಚ್​ನಲ್ಲಿರುವ ಆಟಗಾರರನ್ನು ತಂಡ ಪ್ರಯತ್ನಿಸಬಹುದಾಗಿದೆ. ಆದರೆ ಸತತ ಮೂರು ಪಂದ್ಯಗಳನ್ನು ಗೆದ್ದಿರುವ ತಂಡದಲ್ಲಿ ಬದಲಾವಣೆ ತರಲು ಆಯ್ಕೆ ಮಂಡಳಿ ಮುಂದಾಗುವ ಸಾಧ್ಯತೆಗಳು ತೀರ ಕಡಿಮೆ ಇವೆ.

ಭಾರತ ಸಂಭಾವ್ಯ ತಂಡ: ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ರಿಷಬ್ ಪಂತ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಶಿವಂ ದುಬೆ/ ಸಂಜು ಸ್ಯಾಮ್ಸನ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್/ ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಅರ್ಶ್ದೀಪ್ ಸಿಂಗ್, ಮೊಹಮ್ಮದ್ ಸಿರಾಜ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ