AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shaheen Afridi: ನಮ್ದು ಗಲ್ಲಿ ಕ್ರಿಕೆಟ್ ತಂಡವಲ್ಲ: ಶಾಹೀನ್ ಅಫ್ರಿದಿ ಬೇಸರ..!

T20 World Cup 2024: ಟಿ20 ವಿಶ್ವಕಪ್​ನಿಂದ ಈಗಾಗಲೇ ಹೊರಬಿದ್ದಿರುವ ಪಾಕಿಸ್ತಾನ್ ತಂಡವು ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ಐರ್ಲೆಂಡ್ ತಂಡವನ್ನು ಎದುರಿಸಲಿದೆ. ಭಾನುವಾರ ಫ್ಲೋರಿಡಾದಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಮಳೆ ಭೀತಿ ಎದುರಾಗಿದ್ದು, ಹೀಗಾಗಿ ಪಾಕಿಸ್ತಾನ್ ಮತ್ತು ಐರ್ಲೆಂಡ್ ನಡುವಣ ಪಂದ್ಯ ನಡೆಯುವುದು ಅನುಮಾನ.

Shaheen Afridi: ನಮ್ದು ಗಲ್ಲಿ ಕ್ರಿಕೆಟ್ ತಂಡವಲ್ಲ: ಶಾಹೀನ್ ಅಫ್ರಿದಿ ಬೇಸರ..!
Shaheen Afridi
ಝಾಹಿರ್ ಯೂಸುಫ್
|

Updated on: Jun 16, 2024 | 11:36 AM

Share

T20 World Cup 2024: ಟಿ20 ವಿಶ್ವಕಪ್ ಗೆದ್ದೇ ಗೆಲ್ಲುತ್ತೇವೆ ಎಂದು ಬಂದ ಪಾಕಿಸ್ತಾನ್ ತಂಡವು ಮೊದಲ ಸುತ್ತಿನಲ್ಲೇ ಮುಗ್ಗರಿಸಿದೆ. ಲೀಗ್ ಹಂತದ ಮೊದಲ ಪಂದ್ಯದಲ್ಲಿ ಯುಎಸ್​ಎ ವಿರುದ್ಧ ಹೀನಾಯವಾಗಿ ಸೋತಿದ್ದ ಬಾಬರ್ ಪಡೆ ಆ ಬಳಿಕ ಬಲಿಷ್ಠ ಭಾರತದ ಮುಂದೆ ಮುಂಡಿಯೂರಿತ್ತು. ಇನ್ನು ಮೂರನೇ ಪಂದ್ಯದಲ್ಲಿ ಕೆನಡಾ ವಿರುದ್ಧ ಜಯ ಸಾಧಿಸಿದರೂ, ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನ ಅಲಂಕರಿಸುವ ಮೂಲಕ ಪಾಕಿಸ್ತಾನ್ ತಂಡ ಟಿ20 ವಿಶ್ವಕಪ್​ನಿಂದ ಹೊರಬಿದ್ದಿದೆ.

ಈ ಕಳಪೆ ಪ್ರದರ್ಶನದ ಬೆನ್ನಲ್ಲೇ ಪಾಕಿಸ್ತಾನ್ ತಂಡದ ವಿರುದ್ಧ ಅಭಿಮಾನಿಗಳಿಂದ ಭಾರೀ ಆಕ್ರೋಶಗಳು ವ್ಯಕ್ತವಾಗಿದ್ದವು. ಇದೀಗ ಟೀಕೆ-ಟಿಪ್ಪಣಿಗಳು ಮುಂದುವರೆದಿದ್ದು, ಈ ಟೀಕೆಗಳಿಗೆ ಪಾಕಿಸ್ತಾನ್ ತಂಡದ ಎಡಗೈ ವೇಗಿ ಶಾಹೀನ್ ಅಫ್ರಿದಿ ಬೇಸರ ವ್ಯಕ್ತಪಡಿಸಿದ್ದಾರೆ.

ಶಾಹೀನ್ ಹೇಳಿದ್ದೇನು?

ಒಳ್ಳೆಯ ಸಮಯದಲ್ಲಿ ಎಲ್ಲರೂ ನಿಮ್ಮೊಂದಿಗೆ ನಿಲ್ಲುತ್ತಾರೆ. ಆದರೆ ತಂಡದ ಕೆಟ್ಟ ಸಂದರ್ಭಗಳಲ್ಲಿ ಅಭಿಮಾನಿಗಳು ನಮ್ಮ ಜೊತೆ ನಿಲ್ಲಬೇಕು. ಪಾಕಿಸ್ತಾನ್ ಗಲ್ಲಿ ಕ್ರಿಕೆಟ್ ತಂಡವಲ್ಲ. ಈ ತಂಡ ನಿಮ್ಮದೇ. ಹೀಗಾಗಿ ನಮಗೆ ನಿಮ್ಮ ಬೆಂಬಲ ಅಗತ್ಯವಿದೆ ಎಂದು ಶಾಹೀನ್ ಅಫ್ರಿದಿ ಹೇಳಿದ್ದಾರೆ.

ಶಾಹೀನ್ ಅಫ್ರಿದಿಯ ಈ ಭಾವನಾತ್ಮಕ ಹೇಳಿಕೆಯು ಈಗ ಚರ್ಚೆಗೆ ಗ್ರಾಸವಾಗಿದೆ. ಏಕೆಂದರೆ ಯುಎಸ್​ಎ ನಂತಹ ತಂಡದ ವಿರುದ್ಧವೇ ಪಾಕ್ ಪಡೆ ಸೋತಿದೆ. ಇದಾಗ್ಯೂ ನಿಮ್ಮ ಯಾರೂ ಪ್ರಶ್ನೆ ಮಾಡಬಾರದು, ಟೀಕೆ ಮಾಡಬಾರದೆಂದು ಬಯಸುವುದು ಆತ್ಮ ವಿಶ್ವಾಸದ ಪರಮಾವಧಿ ಎಂದು ಅನೇಕರು ಸೋಷಿಯಲ್ ಮೀಡಿಯಾ ಮೂಲಕ ಪ್ರತಿಕ್ರಿಯಿಸಿದ್ದಾರೆ.

ಒಂದು ತಂಡ ಮೂರು ಬಾಗಿಲು:

ಪ್ರಸ್ತುತ ಪಾಕಿಸ್ತಾನ್ ತಂಡವು ಒಡೆದ ಮನೆಯಂತಾಗಿದೆ. ಇಲ್ಲಿ ತಂಡವು ಒಂದೇ ಆಗಿದ್ದರೂ, ಆಟಗಾರರಲ್ಲಿ ಮೂರು ಗುಂಪುಗಳಿವೆ ಎಂಬ ಆರೋಪ ಕೇಳಿ ಬಂದಿವೆ. ಈ ಬಣಗಳ ಪ್ರತಿಷ್ಠೆಯಿಂದಾಗಿಯೇ ಈ ಬಾರಿಯ ಟಿ20 ವಿಶ್ವಕಪ್​ನ ಮೊದಲ ಸುತ್ತಿನಲ್ಲಿಯೇ ಪಾಕ್ ಪಡೆ ಮುಗ್ಗರಿಸಿದೆ ಎಂಬ ಮಾತುಗಳು ಸಹ ಕೇಳಿ ಬರುತ್ತಿವೆ.

ಪಾಕ್ ಕೊನೆಯ ಪಂದ್ಯ:

ಪಾಕಿಸ್ತಾನ್ ತಂಡ ಐರ್ಲೆಂಡ್ ವಿರುದ್ಧ ತನ್ನ ಕೊನೆಯ ಪಂದ್ಯವನ್ನು ಆಡಬೇಕಾಗಿದೆ. ಈ ಪಂದ್ಯ ಭಾನುವಾರ ಲಾಡರ್‌ಹಿಲ್‌ನಲ್ಲಿ ನಡೆಯಲಿದ್ದು, ಈ ಪಂದ್ಯದ ಬಳಿಕ ಪಾಕ್ ಪಡೆ ತವರಿಗೆ ಹಿಂತಿರುಗಲಿದೆ.

ಇದನ್ನೂ ಓದಿ: T20 World Cup 2024: ಆಂಗ್ಲರ ಕೈ ಹಿಡಿದ ಆಸ್ಟ್ರೇಲಿಯನ್ನರು

ಆದರೆ ತನ್ನ ಕೊನೆಯ ಪಂದ್ಯದಲ್ಲಿ ಗೆಲ್ಲಬೇಕೆಂಬ ಪಣ ತೊಟ್ಟಿರುವ ಪಾಕಿಸ್ತಾನ್ ಆಸೆಗೆ ವರುಣ ಅವಕೃಪೆ ತೋರುವ ಸಾಧ್ಯತೆಯಿದೆ. ಏಕೆಂದರೆ ಕಳೆದ ಕೆಲ ದಿನಗಳಿಂದ ಫ್ಲೋರಿಡಾದಲ್ಲಿ ಭಾರೀ ಮಳೆಯಾಗುತ್ತಿದೆ. ಅದರಲ್ಲೂ ಶನಿವಾರ ನಡೆಯಬೇಕಿದ್ದ ಭಾರತ ಮತ್ತು ಕೆನಡಾ ನಡುವಣ ಪಂದ್ಯವು ಮಳೆಯ ಕಾರಣ ರದ್ದಾಗಿತ್ತು. ಹೀಗಾಗಿ ಇಂದು ಪಾಕಿಸ್ತಾನ್ ಮತ್ತು ಐರ್ಲೆಂಡ್ ನಡುವಣ ಪಂದ್ಯ ನಡೆಯುವುದು ಡೌಟ್ ಎನ್ನಬಹುದು.

Follow Us
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ