Shaheen Afridi: ನಮ್ದು ಗಲ್ಲಿ ಕ್ರಿಕೆಟ್ ತಂಡವಲ್ಲ: ಶಾಹೀನ್ ಅಫ್ರಿದಿ ಬೇಸರ..!

T20 World Cup 2024: ಟಿ20 ವಿಶ್ವಕಪ್​ನಿಂದ ಈಗಾಗಲೇ ಹೊರಬಿದ್ದಿರುವ ಪಾಕಿಸ್ತಾನ್ ತಂಡವು ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ಐರ್ಲೆಂಡ್ ತಂಡವನ್ನು ಎದುರಿಸಲಿದೆ. ಭಾನುವಾರ ಫ್ಲೋರಿಡಾದಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಮಳೆ ಭೀತಿ ಎದುರಾಗಿದ್ದು, ಹೀಗಾಗಿ ಪಾಕಿಸ್ತಾನ್ ಮತ್ತು ಐರ್ಲೆಂಡ್ ನಡುವಣ ಪಂದ್ಯ ನಡೆಯುವುದು ಅನುಮಾನ.

Shaheen Afridi: ನಮ್ದು ಗಲ್ಲಿ ಕ್ರಿಕೆಟ್ ತಂಡವಲ್ಲ: ಶಾಹೀನ್ ಅಫ್ರಿದಿ ಬೇಸರ..!
Shaheen Afridi
Follow us
|

Updated on: Jun 16, 2024 | 11:36 AM

T20 World Cup 2024: ಟಿ20 ವಿಶ್ವಕಪ್ ಗೆದ್ದೇ ಗೆಲ್ಲುತ್ತೇವೆ ಎಂದು ಬಂದ ಪಾಕಿಸ್ತಾನ್ ತಂಡವು ಮೊದಲ ಸುತ್ತಿನಲ್ಲೇ ಮುಗ್ಗರಿಸಿದೆ. ಲೀಗ್ ಹಂತದ ಮೊದಲ ಪಂದ್ಯದಲ್ಲಿ ಯುಎಸ್​ಎ ವಿರುದ್ಧ ಹೀನಾಯವಾಗಿ ಸೋತಿದ್ದ ಬಾಬರ್ ಪಡೆ ಆ ಬಳಿಕ ಬಲಿಷ್ಠ ಭಾರತದ ಮುಂದೆ ಮುಂಡಿಯೂರಿತ್ತು. ಇನ್ನು ಮೂರನೇ ಪಂದ್ಯದಲ್ಲಿ ಕೆನಡಾ ವಿರುದ್ಧ ಜಯ ಸಾಧಿಸಿದರೂ, ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನ ಅಲಂಕರಿಸುವ ಮೂಲಕ ಪಾಕಿಸ್ತಾನ್ ತಂಡ ಟಿ20 ವಿಶ್ವಕಪ್​ನಿಂದ ಹೊರಬಿದ್ದಿದೆ.

ಈ ಕಳಪೆ ಪ್ರದರ್ಶನದ ಬೆನ್ನಲ್ಲೇ ಪಾಕಿಸ್ತಾನ್ ತಂಡದ ವಿರುದ್ಧ ಅಭಿಮಾನಿಗಳಿಂದ ಭಾರೀ ಆಕ್ರೋಶಗಳು ವ್ಯಕ್ತವಾಗಿದ್ದವು. ಇದೀಗ ಟೀಕೆ-ಟಿಪ್ಪಣಿಗಳು ಮುಂದುವರೆದಿದ್ದು, ಈ ಟೀಕೆಗಳಿಗೆ ಪಾಕಿಸ್ತಾನ್ ತಂಡದ ಎಡಗೈ ವೇಗಿ ಶಾಹೀನ್ ಅಫ್ರಿದಿ ಬೇಸರ ವ್ಯಕ್ತಪಡಿಸಿದ್ದಾರೆ.

ಶಾಹೀನ್ ಹೇಳಿದ್ದೇನು?

ಒಳ್ಳೆಯ ಸಮಯದಲ್ಲಿ ಎಲ್ಲರೂ ನಿಮ್ಮೊಂದಿಗೆ ನಿಲ್ಲುತ್ತಾರೆ. ಆದರೆ ತಂಡದ ಕೆಟ್ಟ ಸಂದರ್ಭಗಳಲ್ಲಿ ಅಭಿಮಾನಿಗಳು ನಮ್ಮ ಜೊತೆ ನಿಲ್ಲಬೇಕು. ಪಾಕಿಸ್ತಾನ್ ಗಲ್ಲಿ ಕ್ರಿಕೆಟ್ ತಂಡವಲ್ಲ. ಈ ತಂಡ ನಿಮ್ಮದೇ. ಹೀಗಾಗಿ ನಮಗೆ ನಿಮ್ಮ ಬೆಂಬಲ ಅಗತ್ಯವಿದೆ ಎಂದು ಶಾಹೀನ್ ಅಫ್ರಿದಿ ಹೇಳಿದ್ದಾರೆ.

ಶಾಹೀನ್ ಅಫ್ರಿದಿಯ ಈ ಭಾವನಾತ್ಮಕ ಹೇಳಿಕೆಯು ಈಗ ಚರ್ಚೆಗೆ ಗ್ರಾಸವಾಗಿದೆ. ಏಕೆಂದರೆ ಯುಎಸ್​ಎ ನಂತಹ ತಂಡದ ವಿರುದ್ಧವೇ ಪಾಕ್ ಪಡೆ ಸೋತಿದೆ. ಇದಾಗ್ಯೂ ನಿಮ್ಮ ಯಾರೂ ಪ್ರಶ್ನೆ ಮಾಡಬಾರದು, ಟೀಕೆ ಮಾಡಬಾರದೆಂದು ಬಯಸುವುದು ಆತ್ಮ ವಿಶ್ವಾಸದ ಪರಮಾವಧಿ ಎಂದು ಅನೇಕರು ಸೋಷಿಯಲ್ ಮೀಡಿಯಾ ಮೂಲಕ ಪ್ರತಿಕ್ರಿಯಿಸಿದ್ದಾರೆ.

ಒಂದು ತಂಡ ಮೂರು ಬಾಗಿಲು:

ಪ್ರಸ್ತುತ ಪಾಕಿಸ್ತಾನ್ ತಂಡವು ಒಡೆದ ಮನೆಯಂತಾಗಿದೆ. ಇಲ್ಲಿ ತಂಡವು ಒಂದೇ ಆಗಿದ್ದರೂ, ಆಟಗಾರರಲ್ಲಿ ಮೂರು ಗುಂಪುಗಳಿವೆ ಎಂಬ ಆರೋಪ ಕೇಳಿ ಬಂದಿವೆ. ಈ ಬಣಗಳ ಪ್ರತಿಷ್ಠೆಯಿಂದಾಗಿಯೇ ಈ ಬಾರಿಯ ಟಿ20 ವಿಶ್ವಕಪ್​ನ ಮೊದಲ ಸುತ್ತಿನಲ್ಲಿಯೇ ಪಾಕ್ ಪಡೆ ಮುಗ್ಗರಿಸಿದೆ ಎಂಬ ಮಾತುಗಳು ಸಹ ಕೇಳಿ ಬರುತ್ತಿವೆ.

ಪಾಕ್ ಕೊನೆಯ ಪಂದ್ಯ:

ಪಾಕಿಸ್ತಾನ್ ತಂಡ ಐರ್ಲೆಂಡ್ ವಿರುದ್ಧ ತನ್ನ ಕೊನೆಯ ಪಂದ್ಯವನ್ನು ಆಡಬೇಕಾಗಿದೆ. ಈ ಪಂದ್ಯ ಭಾನುವಾರ ಲಾಡರ್‌ಹಿಲ್‌ನಲ್ಲಿ ನಡೆಯಲಿದ್ದು, ಈ ಪಂದ್ಯದ ಬಳಿಕ ಪಾಕ್ ಪಡೆ ತವರಿಗೆ ಹಿಂತಿರುಗಲಿದೆ.

ಇದನ್ನೂ ಓದಿ: T20 World Cup 2024: ಆಂಗ್ಲರ ಕೈ ಹಿಡಿದ ಆಸ್ಟ್ರೇಲಿಯನ್ನರು

ಆದರೆ ತನ್ನ ಕೊನೆಯ ಪಂದ್ಯದಲ್ಲಿ ಗೆಲ್ಲಬೇಕೆಂಬ ಪಣ ತೊಟ್ಟಿರುವ ಪಾಕಿಸ್ತಾನ್ ಆಸೆಗೆ ವರುಣ ಅವಕೃಪೆ ತೋರುವ ಸಾಧ್ಯತೆಯಿದೆ. ಏಕೆಂದರೆ ಕಳೆದ ಕೆಲ ದಿನಗಳಿಂದ ಫ್ಲೋರಿಡಾದಲ್ಲಿ ಭಾರೀ ಮಳೆಯಾಗುತ್ತಿದೆ. ಅದರಲ್ಲೂ ಶನಿವಾರ ನಡೆಯಬೇಕಿದ್ದ ಭಾರತ ಮತ್ತು ಕೆನಡಾ ನಡುವಣ ಪಂದ್ಯವು ಮಳೆಯ ಕಾರಣ ರದ್ದಾಗಿತ್ತು. ಹೀಗಾಗಿ ಇಂದು ಪಾಕಿಸ್ತಾನ್ ಮತ್ತು ಐರ್ಲೆಂಡ್ ನಡುವಣ ಪಂದ್ಯ ನಡೆಯುವುದು ಡೌಟ್ ಎನ್ನಬಹುದು.

ತಾಜಾ ಸುದ್ದಿ
ಹೊಸಕೋಟೆಯ ನಳಪಾಕ ಹೋಟೆಲ್​​ ಗೋಬಿಯಲ್ಲಿ ಹುಳ ಪತ್ತೆ: ಮುಂದೇನಾಯ್ತು ನೋಡಿ
ಹೊಸಕೋಟೆಯ ನಳಪಾಕ ಹೋಟೆಲ್​​ ಗೋಬಿಯಲ್ಲಿ ಹುಳ ಪತ್ತೆ: ಮುಂದೇನಾಯ್ತು ನೋಡಿ
ಜವಾಬ್ದಾರಿವಹಿಸಿಕೊಂಡವರ  ಪ್ರಮಾದಗಳಿಂದ ಪಕ್ಷಕ್ಕೆ ಹಿನ್ನಡೆಯಾಯಿತು: ಯತ್ನಾಳ್
ಜವಾಬ್ದಾರಿವಹಿಸಿಕೊಂಡವರ  ಪ್ರಮಾದಗಳಿಂದ ಪಕ್ಷಕ್ಕೆ ಹಿನ್ನಡೆಯಾಯಿತು: ಯತ್ನಾಳ್
ಪ್ರಜ್ವಲ್ ರೇವಣ್ಣಗೆ ಜುಲೈ 8ರವರೆಗೆ ನ್ಯಾಯಾಂಗ ಕಸ್ಟಡಿ, ಪುನಃ ಸೆಂಟ್ರಲ್ ಜೈಲ
ಪ್ರಜ್ವಲ್ ರೇವಣ್ಣಗೆ ಜುಲೈ 8ರವರೆಗೆ ನ್ಯಾಯಾಂಗ ಕಸ್ಟಡಿ, ಪುನಃ ಸೆಂಟ್ರಲ್ ಜೈಲ
ದೇಶ ನಮ್ಮದು, ಸ್ವಾತಂತ್ರ್ಯಕ್ಕಾಗಿ ಹೋರಾಡಿದ್ದು ಕಾಂಗ್ರೆಸ್: ಜಮೀರ್ ಅಹ್ಮದ್
ದೇಶ ನಮ್ಮದು, ಸ್ವಾತಂತ್ರ್ಯಕ್ಕಾಗಿ ಹೋರಾಡಿದ್ದು ಕಾಂಗ್ರೆಸ್: ಜಮೀರ್ ಅಹ್ಮದ್
ಬೇರೆಯವರ ಮೇಲೆ ಗೂಬೆಕೂರಿಸುವುದು ದೇವೇಗೌಡ ಕುಟುಂಬದ ಅಭ್ಯಾಸ: ಡಿಕೆ ಸುರೇಶ್
ಬೇರೆಯವರ ಮೇಲೆ ಗೂಬೆಕೂರಿಸುವುದು ದೇವೇಗೌಡ ಕುಟುಂಬದ ಅಭ್ಯಾಸ: ಡಿಕೆ ಸುರೇಶ್
ಚನ್ನಪಟ್ಟಣ ತಾಲ್ಲೂಕಿನ ಗ್ರಾಮ ಪಂಚಾಯಿತಿಗಳಲ್ಲಿ ತಾಂಡವಾಡುತ್ತಿದೆ ಲಂಚಗುಳಿತನ
ಚನ್ನಪಟ್ಟಣ ತಾಲ್ಲೂಕಿನ ಗ್ರಾಮ ಪಂಚಾಯಿತಿಗಳಲ್ಲಿ ತಾಂಡವಾಡುತ್ತಿದೆ ಲಂಚಗುಳಿತನ
ಅಂಗನವಾಡಿಗಳಲ್ಲಿ ಇನ್ಮುಂದೆ ಸರ್ಕಾರಿ ಮಾಂಟೆಸರಿ, LKG, UKG ಟೀಚಿಂಗ್
ಅಂಗನವಾಡಿಗಳಲ್ಲಿ ಇನ್ಮುಂದೆ ಸರ್ಕಾರಿ ಮಾಂಟೆಸರಿ, LKG, UKG ಟೀಚಿಂಗ್
ಲೋಕಸಭಾ ಸದಸ್ಯೆಯಾಗಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಶೋಭಾ ಕರಂದ್ಲಾಜೆ
ಲೋಕಸಭಾ ಸದಸ್ಯೆಯಾಗಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಶೋಭಾ ಕರಂದ್ಲಾಜೆ
ಅಂತೂ ಇಂತೂ ಬಂದ ಗೆಳೆಯ; ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ವಿನೋದ್​ ಪ್ರಭಾಕರ್
ಅಂತೂ ಇಂತೂ ಬಂದ ಗೆಳೆಯ; ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ವಿನೋದ್​ ಪ್ರಭಾಕರ್
ಹೆಚ್ಚುವರಿ ಡಿಸಿಎಂಗಳು ಬೇಕೆನ್ನುವವರು ಹೈಕಮಾಂಡ್ ಬಳಿ ಹೋಗಿ ಕೇಳಲಿ: ಖರ್ಗೆ
ಹೆಚ್ಚುವರಿ ಡಿಸಿಎಂಗಳು ಬೇಕೆನ್ನುವವರು ಹೈಕಮಾಂಡ್ ಬಳಿ ಹೋಗಿ ಕೇಳಲಿ: ಖರ್ಗೆ