T20 World Cup 2024: ಕೇವಲ 39 ರನ್​ಗೆ ಉಗಾಂಡ ಆಲೌಟ್

T20 World Cup 2024: ಉಗಾಂಡ ತಂಡವು ಟಿ20 ವಿಶ್ವಕಪ್​ನಲ್ಲಿ ಅತ್ಯಂತ ಕಳಪೆ ದಾಖಲೆ ಬರೆದಿದೆ. ವೆಸ್ಟ್ ಇಂಡೀಸ್ ವಿರುದ್ಧ ಕೇವಲ 39 ರನ್​ಗಳಿಗೆ ಆಲೌಟ್ ಆಗುವ ಮೂಲಕ ಟಿ20 ವಿಶ್ವಕಪ್​ನಲ್ಲಿ ಅತೀ ಕಡಿಮೆ ಮೊತ್ತಕ್ಕೆ ಆಲೌಟ್ ಆದ 2ನೇ ತಂಡ ಎನಿಸಿಕೊಂಡಿದೆ. ಇದಕ್ಕೂ ಮುನ್ನ 2014ರಲ್ಲಿ ನೆದರ್​ಲ್ಯಾಂಡ್ಸ್ ತಂಡವು 39 ರನ್​ಗಳಿಗೆ ಆಲೌಟ್ ಆಗಿತ್ತು. ಇದೀಗ ಉಗಾಂಡ ಈ ಕಳಪೆ ದಾಖಲೆಯನ್ನು ಸರಿಗಟ್ಟಿರುವುದು ವಿಶೇಷ.

T20 World Cup 2024: ಕೇವಲ 39 ರನ್​ಗೆ ಉಗಾಂಡ ಆಲೌಟ್
Uganda
Follow us
|

Updated on:Jun 09, 2024 | 9:10 AM

T20 World Cup 2024: ಗಯಾನಾದ ಪ್ರಾವಿಡೆನ್ಸ್ ಸ್ಟೇಡಿಯಂನಲ್ಲಿ ಟಿ20 ವಿಶ್ವಕಪ್​ನ 18ನೇ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡ ಅಮೋಘ ಗೆಲುವು ದಾಖಲಿಸಿದೆ. ಅದು ಕೂಡ ಉಗಾಂಡ ತಂಡವನ್ನು ಕೇವಲ 39 ರನ್​ಗಳಿಗೆ ಆಲೌಟ್ ಮಾಡುವ ಮೂಲಕ ಎಂಬುದು ವಿಶೇಷ. ಈ ಪಂದ್ಯದಲ್ಲಿ ಟಾಸ್ ಗೆದ್ದ ವೆಸ್ಟ್ ಇಂಡೀಸ್ ತಂಡದ ನಾಯಕ ರೋವ್​ಮನ್ ಪೊವೆಲ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ವಿಂಡೀಸ್ ಪರ ಆರಂಭಿಕ ಆಟಗಾರ ಜಾನ್ಸನ್ ಚಾರ್ಲ್ಸ್ 44 ರನ್ ಬಾರಿಸಿ ಮಿಂಚಿದ್ದರು.

ಆ ಬಳಿಕ ಬಂದ ನಿಕೋಲಸ್ ಪೂರನ್ 17 ಎಸೆತಗಳಲ್ಲಿ 22 ರನ್ ಬಾರಿಸಿದರೆ, ರೋವ್​ಮನ್ ಪೊವೆಲ್ 23 ರನ್​ಗಳ ಕೊಡುಗೆ ನೀಡಿದರು. ಇನ್ನು ಎಡಗೈ ದಾಂಡಿಗ ಶೆರ್ಫೆನ್ ರುದರ್​ಫೋರ್ಡ್ 22 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು.

ಇದರ ನಡುವೆ ಅಂತಿಮ ಓವರ್​ಗಳ ವೇಳೆ ಕಣಕ್ಕಿಳಿದ ಆ್ಯಂಡ್ರೆ ರಸೆಲ್ 17 ಎಸೆತಗಳಲ್ಲಿ 6 ಫೋರ್​ಗಳೊಂದಿಗೆ 30 ರನ್ ಸಿಡಿಸಿದರು. ಈ ಮೂಲಕ ವೆಸ್ಟ್ ಇಂಡೀಸ್ ತಂಡ ನಿಗದಿತ 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 173 ರನ್ ಕಲೆಹಾಕಿತು.

ಉಗಾಂಡ ಕಳಪೆ ಬ್ಯಾಟಿಂಗ್:

ವೆಸ್ಟ್ ಇಂಡೀಸ್ ನೀಡಿದ 174 ರನ್​ಗಳ ಕಠಿಣ ಗುರಿಯನ್ನು ಬೆನ್ನತ್ತಿದ ಉಗಾಂಡ ತಂಡವು ಕಳಪೆ ಬ್ಯಾಟಿಂಗ್ ಪ್ರದರ್ಶನ ನೀಡಿತು. 4 ರನ್​ಗಳಿಸುವಷ್ಟರಲ್ಲಿ ಆರಂಭಿಕರಿಬ್ಬರನ್ನು ಔಟ್ ಮಾಡಿ ವಿಂಡೀಸ್ ಬೌಲರ್​ಗಳು ಪವರ್​ಪ್ಲೇನಲ್ಲೇ ಪಂದ್ಯದ ಮೇಲೆ ಹಿಡಿತ ಸಾಧಿಸಿದ್ದರು.

ಮೊದಲ ಓವರ್​ನಲ್ಲೇ ರೋಜರ್ ಮುಕಾಸಾ (0) ವಿಕೆಟ್ ಕಬಳಿಸುವ ಮೂಲಕ ಸ್ಪಿನ್ನರ್ ಅಕೇಲ್ ಹೊಸೇನ್ ಶುಭಾರಂಭ ಮಾಡಿದ್ದರು. ಆ ಬಳಿಕ ಅಲ್ಪೇಜ್ ರಂಜಾನಿ (6) ಹಾಗೂ ಕೆನ್ನೆತ್ ವೈಸ್ವಾ (1) ರನ್ನು ಎಲ್​ಬಿಡಬ್ಲ್ಯೂ ಮಾಡಿದರು. ಇದಾದ ಬಳಿಕ ಅಲಿ ಶಾ (3) ಹಾಗೂ ದಿನೇಶ್ ನಕ್ರಾಣಿ (0) ಯನ್ನು ಕ್ಲೀನ್ ಬೌಲ್ಡ್ ಮಾಡಿ ಬ್ಯಾಕ್ ಟು ಬ್ಯಾಕ್ ಯಶಸ್ಸು ತಂದುಕೊಟ್ಟರು.

ಈ ಮೂಲಕ 4 ಓವರ್​ಗಳಲ್ಲಿ ಕೇವಲ 11 ರನ್ ನೀಡಿ ಅಕೇಲ್ ಹೊಸೇನ್ 5 ವಿಕೆಟ್ ಕಬಳಿಸಿದರು. ಮತ್ತೊಂದೆಡೆ ಅಲ್ಝಾರಿ ಜೋಸೆಫ್ 2 ವಿಕೆಟ್ ಪಡೆದರೆ, ರೊಮಾರಿಯೊ ಶೆಫರ್ಡ್, ಗುಡಾಕೇಶ್ ಮೋಟಿ ಮತ್ತು ಆ್ಯಂಡ್ರೆ ರಸೆಲ್ ತಲಾ ಒಂದು ವಿಕೆಟ್ ಕಬಳಿಸಿದರು. ಈ ಮೂಲಕ ಉಗಾಂಡ ತಂಡವನ್ನು 12 ಓವರ್​ಗಳಲ್ಲಿ ಕೇವಲ 39 ರನ್​ಗಳಿಗೆ ಆಲೌಟ್ ಮಾಡಿ ವೆಸ್ಟ್ ಇಂಡೀಸ್ 134 ರನ್​ಗಳ ಅಮೋಘ ಜಯ ಸಾಧಿಸಿದೆ.

ವೆಸ್ಟ್ ಇಂಡೀಸ್ ಪ್ಲೇಯಿಂಗ್ 11: ಬ್ರಾಂಡನ್ ಕಿಂಗ್ , ಜಾನ್ಸನ್ ಚಾರ್ಲ್ಸ್ , ನಿಕೋಲಸ್ ಪೂರನ್ (ವಿಕೆಟ್ ಕೀಪರ್) , ರೋಸ್ಟನ್ ಚೇಸ್ , ರೋವ್​ಮನ್ ಪೊವೆಲ್ (ನಾಯಕ) , ಶೆರ್ಫೇನ್ ರುದರ್ಫೋರ್ಡ್ , ಆಂಡ್ರೆ ರಸೆಲ್ , ರೊಮಾರಿಯೋ ಶೆಫರ್ಡ್ , ಅಕೇಲ್ ಹೊಸೈನ್ , ಅಲ್ಜಾರಿ ಜೋಸೆಫ್ , ಗುಡಾಕೇಶ್ ಮೋಟಿ.

ಇದನ್ನೂ ಓದಿ: Babar Azam: ಬಾಬರ್ ಅಬ್ಬರಕ್ಕೆ ಕಿಂಗ್ ಕೊಹ್ಲಿಯ ದಾಖಲೆ ಉಡೀಸ್

ಉಗಾಂಡ ಪ್ಲೇಯಿಂಗ್ 11: ರೋಜರ್ ಮುಕಾಸಾ , ಸೈಮನ್ ಸ್ಸೆಸಾಜಿ (ವಿಕೆಟ್ ಕೀಪರ್) , ರಾಬಿನ್ಸನ್ ಒಬುಯಾ , ರಿಯಾಜತ್ ಅಲಿ ಶಾ , ಅಲ್ಪೇಶ್ ರಾಮ್ಜಾನಿ , ದಿನೇಶ್ ನಕ್ರಾಣಿ , ಜುಮಾ ಮಿಯಾಗಿ , ಕೆನ್ನೆತ್ ವೈಸ್ವಾ , ಬ್ರಿಯಾನ್ ಮಸಾಬ (ನಾಯಕ) , ಕಾಸ್ಮಾಸ್ ಕ್ಯೆವುಟಾ , ಫ್ರಾಂಕ್ ನ್ಸುಬುಗಾ.

Published On - 8:53 am, Sun, 9 June 24

ತಾಜಾ ಸುದ್ದಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ